Homeಮುಖಪುಟಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು “ಜಡ್ಡುಗಟ್ಟಿದ” ಮತ್ತು ಬಹುಸಂಖ್ಯಾತ ಭಾರತೀಯರ ಆಶಯಗಳಿಗೆ ದ್ರೋಹ ಬಗೆಯುವ ಬಜೆಟ್ ಆಗಿದೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

”ಬಜೆಟ್ ಬಗ್ಗೆ ನಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟ್ ಮಾಡಿದ್ದಾರೆ ನೋಡಿ, ”ಬಜೆಟ್ ಘೋಷಣೆಗಳಲ್ಲಿ ದೊಡ್ಡದಾಗಿದೆ ಮತ್ತು ವಿತರಣೆಯಲ್ಲಿ ಚಿಕ್ಕದಾಗಿದೆ” ಎಂದು ಹೇಳಿದ್ದಾರೆ ಮತ್ತು ಬಿಜೆಪಿ ಸರ್ಕಾರವು ಸಾಮಾನ್ಯ ಜನರ ಜೀವನವನ್ನು ಕಷ್ಟಕರವಾಗಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಅಮೃತ್ ಕಾಲದ ಥೀಮ್‌ನ್ನು ಮಿತ್ರ ಕಾಲ [ಸ್ನೇಹಿತರ ಯುಗ] ಬಜೆಟ್ ಎಂದು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಕರೆದರು, ಅದು ಭಾರತದ ಭವಿಷ್ಯವನ್ನು ನಿರ್ಮಿಸುವ ಮಾರ್ಗಸೂಚಿಯನ್ನು ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚಿದಂಬರಂ, ”ಸರ್ಕಾರವು ಜನರಿಂದ ಎಷ್ಟು ದೂರದಲ್ಲಿದೆ ಮತ್ತು ಜೀವನ, ಜೀವನೋಪಾಯ ಮತ್ತು ಶ್ರೀಮಂತ-ಬಡವರ ನಡುವಿನ ಅಸಮಾನತೆಯ ಬಗ್ಗೆ ಅವರ ಕಾಳಜಿಯನ್ನು ಈ ಬಜೆಟ್ ತೋರಿಸುತ್ತದೆ” ಎಂದು ಹೇಳಿದರು.

ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವ ಕಡಿಮೆ ಸಂಖ್ಯೆಯ ಜನರನ್ನು ಹೊರತುಪಡಿಸಿ ಯಾವುದೇ ತೆರಿಗೆಯನ್ನು ಬಜೆಟ್‌ನಲ್ಲಿ ಕಡಿಮೆ ಮಾಡಲಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಹೊಸ ತೆರಿಗೆ ಪದ್ಧತಿಯನ್ನು ಡೀಫಾಲ್ಟ್ ಆಯ್ಕೆಯನ್ನಾಗಿ ಮಾಡುವ ಮೂಲಕ, ಸರ್ಕಾರವು ”ಸಾಮಾನ್ಯ ತೆರಿಗೆ ಪಾವತಿದಾರನಿಗೆ ಹಳೆಯ ತೆರಿಗೆ ಪದ್ಧತಿಯಡಿಯಲ್ಲಿ ಸಿಗಬಹುದಾದ ಅತ್ಯಲ್ಪ ಸಾಮಾಜಿಕ ಭದ್ರತೆಯನ್ನು ದೋಚಲು ಬಯಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಬೇಕು ಎಂಬುದು ಸರ್ಕಾರದ ಅಂತಿಮ ಗುರಿಯಾಗಿದೆ. ತೆರಿಗೆ ವಿನಾಯಿತಿಗಳು ಇಂದು ಮಧ್ಯಮ ವರ್ಗದವರಿಗೆ ಸ್ವಲ್ಪ ಸಾಮಾಜಿಕ ಭದ್ರತೆಯನ್ನು ನೀಡುತ್ತವೆ. ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಿದರೆ, ತೆರಿಗೆ ಪಾವತಿದಾರರು ಕೆಲವು ಸಾಮಾಜಿಕ ಭದ್ರತೆಯನ್ನು ಪಡೆಯುವ ಮತ್ತೊಂದು ಕಾರ್ಯವಿಧಾನ ಇರಬೇಕು” ಎಂದು ಶ್ರೀ ಚಿದಂಬರಂ ಹೇಳಿದರು.

”ಈ ಬಜೆಟ್‌ನಿಂದ ಯಾರಿಗೆ ಲಾಭ? ಖಂಡಿತವಾಗಿಯೂ ಬಡವರಿಗಲ್ಲ. ಯುವಕರು ಉದ್ಯೋಗಕ್ಕಾಗಿ ಹತಾಶರಾಗಿದ್ದಾರೆ ಅವರನ್ನೂ ನೋಡುತ್ತಿಲ್ಲ. ಉದ್ಯೋಗ ಕಳೆದುಕೊಂಡವರನ್ನೂ ನೋಡುತ್ತಿಲ್ಲ. ಬಹುಪಾಲು ತೆರಿಗೆದಾರರನ್ನಲ್ಲ, ಗೃಹಿಣಿಯರನ್ನೂ ನೋಡುತ್ತಿಲ್ಲ. ಹೆಚ್ಚುತ್ತಿರುವ ಅಸಮಾನತೆ, ಶತಕೋಟ್ಯಾಧಿಪತಿಗಳ ಆಸ್ತಿಯ ಹೆಚ್ಚಳ ಮತ್ತು ಜನಸಂಖ್ಯೆಯ 1% ಜನರ ಕೈಯಲ್ಲಿ ಸಂಗ್ರಹವಾಗುತ್ತಿರುವ ಸಂಪತ್ತಿನಿಂದ ಆಘಾತಕ್ಕೊಳಗಾಗಿರುವ ಭಾರತೀಯರ ಬಗ್ಗೆ ಇವರಿಗೆ ಚಿಂತೆ ಇಲ್ಲ” ಎಂದು ಮಾಜಿ ಹಣಕಾಸು ಸಚಿವ ಹೇಳಿದರು.

ಪರೋಕ್ಷ ತೆರಿಗೆಗಳನ್ನು ಕಡಿಮೆ ಮಾಡಿಲ್ಲ ಅಥವಾ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಯಾವುದೇ ಕಡಿತ ಮಾಡಿಲ್ಲ. ಪೆಟ್ರೋಲ್, ಡೀಸೆಲ್, ಸಿಮೆಂಟ್, ರಸಗೊಬ್ಬರಗಳ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಹಂಚಿಕೊಳ್ಳದ ಹಲವಾರು ಹೆಚ್ಚುವರಿ ಶುಲ್ಕಗಳು ಮತ್ತು ಸೆಸ್‌ಗಳು ಸಹ ಅಸ್ತಿತ್ವದಲ್ಲಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ತಿಳಿಸಿದರು.

ಆರ್ಥಿಕ ಸಮೀಕ್ಷೆಯು, ಜಗತ್ತು ಎದುರಿಸಲಿರುವ ಎಲ್ಲಾ ಸಮಸ್ಯೆಗಳ ಪಟ್ಟಿ ಮಾಡಿದ್ದರೂ, ಬಜೆಟ್‌ ಮೂಲಕ ಯಾವುದೇ ಪರಿಹಾರವನ್ನು ನೀಡಲಿಲ್ಲ. “ಬಜೆಟ್ ಭಾಷಣವು ಆರ್ಥಿಕ ಸಮಸ್ಯೆಗಳನ್ನು ಸಹ ಗುರುತಿಸಲಿಲ್ಲ, ಈ ಸರ್ಕಾರವು ತನ್ನದೇಯಾದ ಕಾಲ್ಪನಿಕ ಜಗತ್ತಿನಲ್ಲಿ ವಾಸಿಸುತ್ತಿದೆ” ಎಂದು ಅವರು ಹೇಳಿದರು.

ವಿಶ್ವಾದ್ಯಂತ ಅಂಗಿಕರಿಸಲಾದ ಮೂರು ಕಟುವಾದ ಸಂಗತಿಗಳನ್ನು ಗಮನಿಸಬೇಕು, 1) ಜಾಗತಿಕ ವ್ಯಾಪಾರ ಮತ್ತು ಬೆಳವಣಿಗೆಯು 2023 ರಲ್ಲಿ ಗಮನಾರ್ಹವಾಗಿ ನಿಧಾನಗೊಳ್ಳುತ್ತದೆ. 2) ಅನೇಕ ಮುಂದುವರಿದ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ಹೋಗುತ್ತವೆ. 3) ಉಕ್ರೇನ್ ಯುದ್ಧ ಮತ್ತು ಇತರ ಬ್ರೂಯಿಂಗ್ ಘರ್ಷಣೆಗಳೊಂದಿಗೆ, ಜಾಗತಿಕ ಭದ್ರತಾ ಪರಿಸ್ಥಿತಿಯು ಹದಗೆಡುತ್ತದೆ ಎಂದು ಮಾಜಿ ಹಣಕಾಸು ಸಚಿವರು ನೆನಪಿಸಿದರು.

”ಈ ಮೂರೂ ಸಂಗತಿಗಳು ಕಾರ್ಯರೂಪಕ್ಕೆ ಬಂದರೆ, ಸರ್ಕಾರ ಏನು ಮಾಡುತ್ತದೆ? ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಜನರ ಮೇಲೆ ಅದು ಯಾವ ರೀತಿಯ ಹೊರೆಗಳನ್ನು ಹಾಕುತ್ತದೆ? ಆರ್ಥಿಕ ಸಮೀಕ್ಷೆಯಲ್ಲಿ ಅಥವಾ ಬಜೆಟ್ ಭಾಷಣದಲ್ಲಿ ಯಾವುದೇ ಉತ್ತರಗಳನ್ನು ನೀಡಲಾಗಿಲ್ಲ” ಎಂದು ಚಿದಂಬರಂ ಹೇಳಿದರು.

ಬಜೆಟ್ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ”ಕಳೆದ ವರ್ಷದ ಬಜೆಟ್ ಕೃಷಿ, ಆರೋಗ್ಯ, ಶಿಕ್ಷಣ, ಎಂಜಿಎನ್‌ಆರ್‌ಇಜಿಎ ಮತ್ತು ಎಸ್‌ಸಿಗಳ ಕಲ್ಯಾಣಕ್ಕೆ ಮೀಸಲಿಡಲು ಮೆಚ್ಚುಗೆಯನ್ನು ಗಳಿಸಿತು. ಆದರೆ ಇಂದು ವಾಸ್ತವ ಸ್ಪಷ್ಟವಾಗಿದೆ. ವಾಸ್ತವಿಕ ವೆಚ್ಚವು ಬಜೆಟ್‌ಗಿಂತ ಗಣನೀಯವಾಗಿ ಕಡಿಮೆಯಾಗಿದೆ. ಓವರ್ ಪ್ರಾಮಿಸ್, ಅಂಡರ್ ಡೆಲಿವರ್- ಇದು ಮೋದಿಯವರ ಒಪಿಯುಡಿ ಕಾರ್ಯತಂತ್ರದ ಮುಖ್ಯಾಂಶವಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...