Homeಮುಖಪುಟಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು “ಜಡ್ಡುಗಟ್ಟಿದ” ಮತ್ತು ಬಹುಸಂಖ್ಯಾತ ಭಾರತೀಯರ ಆಶಯಗಳಿಗೆ ದ್ರೋಹ ಬಗೆಯುವ ಬಜೆಟ್ ಆಗಿದೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

”ಬಜೆಟ್ ಬಗ್ಗೆ ನಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟ್ ಮಾಡಿದ್ದಾರೆ ನೋಡಿ, ”ಬಜೆಟ್ ಘೋಷಣೆಗಳಲ್ಲಿ ದೊಡ್ಡದಾಗಿದೆ ಮತ್ತು ವಿತರಣೆಯಲ್ಲಿ ಚಿಕ್ಕದಾಗಿದೆ” ಎಂದು ಹೇಳಿದ್ದಾರೆ ಮತ್ತು ಬಿಜೆಪಿ ಸರ್ಕಾರವು ಸಾಮಾನ್ಯ ಜನರ ಜೀವನವನ್ನು ಕಷ್ಟಕರವಾಗಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಅಮೃತ್ ಕಾಲದ ಥೀಮ್‌ನ್ನು ಮಿತ್ರ ಕಾಲ [ಸ್ನೇಹಿತರ ಯುಗ] ಬಜೆಟ್ ಎಂದು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಕರೆದರು, ಅದು ಭಾರತದ ಭವಿಷ್ಯವನ್ನು ನಿರ್ಮಿಸುವ ಮಾರ್ಗಸೂಚಿಯನ್ನು ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚಿದಂಬರಂ, ”ಸರ್ಕಾರವು ಜನರಿಂದ ಎಷ್ಟು ದೂರದಲ್ಲಿದೆ ಮತ್ತು ಜೀವನ, ಜೀವನೋಪಾಯ ಮತ್ತು ಶ್ರೀಮಂತ-ಬಡವರ ನಡುವಿನ ಅಸಮಾನತೆಯ ಬಗ್ಗೆ ಅವರ ಕಾಳಜಿಯನ್ನು ಈ ಬಜೆಟ್ ತೋರಿಸುತ್ತದೆ” ಎಂದು ಹೇಳಿದರು.

ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವ ಕಡಿಮೆ ಸಂಖ್ಯೆಯ ಜನರನ್ನು ಹೊರತುಪಡಿಸಿ ಯಾವುದೇ ತೆರಿಗೆಯನ್ನು ಬಜೆಟ್‌ನಲ್ಲಿ ಕಡಿಮೆ ಮಾಡಲಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಹೊಸ ತೆರಿಗೆ ಪದ್ಧತಿಯನ್ನು ಡೀಫಾಲ್ಟ್ ಆಯ್ಕೆಯನ್ನಾಗಿ ಮಾಡುವ ಮೂಲಕ, ಸರ್ಕಾರವು ”ಸಾಮಾನ್ಯ ತೆರಿಗೆ ಪಾವತಿದಾರನಿಗೆ ಹಳೆಯ ತೆರಿಗೆ ಪದ್ಧತಿಯಡಿಯಲ್ಲಿ ಸಿಗಬಹುದಾದ ಅತ್ಯಲ್ಪ ಸಾಮಾಜಿಕ ಭದ್ರತೆಯನ್ನು ದೋಚಲು ಬಯಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಬೇಕು ಎಂಬುದು ಸರ್ಕಾರದ ಅಂತಿಮ ಗುರಿಯಾಗಿದೆ. ತೆರಿಗೆ ವಿನಾಯಿತಿಗಳು ಇಂದು ಮಧ್ಯಮ ವರ್ಗದವರಿಗೆ ಸ್ವಲ್ಪ ಸಾಮಾಜಿಕ ಭದ್ರತೆಯನ್ನು ನೀಡುತ್ತವೆ. ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಿದರೆ, ತೆರಿಗೆ ಪಾವತಿದಾರರು ಕೆಲವು ಸಾಮಾಜಿಕ ಭದ್ರತೆಯನ್ನು ಪಡೆಯುವ ಮತ್ತೊಂದು ಕಾರ್ಯವಿಧಾನ ಇರಬೇಕು” ಎಂದು ಶ್ರೀ ಚಿದಂಬರಂ ಹೇಳಿದರು.

”ಈ ಬಜೆಟ್‌ನಿಂದ ಯಾರಿಗೆ ಲಾಭ? ಖಂಡಿತವಾಗಿಯೂ ಬಡವರಿಗಲ್ಲ. ಯುವಕರು ಉದ್ಯೋಗಕ್ಕಾಗಿ ಹತಾಶರಾಗಿದ್ದಾರೆ ಅವರನ್ನೂ ನೋಡುತ್ತಿಲ್ಲ. ಉದ್ಯೋಗ ಕಳೆದುಕೊಂಡವರನ್ನೂ ನೋಡುತ್ತಿಲ್ಲ. ಬಹುಪಾಲು ತೆರಿಗೆದಾರರನ್ನಲ್ಲ, ಗೃಹಿಣಿಯರನ್ನೂ ನೋಡುತ್ತಿಲ್ಲ. ಹೆಚ್ಚುತ್ತಿರುವ ಅಸಮಾನತೆ, ಶತಕೋಟ್ಯಾಧಿಪತಿಗಳ ಆಸ್ತಿಯ ಹೆಚ್ಚಳ ಮತ್ತು ಜನಸಂಖ್ಯೆಯ 1% ಜನರ ಕೈಯಲ್ಲಿ ಸಂಗ್ರಹವಾಗುತ್ತಿರುವ ಸಂಪತ್ತಿನಿಂದ ಆಘಾತಕ್ಕೊಳಗಾಗಿರುವ ಭಾರತೀಯರ ಬಗ್ಗೆ ಇವರಿಗೆ ಚಿಂತೆ ಇಲ್ಲ” ಎಂದು ಮಾಜಿ ಹಣಕಾಸು ಸಚಿವ ಹೇಳಿದರು.

ಪರೋಕ್ಷ ತೆರಿಗೆಗಳನ್ನು ಕಡಿಮೆ ಮಾಡಿಲ್ಲ ಅಥವಾ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಯಾವುದೇ ಕಡಿತ ಮಾಡಿಲ್ಲ. ಪೆಟ್ರೋಲ್, ಡೀಸೆಲ್, ಸಿಮೆಂಟ್, ರಸಗೊಬ್ಬರಗಳ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಹಂಚಿಕೊಳ್ಳದ ಹಲವಾರು ಹೆಚ್ಚುವರಿ ಶುಲ್ಕಗಳು ಮತ್ತು ಸೆಸ್‌ಗಳು ಸಹ ಅಸ್ತಿತ್ವದಲ್ಲಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ತಿಳಿಸಿದರು.

ಆರ್ಥಿಕ ಸಮೀಕ್ಷೆಯು, ಜಗತ್ತು ಎದುರಿಸಲಿರುವ ಎಲ್ಲಾ ಸಮಸ್ಯೆಗಳ ಪಟ್ಟಿ ಮಾಡಿದ್ದರೂ, ಬಜೆಟ್‌ ಮೂಲಕ ಯಾವುದೇ ಪರಿಹಾರವನ್ನು ನೀಡಲಿಲ್ಲ. “ಬಜೆಟ್ ಭಾಷಣವು ಆರ್ಥಿಕ ಸಮಸ್ಯೆಗಳನ್ನು ಸಹ ಗುರುತಿಸಲಿಲ್ಲ, ಈ ಸರ್ಕಾರವು ತನ್ನದೇಯಾದ ಕಾಲ್ಪನಿಕ ಜಗತ್ತಿನಲ್ಲಿ ವಾಸಿಸುತ್ತಿದೆ” ಎಂದು ಅವರು ಹೇಳಿದರು.

ವಿಶ್ವಾದ್ಯಂತ ಅಂಗಿಕರಿಸಲಾದ ಮೂರು ಕಟುವಾದ ಸಂಗತಿಗಳನ್ನು ಗಮನಿಸಬೇಕು, 1) ಜಾಗತಿಕ ವ್ಯಾಪಾರ ಮತ್ತು ಬೆಳವಣಿಗೆಯು 2023 ರಲ್ಲಿ ಗಮನಾರ್ಹವಾಗಿ ನಿಧಾನಗೊಳ್ಳುತ್ತದೆ. 2) ಅನೇಕ ಮುಂದುವರಿದ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ಹೋಗುತ್ತವೆ. 3) ಉಕ್ರೇನ್ ಯುದ್ಧ ಮತ್ತು ಇತರ ಬ್ರೂಯಿಂಗ್ ಘರ್ಷಣೆಗಳೊಂದಿಗೆ, ಜಾಗತಿಕ ಭದ್ರತಾ ಪರಿಸ್ಥಿತಿಯು ಹದಗೆಡುತ್ತದೆ ಎಂದು ಮಾಜಿ ಹಣಕಾಸು ಸಚಿವರು ನೆನಪಿಸಿದರು.

”ಈ ಮೂರೂ ಸಂಗತಿಗಳು ಕಾರ್ಯರೂಪಕ್ಕೆ ಬಂದರೆ, ಸರ್ಕಾರ ಏನು ಮಾಡುತ್ತದೆ? ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಜನರ ಮೇಲೆ ಅದು ಯಾವ ರೀತಿಯ ಹೊರೆಗಳನ್ನು ಹಾಕುತ್ತದೆ? ಆರ್ಥಿಕ ಸಮೀಕ್ಷೆಯಲ್ಲಿ ಅಥವಾ ಬಜೆಟ್ ಭಾಷಣದಲ್ಲಿ ಯಾವುದೇ ಉತ್ತರಗಳನ್ನು ನೀಡಲಾಗಿಲ್ಲ” ಎಂದು ಚಿದಂಬರಂ ಹೇಳಿದರು.

ಬಜೆಟ್ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ”ಕಳೆದ ವರ್ಷದ ಬಜೆಟ್ ಕೃಷಿ, ಆರೋಗ್ಯ, ಶಿಕ್ಷಣ, ಎಂಜಿಎನ್‌ಆರ್‌ಇಜಿಎ ಮತ್ತು ಎಸ್‌ಸಿಗಳ ಕಲ್ಯಾಣಕ್ಕೆ ಮೀಸಲಿಡಲು ಮೆಚ್ಚುಗೆಯನ್ನು ಗಳಿಸಿತು. ಆದರೆ ಇಂದು ವಾಸ್ತವ ಸ್ಪಷ್ಟವಾಗಿದೆ. ವಾಸ್ತವಿಕ ವೆಚ್ಚವು ಬಜೆಟ್‌ಗಿಂತ ಗಣನೀಯವಾಗಿ ಕಡಿಮೆಯಾಗಿದೆ. ಓವರ್ ಪ್ರಾಮಿಸ್, ಅಂಡರ್ ಡೆಲಿವರ್- ಇದು ಮೋದಿಯವರ ಒಪಿಯುಡಿ ಕಾರ್ಯತಂತ್ರದ ಮುಖ್ಯಾಂಶವಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...