Homeಕರ್ನಾಟಕಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

- Advertisement -
- Advertisement -

ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‌ಗಳ ಅವಧಿಗಳಲ್ಲಿ ಈ ವರೆಗೆ ಕಲಿಸಲಾಗುತ್ತಿತ್ತು. ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‌ಗಳಿಗೆ ಮಿತಿಗೊಳಿಸಿರುವುದು ‘ಕನ್ನಡ ಭಾಷೆಗೆ ಮಾಡಿದ ದ್ರೋಹ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿಯ ಭಾಗವಾಗಿ ಈಗ ಇರುವ ಮೂರು ವರ್ಷದ ಬದಲಾಗಿ ನಾಲ್ಕು ವರ್ಷದ ಪದವಿ ಕೋರ್ಸನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಅದಕ್ಕೋಸ್ಕರ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ಸಮಿತಿಯನ್ನು ನೇಮಿಸಲಾಗಿದೆ. ಪಠ್ಯಪುಸ್ತಕ ರಚನೆಯ ಉಪಸಮಿತಿಯು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ವಿಷಯಗಳನ್ನು ಕೇವಲ ಎರಡು ಸೆಮಿಸ್ಟರ್‌ಗಳಿಗೆ ಅಂದರೆ ಒಂದು ವರ್ಷಕ್ಕೆ ಮಾತ್ರ ಮಿತಿಗೊಳಿಸಿ ಶಿಫಾರಸ್ಸುಗಳನ್ನು ಮಾಡಿದೆ. ಈ ಶಿಫಾರಸ್ಸುಗಳು ‘ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿವೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

“ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶಗಳಲ್ಲಿ ದೇಶ ಭಾಷೆಗಳಿಗೆ ಪ್ರಾಮುಖ್ಯ ನೀಡಬೇಕು ಎಂಬ ಅಂಶವೂ ಇದೆ. ಆದರೆ ರಾಜ್ಯದ ಈ ಸಮಿತಿಯು ಕನ್ನಡದ ಪಾಲಿಗೆ ಮಹಾ ದ್ರೋಹವೆಸಗುವಂತಹ ಶಿಫಾರಸ್ಸುಗಳನ್ನು ಮಾಡಿದೆ ಎಂಬ ಆರೋಪಗಳನ್ನು ನಾಡಿನ ಹಿರಿಯರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಒಂದು ಸೆಮಿಸ್ಟರ್‌ನಲ್ಲಿ ಗರಿಷ್ಠವೆಂದರೆ 90 ದಿನಗಳ ಅವಧಿಯ ಬೋಧನೆ ಇರುತ್ತದೆ. ಪ್ರತಿ ವಿಷಯಕ್ಕೆ ಸಾಮಾನ್ಯವಾಗಿ ವಾರಕ್ಕೆ 4 ಗಂಟೆಯಂತೆ, ಒಂದು ಸೆಮಿಸ್ಟರ್‌ನಲ್ಲಿ ಒಂದು ವಿಷಯಕ್ಕೆ 48 ಗಂಟೆ ಬೋಧನಾ ಅವಧಿ ಇರುತ್ತದೆ. ಎರಡು ಸೆಮಿಸ್ಟರುಗಳಿಂದ ಗರಿಷ್ಠ 96 ಗಂಟೆಗಳು ಇರುತ್ತವೆ. ಕೇವಲ 96 ಗಂಟೆಗಳ ಅವಧಿಯಲ್ಲಿ ಯಾವ ವಿಷಯವನ್ನು ಕಲಿಸಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ವಿಜ್ಞಾನ, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು ಮತ್ತು ತಾಂತ್ರಿಕ ಶಿಕ್ಷಣವನ್ನು ಕಲಿಯುವ ವಿದ್ಯಾರ್ಥಿ ತನ್ನ ಕಲಿಕೆಯುದ್ದಕ್ಕೂ ಬೌದ್ಧಿಕತೆಯನ್ನು ರೂಪಿಸಿಕೊಳ್ಳುವುದರ ಜೊತೆಗೆ ಆರೋಗ್ಯಕರವಾದ ಮನಸ್ಸನ್ನೂ ಕಟ್ಟಿ ಕೊಳ್ಳಬೇಕಾಗುತ್ತದೆ. ಇದು ಶಿಕ್ಷಣದ ಮೂಲ ಉದ್ದೇಶವೂ ಹೌದು. ಸರ್ಕಾರವು ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿದರೆ ಅವರು ಜಗತ್ತಿನ ಶ್ರೇಷ್ಠ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತ ಮುಂತಾದವುಗಳನ್ನು ಕಲಿಯುವುದು ಹೇಗೆ? ವಿದ್ಯಾರ್ಥಿಗಳಿಗೆ ವಿಷಯ ಜ್ಞಾನದಷ್ಟೇ ನೈತಿಕ ಶಿಕ್ಷಣವೂ ಮುಖ್ಯ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಕನ್ನಡದ ಶ್ರೇಷ್ಠ ಅಭಿವ್ಯಕ್ತಿಗಳಾದ ವಚನಗಳನ್ನು, ಪಂಪ, ರನ್ನ, ಕುಮಾರವ್ಯಾಸ ಮತ್ತು ಹರಿದಾಸರ ಕಾವ್ಯಗಳನ್ನು ಕಲಿಯುವುದು ಹೇಗೆ? ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮೇರು ಸಾಹಿತಿಗಳಾದ ಕುವೆಂಪು, ಕಾರಂತರು, ಬೇಂದ್ರೆ, ಮಾಸ್ತಿ, ಪು.ತಿ.ನ ಮುಂತಾದವರು ರೂಪಿಸಿದ ಜೀವನೋತ್ಸಾಹದ ಬದುಕಿನ ದರ್ಶನಗಳನ್ನು ಮಕ್ಕಳು ಕಲಿಯುವುದು ಹೇಗೆ? ಎಂದು ಅವರು ತಿಳಿಸಿದ್ದಾರೆ.

ದೇಶದ ಸಂಸ್ಕೃತಿ, ಭಾಷೆ,‌ ಮಹಾಕಾವ್ಯಗಳು, ಪುರಾಣಗಳು, ಕಲೆ, ಜನಪದ ಮುಂತಾದ ಪರಂಪರೆಗಳ ಬಗ್ಗೆ ಮಾತನಾಡುವ ಬಿಜೆಪಿಯು ಪದವಿ ಕಲಿಯುವ ನಮ್ಮ ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿ ಕೇವಲ ಅದಾನಿ, ಅಂಬಾನಿಗಳಂಥ ಲೂಟಿಕೋರರ ಮಾದರಿಗಳನ್ನು ಕಲಿಸಲು ಹೊರಟಿದೆಯೆ? ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ನಮ್ಮ ದೇಶಕ್ಕೆ ಜ್ಞಾನ ಇರುವ, ದುಡ್ಡು ಇರುವ ಜನರ ಅಗತ್ಯ ಎಷ್ಟಿದೆಯೋ ಅದಕ್ಕಿಂತ ಹೆಚ್ಚು ಮಾನವೀಯ ಹೃದಯ ಇರುವ ಮನುಷ್ಯರ ಅಗತ್ಯವಿದೆ. ಅಂಥದ್ದಕ್ಕೆ ವಿರುದ್ಧವಾದ ನಿಲುವುಗಳನ್ನು ರೂಪಿಸುವುದಕ್ಕಾಗಿ “ರಾಷ್ಟ್ರೀಯ ಶಿಕ್ಷಣ ನೀತಿ”ಯ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ. ಈ ದುರುದ್ದೇಶದ ಭಾಗವಾಗಿಯೇ ಉಪಸಮಿತಿಯವರು ಭಾಷೆಗಳ ಕಲಿಕೆಯನ್ನು ಎರಡು ಸೆಮಿಸ್ಟರುಗಳಿಗೆ ಇಳಿಸಿದ್ದಾರೆ. ಸರ್ಕಾರ ಈ ಸಮಿತಿಯ ಶಿಫಾರಸ್ಸುಗಳನ್ನು ಒಪ್ಪಿಕೊಂಡಿದ್ದೆ ಆದರೆ ಅದು ಬಹಳ ದೊಡ್ಡ ಮಟ್ಟದ ಕನ್ನಡ ದ್ರೋಹವಾಗುತ್ತದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: COWIN APP: ಕನ್ನಡ, ತಮಿಳು ಸೇರಿ 9 ಪ್ರಾದೇಶಿಕ ಭಾಷೆಗಳಲ್ಲಿ ಸೌಲಭ್ಯ ಲಭ್ಯ

“4 ವರ್ಷದ ಕೋರ್ಸಿಗೆ ಅನುಗುಣವಾಗಿ 3 ವರ್ಷಕ್ಕೆ ಅಥವಾ 6 ಸೆಮಿಸ್ಟರುಗಳಿಗೆ ಭಾಷಾ ವಿಷಯವನ್ನು ಬೋಧಿಸಲು ಕ್ರಮ ತೆಗೆದುಕೊಳ್ಳಬೇಕು. ಹೀಗೆ ಮಾಡುವುದರಿಂದ ನಮ್ಮ ಮಕ್ಕಳು ಉತ್ತಮ ಪರಂಪರೆಗಳಿಗೆ ವಾರಸುದಾರರಾಗಲು ಸಾಧ್ಯವಾಗುತ್ತದೆ ಮತ್ತು ರಾಷ್ಟ್ರಕ್ಕೆ ಬೇಕಾದ ಉತ್ತಮ ಮನುಷ್ಯನಾಗಿ ರೂಪುಗೊಳ್ಳಲು ಸಹಾಯವಾಗುತ್ತದೆ. ಅದರ ಬದಲಾಗಿ ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ಸರ್ಕಾರ ಮುಂದಾಗುವುದಾದರೆ ಅದರ ವಿರುದ್ಧ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ. ಈ ನಾಡು ಎಂದಿಗೂ ನಾಡು, ನುಡಿಗೆ ದ್ರೋಹ ಎಸಗಿದವರನ್ನು ಕ್ಷಮಿಸಿಲ್ಲ” ಎಂದು ಅವರು ಎಚ್ಚರಿಸಿದ್ದಾರೆ.

ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ರೂಪಿಸಬೇಕಾಗಿದೆ. ಹಾಗಾಗಿ ಹೊಸ ಪಠ್ಯಕ್ರಮವನ್ನು ರೂಪಿಸುವಾಗ ಸಂಬಂಧಿಸಿದ ತಜ್ಞರುಗಳ ಕುಳಿತು ಚರ್ಚಿಸಿ ಆರೋಗ್ಯಕರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜೊತೆಗೆ ನಾಡು-ನುಡಿಗಳನ್ನು ಕಟ್ಟಲು ಪೂರಕವಾಗುವ ಪಠ್ಯಗಳನ್ನು ರೂಪಿಸಬೇಕು. ಆರು ಸೆಮಿಸ್ಟರುಗಳಲ್ಲೂ ಕನ್ನಡ ಭಾಷಾ ವಿಷಯವನ್ನು ಎಲ್ಲಾ ಪದವಿ ಮಕ್ಕಳಿಗೂ ಕಡ್ಡಾಯವಾಗಿ ಕಲಿಸಲೇಬೇಕು. ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ವಿವಾದದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಣ ತಜ್ಞ ಶ್ರೀಪಾದ್‌ ಭಟ್‌, “ಹಾಗೆ ನೋಡಿದರೆ ಸಮವರ್ತಿ ಪಟ್ಟಿಯಲ್ಲಿ ಬರುವ ಶಿಕ್ಷಣ ನೀತಿಯ ಬಗ್ಗೆ ಒಕ್ಕೂಟ ಸರ್ಕಾರವು ರಾಜ್ಯದ ಜೊತೆಗೆ ಚರ್ಚೆ ಮಾಡಿಲ್ಲ, ಹಾಗೆಯೆ ಸಂಸತ್ತಿನಲ್ಲೂ ಚರ್ಚೆ ಮಾಡಿಲ್ಲ. ಅಲ್ಲದೆ ಕಸ್ತೂರಿ ರಂಗನ್‌ ವರದಿಗೆ ಸುಮಾರು 5 ರಿಂದ 8 ಲಕ್ಷ ಜನರು ಫೀಡ್‌ಬ್ಯಾಕ್‌ ನೀಡಿದ್ದಾರೆ, ಆದರೆ ಬಗ್ಗೆಯು ಸರ್ಕಾರ ಈ ವರೆಗೆ ಏನೂ ಹೇಳಿಲ್ಲ. ಅಲ್ಲದೆ ಉಪಮುಖ್ಯಮಂತ್ರಿ ಅಶ್ವಥ್‌ನಾರಾಯಣ್‌ ಅವರು ತನ್ನ ಮೇಲಿನವರನ್ನು ಸಂಪ್ರೀತಿಗೊಳಿಸಲು ಇದನ್ನು ತರುವುದಕ್ಕೆ ಹೊರಟಿದ್ದಾರೆ. ಜೊತೆಗೆ ಶಿಕ್ಷಣ ನೀತಿಯ ಟಾಸ್ಕ್‌ಫೋರ್ಸ್‌ನಲ್ಲಿರುವ ನಾಲ್ಕೇ ನಾಲ್ಕು ಜನರು ಇಡೀ ರಾಜ್ಯದ ಶಿಕ್ಷಣ ನೀತಿಯನ್ನು ಹೇಗೆ ನಿರ್ದರಿಸುತ್ತಾರೆ? ಈ ಟಾಸ್ಕ್‌ಫೋರ್ಸ್‌ನಲ್ಲಿರುವವರ ಅರ್ಹತೆ ಏನು” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...