Homeಕರ್ನಾಟಕಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

- Advertisement -
- Advertisement -

ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‌ಗಳ ಅವಧಿಗಳಲ್ಲಿ ಈ ವರೆಗೆ ಕಲಿಸಲಾಗುತ್ತಿತ್ತು. ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‌ಗಳಿಗೆ ಮಿತಿಗೊಳಿಸಿರುವುದು ‘ಕನ್ನಡ ಭಾಷೆಗೆ ಮಾಡಿದ ದ್ರೋಹ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿಯ ಭಾಗವಾಗಿ ಈಗ ಇರುವ ಮೂರು ವರ್ಷದ ಬದಲಾಗಿ ನಾಲ್ಕು ವರ್ಷದ ಪದವಿ ಕೋರ್ಸನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಅದಕ್ಕೋಸ್ಕರ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ಸಮಿತಿಯನ್ನು ನೇಮಿಸಲಾಗಿದೆ. ಪಠ್ಯಪುಸ್ತಕ ರಚನೆಯ ಉಪಸಮಿತಿಯು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ವಿಷಯಗಳನ್ನು ಕೇವಲ ಎರಡು ಸೆಮಿಸ್ಟರ್‌ಗಳಿಗೆ ಅಂದರೆ ಒಂದು ವರ್ಷಕ್ಕೆ ಮಾತ್ರ ಮಿತಿಗೊಳಿಸಿ ಶಿಫಾರಸ್ಸುಗಳನ್ನು ಮಾಡಿದೆ. ಈ ಶಿಫಾರಸ್ಸುಗಳು ‘ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿವೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

“ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶಗಳಲ್ಲಿ ದೇಶ ಭಾಷೆಗಳಿಗೆ ಪ್ರಾಮುಖ್ಯ ನೀಡಬೇಕು ಎಂಬ ಅಂಶವೂ ಇದೆ. ಆದರೆ ರಾಜ್ಯದ ಈ ಸಮಿತಿಯು ಕನ್ನಡದ ಪಾಲಿಗೆ ಮಹಾ ದ್ರೋಹವೆಸಗುವಂತಹ ಶಿಫಾರಸ್ಸುಗಳನ್ನು ಮಾಡಿದೆ ಎಂಬ ಆರೋಪಗಳನ್ನು ನಾಡಿನ ಹಿರಿಯರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಒಂದು ಸೆಮಿಸ್ಟರ್‌ನಲ್ಲಿ ಗರಿಷ್ಠವೆಂದರೆ 90 ದಿನಗಳ ಅವಧಿಯ ಬೋಧನೆ ಇರುತ್ತದೆ. ಪ್ರತಿ ವಿಷಯಕ್ಕೆ ಸಾಮಾನ್ಯವಾಗಿ ವಾರಕ್ಕೆ 4 ಗಂಟೆಯಂತೆ, ಒಂದು ಸೆಮಿಸ್ಟರ್‌ನಲ್ಲಿ ಒಂದು ವಿಷಯಕ್ಕೆ 48 ಗಂಟೆ ಬೋಧನಾ ಅವಧಿ ಇರುತ್ತದೆ. ಎರಡು ಸೆಮಿಸ್ಟರುಗಳಿಂದ ಗರಿಷ್ಠ 96 ಗಂಟೆಗಳು ಇರುತ್ತವೆ. ಕೇವಲ 96 ಗಂಟೆಗಳ ಅವಧಿಯಲ್ಲಿ ಯಾವ ವಿಷಯವನ್ನು ಕಲಿಸಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ವಿಜ್ಞಾನ, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು ಮತ್ತು ತಾಂತ್ರಿಕ ಶಿಕ್ಷಣವನ್ನು ಕಲಿಯುವ ವಿದ್ಯಾರ್ಥಿ ತನ್ನ ಕಲಿಕೆಯುದ್ದಕ್ಕೂ ಬೌದ್ಧಿಕತೆಯನ್ನು ರೂಪಿಸಿಕೊಳ್ಳುವುದರ ಜೊತೆಗೆ ಆರೋಗ್ಯಕರವಾದ ಮನಸ್ಸನ್ನೂ ಕಟ್ಟಿ ಕೊಳ್ಳಬೇಕಾಗುತ್ತದೆ. ಇದು ಶಿಕ್ಷಣದ ಮೂಲ ಉದ್ದೇಶವೂ ಹೌದು. ಸರ್ಕಾರವು ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿದರೆ ಅವರು ಜಗತ್ತಿನ ಶ್ರೇಷ್ಠ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತ ಮುಂತಾದವುಗಳನ್ನು ಕಲಿಯುವುದು ಹೇಗೆ? ವಿದ್ಯಾರ್ಥಿಗಳಿಗೆ ವಿಷಯ ಜ್ಞಾನದಷ್ಟೇ ನೈತಿಕ ಶಿಕ್ಷಣವೂ ಮುಖ್ಯ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಕನ್ನಡದ ಶ್ರೇಷ್ಠ ಅಭಿವ್ಯಕ್ತಿಗಳಾದ ವಚನಗಳನ್ನು, ಪಂಪ, ರನ್ನ, ಕುಮಾರವ್ಯಾಸ ಮತ್ತು ಹರಿದಾಸರ ಕಾವ್ಯಗಳನ್ನು ಕಲಿಯುವುದು ಹೇಗೆ? ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮೇರು ಸಾಹಿತಿಗಳಾದ ಕುವೆಂಪು, ಕಾರಂತರು, ಬೇಂದ್ರೆ, ಮಾಸ್ತಿ, ಪು.ತಿ.ನ ಮುಂತಾದವರು ರೂಪಿಸಿದ ಜೀವನೋತ್ಸಾಹದ ಬದುಕಿನ ದರ್ಶನಗಳನ್ನು ಮಕ್ಕಳು ಕಲಿಯುವುದು ಹೇಗೆ? ಎಂದು ಅವರು ತಿಳಿಸಿದ್ದಾರೆ.

ದೇಶದ ಸಂಸ್ಕೃತಿ, ಭಾಷೆ,‌ ಮಹಾಕಾವ್ಯಗಳು, ಪುರಾಣಗಳು, ಕಲೆ, ಜನಪದ ಮುಂತಾದ ಪರಂಪರೆಗಳ ಬಗ್ಗೆ ಮಾತನಾಡುವ ಬಿಜೆಪಿಯು ಪದವಿ ಕಲಿಯುವ ನಮ್ಮ ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿ ಕೇವಲ ಅದಾನಿ, ಅಂಬಾನಿಗಳಂಥ ಲೂಟಿಕೋರರ ಮಾದರಿಗಳನ್ನು ಕಲಿಸಲು ಹೊರಟಿದೆಯೆ? ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ನಮ್ಮ ದೇಶಕ್ಕೆ ಜ್ಞಾನ ಇರುವ, ದುಡ್ಡು ಇರುವ ಜನರ ಅಗತ್ಯ ಎಷ್ಟಿದೆಯೋ ಅದಕ್ಕಿಂತ ಹೆಚ್ಚು ಮಾನವೀಯ ಹೃದಯ ಇರುವ ಮನುಷ್ಯರ ಅಗತ್ಯವಿದೆ. ಅಂಥದ್ದಕ್ಕೆ ವಿರುದ್ಧವಾದ ನಿಲುವುಗಳನ್ನು ರೂಪಿಸುವುದಕ್ಕಾಗಿ “ರಾಷ್ಟ್ರೀಯ ಶಿಕ್ಷಣ ನೀತಿ”ಯ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ. ಈ ದುರುದ್ದೇಶದ ಭಾಗವಾಗಿಯೇ ಉಪಸಮಿತಿಯವರು ಭಾಷೆಗಳ ಕಲಿಕೆಯನ್ನು ಎರಡು ಸೆಮಿಸ್ಟರುಗಳಿಗೆ ಇಳಿಸಿದ್ದಾರೆ. ಸರ್ಕಾರ ಈ ಸಮಿತಿಯ ಶಿಫಾರಸ್ಸುಗಳನ್ನು ಒಪ್ಪಿಕೊಂಡಿದ್ದೆ ಆದರೆ ಅದು ಬಹಳ ದೊಡ್ಡ ಮಟ್ಟದ ಕನ್ನಡ ದ್ರೋಹವಾಗುತ್ತದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: COWIN APP: ಕನ್ನಡ, ತಮಿಳು ಸೇರಿ 9 ಪ್ರಾದೇಶಿಕ ಭಾಷೆಗಳಲ್ಲಿ ಸೌಲಭ್ಯ ಲಭ್ಯ

“4 ವರ್ಷದ ಕೋರ್ಸಿಗೆ ಅನುಗುಣವಾಗಿ 3 ವರ್ಷಕ್ಕೆ ಅಥವಾ 6 ಸೆಮಿಸ್ಟರುಗಳಿಗೆ ಭಾಷಾ ವಿಷಯವನ್ನು ಬೋಧಿಸಲು ಕ್ರಮ ತೆಗೆದುಕೊಳ್ಳಬೇಕು. ಹೀಗೆ ಮಾಡುವುದರಿಂದ ನಮ್ಮ ಮಕ್ಕಳು ಉತ್ತಮ ಪರಂಪರೆಗಳಿಗೆ ವಾರಸುದಾರರಾಗಲು ಸಾಧ್ಯವಾಗುತ್ತದೆ ಮತ್ತು ರಾಷ್ಟ್ರಕ್ಕೆ ಬೇಕಾದ ಉತ್ತಮ ಮನುಷ್ಯನಾಗಿ ರೂಪುಗೊಳ್ಳಲು ಸಹಾಯವಾಗುತ್ತದೆ. ಅದರ ಬದಲಾಗಿ ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ಸರ್ಕಾರ ಮುಂದಾಗುವುದಾದರೆ ಅದರ ವಿರುದ್ಧ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ. ಈ ನಾಡು ಎಂದಿಗೂ ನಾಡು, ನುಡಿಗೆ ದ್ರೋಹ ಎಸಗಿದವರನ್ನು ಕ್ಷಮಿಸಿಲ್ಲ” ಎಂದು ಅವರು ಎಚ್ಚರಿಸಿದ್ದಾರೆ.

ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ರೂಪಿಸಬೇಕಾಗಿದೆ. ಹಾಗಾಗಿ ಹೊಸ ಪಠ್ಯಕ್ರಮವನ್ನು ರೂಪಿಸುವಾಗ ಸಂಬಂಧಿಸಿದ ತಜ್ಞರುಗಳ ಕುಳಿತು ಚರ್ಚಿಸಿ ಆರೋಗ್ಯಕರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜೊತೆಗೆ ನಾಡು-ನುಡಿಗಳನ್ನು ಕಟ್ಟಲು ಪೂರಕವಾಗುವ ಪಠ್ಯಗಳನ್ನು ರೂಪಿಸಬೇಕು. ಆರು ಸೆಮಿಸ್ಟರುಗಳಲ್ಲೂ ಕನ್ನಡ ಭಾಷಾ ವಿಷಯವನ್ನು ಎಲ್ಲಾ ಪದವಿ ಮಕ್ಕಳಿಗೂ ಕಡ್ಡಾಯವಾಗಿ ಕಲಿಸಲೇಬೇಕು. ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ವಿವಾದದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಣ ತಜ್ಞ ಶ್ರೀಪಾದ್‌ ಭಟ್‌, “ಹಾಗೆ ನೋಡಿದರೆ ಸಮವರ್ತಿ ಪಟ್ಟಿಯಲ್ಲಿ ಬರುವ ಶಿಕ್ಷಣ ನೀತಿಯ ಬಗ್ಗೆ ಒಕ್ಕೂಟ ಸರ್ಕಾರವು ರಾಜ್ಯದ ಜೊತೆಗೆ ಚರ್ಚೆ ಮಾಡಿಲ್ಲ, ಹಾಗೆಯೆ ಸಂಸತ್ತಿನಲ್ಲೂ ಚರ್ಚೆ ಮಾಡಿಲ್ಲ. ಅಲ್ಲದೆ ಕಸ್ತೂರಿ ರಂಗನ್‌ ವರದಿಗೆ ಸುಮಾರು 5 ರಿಂದ 8 ಲಕ್ಷ ಜನರು ಫೀಡ್‌ಬ್ಯಾಕ್‌ ನೀಡಿದ್ದಾರೆ, ಆದರೆ ಬಗ್ಗೆಯು ಸರ್ಕಾರ ಈ ವರೆಗೆ ಏನೂ ಹೇಳಿಲ್ಲ. ಅಲ್ಲದೆ ಉಪಮುಖ್ಯಮಂತ್ರಿ ಅಶ್ವಥ್‌ನಾರಾಯಣ್‌ ಅವರು ತನ್ನ ಮೇಲಿನವರನ್ನು ಸಂಪ್ರೀತಿಗೊಳಿಸಲು ಇದನ್ನು ತರುವುದಕ್ಕೆ ಹೊರಟಿದ್ದಾರೆ. ಜೊತೆಗೆ ಶಿಕ್ಷಣ ನೀತಿಯ ಟಾಸ್ಕ್‌ಫೋರ್ಸ್‌ನಲ್ಲಿರುವ ನಾಲ್ಕೇ ನಾಲ್ಕು ಜನರು ಇಡೀ ರಾಜ್ಯದ ಶಿಕ್ಷಣ ನೀತಿಯನ್ನು ಹೇಗೆ ನಿರ್ದರಿಸುತ್ತಾರೆ? ಈ ಟಾಸ್ಕ್‌ಫೋರ್ಸ್‌ನಲ್ಲಿರುವವರ ಅರ್ಹತೆ ಏನು” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...