Homeಕರ್ನಾಟಕಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

- Advertisement -
- Advertisement -

ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‌ಗಳ ಅವಧಿಗಳಲ್ಲಿ ಈ ವರೆಗೆ ಕಲಿಸಲಾಗುತ್ತಿತ್ತು. ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‌ಗಳಿಗೆ ಮಿತಿಗೊಳಿಸಿರುವುದು ‘ಕನ್ನಡ ಭಾಷೆಗೆ ಮಾಡಿದ ದ್ರೋಹ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿಯ ಭಾಗವಾಗಿ ಈಗ ಇರುವ ಮೂರು ವರ್ಷದ ಬದಲಾಗಿ ನಾಲ್ಕು ವರ್ಷದ ಪದವಿ ಕೋರ್ಸನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಅದಕ್ಕೋಸ್ಕರ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ಸಮಿತಿಯನ್ನು ನೇಮಿಸಲಾಗಿದೆ. ಪಠ್ಯಪುಸ್ತಕ ರಚನೆಯ ಉಪಸಮಿತಿಯು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ವಿಷಯಗಳನ್ನು ಕೇವಲ ಎರಡು ಸೆಮಿಸ್ಟರ್‌ಗಳಿಗೆ ಅಂದರೆ ಒಂದು ವರ್ಷಕ್ಕೆ ಮಾತ್ರ ಮಿತಿಗೊಳಿಸಿ ಶಿಫಾರಸ್ಸುಗಳನ್ನು ಮಾಡಿದೆ. ಈ ಶಿಫಾರಸ್ಸುಗಳು ‘ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿವೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

“ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶಗಳಲ್ಲಿ ದೇಶ ಭಾಷೆಗಳಿಗೆ ಪ್ರಾಮುಖ್ಯ ನೀಡಬೇಕು ಎಂಬ ಅಂಶವೂ ಇದೆ. ಆದರೆ ರಾಜ್ಯದ ಈ ಸಮಿತಿಯು ಕನ್ನಡದ ಪಾಲಿಗೆ ಮಹಾ ದ್ರೋಹವೆಸಗುವಂತಹ ಶಿಫಾರಸ್ಸುಗಳನ್ನು ಮಾಡಿದೆ ಎಂಬ ಆರೋಪಗಳನ್ನು ನಾಡಿನ ಹಿರಿಯರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಒಂದು ಸೆಮಿಸ್ಟರ್‌ನಲ್ಲಿ ಗರಿಷ್ಠವೆಂದರೆ 90 ದಿನಗಳ ಅವಧಿಯ ಬೋಧನೆ ಇರುತ್ತದೆ. ಪ್ರತಿ ವಿಷಯಕ್ಕೆ ಸಾಮಾನ್ಯವಾಗಿ ವಾರಕ್ಕೆ 4 ಗಂಟೆಯಂತೆ, ಒಂದು ಸೆಮಿಸ್ಟರ್‌ನಲ್ಲಿ ಒಂದು ವಿಷಯಕ್ಕೆ 48 ಗಂಟೆ ಬೋಧನಾ ಅವಧಿ ಇರುತ್ತದೆ. ಎರಡು ಸೆಮಿಸ್ಟರುಗಳಿಂದ ಗರಿಷ್ಠ 96 ಗಂಟೆಗಳು ಇರುತ್ತವೆ. ಕೇವಲ 96 ಗಂಟೆಗಳ ಅವಧಿಯಲ್ಲಿ ಯಾವ ವಿಷಯವನ್ನು ಕಲಿಸಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ವಿಜ್ಞಾನ, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು ಮತ್ತು ತಾಂತ್ರಿಕ ಶಿಕ್ಷಣವನ್ನು ಕಲಿಯುವ ವಿದ್ಯಾರ್ಥಿ ತನ್ನ ಕಲಿಕೆಯುದ್ದಕ್ಕೂ ಬೌದ್ಧಿಕತೆಯನ್ನು ರೂಪಿಸಿಕೊಳ್ಳುವುದರ ಜೊತೆಗೆ ಆರೋಗ್ಯಕರವಾದ ಮನಸ್ಸನ್ನೂ ಕಟ್ಟಿ ಕೊಳ್ಳಬೇಕಾಗುತ್ತದೆ. ಇದು ಶಿಕ್ಷಣದ ಮೂಲ ಉದ್ದೇಶವೂ ಹೌದು. ಸರ್ಕಾರವು ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿದರೆ ಅವರು ಜಗತ್ತಿನ ಶ್ರೇಷ್ಠ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತ ಮುಂತಾದವುಗಳನ್ನು ಕಲಿಯುವುದು ಹೇಗೆ? ವಿದ್ಯಾರ್ಥಿಗಳಿಗೆ ವಿಷಯ ಜ್ಞಾನದಷ್ಟೇ ನೈತಿಕ ಶಿಕ್ಷಣವೂ ಮುಖ್ಯ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಕನ್ನಡದ ಶ್ರೇಷ್ಠ ಅಭಿವ್ಯಕ್ತಿಗಳಾದ ವಚನಗಳನ್ನು, ಪಂಪ, ರನ್ನ, ಕುಮಾರವ್ಯಾಸ ಮತ್ತು ಹರಿದಾಸರ ಕಾವ್ಯಗಳನ್ನು ಕಲಿಯುವುದು ಹೇಗೆ? ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮೇರು ಸಾಹಿತಿಗಳಾದ ಕುವೆಂಪು, ಕಾರಂತರು, ಬೇಂದ್ರೆ, ಮಾಸ್ತಿ, ಪು.ತಿ.ನ ಮುಂತಾದವರು ರೂಪಿಸಿದ ಜೀವನೋತ್ಸಾಹದ ಬದುಕಿನ ದರ್ಶನಗಳನ್ನು ಮಕ್ಕಳು ಕಲಿಯುವುದು ಹೇಗೆ? ಎಂದು ಅವರು ತಿಳಿಸಿದ್ದಾರೆ.

ದೇಶದ ಸಂಸ್ಕೃತಿ, ಭಾಷೆ,‌ ಮಹಾಕಾವ್ಯಗಳು, ಪುರಾಣಗಳು, ಕಲೆ, ಜನಪದ ಮುಂತಾದ ಪರಂಪರೆಗಳ ಬಗ್ಗೆ ಮಾತನಾಡುವ ಬಿಜೆಪಿಯು ಪದವಿ ಕಲಿಯುವ ನಮ್ಮ ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿ ಕೇವಲ ಅದಾನಿ, ಅಂಬಾನಿಗಳಂಥ ಲೂಟಿಕೋರರ ಮಾದರಿಗಳನ್ನು ಕಲಿಸಲು ಹೊರಟಿದೆಯೆ? ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ನಮ್ಮ ದೇಶಕ್ಕೆ ಜ್ಞಾನ ಇರುವ, ದುಡ್ಡು ಇರುವ ಜನರ ಅಗತ್ಯ ಎಷ್ಟಿದೆಯೋ ಅದಕ್ಕಿಂತ ಹೆಚ್ಚು ಮಾನವೀಯ ಹೃದಯ ಇರುವ ಮನುಷ್ಯರ ಅಗತ್ಯವಿದೆ. ಅಂಥದ್ದಕ್ಕೆ ವಿರುದ್ಧವಾದ ನಿಲುವುಗಳನ್ನು ರೂಪಿಸುವುದಕ್ಕಾಗಿ “ರಾಷ್ಟ್ರೀಯ ಶಿಕ್ಷಣ ನೀತಿ”ಯ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ. ಈ ದುರುದ್ದೇಶದ ಭಾಗವಾಗಿಯೇ ಉಪಸಮಿತಿಯವರು ಭಾಷೆಗಳ ಕಲಿಕೆಯನ್ನು ಎರಡು ಸೆಮಿಸ್ಟರುಗಳಿಗೆ ಇಳಿಸಿದ್ದಾರೆ. ಸರ್ಕಾರ ಈ ಸಮಿತಿಯ ಶಿಫಾರಸ್ಸುಗಳನ್ನು ಒಪ್ಪಿಕೊಂಡಿದ್ದೆ ಆದರೆ ಅದು ಬಹಳ ದೊಡ್ಡ ಮಟ್ಟದ ಕನ್ನಡ ದ್ರೋಹವಾಗುತ್ತದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: COWIN APP: ಕನ್ನಡ, ತಮಿಳು ಸೇರಿ 9 ಪ್ರಾದೇಶಿಕ ಭಾಷೆಗಳಲ್ಲಿ ಸೌಲಭ್ಯ ಲಭ್ಯ

“4 ವರ್ಷದ ಕೋರ್ಸಿಗೆ ಅನುಗುಣವಾಗಿ 3 ವರ್ಷಕ್ಕೆ ಅಥವಾ 6 ಸೆಮಿಸ್ಟರುಗಳಿಗೆ ಭಾಷಾ ವಿಷಯವನ್ನು ಬೋಧಿಸಲು ಕ್ರಮ ತೆಗೆದುಕೊಳ್ಳಬೇಕು. ಹೀಗೆ ಮಾಡುವುದರಿಂದ ನಮ್ಮ ಮಕ್ಕಳು ಉತ್ತಮ ಪರಂಪರೆಗಳಿಗೆ ವಾರಸುದಾರರಾಗಲು ಸಾಧ್ಯವಾಗುತ್ತದೆ ಮತ್ತು ರಾಷ್ಟ್ರಕ್ಕೆ ಬೇಕಾದ ಉತ್ತಮ ಮನುಷ್ಯನಾಗಿ ರೂಪುಗೊಳ್ಳಲು ಸಹಾಯವಾಗುತ್ತದೆ. ಅದರ ಬದಲಾಗಿ ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ಸರ್ಕಾರ ಮುಂದಾಗುವುದಾದರೆ ಅದರ ವಿರುದ್ಧ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ. ಈ ನಾಡು ಎಂದಿಗೂ ನಾಡು, ನುಡಿಗೆ ದ್ರೋಹ ಎಸಗಿದವರನ್ನು ಕ್ಷಮಿಸಿಲ್ಲ” ಎಂದು ಅವರು ಎಚ್ಚರಿಸಿದ್ದಾರೆ.

ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ರೂಪಿಸಬೇಕಾಗಿದೆ. ಹಾಗಾಗಿ ಹೊಸ ಪಠ್ಯಕ್ರಮವನ್ನು ರೂಪಿಸುವಾಗ ಸಂಬಂಧಿಸಿದ ತಜ್ಞರುಗಳ ಕುಳಿತು ಚರ್ಚಿಸಿ ಆರೋಗ್ಯಕರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜೊತೆಗೆ ನಾಡು-ನುಡಿಗಳನ್ನು ಕಟ್ಟಲು ಪೂರಕವಾಗುವ ಪಠ್ಯಗಳನ್ನು ರೂಪಿಸಬೇಕು. ಆರು ಸೆಮಿಸ್ಟರುಗಳಲ್ಲೂ ಕನ್ನಡ ಭಾಷಾ ವಿಷಯವನ್ನು ಎಲ್ಲಾ ಪದವಿ ಮಕ್ಕಳಿಗೂ ಕಡ್ಡಾಯವಾಗಿ ಕಲಿಸಲೇಬೇಕು. ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ವಿವಾದದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಣ ತಜ್ಞ ಶ್ರೀಪಾದ್‌ ಭಟ್‌, “ಹಾಗೆ ನೋಡಿದರೆ ಸಮವರ್ತಿ ಪಟ್ಟಿಯಲ್ಲಿ ಬರುವ ಶಿಕ್ಷಣ ನೀತಿಯ ಬಗ್ಗೆ ಒಕ್ಕೂಟ ಸರ್ಕಾರವು ರಾಜ್ಯದ ಜೊತೆಗೆ ಚರ್ಚೆ ಮಾಡಿಲ್ಲ, ಹಾಗೆಯೆ ಸಂಸತ್ತಿನಲ್ಲೂ ಚರ್ಚೆ ಮಾಡಿಲ್ಲ. ಅಲ್ಲದೆ ಕಸ್ತೂರಿ ರಂಗನ್‌ ವರದಿಗೆ ಸುಮಾರು 5 ರಿಂದ 8 ಲಕ್ಷ ಜನರು ಫೀಡ್‌ಬ್ಯಾಕ್‌ ನೀಡಿದ್ದಾರೆ, ಆದರೆ ಬಗ್ಗೆಯು ಸರ್ಕಾರ ಈ ವರೆಗೆ ಏನೂ ಹೇಳಿಲ್ಲ. ಅಲ್ಲದೆ ಉಪಮುಖ್ಯಮಂತ್ರಿ ಅಶ್ವಥ್‌ನಾರಾಯಣ್‌ ಅವರು ತನ್ನ ಮೇಲಿನವರನ್ನು ಸಂಪ್ರೀತಿಗೊಳಿಸಲು ಇದನ್ನು ತರುವುದಕ್ಕೆ ಹೊರಟಿದ್ದಾರೆ. ಜೊತೆಗೆ ಶಿಕ್ಷಣ ನೀತಿಯ ಟಾಸ್ಕ್‌ಫೋರ್ಸ್‌ನಲ್ಲಿರುವ ನಾಲ್ಕೇ ನಾಲ್ಕು ಜನರು ಇಡೀ ರಾಜ್ಯದ ಶಿಕ್ಷಣ ನೀತಿಯನ್ನು ಹೇಗೆ ನಿರ್ದರಿಸುತ್ತಾರೆ? ಈ ಟಾಸ್ಕ್‌ಫೋರ್ಸ್‌ನಲ್ಲಿರುವವರ ಅರ್ಹತೆ ಏನು” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...