Homeಮುಖಪುಟತನಗಾಗಿ ಏನನ್ನಾದರು ಕೇಳುವುದಕ್ಕಿಂತ ಸಾಯುವುದೇ ಮೇಲು: ಶಿವರಾಜ್ ಸಿಂಗ್ ಚೌಹಾಣ್

ತನಗಾಗಿ ಏನನ್ನಾದರು ಕೇಳುವುದಕ್ಕಿಂತ ಸಾಯುವುದೇ ಮೇಲು: ಶಿವರಾಜ್ ಸಿಂಗ್ ಚೌಹಾಣ್

- Advertisement -
- Advertisement -

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರನ್ನು ಸೋಮವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಬೆನ್ನಲ್ಲೇ ಸಿಎಂ ಆಗಿದ್ದ ಶಿವರಾಜ್ ಸಿಂಗ್ ಚೌಹಾಣ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರಿಗೆ ಸಲ್ಲಿಸಿದ್ದಾರೆ.

ಸೋಮವಾರ ಭೋಪಾಲ್‌ನ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್‌ ಯಾದವ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಶಿವರಾಜ್‌ ಸಿಂಗ್ ಚೌಹಾಣ್ ಅವರು ನೂತನ ಸಿಎಂಗೆ ಹೂಗುಚ್ಚ ನೀಡಿ ಅಭಿನಂದಿಸಿದ್ದರು.

ಶಿವರಾಜ್ ಸಿಂಗ್ ಸಿಎಂ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು. ಚುನಾವಣಾ ಪೂರ್ವ ಮತ್ತು ನಂತರ ಚೌಹಾಣ್ ಅವರೇ ಮತ್ತೊಮ್ಮೆ ಸಿಎಂ ಆಗಿ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗ್ತಿತ್ತು. ಆದರೆ, ಶಾಸಕಾಂಗ ಪಕ್ಷದ ಸಭೆಯಲ್ಲಿ ಹೈಕಮಾಂಡ್‌ ಅಚ್ಚರಿಯ ಹೆಸರನ್ನು ಸಿಎಂ ಸ್ಥಾನಕ್ಕೆ ಘೋಷಣೆ ಮಾಡಿ ಶಿವರಾಜ್ ಸಿಂಗ್ ಸೇರಿದಂತೆ ಬಿಜೆಪಿ ರಾಜ್ಯ ನಾಯಕರಿಗೆ ಶಾಕ್ ನೀಡಿದೆ.

ಕಣ್ಣೀರಿಟ್ಟ ಮಹಿಳೆಯರು :

ಶಿವರಾಜ್ ಸಿಂಗ್ ಚೌಹಾಣ್ ಸಿಎಂ ಸ್ಥಾನದಿಂದ ಕೆಳಗಿಳಿದಿರುವುದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಇಂದು(ಡಿ.12) ಚೌಹಾಣ್ ಅವರನ್ನು ಭೇಟಿಯಾದ ಮಹಿಳಾ ಅಭಿಮಾನಿಗಳು ಚೌಹಾಣ್ ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟಿದ್ದಾರೆ. ಈ ವೇಳೆ ಶಿವಾರಾಜ್ ಸಿಂಗ್ ಅವರನ್ನು ಸಮಾಧಾನಪಡಿಸಿದ್ದಾರೆ. “ನನ್ನ ರಾಜೀನಾಮೆ ನಿರ್ಧಾರ ನನಗೆ ತೃಪ್ತಿ ತಂದಿದೆ” ಎಂದಿದ್ದಾರೆ.

ಸಾಯುವುದೇ ಮೇಲೂ..

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಜ್ ಸಿಂಗ್, “ನನ್ನ ರಾಜೀನಾಮೆ ನಿರ್ಧಾರದಿಂದ ನಾನು ಸಂಪೂರ್ಣ ತೃಪ್ತನಾಗಿದ್ದೇನೆ. 2005ರಲ್ಲಿ ನಾನು ಮುಖ್ಯಮಂತ್ರಿಯಾದಾಗ ಉಮಾ ಭಾರತಿಯವರ ಕಠಿಣ ಪರಿಶ್ರಮದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ನಾನು ಈಗ ಏನನ್ನಾದರು ಕೇಳುವುದಕ್ಕಿಂತ ಸಾಯುವುದೇ ಮೇಲೂ” ಎಂದಿದ್ದಾರೆ. ಈ ಮಾತನ್ನು ಸಿಎಂ ಸ್ಥಾನ ಕೈ ತಪ್ಪಿದ್ದಕ್ಕೆ ಹೈಕಮಾಂಡ್ ನಾಯಕರ ಮೇಲೆ ಮುನಿಸಿಕೊಂಡು ಹೇಳಿದ್ದಾರಾ? ಇಲ್ಲ, ನನಗೆ ಪಕ್ಷದಿಂದ ಏನೂ ಬೇಡ, ಪಕ್ಷ ಎಲ್ಲವೂ ಕೊಟ್ಟಿದೆ ಎಂಬ ದಾಟಿಯಲ್ಲಿ ಹೇಳಿದ್ದಾರಾ? ಗೊತ್ತಿಲ್ಲ.

ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರ ರಾಜೀನಾಮೆಯನ್ನು ಬೇರೆಯದ್ದೇ ರೀತಿಯಲ್ಲಿ ವ್ಯಾಖ್ಯಾನಿಸಲಾಗ್ತಿದೆ. ಹರ್ಷವರ್ಧನ್ ತಿವಾರಿ ಎಂಬ ಎಕ್ಸ್ ಬಳಕೆದಾರರೊಬ್ಬರು ಶಿವರಾಜ್ ಸಿಂಗ್ ಮಹಿಳಾ ಅಭಿಮಾನಿಗಳನ್ನು ಸಮಾಧಾನಪಡಿಸಿದ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಜೊತೆಗೆ, “ಇದು ದೆಹಲಿಗೆ ಸವಾಲೆಸೆಯುತ್ತಿರುವ ಶಿವರಾಜ್ ಸಿಂಗ್ ಚೌಹಾಣ್ ಅವರ ಸ್ಟಂಟ್. ಅವರು ದೆಹಲಿಗೆ ಹೋಗುತ್ತಿಲ್ಲ ಎಂದಿದ್ದಾರೆ. ಯಾರೋ ಒಬ್ಬರು ಸಿಎಂ ಆಗಿರುವಾವ ಅವರು ಮಧ್ಯಪ್ರದೇಶದಲ್ಲಿ ನಿಂತು ಏನು ಮಾಡುತ್ತಾರೆ?. ಎಲ್ಲಾ ಉತ್ತರಗಳು ಈ ಪ್ರಶ್ನೆಯಲ್ಲಿವೆ. ಶಿವರಾಜ್ ಸಿಂಗ್ ಮಧ್ಯಪ್ರದೇಶದಲ್ಲಿ ಏನೋ ದೊಡ್ಡ ಪ್ಲಾನ್ ಮಾಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜಸ್ಥಾನದಲ್ಲಿ ವಸುಂಧರ ರಾಜೇ ಸಿಎಂ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದರು. ಎರಡೂ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲು ಇವರ ಪಾತ್ರ ಬಹಳಷ್ಟಿದೆ. ಆದರೆ, ಇಬ್ಬರಿಗೂ ಸಿಎಂ ಸ್ಥಾನ ಕೈ ತಪ್ಪಿದೆ. ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಅವಧಿಗೂ ಮುನ್ನ ಸಿಎಂ ಸ್ಥಾನದಿಂದ ಕೆಳಗಿಳಿದ ರೀತಿಯ ಪರಿಸ್ಥಿತಿ ಈ ಇಬ್ಬರು ಕೇಸರಿ ನಾಯಕರಿಗೂ ಆಗಿದೆ. ಹೀಗಿರುವಾಗ ಇಬ್ಬರ ಮುಂದಿನ ನಡೆ ಏನು? ಎಂಬುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...