Homeಮುಖಪುಟತನಗಾಗಿ ಏನನ್ನಾದರು ಕೇಳುವುದಕ್ಕಿಂತ ಸಾಯುವುದೇ ಮೇಲು: ಶಿವರಾಜ್ ಸಿಂಗ್ ಚೌಹಾಣ್

ತನಗಾಗಿ ಏನನ್ನಾದರು ಕೇಳುವುದಕ್ಕಿಂತ ಸಾಯುವುದೇ ಮೇಲು: ಶಿವರಾಜ್ ಸಿಂಗ್ ಚೌಹಾಣ್

- Advertisement -
- Advertisement -

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರನ್ನು ಸೋಮವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಬೆನ್ನಲ್ಲೇ ಸಿಎಂ ಆಗಿದ್ದ ಶಿವರಾಜ್ ಸಿಂಗ್ ಚೌಹಾಣ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರಿಗೆ ಸಲ್ಲಿಸಿದ್ದಾರೆ.

ಸೋಮವಾರ ಭೋಪಾಲ್‌ನ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್‌ ಯಾದವ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಶಿವರಾಜ್‌ ಸಿಂಗ್ ಚೌಹಾಣ್ ಅವರು ನೂತನ ಸಿಎಂಗೆ ಹೂಗುಚ್ಚ ನೀಡಿ ಅಭಿನಂದಿಸಿದ್ದರು.

ಶಿವರಾಜ್ ಸಿಂಗ್ ಸಿಎಂ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು. ಚುನಾವಣಾ ಪೂರ್ವ ಮತ್ತು ನಂತರ ಚೌಹಾಣ್ ಅವರೇ ಮತ್ತೊಮ್ಮೆ ಸಿಎಂ ಆಗಿ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗ್ತಿತ್ತು. ಆದರೆ, ಶಾಸಕಾಂಗ ಪಕ್ಷದ ಸಭೆಯಲ್ಲಿ ಹೈಕಮಾಂಡ್‌ ಅಚ್ಚರಿಯ ಹೆಸರನ್ನು ಸಿಎಂ ಸ್ಥಾನಕ್ಕೆ ಘೋಷಣೆ ಮಾಡಿ ಶಿವರಾಜ್ ಸಿಂಗ್ ಸೇರಿದಂತೆ ಬಿಜೆಪಿ ರಾಜ್ಯ ನಾಯಕರಿಗೆ ಶಾಕ್ ನೀಡಿದೆ.

ಕಣ್ಣೀರಿಟ್ಟ ಮಹಿಳೆಯರು :

ಶಿವರಾಜ್ ಸಿಂಗ್ ಚೌಹಾಣ್ ಸಿಎಂ ಸ್ಥಾನದಿಂದ ಕೆಳಗಿಳಿದಿರುವುದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಇಂದು(ಡಿ.12) ಚೌಹಾಣ್ ಅವರನ್ನು ಭೇಟಿಯಾದ ಮಹಿಳಾ ಅಭಿಮಾನಿಗಳು ಚೌಹಾಣ್ ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟಿದ್ದಾರೆ. ಈ ವೇಳೆ ಶಿವಾರಾಜ್ ಸಿಂಗ್ ಅವರನ್ನು ಸಮಾಧಾನಪಡಿಸಿದ್ದಾರೆ. “ನನ್ನ ರಾಜೀನಾಮೆ ನಿರ್ಧಾರ ನನಗೆ ತೃಪ್ತಿ ತಂದಿದೆ” ಎಂದಿದ್ದಾರೆ.

ಸಾಯುವುದೇ ಮೇಲೂ..

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಜ್ ಸಿಂಗ್, “ನನ್ನ ರಾಜೀನಾಮೆ ನಿರ್ಧಾರದಿಂದ ನಾನು ಸಂಪೂರ್ಣ ತೃಪ್ತನಾಗಿದ್ದೇನೆ. 2005ರಲ್ಲಿ ನಾನು ಮುಖ್ಯಮಂತ್ರಿಯಾದಾಗ ಉಮಾ ಭಾರತಿಯವರ ಕಠಿಣ ಪರಿಶ್ರಮದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ನಾನು ಈಗ ಏನನ್ನಾದರು ಕೇಳುವುದಕ್ಕಿಂತ ಸಾಯುವುದೇ ಮೇಲೂ” ಎಂದಿದ್ದಾರೆ. ಈ ಮಾತನ್ನು ಸಿಎಂ ಸ್ಥಾನ ಕೈ ತಪ್ಪಿದ್ದಕ್ಕೆ ಹೈಕಮಾಂಡ್ ನಾಯಕರ ಮೇಲೆ ಮುನಿಸಿಕೊಂಡು ಹೇಳಿದ್ದಾರಾ? ಇಲ್ಲ, ನನಗೆ ಪಕ್ಷದಿಂದ ಏನೂ ಬೇಡ, ಪಕ್ಷ ಎಲ್ಲವೂ ಕೊಟ್ಟಿದೆ ಎಂಬ ದಾಟಿಯಲ್ಲಿ ಹೇಳಿದ್ದಾರಾ? ಗೊತ್ತಿಲ್ಲ.

ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರ ರಾಜೀನಾಮೆಯನ್ನು ಬೇರೆಯದ್ದೇ ರೀತಿಯಲ್ಲಿ ವ್ಯಾಖ್ಯಾನಿಸಲಾಗ್ತಿದೆ. ಹರ್ಷವರ್ಧನ್ ತಿವಾರಿ ಎಂಬ ಎಕ್ಸ್ ಬಳಕೆದಾರರೊಬ್ಬರು ಶಿವರಾಜ್ ಸಿಂಗ್ ಮಹಿಳಾ ಅಭಿಮಾನಿಗಳನ್ನು ಸಮಾಧಾನಪಡಿಸಿದ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಜೊತೆಗೆ, “ಇದು ದೆಹಲಿಗೆ ಸವಾಲೆಸೆಯುತ್ತಿರುವ ಶಿವರಾಜ್ ಸಿಂಗ್ ಚೌಹಾಣ್ ಅವರ ಸ್ಟಂಟ್. ಅವರು ದೆಹಲಿಗೆ ಹೋಗುತ್ತಿಲ್ಲ ಎಂದಿದ್ದಾರೆ. ಯಾರೋ ಒಬ್ಬರು ಸಿಎಂ ಆಗಿರುವಾವ ಅವರು ಮಧ್ಯಪ್ರದೇಶದಲ್ಲಿ ನಿಂತು ಏನು ಮಾಡುತ್ತಾರೆ?. ಎಲ್ಲಾ ಉತ್ತರಗಳು ಈ ಪ್ರಶ್ನೆಯಲ್ಲಿವೆ. ಶಿವರಾಜ್ ಸಿಂಗ್ ಮಧ್ಯಪ್ರದೇಶದಲ್ಲಿ ಏನೋ ದೊಡ್ಡ ಪ್ಲಾನ್ ಮಾಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜಸ್ಥಾನದಲ್ಲಿ ವಸುಂಧರ ರಾಜೇ ಸಿಎಂ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದರು. ಎರಡೂ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲು ಇವರ ಪಾತ್ರ ಬಹಳಷ್ಟಿದೆ. ಆದರೆ, ಇಬ್ಬರಿಗೂ ಸಿಎಂ ಸ್ಥಾನ ಕೈ ತಪ್ಪಿದೆ. ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಅವಧಿಗೂ ಮುನ್ನ ಸಿಎಂ ಸ್ಥಾನದಿಂದ ಕೆಳಗಿಳಿದ ರೀತಿಯ ಪರಿಸ್ಥಿತಿ ಈ ಇಬ್ಬರು ಕೇಸರಿ ನಾಯಕರಿಗೂ ಆಗಿದೆ. ಹೀಗಿರುವಾಗ ಇಬ್ಬರ ಮುಂದಿನ ನಡೆ ಏನು? ಎಂಬುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...