Homeನ್ಯಾಯ ಪಥರಣಕೇಕೆಯ ಮಾಧ್ಯಮಗಳ ನಡುವೆ ನಮ್ಮ ಕರ್ತವ್ಯ; ನ್ಯಾಯಪಥ ಸಂಪಾದಕೀಯ

ರಣಕೇಕೆಯ ಮಾಧ್ಯಮಗಳ ನಡುವೆ ನಮ್ಮ ಕರ್ತವ್ಯ; ನ್ಯಾಯಪಥ ಸಂಪಾದಕೀಯ

ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಿನ ಸಮಯದಲ್ಲಿ ಜನರ ಜೀವದ ಜೊತೆಗೆ ತಮ್ಮ ಲಾಭಕ್ಕಾಗಿ ಚೆಲ್ಲಾಟವಾಡುತ್ತಿರುವ ಪತಂಜಲಿ ಸಂಸ್ಥೆ ಮತ್ತು ಅದರ ಸಂಸ್ಥಾಪಕ ಮತ್ತು ಒಡೆಯರ ಮೇಲೆ ತೆಗೆದುಕೊಂಡಿರುವ ಕ್ರಮಗಳು ಏನು?

- Advertisement -
- Advertisement -

ಗೆಳೆಯರೇ, ಕಳೆದ ವಾರ ಸಂಪಾದಕೀಯ ಟಿಪ್ಪಣಿಯಲ್ಲಿ ನಿವೇದಿಸಿಕೊಂಡಿದ್ದ ನನ್ನ ವೈಯಕ್ತಿಕ ಕೊರೊನ ಶಂಕೆಯ ಆತಂಕ ಕಳೆದಿದೆ. ಆದರೆ ರಾಜ್ಯದಲ್ಲಿ ಕೊರೊನ ಆತಂಕ ಇದೇ ಸಮಯದಲ್ಲಿ ದುಪ್ಪಟ್ಟು – ಮೂರು ಪಟ್ಟು ಬೆಳೆದಿದೆ. ಅದರ ಸುತ್ತ ಟಿವಿ ಮಾಧ್ಯಮಗಳು ನೂರು ಪಟ್ಟು ಭಯವನ್ನು ಜನರಲ್ಲಿ ಬೆಳೆಸಿವೆ. ಈ ಮಾಧ್ಯಮಗಳು ನಿಜವಾಗಿಯೂ ಒತ್ತಡ ಹಾಕಬೇಕಿದ್ದು, ಪ್ರಶ್ನಿಸಬೇಕಿದ್ದುದು ಸರ್ಕಾರವನ್ನು.

ಖಾಸಗಿ ಆಸ್ಪತ್ರೆಗಳನ್ನು ಈಗ ಕೋವಿಡ್ ಚಿಕಿತ್ಸೆ ನೀಡಲು ತೊಡಗಿಸಿಕೊಳ್ಳಲು ಸರ್ಕಾರ ನಿರ್ಧರಿಸಿ, ದರಪಟ್ಟಿಯನ್ನು ಸೂಚಿಸಿದೆ. ಯಾವುದೇ ನಿಖರತೆಯಿಲ್ಲದೆ ಸೊರಗಿರುವ ಈ ಸೂಚನೆಗಳು ಖಾಸಗಿ ಆಸ್ಪತ್ರೆಗಳಿಗೆ ಲಾಭದಾಯಕವಾಗಿರುವುದರ ವಿರುದ್ಧ ಮಾಧ್ಯಮಗಳು ಕಾರ್ಯಕ್ರಮಗಳನ್ನು ಮಾಡಿ ಜನರಿಗೆ ತಿಳಿವು ಮೂಡಿಸಬೇಕಿತ್ತು. ಮಾಧ್ಯಮಗಳಿಗೆ ಮಹಾ ಮರೆವು!

ಈ ಸಂಚಿಕೆಯಲ್ಲಿ ಡಾ.ಅಖಿಲಾ ಮತ್ತು ಡಾ.ಸಿಲ್ವಿಯಾ ಅವರು ಸದ್ಯದ ಕೊರೊನ ಚಿಕಿತ್ಸೆಯ ನೀತಿಯ ಸಮಸ್ಯೆಗಳ ಮೇಲೆ ಚರ್ಚಿಸಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯದ ಬಗ್ಗೆ, ಖಾಸಗಿ ಆಸ್ಪತ್ರೆಗಳು ಸೃಷ್ಟಿಸಬಹುದಾದ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಈ ಚರ್ಚೆಗಳ ಸಮಯದಲ್ಲಿಯೇ ಕೊರೊನ ಚಿಕಿತ್ಸೆಯನ್ನು ನೀಡಲು ನಿರಾಕರಿಸಿ ಬೆಂಗಳೂರು ನಗರದಲ್ಲಿ ಆಸ್ಪತ್ರೆಗಳನ್ನು ಮುಚ್ಚುತ್ತಿರುವ ವರದಿಗಳು ಕೂಡ ಬರುತ್ತಿವೆ. ಈ ವಿಷಯಗಳನ್ನು ಕೂಡ ಸದ್ಯದ ದೊಡ್ಡ ಮಾಧ್ಯಮಗಳು ಚರ್ಚೆಗೆ ತೆಗೆದುಕೊಳ್ಳುವುದಿಲ್ಲ ಎಂಬುದು ತಿಳಿದಿರುವ ವಿಷಯವೇ. ಇದರ ಬಗ್ಗೆ ನಾವು ಮುಂದಿನ ದಿನಗಳಲ್ಲಿ ಬಯಲಿಗೆಳೆದು, ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಖಾಸಗಿ ಆಸ್ಪತ್ರೆಗಳು ತೋರುತ್ತಿರುವ ಸಣ್ಣತನವನ್ನು ಹಾಗೂ ಸರ್ಕಾರದ ಬೇಜವಾಬ್ದಾರಿತನವನ್ನು ಬಿಚ್ಚಿಡಲಿದ್ದೇವೆ.

ಈ ಬಿಕ್ಕಟ್ಟಿನ ಸಮಯದಲ್ಲಿಯೂ ಪಾರಂಪರಿಕ ಚಿಕಿತ್ಸಾ ಪದ್ಧತಿ ಆಯುರ್ವೇದದ ಬಗ್ಗೆ ಭಾರತದ ಜನರಿಗೆ ಇರುವ ಭಾವನಾತ್ಮಕ ಸಂಬಂಧವನ್ನು ದುರುಪಯೋಗಪಡಿಸಿಕೊಂಡ ಪತಂಜಲಿ ಸಂಸ್ಥೆಯ ಹಗರಣವೂ ನಡೆದಿದೆ. ಬಾಬಾ ರಾಮದೇವ್ ಸ್ಥಾಪಿಸಿದ ಈ ಕಂಪೆನಿಯು ಯಾವುದೇ ನಿಖರ ಪ್ರಯೋಗ ನಡೆಸದೆ, ಕೊರೊನಿಲ್ ಎಂಬ ಔಷಧ ಈ ಸಾಂಕ್ರಾಮಿಕ ರೋಗವನ್ನು ವಾಸಿ ಮಾಡಬಲ್ಲದು ಎಂಬ ಜಾಹೀರಾತಿನೊಂದಿಗೆ ಬಿಡುಗಡೆ ಮಾಡಿದ ಸುದ್ದಿಯನ್ನು ನೀವೆಲ್ಲರೂ ಗಮನಿಸಿರುತ್ತೀರಿ.

ಸಣ್ಣ ಪುಟ್ಟ ಟೀಕೆಯ ಟ್ವಿಟರ್ ಸಂದೇಶಗಳಿಗೆ ದೊಡ್ಡ ಕೇಸುಗಳನ್ನು ಹಾಕುವ ಈ ಸರ್ಕಾರಗಳು, ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಿನ ಸಮಯದಲ್ಲಿ ಜನರ ಜೀವದ ಜೊತೆಗೆ ತಮ್ಮ ಲಾಭಕ್ಕಾಗಿ ಚೆಲ್ಲಾಟವಾಡುತ್ತಿರುವ ಪತಂಜಲಿ ಸಂಸ್ಥೆ ಮತ್ತು ಅದರ ಸಂಸ್ಥಾಪಕ ಮತ್ತು ಒಡೆಯರ ಮೇಲೆ ತೆಗೆದುಕೊಂಡಿರುವ ಕ್ರಮಗಳು ಏನು? ಇವುಗಳನ್ನು ಯಾವ ಮಾಧ್ಯಮಗಳು ಖಂಡಿಸಿ ಚರ್ಚೆ ಮಾಡಿದವು? ಇವೆಲ್ಲವೂ ದೇಶಪ್ರೇಮದ ಅಡಿಯಲ್ಲಿ ಬರುವುದಿಲ್ಲವೇ? ಈ ಸಂಚಿಕೆಯಲ್ಲಿ ಆಯುರ್ವೇದ ವೈದ್ಯೆ ಡಾ.ಸಾಮ್ನಾ ಅವರು ಹೇಗೆ ಇಂತಹ ಸಂಸ್ಥೆಗಳು ಆಯುರ್ವೇದವನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ ಎಂಬುದನ್ನು ಚರ್ಚಿಸಿದ್ದಾರೆ.

ಕೊರೊನ ತಂದೊಡ್ಡಿದ ಆರ್ಥಿಕ ಸಂಷ್ಟಗಳನ್ನು ನ್ಯಾಯಪಥ ಪತ್ರಿಕೆ ಹಲವು ವಾರಗಳ ಕಾಲ ಕವರ್ ಮಾಡಿದೆ. ಇದು ಮನರಂಜನಾ ಕ್ಷೇತ್ರಕ್ಕೂ ದೊಡ್ಡ ಸವಾಲನ್ನು ಒಡ್ಡಿದೆ. ಇದೇ ಸಂದರ್ಭದಲ್ಲಿ ಮೂಡಿದ ಹಲವು ಡಬ್ ಧಾರಾವಾಹಿಗಳು, ಡಬ್ಬಿಂಗ್ ಬಗ್ಗೆ ಮತ್ತೆ ಹೊಸ ಚರ್ಚೆಗಳನ್ನು ಎತ್ತಿವೆ. ರಾಮಾಯಣ – ಮಹಾಭಾರತದಂತಹ ಪುರಾಣಗಳನ್ನು ದೃಶ್ಯ ಮಾಧ್ಯಮದಲ್ಲಿ ಕಟ್ಟಿದ ಬಗೆ ಹೇಗೆ ಒಂದು ಪಕ್ಷದ ಸಿದ್ಧಾಂತವನ್ನು ಜನಪ್ರಿಯಗೊಳಿಸಿದವು ಎಂಬುದು ಹಳೆಯ ಚರ್ಚೆ.

ಈಗ ಡಬ್ಬಿಂಗ್ ಮೂಲಕವೂ ಇಂತಹ ಕಾರ್ಯಕ್ರಮಗಳೇ ಕನ್ನಡ ಭಾಷೆಗೆ ಬರುವುದಾದರೆ ಮತ್ತು ಇಲ್ಲಿ ಹುಟ್ಟಬಹುದಾದ ತಾತ್ವಿಕ ಪ್ರತಿರೋಧಗಳನ್ನು ಅವುಗಳು ಹತ್ತಿಕ್ಕಬಹುದಾದ ಸಂದರ್ಭ ಹೆಚ್ಚಾದರೆ ಡಬ್ಬಿಂಗ್ ಎಷ್ಟು ಉಪಯುಕ್ತ? ಅಲ್ಲದೆ ಡಬ್ ಮಾಡಿ ಪ್ರಸಾರ ಮಾಡುವುದು, ಇಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡುವುದಕ್ಕಿಂತ ಆರ್ಥಿಕವಾಗಿ ಹೆಚ್ಚು ಲಾಭದಾಯಕವಾಗಿರುವ ಸನ್ನಿವೇಶದಲ್ಲಿ, ಹಲವು ನಿರ್ಮಾಣ ಸಂಸ್ಥೆಗಳು ಧಾರಾವಾಹಿ ಚಿತ್ರೀಕರಣವನ್ನು ಸ್ಥಗಿತಗೊಳಿಸಿವೆ. ಇದರಿಂದ ಹಲವು ನಟರು, ತಂತ್ರಜ್ಞರು ಉದ್ಯೋಗ ಕಳೆದುಕೊಳ್ಳುತ್ತಿರುವ ವರದಿಗಳು ಕಾಣಿಸಿಕೊಂಡಿವೆ.

ಇದೇ ಸಮಯದಲ್ಲಿ, ನಮ್ಮಲ್ಲಿ ಪ್ರಾದೇಶಿಕವಾಗಿ ತಯಾರಿಸಲು ಸಮಸ್ಯೆ ಇರುವ ವಿಜ್ಞಾನ ಸಂಬಂಧಿ, ಇತಿಹಾಸ – ಪರಿಸರ ಸಂಬಂಧಿ ಕಾರ್ಯಕ್ರಮಗಳು ಡಬ್ ಆಗಿ ಕನ್ನಡಿಗರಿಗೆ ಸಿಗಬಾರದೇ ಎಂಬ ಯಾವತ್ತಿನ ಪ್ರಶ್ನೆಯೂ ಮುಖ್ಯವಾಗುತ್ತದೆ. ಈ ಪರ-ವಿರೋಧಿ ಚರ್ಚೆಗಳನ್ನು ಬಿ.ಸುರೇಶ್ ಮತ್ತು ಅಮರ್ ಇಲ್ಲಿ ಮತ್ತೆ ನಿಮ್ಮ ಮುಂದಿಟ್ಟಿದ್ದಾರೆ. ಎರಡೂ ವಾದಗಳ ಸಮನ್ವಯದ ಅಗತ್ಯತೆ ಕಂಡುಬಂದಿದೆ ಮತ್ತು ಇದು ಚರ್ಚೆಯನ್ನು ಮತ್ತಷ್ಟು ವಿಸ್ತರಿಸಲಿದೆ.

ಕಳೆದ ಸಂಚಿಕೆಯಲ್ಲಿ ಚೈನಾದ ಜೊತೆಗಿನ ವಿವಾದದ ಕುರಿತು ಮೂರು ಲೇಖನಗಳು ಇದ್ದವು. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಯಾವುದೇ ಸಕಾರಾತ್ಮಕ ಬೆಳವಣಿಗೆ ನಮಗೆ ಕಂಡುಬಂದಿಲ್ಲ. ಎಂದಿನಂತೆ ಮಾಧ್ಯಮಗಳು ಜಿಂಗೋಯಿಸಂ ಸಂಭ್ರಮಿಸುವುದನ್ನೇ ಮುಂದುವರೆಸಿವೆ.

ಈ ಜಿಂಗೋಯಿಸಂ ನಡುವೆ ತಮಿಳುನಾಡಿನಲ್ಲಿ ಪೊಲೀಸರ ದೌರ್ಜನ್ಯದಿಂದ ಪ್ರಾಣ ಕಳೆದುಕೊಂಡ ಜಯರಾಜ್-ಬೆನಿಕ್ಸ್ (ಅಪ್ಪಮಗ) ಬಗ್ಗೆ ನಮ್ಮ ದೇಶದಲ್ಲಿ ಸಾರ್ವಜನಿಕ ಆಕ್ರೋಶ ಮೂಡಲೇ ಇಲ್ಲ. ಈ ದೌರ್ಜನ್ಯದ ಬಗ್ಗೆ ತೇಜಸ್ವಿ ಈ ಸಂಚಿಕೆಯಲ್ಲಿ ಬರೆದಿದ್ದು, ಪೊಲೀಸ್ ಸಂಸ್ಥೆಯಲ್ಲಿ ಅಗತ್ಯವಿರುವ ಸುಧಾರಣೆಗಳ ಬಗ್ಗೆ ಮುಂದಿನ ಸಂಚಿಕೆಗಳಲ್ಲಿ ನಾವು ಲೇಖನಗಳನ್ನು ಪ್ರಕಟಿಸಲಿದ್ದೇವೆ. ವಾರವಾರದಂತೆ ಅಂಕಣಗಳು ಮತ್ತು ವಿಶೇಷ ಬರಹಗಳು ನಿಮಗೆ ಇಷ್ಟವಾಗಿ ಚಿಂತನೆಗೆ ಹಚ್ಚಬಲ್ಲವು ಎಂಬ ನಂಬಿಕೆ ಇದೆ. ಮುಂದಿನ ವಾರ ಇನ್ನಷ್ಟು ಹೊಸತನದಿಂದ ನಿಮ್ಮ ಮುಂದೆ ಬರಲಿದ್ದೇವೆ.


ಇದನ್ನೂ ಓದಿ: ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...