Homeಮುಖಪುಟಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ...

ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಿ 8 ಜನರನ್ನು ಉಪ ಮುಖ್ಯಮಂತ್ರಿಗಳಾಗಿ ಮಾಡಲು ದೆಹಲಿಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಸಭೆ ನಡೆಸಲಾಗಿದೆ.

- Advertisement -
- Advertisement -

ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಬ್ರಾಹ್ಮಣರಿದ್ದರಲ್ಲ ಆ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇದು ಪಂಚರತ್ನ ಯಾತ್ರೆಯಲ್ಲ, ಅದಕ್ಕೆ ನವಗ್ರಹ ಹಿಡಿದಿದೆ ಎಂದು ಟೀಕಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಎಚ್‌ಡಿಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಭಾಗದ ಬ್ರಾಹ್ಮಣ ಸಮಾಜ ಸರ್ವಜನೋ ಸುಖಿನೋ ಭವಂತು ಎನ್ನುವವರು. ಇವರು ನಮ್ಮ ಭಾಗದ ಬ್ರಾಹ್ಮಣರಲ್ಲ. ಮಹಾರಾಷ್ಟ್ರದ ಮರಾಠ ಪೇಶ್ವೆ ವಂಶಕ್ಕೆ ಸೇರಿದವರು. ಅವರಿಗೆ ಸಂಸ್ಕತಿ ಬೇಕಿಲ್ಲ, ದೇಶ ಒಡೆಯುವ ಕುತಂತ್ರ ರಾಜಕಾರಣ ಮಾಡುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಕೊಂದ ಪ್ರವರ್ಗದಿಂದ ಬಂದಂತವರು” ಎಂದಿದ್ದಾರೆ.

ವೀರಶೈವ ಸಮಾಜ, ಒಕ್ಕಲಿಗ ಸಮಾಜ, ಹಿಂದುಳಿದ ಮತ್ತು ದಲಿತ ಜನರು ಈ ಬಿಜೆಪಿಯ, ಆರ್‌ಎಸ್‌ಎಸ್‌ನ ಹುನ್ನಾರ, ಕುತಂತ್ರಕ್ಕೆ ಬಲಿಯಾಗಬಾರದು ಎಂದು ಹೇಳುತ್ತೇನೆ. ಇವರು ಈ ರಾಜ್ಯ ಒಡೆಯುತ್ತಾರೆ. ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಿ 8 ಜನರನ್ನು ಉಪ ಮುಖ್ಯಮಂತ್ರಿಗಳಾಗಿ ಮಾಡಲು ದೆಹಲಿಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಸಭೆ ನಡೆಸಿರುವುದರ ಕುರಿತು ನನಗೆ ಮಾಹಿತಿ ಬಂದಿದೆ ಎಂದಿದ್ದಾರೆ.

ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲಿ ಸಂಸ್ಕೃತಿಯಿದೆ. ನಾವು ಅವರ ಕಾಲಿಗೆ ಬೀಳುತ್ತೇವೆ, ಅವರನ್ನು ಪೂಜಿಸುತ್ತೇವೆ ಮತ್ತು ಗುರುಗಳ ರೀತಿ ಕಾಣುತ್ತೇವೆ. ಆದರೆ ಮೇಲಿನ ವರ್ಗದ ಬ್ರಾಹ್ಮಣರು ಸಮಾಜ ಒಡೆಯುವವರು. ಶೃಂಗೇರಿ ಮಠವನ್ನು ಒಡೆದು, ಶಂಕರಾಚಾರ್ಯರ ವಂಶಸ್ಥರನ್ನು ಓಡಿಸಿದಂತವರು. ಆ ವರ್ಗದ ಬ್ರಾಹ್ಮಣರು ಕುರಿತು ಕರ್ನಾಟಕದ ಕನ್ನಡಿಗರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು.

ಇದನ್ನೂ ಓದಿ: ‘ಗೌರಿ’ ಸಾಕ್ಷ್ಯಚಿತ್ರ: “ದಡ ದಡ, ಒಂದಲ್ಲ ಎರಡಲ್ಲ… ಸಾಲಾಗಿ ಏಳು, ತೂರಿದ್ದು ಗೌರಿಗೆ, ತಾಕಿದ್ದು ನಮ್ಮೆದೆಗೆ…”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...