Homeಅಂತರಾಷ್ಟ್ರೀಯಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಿ: ಶೋಹೆಬ್‌ ಅಖ್ತರ್

ಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಿ: ಶೋಹೆಬ್‌ ಅಖ್ತರ್

- Advertisement -
- Advertisement -

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಹೆಬ್ ಅಖ್ತರ್ ಜಗತ್ತನ್ನು ಅಪಾಯಕ್ಕೆ ಒಡ್ಡಿರುವ ಕೊರೊನ ವೈರಸ್ ರೋಗವನ್ನು ಎದುರಿಸಲು ಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಲು ಜನರನ್ನು ವಿನಂತಿಸಿದ್ದಾರೆ.

“ಕೊರೊನ ವೈರಸ್ ಜಾಗತಿಕ ಬಿಕ್ಕಟ್ಟು, ನಾವು ಜಾಗತಿಕ ಶಕ್ತಿಯಾಗಿ ಯೋಚಿಸಬೇಕು, ಧರ್ಮಕ್ಕಿಂತ ಮೇಲೇರಬೇಕು. ವೈರಸ್ ಹರಡದಂತೆ ಲಾಕ್‌ಡೌನ್ ನಡೆಯುತ್ತಿದೆ. ನೀವು ಸ್ಥಳಗಳಲ್ಲಿ ಸಂವಹನ ಮತ್ತು ಸಭೆ ನಡೆಸುತ್ತಿದ್ದರೆ, ಅದು ಸಾಧ್ಯವಿಲ್ಲ” ಎಂದು ಶೋಹಿಬ್‌ ಅಖ್ತರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ತಿಳಿಸಿದ್ದಾರೆ.

“ನೀವು ವಸ್ತುಗಳನ್ನು ಸಂಗ್ರಹಿಸುತ್ತಿದ್ದರೆ, ದಯವಿಟ್ಟು ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಯೋಚಿಸಿ. ಮಳಿಗೆಗಳು ಖಾಲಿಯಾಗಿವೆ, 3 ತಿಂಗಳ ನಂತರ ನೀವು ಬದುಕುವಿರಿ ಎಂಬ ಭರವಸೆ ಏನು? ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಯೋಚಿಸಿ, ಅವರು ತಮ್ಮ ಕುಟುಂಬವನ್ನು ಹೇಗೆ ಪೋಷಿಸುತ್ತಾರೆ? ಜನರ ಬಗ್ಗೆ ಯೋಚಿಸಿ, ಮನುಷ್ಯನಾಗಲು ಇದು ಸಮಯ ಹಿಂದೂ, ಮುಸ್ಲಿಂ ಅಲ್ಲ. ಜನರು ಪರಸ್ಪರ ಸಹಾಯ ಮಾಡಲು ಹಣವನ್ನು ಸಂಗ್ರಹಿಸಬೇಕು, ಶೇಖರಣೆ ಮಾಡುವುದನ್ನು ನಿಲ್ಲಿಸಿ” ಎಂದು ಅಖ್ತರ್ ಹೇಳಿದ್ದಾರೆ.

“ಶ್ರೀಮಂತರು ಬದುಕುಳಿಯುತ್ತಾರೆ, ಬಡವರು ಹೇಗೆ ಬದುಕುಳಿಯುತ್ತಾರೆ? ನಂಬಿಕೆ ಇರಲಿ. ನಾವು ಪ್ರಾಣಿಗಳಂತೆ ಬದುಕುತ್ತಿದ್ದೇವೆ, ಮನುಷ್ಯರಂತೆ ಬದುಕೋಣ. ಮತ್ತೊಬ್ಬರಿಗೆ ಸಹಾಯಕವಾಗಲು ಪ್ರಯತ್ನಿಸಿ, ದಯವಿಟ್ಟು ವಸ್ತುಗಳನ್ನು ಸಂಗ್ರಹಿಸುವುದನ್ನು ನಿಲ್ಲಿಸಿ. ನಾವು ಒಬ್ಬರನ್ನೊಬ್ಬರು ನೋಡಿಕೊಳ್ಳುವ ಸಮಯ ಇದು. ವಿಭಜಿಸಲು ಸಮಯವಿಲ್ಲ, ನಾವು ಮನುಷ್ಯರಾಗಿ ಬದುಕಬೇಕು, ”ಎಂದು ಅಖ್ತರ್ ತಳಿಸಿದ್ದಾರೆ.

ಕೊರೊನ ವೈರಸ್ ರೋಗ ಜಗತ್ತಿನ ಮೇಲೆ ಹಿಡಿತ ಸಾಧಿಸುತ್ತಿರುವುದರಿಂದ 2020 ರ ಒಲಿಂಪಿಕ್ಸ್ ಅನ್ನು ಮುಂದೂಡುವುದು ಒಲಿಂಪಿಕ್ಸ್ ಆಯ್ಕೆಗಳಲ್ಲಿ ಒಂದಾಗಿದೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಭಾನುವಾರ ಹೇಳಿದೆ.

“ಕ್ರೀಡಾಕೂಟವನ್ನು ಒಳಗೊಂಡಂತೆ ಎಲ್ಲಕ್ಕಿಂತ ಹೆಚ್ಚು ಮಾನವನ ಜೀವವೇ ಆದ್ಯತೆ ಪಡೆಯುತ್ತದೆ” ಎಂದು ಬ್ಯಾಚ್ ಕ್ರೀಡಾಪಟುಗಳಿಗೆ ಬಹಿರಂಗ ಪತ್ರದಲ್ಲಿ ಅಖ್ತರ್ ಬರೆದಿದ್ದಾರೆ. ” ಮೊದಲೇ ಸೂಚಿಸಿದಂತೆ, ವಿಭಿನ್ನ ಸನ್ನಿವೇಶಗಳಲ್ಲಿ ಯೋಚಿಸುತ್ತಿದ್ದೇವೆ ಮತ್ತು ಅವುಗಳನ್ನು ದಿನದಿಂದ ದಿನಕ್ಕೆ ಹೊಂದಿಕೊಳ್ಳುತ್ತಿದ್ದೇವೆ. ಟೋಕಿಯೋ 2020 ರ ಒಲಿಂಪಿಕ್ ಕ್ರೀಡಾಕೂಟದ ದಿನಾಂಕದ ಬಗ್ಗೆ ಅಂತಿಮ ನಿರ್ಧಾರವು ಇನ್ನೂ ಅಕಾಲಿಕವಾಗಿರುತ್ತದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...