Homeಅಂತರಾಷ್ಟ್ರೀಯಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಿ: ಶೋಹೆಬ್‌ ಅಖ್ತರ್

ಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಿ: ಶೋಹೆಬ್‌ ಅಖ್ತರ್

- Advertisement -
- Advertisement -

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಹೆಬ್ ಅಖ್ತರ್ ಜಗತ್ತನ್ನು ಅಪಾಯಕ್ಕೆ ಒಡ್ಡಿರುವ ಕೊರೊನ ವೈರಸ್ ರೋಗವನ್ನು ಎದುರಿಸಲು ಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಲು ಜನರನ್ನು ವಿನಂತಿಸಿದ್ದಾರೆ.

“ಕೊರೊನ ವೈರಸ್ ಜಾಗತಿಕ ಬಿಕ್ಕಟ್ಟು, ನಾವು ಜಾಗತಿಕ ಶಕ್ತಿಯಾಗಿ ಯೋಚಿಸಬೇಕು, ಧರ್ಮಕ್ಕಿಂತ ಮೇಲೇರಬೇಕು. ವೈರಸ್ ಹರಡದಂತೆ ಲಾಕ್‌ಡೌನ್ ನಡೆಯುತ್ತಿದೆ. ನೀವು ಸ್ಥಳಗಳಲ್ಲಿ ಸಂವಹನ ಮತ್ತು ಸಭೆ ನಡೆಸುತ್ತಿದ್ದರೆ, ಅದು ಸಾಧ್ಯವಿಲ್ಲ” ಎಂದು ಶೋಹಿಬ್‌ ಅಖ್ತರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ತಿಳಿಸಿದ್ದಾರೆ.

“ನೀವು ವಸ್ತುಗಳನ್ನು ಸಂಗ್ರಹಿಸುತ್ತಿದ್ದರೆ, ದಯವಿಟ್ಟು ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಯೋಚಿಸಿ. ಮಳಿಗೆಗಳು ಖಾಲಿಯಾಗಿವೆ, 3 ತಿಂಗಳ ನಂತರ ನೀವು ಬದುಕುವಿರಿ ಎಂಬ ಭರವಸೆ ಏನು? ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಯೋಚಿಸಿ, ಅವರು ತಮ್ಮ ಕುಟುಂಬವನ್ನು ಹೇಗೆ ಪೋಷಿಸುತ್ತಾರೆ? ಜನರ ಬಗ್ಗೆ ಯೋಚಿಸಿ, ಮನುಷ್ಯನಾಗಲು ಇದು ಸಮಯ ಹಿಂದೂ, ಮುಸ್ಲಿಂ ಅಲ್ಲ. ಜನರು ಪರಸ್ಪರ ಸಹಾಯ ಮಾಡಲು ಹಣವನ್ನು ಸಂಗ್ರಹಿಸಬೇಕು, ಶೇಖರಣೆ ಮಾಡುವುದನ್ನು ನಿಲ್ಲಿಸಿ” ಎಂದು ಅಖ್ತರ್ ಹೇಳಿದ್ದಾರೆ.

“ಶ್ರೀಮಂತರು ಬದುಕುಳಿಯುತ್ತಾರೆ, ಬಡವರು ಹೇಗೆ ಬದುಕುಳಿಯುತ್ತಾರೆ? ನಂಬಿಕೆ ಇರಲಿ. ನಾವು ಪ್ರಾಣಿಗಳಂತೆ ಬದುಕುತ್ತಿದ್ದೇವೆ, ಮನುಷ್ಯರಂತೆ ಬದುಕೋಣ. ಮತ್ತೊಬ್ಬರಿಗೆ ಸಹಾಯಕವಾಗಲು ಪ್ರಯತ್ನಿಸಿ, ದಯವಿಟ್ಟು ವಸ್ತುಗಳನ್ನು ಸಂಗ್ರಹಿಸುವುದನ್ನು ನಿಲ್ಲಿಸಿ. ನಾವು ಒಬ್ಬರನ್ನೊಬ್ಬರು ನೋಡಿಕೊಳ್ಳುವ ಸಮಯ ಇದು. ವಿಭಜಿಸಲು ಸಮಯವಿಲ್ಲ, ನಾವು ಮನುಷ್ಯರಾಗಿ ಬದುಕಬೇಕು, ”ಎಂದು ಅಖ್ತರ್ ತಳಿಸಿದ್ದಾರೆ.

ಕೊರೊನ ವೈರಸ್ ರೋಗ ಜಗತ್ತಿನ ಮೇಲೆ ಹಿಡಿತ ಸಾಧಿಸುತ್ತಿರುವುದರಿಂದ 2020 ರ ಒಲಿಂಪಿಕ್ಸ್ ಅನ್ನು ಮುಂದೂಡುವುದು ಒಲಿಂಪಿಕ್ಸ್ ಆಯ್ಕೆಗಳಲ್ಲಿ ಒಂದಾಗಿದೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಭಾನುವಾರ ಹೇಳಿದೆ.

“ಕ್ರೀಡಾಕೂಟವನ್ನು ಒಳಗೊಂಡಂತೆ ಎಲ್ಲಕ್ಕಿಂತ ಹೆಚ್ಚು ಮಾನವನ ಜೀವವೇ ಆದ್ಯತೆ ಪಡೆಯುತ್ತದೆ” ಎಂದು ಬ್ಯಾಚ್ ಕ್ರೀಡಾಪಟುಗಳಿಗೆ ಬಹಿರಂಗ ಪತ್ರದಲ್ಲಿ ಅಖ್ತರ್ ಬರೆದಿದ್ದಾರೆ. ” ಮೊದಲೇ ಸೂಚಿಸಿದಂತೆ, ವಿಭಿನ್ನ ಸನ್ನಿವೇಶಗಳಲ್ಲಿ ಯೋಚಿಸುತ್ತಿದ್ದೇವೆ ಮತ್ತು ಅವುಗಳನ್ನು ದಿನದಿಂದ ದಿನಕ್ಕೆ ಹೊಂದಿಕೊಳ್ಳುತ್ತಿದ್ದೇವೆ. ಟೋಕಿಯೋ 2020 ರ ಒಲಿಂಪಿಕ್ ಕ್ರೀಡಾಕೂಟದ ದಿನಾಂಕದ ಬಗ್ಗೆ ಅಂತಿಮ ನಿರ್ಧಾರವು ಇನ್ನೂ ಅಕಾಲಿಕವಾಗಿರುತ್ತದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...