Homeಅಂತರಾಷ್ಟ್ರೀಯಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಿ: ಶೋಹೆಬ್‌ ಅಖ್ತರ್

ಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಿ: ಶೋಹೆಬ್‌ ಅಖ್ತರ್

- Advertisement -
- Advertisement -

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಹೆಬ್ ಅಖ್ತರ್ ಜಗತ್ತನ್ನು ಅಪಾಯಕ್ಕೆ ಒಡ್ಡಿರುವ ಕೊರೊನ ವೈರಸ್ ರೋಗವನ್ನು ಎದುರಿಸಲು ಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಲು ಜನರನ್ನು ವಿನಂತಿಸಿದ್ದಾರೆ.

“ಕೊರೊನ ವೈರಸ್ ಜಾಗತಿಕ ಬಿಕ್ಕಟ್ಟು, ನಾವು ಜಾಗತಿಕ ಶಕ್ತಿಯಾಗಿ ಯೋಚಿಸಬೇಕು, ಧರ್ಮಕ್ಕಿಂತ ಮೇಲೇರಬೇಕು. ವೈರಸ್ ಹರಡದಂತೆ ಲಾಕ್‌ಡೌನ್ ನಡೆಯುತ್ತಿದೆ. ನೀವು ಸ್ಥಳಗಳಲ್ಲಿ ಸಂವಹನ ಮತ್ತು ಸಭೆ ನಡೆಸುತ್ತಿದ್ದರೆ, ಅದು ಸಾಧ್ಯವಿಲ್ಲ” ಎಂದು ಶೋಹಿಬ್‌ ಅಖ್ತರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ತಿಳಿಸಿದ್ದಾರೆ.

“ನೀವು ವಸ್ತುಗಳನ್ನು ಸಂಗ್ರಹಿಸುತ್ತಿದ್ದರೆ, ದಯವಿಟ್ಟು ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಯೋಚಿಸಿ. ಮಳಿಗೆಗಳು ಖಾಲಿಯಾಗಿವೆ, 3 ತಿಂಗಳ ನಂತರ ನೀವು ಬದುಕುವಿರಿ ಎಂಬ ಭರವಸೆ ಏನು? ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಯೋಚಿಸಿ, ಅವರು ತಮ್ಮ ಕುಟುಂಬವನ್ನು ಹೇಗೆ ಪೋಷಿಸುತ್ತಾರೆ? ಜನರ ಬಗ್ಗೆ ಯೋಚಿಸಿ, ಮನುಷ್ಯನಾಗಲು ಇದು ಸಮಯ ಹಿಂದೂ, ಮುಸ್ಲಿಂ ಅಲ್ಲ. ಜನರು ಪರಸ್ಪರ ಸಹಾಯ ಮಾಡಲು ಹಣವನ್ನು ಸಂಗ್ರಹಿಸಬೇಕು, ಶೇಖರಣೆ ಮಾಡುವುದನ್ನು ನಿಲ್ಲಿಸಿ” ಎಂದು ಅಖ್ತರ್ ಹೇಳಿದ್ದಾರೆ.

“ಶ್ರೀಮಂತರು ಬದುಕುಳಿಯುತ್ತಾರೆ, ಬಡವರು ಹೇಗೆ ಬದುಕುಳಿಯುತ್ತಾರೆ? ನಂಬಿಕೆ ಇರಲಿ. ನಾವು ಪ್ರಾಣಿಗಳಂತೆ ಬದುಕುತ್ತಿದ್ದೇವೆ, ಮನುಷ್ಯರಂತೆ ಬದುಕೋಣ. ಮತ್ತೊಬ್ಬರಿಗೆ ಸಹಾಯಕವಾಗಲು ಪ್ರಯತ್ನಿಸಿ, ದಯವಿಟ್ಟು ವಸ್ತುಗಳನ್ನು ಸಂಗ್ರಹಿಸುವುದನ್ನು ನಿಲ್ಲಿಸಿ. ನಾವು ಒಬ್ಬರನ್ನೊಬ್ಬರು ನೋಡಿಕೊಳ್ಳುವ ಸಮಯ ಇದು. ವಿಭಜಿಸಲು ಸಮಯವಿಲ್ಲ, ನಾವು ಮನುಷ್ಯರಾಗಿ ಬದುಕಬೇಕು, ”ಎಂದು ಅಖ್ತರ್ ತಳಿಸಿದ್ದಾರೆ.

ಕೊರೊನ ವೈರಸ್ ರೋಗ ಜಗತ್ತಿನ ಮೇಲೆ ಹಿಡಿತ ಸಾಧಿಸುತ್ತಿರುವುದರಿಂದ 2020 ರ ಒಲಿಂಪಿಕ್ಸ್ ಅನ್ನು ಮುಂದೂಡುವುದು ಒಲಿಂಪಿಕ್ಸ್ ಆಯ್ಕೆಗಳಲ್ಲಿ ಒಂದಾಗಿದೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಭಾನುವಾರ ಹೇಳಿದೆ.

“ಕ್ರೀಡಾಕೂಟವನ್ನು ಒಳಗೊಂಡಂತೆ ಎಲ್ಲಕ್ಕಿಂತ ಹೆಚ್ಚು ಮಾನವನ ಜೀವವೇ ಆದ್ಯತೆ ಪಡೆಯುತ್ತದೆ” ಎಂದು ಬ್ಯಾಚ್ ಕ್ರೀಡಾಪಟುಗಳಿಗೆ ಬಹಿರಂಗ ಪತ್ರದಲ್ಲಿ ಅಖ್ತರ್ ಬರೆದಿದ್ದಾರೆ. ” ಮೊದಲೇ ಸೂಚಿಸಿದಂತೆ, ವಿಭಿನ್ನ ಸನ್ನಿವೇಶಗಳಲ್ಲಿ ಯೋಚಿಸುತ್ತಿದ್ದೇವೆ ಮತ್ತು ಅವುಗಳನ್ನು ದಿನದಿಂದ ದಿನಕ್ಕೆ ಹೊಂದಿಕೊಳ್ಳುತ್ತಿದ್ದೇವೆ. ಟೋಕಿಯೋ 2020 ರ ಒಲಿಂಪಿಕ್ ಕ್ರೀಡಾಕೂಟದ ದಿನಾಂಕದ ಬಗ್ಗೆ ಅಂತಿಮ ನಿರ್ಧಾರವು ಇನ್ನೂ ಅಕಾಲಿಕವಾಗಿರುತ್ತದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...