Homeಅಂಕಣಗಳುನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾದ ಹಾಸ್ಟೆಲ್ ವಾರ್ಡನ್ ಬಿ.ಹೆಚ್.ಚಂದ್ರಪ್ಪ

ನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾದ ಹಾಸ್ಟೆಲ್ ವಾರ್ಡನ್ ಬಿ.ಹೆಚ್.ಚಂದ್ರಪ್ಪ

- Advertisement -
- Advertisement -
ಎಲೆಮರೆ – 28

ಹಾಸ್ಟೆಲುಗಳೆಂದರೆ ಎಪ್ಪತ್ತರ ದಶಕದಲ್ಲಿ ದಲಿತ ಚಳವಳಿಗಳ ತವರು ಮನೆಗಳಂತಿದ್ದವು. ಹಾಸ್ಟೆಲ್ ವಿದ್ಯಾರ್ಥಿಗಳು ಎಲ್ಲ ಬಗೆಯ ಚಳವಳಿಗಳ ಕೇಂದ್ರಬಿಂದುವಾಗಿದ್ದರು. ಕಾರಣ ಹಳ್ಳಿಗಳಿಂದ ನಗರದ ಹಾಸ್ಟೆಲ್‍ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಓದುತ್ತಲೇ ಸಾಮಾಜಿಕ ಅಸಮಾನತೆಯ ಬಗೆಗೆ ಅರಿವು ಮೂಡಿಸಿಕೊಂಡು, ಬಿಸಿರಕ್ತದ ಯುವಕ ಯುವತಿಯರು ಎಲ್ಲ ಬಗೆಯ ಅಸಮಾನತೆಯ ವಿರುದ್ಧ ಹೋರಾಟಕ್ಕೆ ಅಣಿಯಾತ್ತಿದ್ದರು. ಎಲ್ಲಾ ಹಿರಿಯ ಹೋರಾಟಗಾರರ ಹಾಸ್ಟೆಲ್ ಡೈರಿಗಳನ್ನು ಕೆದಕಿದರೆ ಅದೊಂದು ಅತ್ಯುತ್ತಮ ದಾಖಲೆಯಾಗಬಲ್ಲದು. ಆದರೆ 70-80 ರ ದಶಕದ ಹಾಸ್ಟೆಲುಗಳ ಕಣ್ಣೋಟದಿಂದ ಇಂದಿನ ಹಾಸ್ಟೆಲುಗಳನ್ನು ನೋಡುವಂತಿಲ್ಲ. ಹತ್ತಾರು ಬಿಗಿ ಬಂದೋಬಸ್ತುಗಳು, ವಿದ್ಯಾರ್ಥಿಗಳ ಗಂಭೀರ ಓದಿನ ಕೊರತೆ, ಹಾಸ್ಟೆಲ್ ವಾರ್ಡನ್, ಶಾಲಾ ಕಾಲೇಜು ಮೇಷ್ಟ್ರುಗಳ ಜಡತೆ ಹೀಗೆ ವ್ಯತ್ಯಾಸಗಳನ್ನು ಪಟ್ಟಿ ಮಾಡಬಹುದು. ಅದರಲ್ಲಿಯೂ ಕೆಲವು ಹಾಸ್ಟೆಲ್‍ಗಳು ಈಗಲೂ ವೈಚಾರಿಕ ತಿಳಿವಿನ ಕೇಂದ್ರಗಳಾಗಿ ಉಳಿದಿವೆ. ನಾನು ಗಮನಿಸಿದಂತೆ ಹರಪನಹಳ್ಳಿಯ ಹಿಂದುಳಿದ ವರ್ಗಗಳ ಹಾಸ್ಟೆಲ್ ವಾರ್ಡನ್ ಬಿ.ಹೆಚ್.ಚಂದ್ರಪ್ಪ ಈ ಕಾರಣಕ್ಕೆ ಗಮನಸೆಳೆಯುತ್ತಾರೆ.

ನಾನೊಮ್ಮೆ ಹರಪನಹಳ್ಳಿಗೆ ಟಿಪ್ಪು ಸುಲ್ತಾನ್ ಜಯಂತಿಯ ಭಾಷಣ ಮಾಡಲು ಹೋಗಿದ್ದೆ. ಅಂದು ನಾನು ತುಂಬಾ ಜೋಷಲ್ಲಿ ಮೈದುಂಬಿ ಮಾತನಾಡಿದೆ. ಮಾತು ಮುಗಿದ ನಂತರ ಗೆಳೆಯ ಶಿಕ್ಷಕ ಗಂಗಾಧರ ತನ್ನ ಸ್ನೇಹಬಳಗವನ್ನು ಪರಿಚಯಿಸಿದರು. ಅದರಲ್ಲಿ ಗಮನಸೆಳೆದ ವ್ಯಕ್ತಿ ಹಿಂದುಳಿದ ವರ್ಗಗಳ ಹಾಸ್ಟೆಲ್ ವಾರ್ಡನ್ ಹೆಚ್.ಬಿ. ಚಂದ್ರಪ್ಪ. ಕುಳ್ಳಗೆ ಪುಟಿಯುವ ವ್ಯಕ್ತಿತ್ವದ ಚಂದ್ರಪ್ಪ ಸದಾ ವಿದ್ಯಾರ್ಥಿಗಳ ಗುಂಪು ಕಟ್ಟಿಕೊಂಡು ಒಂದಿಲ್ಲೊಂದು ಚರ್ಚೆ ಸಂವಾದಗಳಲ್ಲಿ ತೊಡಗಿರುತ್ತಾರೆ.

ಮೂಲತಃ ಹರಿಹರ ತಾಲೂಕಿನ ನಿಟ್ಟೂರಿನ ಚಂದ್ರಪ್ಪನವರು ಬಿಎಸ್ಸಿ, ಬಿಎಡ್ ಮುಗಿದ ಮೇಲೆ 2002ರ ನವೆಂಬರ್‍ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ವಾರ್ಡ್‍ನ್ ಆಗಿ ನೇಮಕಗೊಂಡರು. ಚಂದ್ರಪ್ಪರಿಗೆ ವಿದ್ಯಾರ್ಥಿದೆಸೆಯಲ್ಲಿ ಓದಿನ ಹಸಿವಿತ್ತು. ಆದರೆ ಹಾಸ್ಟೆಲುಗಳಲ್ಲಿ ಪುಸ್ತಕಗಳಾಗಲಿ, ಅಂತಹದ್ದೊಂದು ವಾತಾವರಣವಾಗಲಿ ಇರಲಿಲ್ಲ. ಹೀಗಿದ್ದೂ ಹೇಗೋ ಪುಸ್ತಕಗಳನ್ನು ಒದಗಿಸಿಕೊಂಡು ಓದುತ್ತಿದ್ದರು. ವಿಶೇಷವಾಗಿ ತೇಜಸ್ವಿ ಕೃತಿಗಳು ವೈಚಾರಿಕ ಸೂಕ್ಷ್ಮತೆಯನ್ನೂ, ಪರಿಸರ ಪ್ರೀತಿಯನ್ನೂ, ಫೋಟೋಗ್ರಫಿಯ ಕನಸನ್ನೂ ಕಲಿಸಿದವು. ವಿದ್ಯಾರ್ಥಿದೆಸೆಯ ಕನಸುಗಳನ್ನು ಚಂದ್ರಪ್ಪ ತನ್ನ ಹಾಸ್ಟೆಲ್ ವಿದ್ಯಾರ್ಥಿಗಳ ಕನಸಾಗಿ ಪರಿವರ್ತಿಸಿದರು. ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ಓದಿನ ಹಸಿವನ್ನು ಹೆಚ್ಚಿಸಿ, ಹಾಸ್ಟೆಲಿನಲ್ಲಿ ಪುಸ್ತಕಗಳ ಒದಗಿಸಲು ಮುಂದಾದರು.

ಶಾಲೆಗಳು ಪಠ್ಯಪುಸ್ತಕಗಳಿಗೆ ಒತ್ತು ನೀಡುತ್ತವೆ. ಹೀಗಾಗಿ ಶಾಲಾ ಪಠ್ಯಗಳಿಗಿಂತಲೂ ವೈಚಾರಿಕ ಮತ್ತು ಸ್ಪರ್ಧಾತ್ಮಕ ಕೃತಿಗಳನ್ನು ನಾವುಗಳು ಕೊಡಬೇಕೆನ್ನುವುದು ಚಂದ್ರಪ್ಪರ ಕನಸಾಗಿತ್ತು. ಮೊದಲು ಕೆಲಸಕ್ಕೆ ಸೇರಿದ ಚನ್ನಗಿರಿ ತಾಲೂಕಿನ ಕೆರೆಬಿಳಚಿಯಲ್ಲಿ ಮಕ್ಕಳಿಗಾಗಿ ಪುಸ್ತಕಗಳ ಸಂಗ್ರಹ ಆರಂಭಿಸುತ್ತಾರೆ. ಪ್ರೀ ಮೆಟ್ರಿಕ್ ಮಕ್ಕಳಾದ ಕಾರಣ ವೈಚಾರಿಕ ಪುಸ್ತಕಗಳು ಅಷ್ಟು ಅರಗಲಿಲ್ಲ. ಮೆಟ್ರಿಕ್ ನಂತರದ ಹಾಸ್ಟೆಲ್ ವಾರ್ಡನ್ ಆಗಿ ಹರಪನಹಳ್ಳಿಗೆ ಬಂದಾಗ ಈ ಪ್ರಯೋಗಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯಿತು.

ಚಂದ್ರಪ್ಪರ ಪುಸ್ತಕದ ನಂಟು ಸಹಜವಾಗಿ ಹರಪನಹಳ್ಳಿ ಭಾಗದ ಸಾಹಿತ್ಯ ವಲಯವನ್ನು ಬೆಸೆಯುತ್ತದೆ. ಕೊಟ್ಟೂರಿನ ಕುಂ.ವಿ, ಸ್ಥಳೀಯರಾದ ಇಸ್ಮಾಯಿಲ್ ಎಲಿಗಾರ, ರಾಮನ ಮಲಿ ಮುಂತಾದವರ ಸಂಪರ್ಕ ಸಿಕ್ಕ ಮೇಲೆ ಸಾಹಿತ್ಯ ಓದಿನ ಅಭಿರುಚಿಯ ವ್ಯಾಪಕತೆ ಹೆಚ್ಚುತ್ತದೆ. `ಮಕ್ಕಳು ವೈಚಾರಿಕವಾಗಿ ಪ್ರಬುದ್ಧರಾಗಬೇಕು, ಓದು ಮುಗಿಯುತ್ತಲೇ ಉದ್ಯೋಗ ಹಿಡಿಯಬೇಕು’ ಎನ್ನುವ ತತ್ವವನ್ನು ಚಂದ್ರಪ್ಪ ಪಾಲಿಸಿದರು. ಇದರ ಪರಿಣಾಮ ಸಾಹಿತ್ಯಿಕ ಕೃತಿಗಳ ಜೊತೆಗೆ ಸ್ಪರ್ಧಾತ್ಮಕ ಪುಸ್ತಕಗಳ ಸಂಗ್ರಹ ಮತ್ತು ಓದಿಸುವಿಕೆಯೂ ಹೆಚ್ಚಿತು.

ಮಳೆಯಾಧಾರಿತ ಈ ಪ್ರದೇಶದ ಮಕ್ಕಳಿಗೆ ಸರಕಾರಿ ಕೆಲಸ ಬಹುದೊಡ್ಡ ಕನಸು. ಹಾಗಾಗಿ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಠಿಣವಾಗಿ ತೊಡಗಿಸಿದರು. ಪರಿಣಾಮ ಐಎಎಸ್, ಕೆಎಎಸ್ ಹೊರತುಪಡಿಸಿ ಎಲ್ಲಾ ಇಲಾಖೆಯಲ್ಲಿಯೂ ಐದುನೂರಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಉದ್ಯೋಗಸ್ತರಾಗಿದ್ದಾರೆ. ಇದು ಹಾಸ್ಟೆಲ್ ವಾರ್ಡನ್ ಆಗಿ ಚಂದ್ರಪ್ಪ ಅವರ ಅತ್ತುತ್ತಮ ಮಾದರಿಯಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಓದಿದ ಮಕ್ಕಳು ಉದ್ಯೋಗ ಹಿಡಿಯುವಂತಾದರೆ, ಹಳ್ಳಿಗಳಲ್ಲಿ ಶಿಕ್ಷಣದ ಬಗೆಗಿನ ಒತ್ತು ಹೆಚ್ಚುತ್ತದೆ. ನಿರುದ್ಯೋಗ ಹೆಚ್ಚಾದರೆ, ಗ್ರಾಮೀಣರ ಶಿಕ್ಷಣದ ಮೇಲಿನ ಆಸಕ್ತಿ ಕಡಿಮೆಯಾಗುತ್ತದೆ. ಹೀಗಾಗಿ ಚಂದ್ರಪ್ಪ ಅವರ ಕೆಲಸ ಹರಪನಹಳ್ಳಿ ಭಾಗದ ಹಳ್ಳಿಗಳಲ್ಲಿ ಶಿಕ್ಷಣದ ಬಗೆಗೆ ಜನರಲ್ಲಿ ವಿಶ್ವಾಸ ಮೂಡುವಂತೆ ಮಾಡಿದೆ. ಮನೆಗಳಲ್ಲಿ ತಂದೆ ತಾಯಿಗಳು ಮಕ್ಕಳ ಭವಿಷ್ಯ ರೂಪಿಸಲು ಎಷ್ಟು ಕಾಳಜಿ ವಹಿಸುತ್ತಾರೋ ಅಷ್ಟು ಕಾಳಜಿಯನ್ನು ನಾವು ವಹಿಸುತ್ತೇವೆ ಎನ್ನುವ ಚಂದ್ರಪ್ಪ ಅವರ ಮಾತಿನಲ್ಲಿಯೇ ಅವರ ಬದ್ಧತೆ ಅರ್ಥವಾಗುತ್ತದೆ.

`ದಾರಿದೀಪ’ ಎನ್ನುವ ವೇದಿಕೆಯೊಂದನ್ನು ಚಂದ್ರಪ್ಪ ರೂಪಿಸಿದ್ದಾರೆ. ಇದು ಈ ಹಾಸ್ಟೆಲ್ ದಾರಿಯಲ್ಲಿ ಬದುಕನ್ನು ಕಟ್ಟಿಕೊಂಡವರು ಮರಳಿ ಹಾಸ್ಟೆಲ್‍ಗೆ ಎನ್ನುವಂತಿದೆ. ಈಗಾಗಲೆ ಈ ಹಾಸ್ಟೆಲಿನಲ್ಲಿ ಓದಿ, ನೌಕರಿ ಪಡೆದವರು ಈಗ ಹಾಸ್ಟೆಲಿನಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ನೆರವಾಗುತ್ತಿದ್ದಾರೆ. ಜಿಲ್ಲಾ, ತಾಲೂಕು ಆಡಳಿತಕ್ಕೆ ಬರುವ ಯುವ ಐಎಎಸ್ ಕೆಎಎಸ್ ಅಧಿಕಾರಿಗಳನ್ನು ಹಾಸ್ಟೆಲಿಗೆ ಕರೆಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಉಪನ್ಯಾಸ ಕೊಡಿಸುತ್ತಾರೆ. ಚಂದ್ರಪ್ಪ ಸ್ವತಃ ಪರಿಸರವಾದಿ ಪಕ್ಷಿಪ್ರೇಮಿ. ತನ್ನ ಈ ಪರಿಸರ ಪ್ರೇಮವನ್ನು ತನ್ನ ಹಾಸ್ಟೆಲ್ ವಿದ್ಯಾರ್ಥಿಗಳಿಗೂ ವಿಸ್ತರಿಸುತ್ತಾರೆ. ಬೇಸಿಗೆಯಲ್ಲಿ ಬೆಟ್ಟ ಗುಡ್ಡಗಳ ಅಲೆದು ವಿದ್ಯಾರ್ಥಿಗಳ ಸಹಾಯದಿಂದ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತದೆ. ಹಿಂದೆ ಉಚ್ಚಂಗಿದುರ್ಗದ ಗುಡ್ಡವನ್ನು ದತ್ತು ಪಡೆದು ರಜೆಗಳಲ್ಲಿ ವಿದ್ಯಾರ್ಥಿಗಳ ಸಹಾಯದಿಂದ ಸಸಿ ನೆಡುವ, ಇರುವ ಸಸ್ಯ ಜಾತಿಗಳನ್ನು ಉಳಿಸುವ ಕಾರ್ಯಕ್ರಮ ಆಯೋಜಿಸಿದ್ದರು.

ಚಂದ್ರಪ್ಪ ಸ್ವತಃ ಒಳ್ಳೆಯ ಫೋಟೋಗ್ರಾಫರ್, ಮೊದಲಿಂದಲೂ ವೈಲ್ಡ್ ಲೈಫ್ ಫೋಟೊಗ್ರಫಿಯ ಆಸಕ್ತಿ ಇತ್ತು. ಇದೀಗ ಬಯಲು ಸೀಮೆ ಪಕ್ಷಿಗಳ ಕುರಿತು ಅಧ್ಯಯನ ಮಾಡುತ್ತಿದ್ದಾರೆ. ಗಾಳಿಫ್ಯಾನು (ವಿಂಡ್ ಪವರ್) ಗಳಿಂದ ನೆಲವಾಸಿ ಕ್ರಿಮಿ, ಕೀಟ, ಪಶು, ಪಕ್ಷಿಗಳಿಗೆ ಹೇಗೆ ತೊಂದರೆಯಾಗುತ್ತಿದೆ ಎನ್ನುವುದನ್ನು ಗುರುತಿಸುತ್ತಿದ್ದಾರೆ. ಚಂದ್ರಪ್ಪ ಹೇಳುವಂತೆ ಗಾಳಿಯ ಫ್ಯಾನುಗಳ ಶಬ್ದದಿಂದಾಗಿ ಜೀವಜಂತುಗಳ ನಿದ್ರೆ ಮತ್ತು ವಿಶ್ರಾಂತಿಗೆ ತೊಂದರೆಯಾಗಿ, ಅವುಗಳ ದೈನಂದಿನ ದಿನಚರಿ ಏರುಪೇರಾಗುತ್ತದೆ. ಇದು ಮೊಟ್ಟೆ ಇಟ್ಟು ಮರಿ ಮಾಡುವುದರ ಮೇಲೂ ಪರಿಣಾಮ ಬೀರುತ್ತದೆ, ಹೀಗಾಗಿ ಪಕ್ಷಿ ಕ್ರಿಮಿ ಕೀಟಗಳ ಸಂತಾನೋತ್ಪತ್ತಿ ಕುಂಟಿತವಾಗಿ ಅಳಿವಿನಂಚಿಗೆ ಬರುತ್ತವೆ ಎನ್ನುವುದು ಚಂದ್ರಪ್ಪ ಅವರ ಕಕ್ಕುಲಾತಿ.

ಹೀಗೆ ಚಂದ್ರಪ್ಪ ಅವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮನೆಯ ವಾತಾವರಣವನ್ನು ಸೃಷ್ಟಿಸಿ, ಅವರಲ್ಲಿ ಓದಿನ ಮೂಲಕ ವೈಚಾರಿಕತೆ ಬೆಳೆಸಿ, ಸ್ವರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಾರೆ. ಏಕಕಾಲದಲ್ಲಿ ಪರಿಸರದ ಕಾಳಜಿಯನ್ನೂ, ಬದುಕಿನ ಪ್ರೀತಿಯನ್ನೂ ಕಲಿಸುತ್ತಾ, ನಿಜಕ್ಕೂ ಒಬ್ಬ ಹಾಸ್ಟೆಲ್ ವಾರ್ಡನ್ ಅಂದರೆ ಹೀಗಿರಬೇಕು ಎನ್ನುವಂತಿರುವ ಚಂದ್ರಪ್ಪ ಅವರ ಹೊಸ ಹೊಸ ಕನಸುಗಳೂ ಸಾಕಾರವಾಗಲಿ.

ಚಂದ್ರಪ್ಪ ಅವರ ಫೋಟೋಗ್ರಫಿ ಮತ್ತು ಹಾಸ್ಟೆಲ್ ಚಟುವಟಿಕೆಗಳನ್ನು ಗಮನಿಸಲು ಅವರ ಫೇಸ್‍ಬುಕ್ ಪೇಜನ್ನು ಗಮನಿಸಿ. https://www.facebook.com/chandrappabh.bcm

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಂದ್ರಪ್ಪನವರ ಕಾರ್ಯವೈಖರಿ ಶ್ಲಾಘನೀಯ ಮತ್ತು ಅನುಕರಣನೀಯ. ನಮ್ಮ ಎಲ್ಲಾ ಹಾಸ್ಟೆಲ್ ಗಳ ವಾರ್ಡನ್ಗಳೂ ಚಂದ್ರಪ್ಪನವರ ಕಾರ್ಯವೈಖರಿಯನ್ನು ಅನುಸರಿಸಿದರೆ ವಿದ್ಯಾರ್ಥಿಗಳಲ್ಲಿ ಅದ್ಭುತ ಸಾಧನೆಯನ್ನು ಕಾಣಬಹುದು. ಅರುಣ್ ಅವರಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...