Homeಅಂಕಣಗಳುನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾದ ಹಾಸ್ಟೆಲ್ ವಾರ್ಡನ್ ಬಿ.ಹೆಚ್.ಚಂದ್ರಪ್ಪ

ನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾದ ಹಾಸ್ಟೆಲ್ ವಾರ್ಡನ್ ಬಿ.ಹೆಚ್.ಚಂದ್ರಪ್ಪ

- Advertisement -
- Advertisement -
ಎಲೆಮರೆ – 28

ಹಾಸ್ಟೆಲುಗಳೆಂದರೆ ಎಪ್ಪತ್ತರ ದಶಕದಲ್ಲಿ ದಲಿತ ಚಳವಳಿಗಳ ತವರು ಮನೆಗಳಂತಿದ್ದವು. ಹಾಸ್ಟೆಲ್ ವಿದ್ಯಾರ್ಥಿಗಳು ಎಲ್ಲ ಬಗೆಯ ಚಳವಳಿಗಳ ಕೇಂದ್ರಬಿಂದುವಾಗಿದ್ದರು. ಕಾರಣ ಹಳ್ಳಿಗಳಿಂದ ನಗರದ ಹಾಸ್ಟೆಲ್‍ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಓದುತ್ತಲೇ ಸಾಮಾಜಿಕ ಅಸಮಾನತೆಯ ಬಗೆಗೆ ಅರಿವು ಮೂಡಿಸಿಕೊಂಡು, ಬಿಸಿರಕ್ತದ ಯುವಕ ಯುವತಿಯರು ಎಲ್ಲ ಬಗೆಯ ಅಸಮಾನತೆಯ ವಿರುದ್ಧ ಹೋರಾಟಕ್ಕೆ ಅಣಿಯಾತ್ತಿದ್ದರು. ಎಲ್ಲಾ ಹಿರಿಯ ಹೋರಾಟಗಾರರ ಹಾಸ್ಟೆಲ್ ಡೈರಿಗಳನ್ನು ಕೆದಕಿದರೆ ಅದೊಂದು ಅತ್ಯುತ್ತಮ ದಾಖಲೆಯಾಗಬಲ್ಲದು. ಆದರೆ 70-80 ರ ದಶಕದ ಹಾಸ್ಟೆಲುಗಳ ಕಣ್ಣೋಟದಿಂದ ಇಂದಿನ ಹಾಸ್ಟೆಲುಗಳನ್ನು ನೋಡುವಂತಿಲ್ಲ. ಹತ್ತಾರು ಬಿಗಿ ಬಂದೋಬಸ್ತುಗಳು, ವಿದ್ಯಾರ್ಥಿಗಳ ಗಂಭೀರ ಓದಿನ ಕೊರತೆ, ಹಾಸ್ಟೆಲ್ ವಾರ್ಡನ್, ಶಾಲಾ ಕಾಲೇಜು ಮೇಷ್ಟ್ರುಗಳ ಜಡತೆ ಹೀಗೆ ವ್ಯತ್ಯಾಸಗಳನ್ನು ಪಟ್ಟಿ ಮಾಡಬಹುದು. ಅದರಲ್ಲಿಯೂ ಕೆಲವು ಹಾಸ್ಟೆಲ್‍ಗಳು ಈಗಲೂ ವೈಚಾರಿಕ ತಿಳಿವಿನ ಕೇಂದ್ರಗಳಾಗಿ ಉಳಿದಿವೆ. ನಾನು ಗಮನಿಸಿದಂತೆ ಹರಪನಹಳ್ಳಿಯ ಹಿಂದುಳಿದ ವರ್ಗಗಳ ಹಾಸ್ಟೆಲ್ ವಾರ್ಡನ್ ಬಿ.ಹೆಚ್.ಚಂದ್ರಪ್ಪ ಈ ಕಾರಣಕ್ಕೆ ಗಮನಸೆಳೆಯುತ್ತಾರೆ.

ನಾನೊಮ್ಮೆ ಹರಪನಹಳ್ಳಿಗೆ ಟಿಪ್ಪು ಸುಲ್ತಾನ್ ಜಯಂತಿಯ ಭಾಷಣ ಮಾಡಲು ಹೋಗಿದ್ದೆ. ಅಂದು ನಾನು ತುಂಬಾ ಜೋಷಲ್ಲಿ ಮೈದುಂಬಿ ಮಾತನಾಡಿದೆ. ಮಾತು ಮುಗಿದ ನಂತರ ಗೆಳೆಯ ಶಿಕ್ಷಕ ಗಂಗಾಧರ ತನ್ನ ಸ್ನೇಹಬಳಗವನ್ನು ಪರಿಚಯಿಸಿದರು. ಅದರಲ್ಲಿ ಗಮನಸೆಳೆದ ವ್ಯಕ್ತಿ ಹಿಂದುಳಿದ ವರ್ಗಗಳ ಹಾಸ್ಟೆಲ್ ವಾರ್ಡನ್ ಹೆಚ್.ಬಿ. ಚಂದ್ರಪ್ಪ. ಕುಳ್ಳಗೆ ಪುಟಿಯುವ ವ್ಯಕ್ತಿತ್ವದ ಚಂದ್ರಪ್ಪ ಸದಾ ವಿದ್ಯಾರ್ಥಿಗಳ ಗುಂಪು ಕಟ್ಟಿಕೊಂಡು ಒಂದಿಲ್ಲೊಂದು ಚರ್ಚೆ ಸಂವಾದಗಳಲ್ಲಿ ತೊಡಗಿರುತ್ತಾರೆ.

ಮೂಲತಃ ಹರಿಹರ ತಾಲೂಕಿನ ನಿಟ್ಟೂರಿನ ಚಂದ್ರಪ್ಪನವರು ಬಿಎಸ್ಸಿ, ಬಿಎಡ್ ಮುಗಿದ ಮೇಲೆ 2002ರ ನವೆಂಬರ್‍ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ವಾರ್ಡ್‍ನ್ ಆಗಿ ನೇಮಕಗೊಂಡರು. ಚಂದ್ರಪ್ಪರಿಗೆ ವಿದ್ಯಾರ್ಥಿದೆಸೆಯಲ್ಲಿ ಓದಿನ ಹಸಿವಿತ್ತು. ಆದರೆ ಹಾಸ್ಟೆಲುಗಳಲ್ಲಿ ಪುಸ್ತಕಗಳಾಗಲಿ, ಅಂತಹದ್ದೊಂದು ವಾತಾವರಣವಾಗಲಿ ಇರಲಿಲ್ಲ. ಹೀಗಿದ್ದೂ ಹೇಗೋ ಪುಸ್ತಕಗಳನ್ನು ಒದಗಿಸಿಕೊಂಡು ಓದುತ್ತಿದ್ದರು. ವಿಶೇಷವಾಗಿ ತೇಜಸ್ವಿ ಕೃತಿಗಳು ವೈಚಾರಿಕ ಸೂಕ್ಷ್ಮತೆಯನ್ನೂ, ಪರಿಸರ ಪ್ರೀತಿಯನ್ನೂ, ಫೋಟೋಗ್ರಫಿಯ ಕನಸನ್ನೂ ಕಲಿಸಿದವು. ವಿದ್ಯಾರ್ಥಿದೆಸೆಯ ಕನಸುಗಳನ್ನು ಚಂದ್ರಪ್ಪ ತನ್ನ ಹಾಸ್ಟೆಲ್ ವಿದ್ಯಾರ್ಥಿಗಳ ಕನಸಾಗಿ ಪರಿವರ್ತಿಸಿದರು. ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ಓದಿನ ಹಸಿವನ್ನು ಹೆಚ್ಚಿಸಿ, ಹಾಸ್ಟೆಲಿನಲ್ಲಿ ಪುಸ್ತಕಗಳ ಒದಗಿಸಲು ಮುಂದಾದರು.

ಶಾಲೆಗಳು ಪಠ್ಯಪುಸ್ತಕಗಳಿಗೆ ಒತ್ತು ನೀಡುತ್ತವೆ. ಹೀಗಾಗಿ ಶಾಲಾ ಪಠ್ಯಗಳಿಗಿಂತಲೂ ವೈಚಾರಿಕ ಮತ್ತು ಸ್ಪರ್ಧಾತ್ಮಕ ಕೃತಿಗಳನ್ನು ನಾವುಗಳು ಕೊಡಬೇಕೆನ್ನುವುದು ಚಂದ್ರಪ್ಪರ ಕನಸಾಗಿತ್ತು. ಮೊದಲು ಕೆಲಸಕ್ಕೆ ಸೇರಿದ ಚನ್ನಗಿರಿ ತಾಲೂಕಿನ ಕೆರೆಬಿಳಚಿಯಲ್ಲಿ ಮಕ್ಕಳಿಗಾಗಿ ಪುಸ್ತಕಗಳ ಸಂಗ್ರಹ ಆರಂಭಿಸುತ್ತಾರೆ. ಪ್ರೀ ಮೆಟ್ರಿಕ್ ಮಕ್ಕಳಾದ ಕಾರಣ ವೈಚಾರಿಕ ಪುಸ್ತಕಗಳು ಅಷ್ಟು ಅರಗಲಿಲ್ಲ. ಮೆಟ್ರಿಕ್ ನಂತರದ ಹಾಸ್ಟೆಲ್ ವಾರ್ಡನ್ ಆಗಿ ಹರಪನಹಳ್ಳಿಗೆ ಬಂದಾಗ ಈ ಪ್ರಯೋಗಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯಿತು.

ಚಂದ್ರಪ್ಪರ ಪುಸ್ತಕದ ನಂಟು ಸಹಜವಾಗಿ ಹರಪನಹಳ್ಳಿ ಭಾಗದ ಸಾಹಿತ್ಯ ವಲಯವನ್ನು ಬೆಸೆಯುತ್ತದೆ. ಕೊಟ್ಟೂರಿನ ಕುಂ.ವಿ, ಸ್ಥಳೀಯರಾದ ಇಸ್ಮಾಯಿಲ್ ಎಲಿಗಾರ, ರಾಮನ ಮಲಿ ಮುಂತಾದವರ ಸಂಪರ್ಕ ಸಿಕ್ಕ ಮೇಲೆ ಸಾಹಿತ್ಯ ಓದಿನ ಅಭಿರುಚಿಯ ವ್ಯಾಪಕತೆ ಹೆಚ್ಚುತ್ತದೆ. `ಮಕ್ಕಳು ವೈಚಾರಿಕವಾಗಿ ಪ್ರಬುದ್ಧರಾಗಬೇಕು, ಓದು ಮುಗಿಯುತ್ತಲೇ ಉದ್ಯೋಗ ಹಿಡಿಯಬೇಕು’ ಎನ್ನುವ ತತ್ವವನ್ನು ಚಂದ್ರಪ್ಪ ಪಾಲಿಸಿದರು. ಇದರ ಪರಿಣಾಮ ಸಾಹಿತ್ಯಿಕ ಕೃತಿಗಳ ಜೊತೆಗೆ ಸ್ಪರ್ಧಾತ್ಮಕ ಪುಸ್ತಕಗಳ ಸಂಗ್ರಹ ಮತ್ತು ಓದಿಸುವಿಕೆಯೂ ಹೆಚ್ಚಿತು.

ಮಳೆಯಾಧಾರಿತ ಈ ಪ್ರದೇಶದ ಮಕ್ಕಳಿಗೆ ಸರಕಾರಿ ಕೆಲಸ ಬಹುದೊಡ್ಡ ಕನಸು. ಹಾಗಾಗಿ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಠಿಣವಾಗಿ ತೊಡಗಿಸಿದರು. ಪರಿಣಾಮ ಐಎಎಸ್, ಕೆಎಎಸ್ ಹೊರತುಪಡಿಸಿ ಎಲ್ಲಾ ಇಲಾಖೆಯಲ್ಲಿಯೂ ಐದುನೂರಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಉದ್ಯೋಗಸ್ತರಾಗಿದ್ದಾರೆ. ಇದು ಹಾಸ್ಟೆಲ್ ವಾರ್ಡನ್ ಆಗಿ ಚಂದ್ರಪ್ಪ ಅವರ ಅತ್ತುತ್ತಮ ಮಾದರಿಯಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಓದಿದ ಮಕ್ಕಳು ಉದ್ಯೋಗ ಹಿಡಿಯುವಂತಾದರೆ, ಹಳ್ಳಿಗಳಲ್ಲಿ ಶಿಕ್ಷಣದ ಬಗೆಗಿನ ಒತ್ತು ಹೆಚ್ಚುತ್ತದೆ. ನಿರುದ್ಯೋಗ ಹೆಚ್ಚಾದರೆ, ಗ್ರಾಮೀಣರ ಶಿಕ್ಷಣದ ಮೇಲಿನ ಆಸಕ್ತಿ ಕಡಿಮೆಯಾಗುತ್ತದೆ. ಹೀಗಾಗಿ ಚಂದ್ರಪ್ಪ ಅವರ ಕೆಲಸ ಹರಪನಹಳ್ಳಿ ಭಾಗದ ಹಳ್ಳಿಗಳಲ್ಲಿ ಶಿಕ್ಷಣದ ಬಗೆಗೆ ಜನರಲ್ಲಿ ವಿಶ್ವಾಸ ಮೂಡುವಂತೆ ಮಾಡಿದೆ. ಮನೆಗಳಲ್ಲಿ ತಂದೆ ತಾಯಿಗಳು ಮಕ್ಕಳ ಭವಿಷ್ಯ ರೂಪಿಸಲು ಎಷ್ಟು ಕಾಳಜಿ ವಹಿಸುತ್ತಾರೋ ಅಷ್ಟು ಕಾಳಜಿಯನ್ನು ನಾವು ವಹಿಸುತ್ತೇವೆ ಎನ್ನುವ ಚಂದ್ರಪ್ಪ ಅವರ ಮಾತಿನಲ್ಲಿಯೇ ಅವರ ಬದ್ಧತೆ ಅರ್ಥವಾಗುತ್ತದೆ.

`ದಾರಿದೀಪ’ ಎನ್ನುವ ವೇದಿಕೆಯೊಂದನ್ನು ಚಂದ್ರಪ್ಪ ರೂಪಿಸಿದ್ದಾರೆ. ಇದು ಈ ಹಾಸ್ಟೆಲ್ ದಾರಿಯಲ್ಲಿ ಬದುಕನ್ನು ಕಟ್ಟಿಕೊಂಡವರು ಮರಳಿ ಹಾಸ್ಟೆಲ್‍ಗೆ ಎನ್ನುವಂತಿದೆ. ಈಗಾಗಲೆ ಈ ಹಾಸ್ಟೆಲಿನಲ್ಲಿ ಓದಿ, ನೌಕರಿ ಪಡೆದವರು ಈಗ ಹಾಸ್ಟೆಲಿನಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ನೆರವಾಗುತ್ತಿದ್ದಾರೆ. ಜಿಲ್ಲಾ, ತಾಲೂಕು ಆಡಳಿತಕ್ಕೆ ಬರುವ ಯುವ ಐಎಎಸ್ ಕೆಎಎಸ್ ಅಧಿಕಾರಿಗಳನ್ನು ಹಾಸ್ಟೆಲಿಗೆ ಕರೆಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಉಪನ್ಯಾಸ ಕೊಡಿಸುತ್ತಾರೆ. ಚಂದ್ರಪ್ಪ ಸ್ವತಃ ಪರಿಸರವಾದಿ ಪಕ್ಷಿಪ್ರೇಮಿ. ತನ್ನ ಈ ಪರಿಸರ ಪ್ರೇಮವನ್ನು ತನ್ನ ಹಾಸ್ಟೆಲ್ ವಿದ್ಯಾರ್ಥಿಗಳಿಗೂ ವಿಸ್ತರಿಸುತ್ತಾರೆ. ಬೇಸಿಗೆಯಲ್ಲಿ ಬೆಟ್ಟ ಗುಡ್ಡಗಳ ಅಲೆದು ವಿದ್ಯಾರ್ಥಿಗಳ ಸಹಾಯದಿಂದ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತದೆ. ಹಿಂದೆ ಉಚ್ಚಂಗಿದುರ್ಗದ ಗುಡ್ಡವನ್ನು ದತ್ತು ಪಡೆದು ರಜೆಗಳಲ್ಲಿ ವಿದ್ಯಾರ್ಥಿಗಳ ಸಹಾಯದಿಂದ ಸಸಿ ನೆಡುವ, ಇರುವ ಸಸ್ಯ ಜಾತಿಗಳನ್ನು ಉಳಿಸುವ ಕಾರ್ಯಕ್ರಮ ಆಯೋಜಿಸಿದ್ದರು.

ಚಂದ್ರಪ್ಪ ಸ್ವತಃ ಒಳ್ಳೆಯ ಫೋಟೋಗ್ರಾಫರ್, ಮೊದಲಿಂದಲೂ ವೈಲ್ಡ್ ಲೈಫ್ ಫೋಟೊಗ್ರಫಿಯ ಆಸಕ್ತಿ ಇತ್ತು. ಇದೀಗ ಬಯಲು ಸೀಮೆ ಪಕ್ಷಿಗಳ ಕುರಿತು ಅಧ್ಯಯನ ಮಾಡುತ್ತಿದ್ದಾರೆ. ಗಾಳಿಫ್ಯಾನು (ವಿಂಡ್ ಪವರ್) ಗಳಿಂದ ನೆಲವಾಸಿ ಕ್ರಿಮಿ, ಕೀಟ, ಪಶು, ಪಕ್ಷಿಗಳಿಗೆ ಹೇಗೆ ತೊಂದರೆಯಾಗುತ್ತಿದೆ ಎನ್ನುವುದನ್ನು ಗುರುತಿಸುತ್ತಿದ್ದಾರೆ. ಚಂದ್ರಪ್ಪ ಹೇಳುವಂತೆ ಗಾಳಿಯ ಫ್ಯಾನುಗಳ ಶಬ್ದದಿಂದಾಗಿ ಜೀವಜಂತುಗಳ ನಿದ್ರೆ ಮತ್ತು ವಿಶ್ರಾಂತಿಗೆ ತೊಂದರೆಯಾಗಿ, ಅವುಗಳ ದೈನಂದಿನ ದಿನಚರಿ ಏರುಪೇರಾಗುತ್ತದೆ. ಇದು ಮೊಟ್ಟೆ ಇಟ್ಟು ಮರಿ ಮಾಡುವುದರ ಮೇಲೂ ಪರಿಣಾಮ ಬೀರುತ್ತದೆ, ಹೀಗಾಗಿ ಪಕ್ಷಿ ಕ್ರಿಮಿ ಕೀಟಗಳ ಸಂತಾನೋತ್ಪತ್ತಿ ಕುಂಟಿತವಾಗಿ ಅಳಿವಿನಂಚಿಗೆ ಬರುತ್ತವೆ ಎನ್ನುವುದು ಚಂದ್ರಪ್ಪ ಅವರ ಕಕ್ಕುಲಾತಿ.

ಹೀಗೆ ಚಂದ್ರಪ್ಪ ಅವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮನೆಯ ವಾತಾವರಣವನ್ನು ಸೃಷ್ಟಿಸಿ, ಅವರಲ್ಲಿ ಓದಿನ ಮೂಲಕ ವೈಚಾರಿಕತೆ ಬೆಳೆಸಿ, ಸ್ವರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಾರೆ. ಏಕಕಾಲದಲ್ಲಿ ಪರಿಸರದ ಕಾಳಜಿಯನ್ನೂ, ಬದುಕಿನ ಪ್ರೀತಿಯನ್ನೂ ಕಲಿಸುತ್ತಾ, ನಿಜಕ್ಕೂ ಒಬ್ಬ ಹಾಸ್ಟೆಲ್ ವಾರ್ಡನ್ ಅಂದರೆ ಹೀಗಿರಬೇಕು ಎನ್ನುವಂತಿರುವ ಚಂದ್ರಪ್ಪ ಅವರ ಹೊಸ ಹೊಸ ಕನಸುಗಳೂ ಸಾಕಾರವಾಗಲಿ.

ಚಂದ್ರಪ್ಪ ಅವರ ಫೋಟೋಗ್ರಫಿ ಮತ್ತು ಹಾಸ್ಟೆಲ್ ಚಟುವಟಿಕೆಗಳನ್ನು ಗಮನಿಸಲು ಅವರ ಫೇಸ್‍ಬುಕ್ ಪೇಜನ್ನು ಗಮನಿಸಿ. https://www.facebook.com/chandrappabh.bcm

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಂದ್ರಪ್ಪನವರ ಕಾರ್ಯವೈಖರಿ ಶ್ಲಾಘನೀಯ ಮತ್ತು ಅನುಕರಣನೀಯ. ನಮ್ಮ ಎಲ್ಲಾ ಹಾಸ್ಟೆಲ್ ಗಳ ವಾರ್ಡನ್ಗಳೂ ಚಂದ್ರಪ್ಪನವರ ಕಾರ್ಯವೈಖರಿಯನ್ನು ಅನುಸರಿಸಿದರೆ ವಿದ್ಯಾರ್ಥಿಗಳಲ್ಲಿ ಅದ್ಭುತ ಸಾಧನೆಯನ್ನು ಕಾಣಬಹುದು. ಅರುಣ್ ಅವರಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....