Homeಕರ್ನಾಟಕಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ...

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

- Advertisement -
- Advertisement -

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೀಗೆಬಾಗಿ ಬಾಬಾಳ್ಳಿ ಬಳಿ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಟ್ರ್ಯಾಕ್ಟರ್‌ನಲ್ಲಿ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭದ್ರಾವತಿ ವಿಭಾಗದ ಭೂ ವಿಜ್ಞಾನಿ ಕೆ.ಕೆ ಜ್ಯೋತಿ ಹಾಗೂ ಶಿವಮೊಗ್ಗ ವಿಭಾಗದ ಭೂ ವಿಜ್ಞಾನಿ ಪ್ರೀತಿ ದೊಡ್ಡಗೌಡರ್ ಮೂವರು ಸಿಬ್ಬಂದಿಯೊಂದಿಗೆ ರಾತ್ರಿ ಸ್ಥಳಕ್ಕೆ ತೆರಳಿದ್ದರು.

ಈ ವೇಳೆ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ಜ್ಯೋತಿ ಅವರ ಬಳಿ ಬಂದು ಮೊಬೈಲ್ ಕೊಟ್ಟು “ಅಣ್ಣ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ. ಫೋನ್ ಸ್ವೀಕರಿಸಲು ನಿರಾಕರಿಸಿದ ಅಧಿಕಾರಿ, “ಅವರಿಗೆ ನನ್ನ ಫೋನ್‌ಗೆ ಕರೆ ಮಾಡಲು ಹೇಳಿ” ಎನ್ನುತ್ತಾರೆ.

“ಅಧಿಕಾರಿಯ ಫೋನ್‌ಗೆ ಕರೆ ಮಾಡಬೇಕಂತೆ ಅಣ್ಣ” ಎಂದು ಮರಳು ತೆಗೆಯುತ್ತಿದ್ದ ವ್ಯಕ್ತಿ ಹೇಳಿದ್ದಾರೆ. “ಹೌದಾ? ಎನ್ನುವ ಆಚೆ ಕಡೆಯ ವ್ಯಕ್ತಿ, “ಲೌಡ್‌ ಸ್ಪೀಕರ್ ಆನ್ ಮಾಡು” ಎಂದು ಹೇಳಿ ಅತ್ಯಂತ ಅವಾಚ್ಯ ಪದ ಬಳಸಿ ಅಧಿಕಾರಿಯನ್ನು ನಿಂದಿಸುತ್ತಾನೆ. “ನೆಟ್ಟಗೆ ಮಾತನಾಡಿ, ಯಾರಿಗೆ ಮಾತನಾಡುತ್ತೀರಿ. ಒಬ್ಬ ಅಧಿಕಾರಿಗೆ ಮಾತನಾಡುತ್ತಿದ್ದೀರಿ. ಬೆಲೆ ಕೊಟ್ಟು ಮಾತನಾಡಿ” ಎಂದು ಮಹಿಳಾ ಅಧಿಕಾರಿ ಹೇಳಿದರೂ, ಹೀನಾಯವಾಗಿ ನಿಂದಿಸುವುದು ಮುಂದುವರಿಸುತ್ತಾನೆ.

ವೈರಲ್ ವಿಡಿಯೋದಲ್ಲಿ ಈ ಎಲ್ಲಾ ದೃಶ್ಯಗಳು ಇವೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು, ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಭದ್ರಾವತಿ ರಿಪಬ್ಲಿಕ್ ಆಗಿದೆ : ಶಾಸಕ ಚೆನ್ನ ಬಸಪ್ಪ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚೆನ್ನ ಬಸಪ್ಪ ಅವರು ವಿಡಿಯೋ ಸಂಬಂಧ ಸುದ್ದಿಗೋಷ್ಠಿ ನಡೆಸಿ ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಕಿಡಿಕಾರಿದ್ದಾರೆ. ಭದ್ರಾವತಿ ರಿಪಬ್ಲಿಕ್ ಆಗಿ ಎಷ್ಟೋ ವರ್ಷಗೇ ಕಳೆದಿದೆ ಎಂದಿದ್ದಾರೆ.

ಈ ಪ್ರಕರಣ ಇಡೀ ಭದ್ರಾವತಿಗೆ ಅವಮಾನವಾಗಿದೆ. ಭದ್ರಾವತಿ ರಿಪಬ್ಲಿಕ್ ಆಗಿ ಬಹಳ ವರ್ಷಗಳೇ ಆಗಿವೆ. ಈ ಬಗ್ಗೆ ಮಾತನಾಡುವುದಕ್ಕೆ ಕಾಂಗ್ರೆಸ್‌ನವರಿಗೆ ತಾಕತ್ತಿಲ್ಲ. ಶಾಸಕರ ಮಕ್ಕಳು ಈ ರೀತಿ ಗೂಂಡಾ ವರ್ತನೆ ತೋರಿದರೆ ಏನು ಮಾಡೋಣ?. ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಷ್ಟೆ ಎಂದು ಹೇಳಿದ್ದಾರೆ. ಮಹಿಳಾ ಅಧಿಕಾರಿಗೆ ಧೈರ್ಯ ತುಂಬಿರುವ ಅವರು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.


ಜೆಡಿಎಸ್ ಕಿಡಿ

ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಜೆಡಿಎಸ್ ಕಿಡಿಕಾರಿದೆ. “ಕಾಂಗ್ರೆಸ್ ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ ! ಭದ್ರಾವತಿಯಲ್ಲಿ ಒಂದು ಪೈಸೆ ಅಭಿವೃದ್ಧಿ ಕೆಲಸ ಮಾಡದ ನಾಲಾಯಕ್‌ ಕಾಂಗ್ರೆಸ್‌ ಶಾಸಕ ಸಂಗಮೇಶ್‌ ಹಾಗೂ ಅವರ ಮಗ ಬಿ.ಎಸ್.‌ ಬಸವೇಶ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಗೂಂಡಾಗಿರಿ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ. ಅಕ್ರಮ ಮರಳುಗಾರಿಕೆಯನ್ನು ತಡೆಯಲು ಬಂದ ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್‌ ಅವರ ಪುತ್ರ ಫೋನಿನಲ್ಲಿ ಬೆದರಿಕೆ, ಧಮ್ಕಿ ಹಾಕಿ, ಅಶ್ಲೀಲ ಶಬ್ಧಗಳಿಂದ ನಿಂದಿಸಿರುವುದು ಅಕ್ಷಮ್ಯ ಅಪರಾಧ.
ರಾಜ್ಯದಲ್ಲಿರುವ ಮಹಿಳಾ ಆಯೋಗ ಏನು ಮಾಡುತ್ತಿದೆ ? ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವ ಹೆಣ್ಣುನಿಂದಕ ಶಾಸಕರ ಪುತ್ರನ ವಿರುದ್ಧ ಸರ್ಕಾರ ತಕ್ಷಣವೇ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಜನತಾದಳ ಪಕ್ಷವು ಆಗ್ರಹಿಸುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ, ಲಕ್ಷ್ಮೀ ಹೆಬ್ಬಾಳ್ಕರ್ ಮೇಡಂ ತಾವು ಈಗ ಮಹಿಳಾ ಅಧಿಕಾರಿಯ ರಕ್ಷಣೆಗೆ ನಿಂತು ನ್ಯಾಯ ಒದಗಿಸಬೇಕಿದೆ” ಎಂದು ಹೇಳಿದೆ.

ಪ್ರಕರಣ ದಾಖಲಿಸದಿದ್ದರೆ ಲೋಕಾಯುಕ್ತಕ್ಕೆ ದೂರು : ರವಿ ಕೃಷ್ಣಾರೆಡ್ಡಿ

“ಅವಾಚ್ಯವಾಗಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಕೊಳಕ ಭದ್ರಾವತಿಯ ಶಾಸಕ ಸಂಗಮೇಶರ ಮಗ ಬಸವೇಶ್ ಎನ್ನುವ ಮಾಹಿತಿ ಇದೆ. ಬಸವೇಶ್ ಆಗಲಿ ಅಥವಾ ಜ್ಯೋತಿ ಎನ್ನುವ ಆ ಶೋಷಿತ ಅಧಿಕಾರಿಯಾಗಲಿ ಇದನ್ನು ನಿರಾಕರಿಸಬೇಕು ಅಥವಾ ಖಚಿತಪಡಿಸಬೇಕು. ಈಗಾಗಲೇ ವೈರಲ್ ಆಗಿರುವ ಈ ವಿಡಿಯೋದ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಈ ಕೂಡಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಇಲ್ಲವಾದಲ್ಲಿ DC, SP ಮತ್ತು ಬೈಗುಳ ತಿಂದ ಅಧಿಕಾರಿಯ ವಿರುದ್ಧ KRS ಪಕ್ಷದವರು ಲೋಕಾಯುಕ್ತದಲ್ಲಿ ಕರ್ತವ್ಯಲೋಪದ ಅಡಿಯಲ್ಲಿ ದೂರು ದಾಖಲಿಸಲು ನಾನು ಈ ಮೂಲಕ ಶಿವಮೊಗ್ಗ ಜಿಲ್ಲೆಯ KRS ಪಕ್ಷದ ಮುಖಂಡರಿಗೆ ಸೂಚಿಸುತ್ತಿದ್ದೇನೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...