Homeಕರ್ನಾಟಕಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ...

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

- Advertisement -
- Advertisement -

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೀಗೆಬಾಗಿ ಬಾಬಾಳ್ಳಿ ಬಳಿ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಟ್ರ್ಯಾಕ್ಟರ್‌ನಲ್ಲಿ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭದ್ರಾವತಿ ವಿಭಾಗದ ಭೂ ವಿಜ್ಞಾನಿ ಕೆ.ಕೆ ಜ್ಯೋತಿ ಹಾಗೂ ಶಿವಮೊಗ್ಗ ವಿಭಾಗದ ಭೂ ವಿಜ್ಞಾನಿ ಪ್ರೀತಿ ದೊಡ್ಡಗೌಡರ್ ಮೂವರು ಸಿಬ್ಬಂದಿಯೊಂದಿಗೆ ರಾತ್ರಿ ಸ್ಥಳಕ್ಕೆ ತೆರಳಿದ್ದರು.

ಈ ವೇಳೆ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ಜ್ಯೋತಿ ಅವರ ಬಳಿ ಬಂದು ಮೊಬೈಲ್ ಕೊಟ್ಟು “ಅಣ್ಣ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ. ಫೋನ್ ಸ್ವೀಕರಿಸಲು ನಿರಾಕರಿಸಿದ ಅಧಿಕಾರಿ, “ಅವರಿಗೆ ನನ್ನ ಫೋನ್‌ಗೆ ಕರೆ ಮಾಡಲು ಹೇಳಿ” ಎನ್ನುತ್ತಾರೆ.

“ಅಧಿಕಾರಿಯ ಫೋನ್‌ಗೆ ಕರೆ ಮಾಡಬೇಕಂತೆ ಅಣ್ಣ” ಎಂದು ಮರಳು ತೆಗೆಯುತ್ತಿದ್ದ ವ್ಯಕ್ತಿ ಹೇಳಿದ್ದಾರೆ. “ಹೌದಾ? ಎನ್ನುವ ಆಚೆ ಕಡೆಯ ವ್ಯಕ್ತಿ, “ಲೌಡ್‌ ಸ್ಪೀಕರ್ ಆನ್ ಮಾಡು” ಎಂದು ಹೇಳಿ ಅತ್ಯಂತ ಅವಾಚ್ಯ ಪದ ಬಳಸಿ ಅಧಿಕಾರಿಯನ್ನು ನಿಂದಿಸುತ್ತಾನೆ. “ನೆಟ್ಟಗೆ ಮಾತನಾಡಿ, ಯಾರಿಗೆ ಮಾತನಾಡುತ್ತೀರಿ. ಒಬ್ಬ ಅಧಿಕಾರಿಗೆ ಮಾತನಾಡುತ್ತಿದ್ದೀರಿ. ಬೆಲೆ ಕೊಟ್ಟು ಮಾತನಾಡಿ” ಎಂದು ಮಹಿಳಾ ಅಧಿಕಾರಿ ಹೇಳಿದರೂ, ಹೀನಾಯವಾಗಿ ನಿಂದಿಸುವುದು ಮುಂದುವರಿಸುತ್ತಾನೆ.

ವೈರಲ್ ವಿಡಿಯೋದಲ್ಲಿ ಈ ಎಲ್ಲಾ ದೃಶ್ಯಗಳು ಇವೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು, ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಭದ್ರಾವತಿ ರಿಪಬ್ಲಿಕ್ ಆಗಿದೆ : ಶಾಸಕ ಚೆನ್ನ ಬಸಪ್ಪ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚೆನ್ನ ಬಸಪ್ಪ ಅವರು ವಿಡಿಯೋ ಸಂಬಂಧ ಸುದ್ದಿಗೋಷ್ಠಿ ನಡೆಸಿ ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಕಿಡಿಕಾರಿದ್ದಾರೆ. ಭದ್ರಾವತಿ ರಿಪಬ್ಲಿಕ್ ಆಗಿ ಎಷ್ಟೋ ವರ್ಷಗೇ ಕಳೆದಿದೆ ಎಂದಿದ್ದಾರೆ.

ಈ ಪ್ರಕರಣ ಇಡೀ ಭದ್ರಾವತಿಗೆ ಅವಮಾನವಾಗಿದೆ. ಭದ್ರಾವತಿ ರಿಪಬ್ಲಿಕ್ ಆಗಿ ಬಹಳ ವರ್ಷಗಳೇ ಆಗಿವೆ. ಈ ಬಗ್ಗೆ ಮಾತನಾಡುವುದಕ್ಕೆ ಕಾಂಗ್ರೆಸ್‌ನವರಿಗೆ ತಾಕತ್ತಿಲ್ಲ. ಶಾಸಕರ ಮಕ್ಕಳು ಈ ರೀತಿ ಗೂಂಡಾ ವರ್ತನೆ ತೋರಿದರೆ ಏನು ಮಾಡೋಣ?. ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಷ್ಟೆ ಎಂದು ಹೇಳಿದ್ದಾರೆ. ಮಹಿಳಾ ಅಧಿಕಾರಿಗೆ ಧೈರ್ಯ ತುಂಬಿರುವ ಅವರು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.


ಜೆಡಿಎಸ್ ಕಿಡಿ

ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಜೆಡಿಎಸ್ ಕಿಡಿಕಾರಿದೆ. “ಕಾಂಗ್ರೆಸ್ ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ ! ಭದ್ರಾವತಿಯಲ್ಲಿ ಒಂದು ಪೈಸೆ ಅಭಿವೃದ್ಧಿ ಕೆಲಸ ಮಾಡದ ನಾಲಾಯಕ್‌ ಕಾಂಗ್ರೆಸ್‌ ಶಾಸಕ ಸಂಗಮೇಶ್‌ ಹಾಗೂ ಅವರ ಮಗ ಬಿ.ಎಸ್.‌ ಬಸವೇಶ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಗೂಂಡಾಗಿರಿ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ. ಅಕ್ರಮ ಮರಳುಗಾರಿಕೆಯನ್ನು ತಡೆಯಲು ಬಂದ ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್‌ ಅವರ ಪುತ್ರ ಫೋನಿನಲ್ಲಿ ಬೆದರಿಕೆ, ಧಮ್ಕಿ ಹಾಕಿ, ಅಶ್ಲೀಲ ಶಬ್ಧಗಳಿಂದ ನಿಂದಿಸಿರುವುದು ಅಕ್ಷಮ್ಯ ಅಪರಾಧ.
ರಾಜ್ಯದಲ್ಲಿರುವ ಮಹಿಳಾ ಆಯೋಗ ಏನು ಮಾಡುತ್ತಿದೆ ? ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವ ಹೆಣ್ಣುನಿಂದಕ ಶಾಸಕರ ಪುತ್ರನ ವಿರುದ್ಧ ಸರ್ಕಾರ ತಕ್ಷಣವೇ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಜನತಾದಳ ಪಕ್ಷವು ಆಗ್ರಹಿಸುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ, ಲಕ್ಷ್ಮೀ ಹೆಬ್ಬಾಳ್ಕರ್ ಮೇಡಂ ತಾವು ಈಗ ಮಹಿಳಾ ಅಧಿಕಾರಿಯ ರಕ್ಷಣೆಗೆ ನಿಂತು ನ್ಯಾಯ ಒದಗಿಸಬೇಕಿದೆ” ಎಂದು ಹೇಳಿದೆ.

ಪ್ರಕರಣ ದಾಖಲಿಸದಿದ್ದರೆ ಲೋಕಾಯುಕ್ತಕ್ಕೆ ದೂರು : ರವಿ ಕೃಷ್ಣಾರೆಡ್ಡಿ

“ಅವಾಚ್ಯವಾಗಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಕೊಳಕ ಭದ್ರಾವತಿಯ ಶಾಸಕ ಸಂಗಮೇಶರ ಮಗ ಬಸವೇಶ್ ಎನ್ನುವ ಮಾಹಿತಿ ಇದೆ. ಬಸವೇಶ್ ಆಗಲಿ ಅಥವಾ ಜ್ಯೋತಿ ಎನ್ನುವ ಆ ಶೋಷಿತ ಅಧಿಕಾರಿಯಾಗಲಿ ಇದನ್ನು ನಿರಾಕರಿಸಬೇಕು ಅಥವಾ ಖಚಿತಪಡಿಸಬೇಕು. ಈಗಾಗಲೇ ವೈರಲ್ ಆಗಿರುವ ಈ ವಿಡಿಯೋದ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಈ ಕೂಡಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಇಲ್ಲವಾದಲ್ಲಿ DC, SP ಮತ್ತು ಬೈಗುಳ ತಿಂದ ಅಧಿಕಾರಿಯ ವಿರುದ್ಧ KRS ಪಕ್ಷದವರು ಲೋಕಾಯುಕ್ತದಲ್ಲಿ ಕರ್ತವ್ಯಲೋಪದ ಅಡಿಯಲ್ಲಿ ದೂರು ದಾಖಲಿಸಲು ನಾನು ಈ ಮೂಲಕ ಶಿವಮೊಗ್ಗ ಜಿಲ್ಲೆಯ KRS ಪಕ್ಷದ ಮುಖಂಡರಿಗೆ ಸೂಚಿಸುತ್ತಿದ್ದೇನೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...