Homeಕರ್ನಾಟಕಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ...

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

- Advertisement -
- Advertisement -

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೀಗೆಬಾಗಿ ಬಾಬಾಳ್ಳಿ ಬಳಿ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಟ್ರ್ಯಾಕ್ಟರ್‌ನಲ್ಲಿ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭದ್ರಾವತಿ ವಿಭಾಗದ ಭೂ ವಿಜ್ಞಾನಿ ಕೆ.ಕೆ ಜ್ಯೋತಿ ಹಾಗೂ ಶಿವಮೊಗ್ಗ ವಿಭಾಗದ ಭೂ ವಿಜ್ಞಾನಿ ಪ್ರೀತಿ ದೊಡ್ಡಗೌಡರ್ ಮೂವರು ಸಿಬ್ಬಂದಿಯೊಂದಿಗೆ ರಾತ್ರಿ ಸ್ಥಳಕ್ಕೆ ತೆರಳಿದ್ದರು.

ಈ ವೇಳೆ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ಜ್ಯೋತಿ ಅವರ ಬಳಿ ಬಂದು ಮೊಬೈಲ್ ಕೊಟ್ಟು “ಅಣ್ಣ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ. ಫೋನ್ ಸ್ವೀಕರಿಸಲು ನಿರಾಕರಿಸಿದ ಅಧಿಕಾರಿ, “ಅವರಿಗೆ ನನ್ನ ಫೋನ್‌ಗೆ ಕರೆ ಮಾಡಲು ಹೇಳಿ” ಎನ್ನುತ್ತಾರೆ.

“ಅಧಿಕಾರಿಯ ಫೋನ್‌ಗೆ ಕರೆ ಮಾಡಬೇಕಂತೆ ಅಣ್ಣ” ಎಂದು ಮರಳು ತೆಗೆಯುತ್ತಿದ್ದ ವ್ಯಕ್ತಿ ಹೇಳಿದ್ದಾರೆ. “ಹೌದಾ? ಎನ್ನುವ ಆಚೆ ಕಡೆಯ ವ್ಯಕ್ತಿ, “ಲೌಡ್‌ ಸ್ಪೀಕರ್ ಆನ್ ಮಾಡು” ಎಂದು ಹೇಳಿ ಅತ್ಯಂತ ಅವಾಚ್ಯ ಪದ ಬಳಸಿ ಅಧಿಕಾರಿಯನ್ನು ನಿಂದಿಸುತ್ತಾನೆ. “ನೆಟ್ಟಗೆ ಮಾತನಾಡಿ, ಯಾರಿಗೆ ಮಾತನಾಡುತ್ತೀರಿ. ಒಬ್ಬ ಅಧಿಕಾರಿಗೆ ಮಾತನಾಡುತ್ತಿದ್ದೀರಿ. ಬೆಲೆ ಕೊಟ್ಟು ಮಾತನಾಡಿ” ಎಂದು ಮಹಿಳಾ ಅಧಿಕಾರಿ ಹೇಳಿದರೂ, ಹೀನಾಯವಾಗಿ ನಿಂದಿಸುವುದು ಮುಂದುವರಿಸುತ್ತಾನೆ.

ವೈರಲ್ ವಿಡಿಯೋದಲ್ಲಿ ಈ ಎಲ್ಲಾ ದೃಶ್ಯಗಳು ಇವೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು, ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಭದ್ರಾವತಿ ರಿಪಬ್ಲಿಕ್ ಆಗಿದೆ : ಶಾಸಕ ಚೆನ್ನ ಬಸಪ್ಪ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚೆನ್ನ ಬಸಪ್ಪ ಅವರು ವಿಡಿಯೋ ಸಂಬಂಧ ಸುದ್ದಿಗೋಷ್ಠಿ ನಡೆಸಿ ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಕಿಡಿಕಾರಿದ್ದಾರೆ. ಭದ್ರಾವತಿ ರಿಪಬ್ಲಿಕ್ ಆಗಿ ಎಷ್ಟೋ ವರ್ಷಗೇ ಕಳೆದಿದೆ ಎಂದಿದ್ದಾರೆ.

ಈ ಪ್ರಕರಣ ಇಡೀ ಭದ್ರಾವತಿಗೆ ಅವಮಾನವಾಗಿದೆ. ಭದ್ರಾವತಿ ರಿಪಬ್ಲಿಕ್ ಆಗಿ ಬಹಳ ವರ್ಷಗಳೇ ಆಗಿವೆ. ಈ ಬಗ್ಗೆ ಮಾತನಾಡುವುದಕ್ಕೆ ಕಾಂಗ್ರೆಸ್‌ನವರಿಗೆ ತಾಕತ್ತಿಲ್ಲ. ಶಾಸಕರ ಮಕ್ಕಳು ಈ ರೀತಿ ಗೂಂಡಾ ವರ್ತನೆ ತೋರಿದರೆ ಏನು ಮಾಡೋಣ?. ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಷ್ಟೆ ಎಂದು ಹೇಳಿದ್ದಾರೆ. ಮಹಿಳಾ ಅಧಿಕಾರಿಗೆ ಧೈರ್ಯ ತುಂಬಿರುವ ಅವರು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.


ಜೆಡಿಎಸ್ ಕಿಡಿ

ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಜೆಡಿಎಸ್ ಕಿಡಿಕಾರಿದೆ. “ಕಾಂಗ್ರೆಸ್ ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ ! ಭದ್ರಾವತಿಯಲ್ಲಿ ಒಂದು ಪೈಸೆ ಅಭಿವೃದ್ಧಿ ಕೆಲಸ ಮಾಡದ ನಾಲಾಯಕ್‌ ಕಾಂಗ್ರೆಸ್‌ ಶಾಸಕ ಸಂಗಮೇಶ್‌ ಹಾಗೂ ಅವರ ಮಗ ಬಿ.ಎಸ್.‌ ಬಸವೇಶ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಗೂಂಡಾಗಿರಿ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ. ಅಕ್ರಮ ಮರಳುಗಾರಿಕೆಯನ್ನು ತಡೆಯಲು ಬಂದ ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್‌ ಅವರ ಪುತ್ರ ಫೋನಿನಲ್ಲಿ ಬೆದರಿಕೆ, ಧಮ್ಕಿ ಹಾಕಿ, ಅಶ್ಲೀಲ ಶಬ್ಧಗಳಿಂದ ನಿಂದಿಸಿರುವುದು ಅಕ್ಷಮ್ಯ ಅಪರಾಧ.
ರಾಜ್ಯದಲ್ಲಿರುವ ಮಹಿಳಾ ಆಯೋಗ ಏನು ಮಾಡುತ್ತಿದೆ ? ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವ ಹೆಣ್ಣುನಿಂದಕ ಶಾಸಕರ ಪುತ್ರನ ವಿರುದ್ಧ ಸರ್ಕಾರ ತಕ್ಷಣವೇ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಜನತಾದಳ ಪಕ್ಷವು ಆಗ್ರಹಿಸುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ, ಲಕ್ಷ್ಮೀ ಹೆಬ್ಬಾಳ್ಕರ್ ಮೇಡಂ ತಾವು ಈಗ ಮಹಿಳಾ ಅಧಿಕಾರಿಯ ರಕ್ಷಣೆಗೆ ನಿಂತು ನ್ಯಾಯ ಒದಗಿಸಬೇಕಿದೆ” ಎಂದು ಹೇಳಿದೆ.

ಪ್ರಕರಣ ದಾಖಲಿಸದಿದ್ದರೆ ಲೋಕಾಯುಕ್ತಕ್ಕೆ ದೂರು : ರವಿ ಕೃಷ್ಣಾರೆಡ್ಡಿ

“ಅವಾಚ್ಯವಾಗಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಕೊಳಕ ಭದ್ರಾವತಿಯ ಶಾಸಕ ಸಂಗಮೇಶರ ಮಗ ಬಸವೇಶ್ ಎನ್ನುವ ಮಾಹಿತಿ ಇದೆ. ಬಸವೇಶ್ ಆಗಲಿ ಅಥವಾ ಜ್ಯೋತಿ ಎನ್ನುವ ಆ ಶೋಷಿತ ಅಧಿಕಾರಿಯಾಗಲಿ ಇದನ್ನು ನಿರಾಕರಿಸಬೇಕು ಅಥವಾ ಖಚಿತಪಡಿಸಬೇಕು. ಈಗಾಗಲೇ ವೈರಲ್ ಆಗಿರುವ ಈ ವಿಡಿಯೋದ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಈ ಕೂಡಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಇಲ್ಲವಾದಲ್ಲಿ DC, SP ಮತ್ತು ಬೈಗುಳ ತಿಂದ ಅಧಿಕಾರಿಯ ವಿರುದ್ಧ KRS ಪಕ್ಷದವರು ಲೋಕಾಯುಕ್ತದಲ್ಲಿ ಕರ್ತವ್ಯಲೋಪದ ಅಡಿಯಲ್ಲಿ ದೂರು ದಾಖಲಿಸಲು ನಾನು ಈ ಮೂಲಕ ಶಿವಮೊಗ್ಗ ಜಿಲ್ಲೆಯ KRS ಪಕ್ಷದ ಮುಖಂಡರಿಗೆ ಸೂಚಿಸುತ್ತಿದ್ದೇನೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...