Homeಕರ್ನಾಟಕಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ...

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

- Advertisement -
- Advertisement -

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೀಗೆಬಾಗಿ ಬಾಬಾಳ್ಳಿ ಬಳಿ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಟ್ರ್ಯಾಕ್ಟರ್‌ನಲ್ಲಿ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭದ್ರಾವತಿ ವಿಭಾಗದ ಭೂ ವಿಜ್ಞಾನಿ ಕೆ.ಕೆ ಜ್ಯೋತಿ ಹಾಗೂ ಶಿವಮೊಗ್ಗ ವಿಭಾಗದ ಭೂ ವಿಜ್ಞಾನಿ ಪ್ರೀತಿ ದೊಡ್ಡಗೌಡರ್ ಮೂವರು ಸಿಬ್ಬಂದಿಯೊಂದಿಗೆ ರಾತ್ರಿ ಸ್ಥಳಕ್ಕೆ ತೆರಳಿದ್ದರು.

ಈ ವೇಳೆ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ಜ್ಯೋತಿ ಅವರ ಬಳಿ ಬಂದು ಮೊಬೈಲ್ ಕೊಟ್ಟು “ಅಣ್ಣ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ. ಫೋನ್ ಸ್ವೀಕರಿಸಲು ನಿರಾಕರಿಸಿದ ಅಧಿಕಾರಿ, “ಅವರಿಗೆ ನನ್ನ ಫೋನ್‌ಗೆ ಕರೆ ಮಾಡಲು ಹೇಳಿ” ಎನ್ನುತ್ತಾರೆ.

“ಅಧಿಕಾರಿಯ ಫೋನ್‌ಗೆ ಕರೆ ಮಾಡಬೇಕಂತೆ ಅಣ್ಣ” ಎಂದು ಮರಳು ತೆಗೆಯುತ್ತಿದ್ದ ವ್ಯಕ್ತಿ ಹೇಳಿದ್ದಾರೆ. “ಹೌದಾ? ಎನ್ನುವ ಆಚೆ ಕಡೆಯ ವ್ಯಕ್ತಿ, “ಲೌಡ್‌ ಸ್ಪೀಕರ್ ಆನ್ ಮಾಡು” ಎಂದು ಹೇಳಿ ಅತ್ಯಂತ ಅವಾಚ್ಯ ಪದ ಬಳಸಿ ಅಧಿಕಾರಿಯನ್ನು ನಿಂದಿಸುತ್ತಾನೆ. “ನೆಟ್ಟಗೆ ಮಾತನಾಡಿ, ಯಾರಿಗೆ ಮಾತನಾಡುತ್ತೀರಿ. ಒಬ್ಬ ಅಧಿಕಾರಿಗೆ ಮಾತನಾಡುತ್ತಿದ್ದೀರಿ. ಬೆಲೆ ಕೊಟ್ಟು ಮಾತನಾಡಿ” ಎಂದು ಮಹಿಳಾ ಅಧಿಕಾರಿ ಹೇಳಿದರೂ, ಹೀನಾಯವಾಗಿ ನಿಂದಿಸುವುದು ಮುಂದುವರಿಸುತ್ತಾನೆ.

ವೈರಲ್ ವಿಡಿಯೋದಲ್ಲಿ ಈ ಎಲ್ಲಾ ದೃಶ್ಯಗಳು ಇವೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು, ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಭದ್ರಾವತಿ ರಿಪಬ್ಲಿಕ್ ಆಗಿದೆ : ಶಾಸಕ ಚೆನ್ನ ಬಸಪ್ಪ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚೆನ್ನ ಬಸಪ್ಪ ಅವರು ವಿಡಿಯೋ ಸಂಬಂಧ ಸುದ್ದಿಗೋಷ್ಠಿ ನಡೆಸಿ ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಕಿಡಿಕಾರಿದ್ದಾರೆ. ಭದ್ರಾವತಿ ರಿಪಬ್ಲಿಕ್ ಆಗಿ ಎಷ್ಟೋ ವರ್ಷಗೇ ಕಳೆದಿದೆ ಎಂದಿದ್ದಾರೆ.

ಈ ಪ್ರಕರಣ ಇಡೀ ಭದ್ರಾವತಿಗೆ ಅವಮಾನವಾಗಿದೆ. ಭದ್ರಾವತಿ ರಿಪಬ್ಲಿಕ್ ಆಗಿ ಬಹಳ ವರ್ಷಗಳೇ ಆಗಿವೆ. ಈ ಬಗ್ಗೆ ಮಾತನಾಡುವುದಕ್ಕೆ ಕಾಂಗ್ರೆಸ್‌ನವರಿಗೆ ತಾಕತ್ತಿಲ್ಲ. ಶಾಸಕರ ಮಕ್ಕಳು ಈ ರೀತಿ ಗೂಂಡಾ ವರ್ತನೆ ತೋರಿದರೆ ಏನು ಮಾಡೋಣ?. ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಷ್ಟೆ ಎಂದು ಹೇಳಿದ್ದಾರೆ. ಮಹಿಳಾ ಅಧಿಕಾರಿಗೆ ಧೈರ್ಯ ತುಂಬಿರುವ ಅವರು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.


ಜೆಡಿಎಸ್ ಕಿಡಿ

ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಜೆಡಿಎಸ್ ಕಿಡಿಕಾರಿದೆ. “ಕಾಂಗ್ರೆಸ್ ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ ! ಭದ್ರಾವತಿಯಲ್ಲಿ ಒಂದು ಪೈಸೆ ಅಭಿವೃದ್ಧಿ ಕೆಲಸ ಮಾಡದ ನಾಲಾಯಕ್‌ ಕಾಂಗ್ರೆಸ್‌ ಶಾಸಕ ಸಂಗಮೇಶ್‌ ಹಾಗೂ ಅವರ ಮಗ ಬಿ.ಎಸ್.‌ ಬಸವೇಶ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಗೂಂಡಾಗಿರಿ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ. ಅಕ್ರಮ ಮರಳುಗಾರಿಕೆಯನ್ನು ತಡೆಯಲು ಬಂದ ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್‌ ಅವರ ಪುತ್ರ ಫೋನಿನಲ್ಲಿ ಬೆದರಿಕೆ, ಧಮ್ಕಿ ಹಾಕಿ, ಅಶ್ಲೀಲ ಶಬ್ಧಗಳಿಂದ ನಿಂದಿಸಿರುವುದು ಅಕ್ಷಮ್ಯ ಅಪರಾಧ.
ರಾಜ್ಯದಲ್ಲಿರುವ ಮಹಿಳಾ ಆಯೋಗ ಏನು ಮಾಡುತ್ತಿದೆ ? ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವ ಹೆಣ್ಣುನಿಂದಕ ಶಾಸಕರ ಪುತ್ರನ ವಿರುದ್ಧ ಸರ್ಕಾರ ತಕ್ಷಣವೇ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಜನತಾದಳ ಪಕ್ಷವು ಆಗ್ರಹಿಸುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ, ಲಕ್ಷ್ಮೀ ಹೆಬ್ಬಾಳ್ಕರ್ ಮೇಡಂ ತಾವು ಈಗ ಮಹಿಳಾ ಅಧಿಕಾರಿಯ ರಕ್ಷಣೆಗೆ ನಿಂತು ನ್ಯಾಯ ಒದಗಿಸಬೇಕಿದೆ” ಎಂದು ಹೇಳಿದೆ.

ಪ್ರಕರಣ ದಾಖಲಿಸದಿದ್ದರೆ ಲೋಕಾಯುಕ್ತಕ್ಕೆ ದೂರು : ರವಿ ಕೃಷ್ಣಾರೆಡ್ಡಿ

“ಅವಾಚ್ಯವಾಗಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಕೊಳಕ ಭದ್ರಾವತಿಯ ಶಾಸಕ ಸಂಗಮೇಶರ ಮಗ ಬಸವೇಶ್ ಎನ್ನುವ ಮಾಹಿತಿ ಇದೆ. ಬಸವೇಶ್ ಆಗಲಿ ಅಥವಾ ಜ್ಯೋತಿ ಎನ್ನುವ ಆ ಶೋಷಿತ ಅಧಿಕಾರಿಯಾಗಲಿ ಇದನ್ನು ನಿರಾಕರಿಸಬೇಕು ಅಥವಾ ಖಚಿತಪಡಿಸಬೇಕು. ಈಗಾಗಲೇ ವೈರಲ್ ಆಗಿರುವ ಈ ವಿಡಿಯೋದ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಈ ಕೂಡಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಇಲ್ಲವಾದಲ್ಲಿ DC, SP ಮತ್ತು ಬೈಗುಳ ತಿಂದ ಅಧಿಕಾರಿಯ ವಿರುದ್ಧ KRS ಪಕ್ಷದವರು ಲೋಕಾಯುಕ್ತದಲ್ಲಿ ಕರ್ತವ್ಯಲೋಪದ ಅಡಿಯಲ್ಲಿ ದೂರು ದಾಖಲಿಸಲು ನಾನು ಈ ಮೂಲಕ ಶಿವಮೊಗ್ಗ ಜಿಲ್ಲೆಯ KRS ಪಕ್ಷದ ಮುಖಂಡರಿಗೆ ಸೂಚಿಸುತ್ತಿದ್ದೇನೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...