Homeಕರ್ನಾಟಕಭದ್ರಾವತಿ | ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ : ಎಫ್‌ಐಆರ್ ದಾಖಲು, ಮೂವರ ಬಂಧನ

ಭದ್ರಾವತಿ | ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ : ಎಫ್‌ಐಆರ್ ದಾಖಲು, ಮೂವರ ಬಂಧನ

- Advertisement -
- Advertisement -

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರ ಎನ್ನಲಾದ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಮೂವರನ್ನು ಮಂಗಳವಾರ (ಫೆ.11) ಬಂಧಿಸಿದ್ದಾರೆ.

ಮಹಿಳಾ ಅಧಿಕಾರಿಗೆ ಫೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋವೊಂದು ಸೋಮವಾರ (ಫೆ.10) ವೈರಲ್ ಆಗಿತ್ತು. ಫೋನ್‌ನಲ್ಲಿ ಮಾತನಾಡಿರುವ ವ್ಯಕ್ತಿ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಎನ್ನಲಾಗಿದೆ. ಈ ಸಂಬಂಧ ಮಹಿಳಾ ಅಧಿಕಾರಿ ಕೆ.ಕೆ ಜ್ಯೋತಿ ಅನಾಮಧೇಯ 6-7 ವ್ಯಕ್ತಿಗಳ ವಿರುದ್ಧ ಮಂಗಳವಾರ (ಫೆ.11) ಭದ್ರಾವತಿ ಡಿವೈಎಸ್‌ಪಿಗೆ ದೂರು ನೀಡಿದ್ದರು.

ದೂರು ದಾಖಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಅಧಿಕಾರಿ, ವೈರಲ್ ವಿಡಿಯೋದಲ್ಲಿರುವಂತೆ ಅಕ್ರಮ ಮರಳು ದಂಧೆ ತಡೆಯಲು ಹೋದಾಗ ನಡೆದಿರುವ ಘಟನೆ ಸಂಬಂಧ ದೂರು ನೀಡಿದ್ದೇನೆ ಎಂದಿದ್ದಾರೆ. ಅವರು ಶಾಸಕ ಸಂಗಮೇಶ್ ಅಥವಾ ಇತರ ಯಾರ ಹೆಸರೂ ಉಲ್ಲೇಖಿಸಿಲ್ಲ. ನಿಂದನೆ ಪ್ರಕರಣ ಹೊರತು, ಅಕ್ರಮ ಮರಳು ದಂಧೆ ಸೇರಿದಂತೆ ಇತರ ವಿಷಯಗಳ ಕುರಿತು ಮಾತನಾಡಲೂ  ನಿರಾಕರಿಸಿದ್ದಾರೆ. ಪೊಲೀಸರಿಗೆ ನೀಡಿರುವ ದೂರಿನಲ್ಲೂ ಅವರು ಯಾರ ಹೆಸರೂ ಉಲ್ಲೇಖಿಸಿಲ್ಲ ಎಂದು ವರದಿಯಾಗಿದೆ.

ಮಹಿಳಾ ಅಧಿಕಾರಿ ಮೇಲೆ ‘ಗಾಡಿ ಹತ್ತಿಸ್ರೋ’ ಎಂದರಂತೆ

“ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಹೋದಾಗ ನಮ್ಮ ಮೇಲೆ ಗಾಡಿ ಹತ್ತಿಸ್ರೋ ಅಂತ ಹೇಳುತ್ತಿದ್ರು. ಆಗ ಭಯ ಆಯ್ತು ಪೋನ್ ಕಾಲ್ ಸಹ ಬಂತು, ಯಾಕೋ ಸರಿಯಾಗಲ್ಲ ಅಂತ ವಾಪಾಸ್ಸು ಬಂದೆ. ಅಧಿಕಾರಿಗಳು ನನಗೆ ಸಪೋರ್ಟ್ ಮಾಡಿದರು” ಎಂದು ಅಧಿಕಾರಿ ಜ್ಯೋತಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಮೂವರ ಬಂಧನ

ಮಹಿಳಾ ಅಧಿಕಾರಿಯ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಭದ್ರಾವತಿ ಹಳೇ ನಗರ ಠಾಣೆ ಪೊಲೀಸರು ದಾವಣೆಗೆ ಜಿಲ್ಲೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ನಿವಾಸಿ ರವಿ (38) ಬಿನ್ ಮಲ್ಲೇಶಪ್ಪ, ಹಾಸನ ಜಿಲ್ಲೆ ಅರಕಲಗೂಡಿನ ನಿವಾಸಿ ವರುಣ್ (34) ಬಿನ್ ರಾಜಶೇಖರ್ ಮತ್ತು ಭದ್ರಾವತಿ ತಾಲೂಕಿನ ಸುರೇಂದ್ರ ಗೌಡ ಕ್ಯಾಂಪ್‌ನ ಅಜಯ್ ಬಿನ್ ತಿಪ್ಪೇಶ್ (28) ಎಂಬವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಎಫ್‌ಐಆರ್‌ನಲ್ಲಿ ಶಾಸಕರ ಮಗನ ಹೆಸರೇ ಇಲ್ಲ!

ಪ್ರಕರಣ ಸಂಬಂಧ ಪೊಲೀಸರು 6-7 ಜನರ ವಿರುದ್ದ ಎಫ್‌ಐಆರ್ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. ಇನ್ನುಳಿದವರಿಗೆ ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಮಹಿಳಾ ಅಧಿಕಾರಿಗೆ ನಿಂದಿಸಿದ್ದಾರೆ ಎನ್ನಲಾದ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಅವರ ಹೆಸರೇ ಎಫ್‌ಐಆರ್ ಪ್ರತಿಯಲ್ಲಿ ಇಲ್ಲ ಎಂದು ವರದಿಗಳು ಹೇಳಿವೆ.

‘ಯಾವ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗಲ್ಲ’ : ಡಾ.ನಾಗಲಕ್ಷ್ಮೀ ಚೌಧರಿ

ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ನಿಂದಿಸಿದ್ದಾರೆ ಎಂಬ ಆರೋಪದ ಕುರಿತು ಮಂಗಳವಾರ ಬೀದರ್‌ನಲ್ಲಿ ಪ್ರತಿಕ್ರಿಯೆ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು “ಮಹಿಳಾ ಆಯೋಗದಿಂದ ಸಮನ್ಸ್ ನೋಟಿಸ್ ಕಳುಹಿಸಲಾಗಿದೆ. ಯಾವುದೇ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗಲ್ಲ. ಕೆಟ್ಟ ಪದಗಳಿಂದ ನಿಂದನೆಯಾಗಿರುವುದು ನಮಗೆ ಮುಖ್ಯವಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...