Homeಕರ್ನಾಟಕಭದ್ರಾವತಿ | ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ : ಎಫ್‌ಐಆರ್ ದಾಖಲು, ಮೂವರ ಬಂಧನ

ಭದ್ರಾವತಿ | ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ : ಎಫ್‌ಐಆರ್ ದಾಖಲು, ಮೂವರ ಬಂಧನ

- Advertisement -
- Advertisement -

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರ ಎನ್ನಲಾದ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಮೂವರನ್ನು ಮಂಗಳವಾರ (ಫೆ.11) ಬಂಧಿಸಿದ್ದಾರೆ.

ಮಹಿಳಾ ಅಧಿಕಾರಿಗೆ ಫೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋವೊಂದು ಸೋಮವಾರ (ಫೆ.10) ವೈರಲ್ ಆಗಿತ್ತು. ಫೋನ್‌ನಲ್ಲಿ ಮಾತನಾಡಿರುವ ವ್ಯಕ್ತಿ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಎನ್ನಲಾಗಿದೆ. ಈ ಸಂಬಂಧ ಮಹಿಳಾ ಅಧಿಕಾರಿ ಕೆ.ಕೆ ಜ್ಯೋತಿ ಅನಾಮಧೇಯ 6-7 ವ್ಯಕ್ತಿಗಳ ವಿರುದ್ಧ ಮಂಗಳವಾರ (ಫೆ.11) ಭದ್ರಾವತಿ ಡಿವೈಎಸ್‌ಪಿಗೆ ದೂರು ನೀಡಿದ್ದರು.

ದೂರು ದಾಖಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಅಧಿಕಾರಿ, ವೈರಲ್ ವಿಡಿಯೋದಲ್ಲಿರುವಂತೆ ಅಕ್ರಮ ಮರಳು ದಂಧೆ ತಡೆಯಲು ಹೋದಾಗ ನಡೆದಿರುವ ಘಟನೆ ಸಂಬಂಧ ದೂರು ನೀಡಿದ್ದೇನೆ ಎಂದಿದ್ದಾರೆ. ಅವರು ಶಾಸಕ ಸಂಗಮೇಶ್ ಅಥವಾ ಇತರ ಯಾರ ಹೆಸರೂ ಉಲ್ಲೇಖಿಸಿಲ್ಲ. ನಿಂದನೆ ಪ್ರಕರಣ ಹೊರತು, ಅಕ್ರಮ ಮರಳು ದಂಧೆ ಸೇರಿದಂತೆ ಇತರ ವಿಷಯಗಳ ಕುರಿತು ಮಾತನಾಡಲೂ  ನಿರಾಕರಿಸಿದ್ದಾರೆ. ಪೊಲೀಸರಿಗೆ ನೀಡಿರುವ ದೂರಿನಲ್ಲೂ ಅವರು ಯಾರ ಹೆಸರೂ ಉಲ್ಲೇಖಿಸಿಲ್ಲ ಎಂದು ವರದಿಯಾಗಿದೆ.

ಮಹಿಳಾ ಅಧಿಕಾರಿ ಮೇಲೆ ‘ಗಾಡಿ ಹತ್ತಿಸ್ರೋ’ ಎಂದರಂತೆ

“ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಹೋದಾಗ ನಮ್ಮ ಮೇಲೆ ಗಾಡಿ ಹತ್ತಿಸ್ರೋ ಅಂತ ಹೇಳುತ್ತಿದ್ರು. ಆಗ ಭಯ ಆಯ್ತು ಪೋನ್ ಕಾಲ್ ಸಹ ಬಂತು, ಯಾಕೋ ಸರಿಯಾಗಲ್ಲ ಅಂತ ವಾಪಾಸ್ಸು ಬಂದೆ. ಅಧಿಕಾರಿಗಳು ನನಗೆ ಸಪೋರ್ಟ್ ಮಾಡಿದರು” ಎಂದು ಅಧಿಕಾರಿ ಜ್ಯೋತಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಮೂವರ ಬಂಧನ

ಮಹಿಳಾ ಅಧಿಕಾರಿಯ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಭದ್ರಾವತಿ ಹಳೇ ನಗರ ಠಾಣೆ ಪೊಲೀಸರು ದಾವಣೆಗೆ ಜಿಲ್ಲೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ನಿವಾಸಿ ರವಿ (38) ಬಿನ್ ಮಲ್ಲೇಶಪ್ಪ, ಹಾಸನ ಜಿಲ್ಲೆ ಅರಕಲಗೂಡಿನ ನಿವಾಸಿ ವರುಣ್ (34) ಬಿನ್ ರಾಜಶೇಖರ್ ಮತ್ತು ಭದ್ರಾವತಿ ತಾಲೂಕಿನ ಸುರೇಂದ್ರ ಗೌಡ ಕ್ಯಾಂಪ್‌ನ ಅಜಯ್ ಬಿನ್ ತಿಪ್ಪೇಶ್ (28) ಎಂಬವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಎಫ್‌ಐಆರ್‌ನಲ್ಲಿ ಶಾಸಕರ ಮಗನ ಹೆಸರೇ ಇಲ್ಲ!

ಪ್ರಕರಣ ಸಂಬಂಧ ಪೊಲೀಸರು 6-7 ಜನರ ವಿರುದ್ದ ಎಫ್‌ಐಆರ್ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. ಇನ್ನುಳಿದವರಿಗೆ ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಮಹಿಳಾ ಅಧಿಕಾರಿಗೆ ನಿಂದಿಸಿದ್ದಾರೆ ಎನ್ನಲಾದ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಅವರ ಹೆಸರೇ ಎಫ್‌ಐಆರ್ ಪ್ರತಿಯಲ್ಲಿ ಇಲ್ಲ ಎಂದು ವರದಿಗಳು ಹೇಳಿವೆ.

‘ಯಾವ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗಲ್ಲ’ : ಡಾ.ನಾಗಲಕ್ಷ್ಮೀ ಚೌಧರಿ

ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ನಿಂದಿಸಿದ್ದಾರೆ ಎಂಬ ಆರೋಪದ ಕುರಿತು ಮಂಗಳವಾರ ಬೀದರ್‌ನಲ್ಲಿ ಪ್ರತಿಕ್ರಿಯೆ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು “ಮಹಿಳಾ ಆಯೋಗದಿಂದ ಸಮನ್ಸ್ ನೋಟಿಸ್ ಕಳುಹಿಸಲಾಗಿದೆ. ಯಾವುದೇ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗಲ್ಲ. ಕೆಟ್ಟ ಪದಗಳಿಂದ ನಿಂದನೆಯಾಗಿರುವುದು ನಮಗೆ ಮುಖ್ಯವಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...