Homeಕರ್ನಾಟಕಭದ್ರಾವತಿ | ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ : ಎಫ್‌ಐಆರ್ ದಾಖಲು, ಮೂವರ ಬಂಧನ

ಭದ್ರಾವತಿ | ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ : ಎಫ್‌ಐಆರ್ ದಾಖಲು, ಮೂವರ ಬಂಧನ

- Advertisement -
- Advertisement -

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರ ಎನ್ನಲಾದ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಮೂವರನ್ನು ಮಂಗಳವಾರ (ಫೆ.11) ಬಂಧಿಸಿದ್ದಾರೆ.

ಮಹಿಳಾ ಅಧಿಕಾರಿಗೆ ಫೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋವೊಂದು ಸೋಮವಾರ (ಫೆ.10) ವೈರಲ್ ಆಗಿತ್ತು. ಫೋನ್‌ನಲ್ಲಿ ಮಾತನಾಡಿರುವ ವ್ಯಕ್ತಿ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಎನ್ನಲಾಗಿದೆ. ಈ ಸಂಬಂಧ ಮಹಿಳಾ ಅಧಿಕಾರಿ ಕೆ.ಕೆ ಜ್ಯೋತಿ ಅನಾಮಧೇಯ 6-7 ವ್ಯಕ್ತಿಗಳ ವಿರುದ್ಧ ಮಂಗಳವಾರ (ಫೆ.11) ಭದ್ರಾವತಿ ಡಿವೈಎಸ್‌ಪಿಗೆ ದೂರು ನೀಡಿದ್ದರು.

ದೂರು ದಾಖಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಅಧಿಕಾರಿ, ವೈರಲ್ ವಿಡಿಯೋದಲ್ಲಿರುವಂತೆ ಅಕ್ರಮ ಮರಳು ದಂಧೆ ತಡೆಯಲು ಹೋದಾಗ ನಡೆದಿರುವ ಘಟನೆ ಸಂಬಂಧ ದೂರು ನೀಡಿದ್ದೇನೆ ಎಂದಿದ್ದಾರೆ. ಅವರು ಶಾಸಕ ಸಂಗಮೇಶ್ ಅಥವಾ ಇತರ ಯಾರ ಹೆಸರೂ ಉಲ್ಲೇಖಿಸಿಲ್ಲ. ನಿಂದನೆ ಪ್ರಕರಣ ಹೊರತು, ಅಕ್ರಮ ಮರಳು ದಂಧೆ ಸೇರಿದಂತೆ ಇತರ ವಿಷಯಗಳ ಕುರಿತು ಮಾತನಾಡಲೂ  ನಿರಾಕರಿಸಿದ್ದಾರೆ. ಪೊಲೀಸರಿಗೆ ನೀಡಿರುವ ದೂರಿನಲ್ಲೂ ಅವರು ಯಾರ ಹೆಸರೂ ಉಲ್ಲೇಖಿಸಿಲ್ಲ ಎಂದು ವರದಿಯಾಗಿದೆ.

ಮಹಿಳಾ ಅಧಿಕಾರಿ ಮೇಲೆ ‘ಗಾಡಿ ಹತ್ತಿಸ್ರೋ’ ಎಂದರಂತೆ

“ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಹೋದಾಗ ನಮ್ಮ ಮೇಲೆ ಗಾಡಿ ಹತ್ತಿಸ್ರೋ ಅಂತ ಹೇಳುತ್ತಿದ್ರು. ಆಗ ಭಯ ಆಯ್ತು ಪೋನ್ ಕಾಲ್ ಸಹ ಬಂತು, ಯಾಕೋ ಸರಿಯಾಗಲ್ಲ ಅಂತ ವಾಪಾಸ್ಸು ಬಂದೆ. ಅಧಿಕಾರಿಗಳು ನನಗೆ ಸಪೋರ್ಟ್ ಮಾಡಿದರು” ಎಂದು ಅಧಿಕಾರಿ ಜ್ಯೋತಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಮೂವರ ಬಂಧನ

ಮಹಿಳಾ ಅಧಿಕಾರಿಯ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಭದ್ರಾವತಿ ಹಳೇ ನಗರ ಠಾಣೆ ಪೊಲೀಸರು ದಾವಣೆಗೆ ಜಿಲ್ಲೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ನಿವಾಸಿ ರವಿ (38) ಬಿನ್ ಮಲ್ಲೇಶಪ್ಪ, ಹಾಸನ ಜಿಲ್ಲೆ ಅರಕಲಗೂಡಿನ ನಿವಾಸಿ ವರುಣ್ (34) ಬಿನ್ ರಾಜಶೇಖರ್ ಮತ್ತು ಭದ್ರಾವತಿ ತಾಲೂಕಿನ ಸುರೇಂದ್ರ ಗೌಡ ಕ್ಯಾಂಪ್‌ನ ಅಜಯ್ ಬಿನ್ ತಿಪ್ಪೇಶ್ (28) ಎಂಬವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಎಫ್‌ಐಆರ್‌ನಲ್ಲಿ ಶಾಸಕರ ಮಗನ ಹೆಸರೇ ಇಲ್ಲ!

ಪ್ರಕರಣ ಸಂಬಂಧ ಪೊಲೀಸರು 6-7 ಜನರ ವಿರುದ್ದ ಎಫ್‌ಐಆರ್ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. ಇನ್ನುಳಿದವರಿಗೆ ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಮಹಿಳಾ ಅಧಿಕಾರಿಗೆ ನಿಂದಿಸಿದ್ದಾರೆ ಎನ್ನಲಾದ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಅವರ ಹೆಸರೇ ಎಫ್‌ಐಆರ್ ಪ್ರತಿಯಲ್ಲಿ ಇಲ್ಲ ಎಂದು ವರದಿಗಳು ಹೇಳಿವೆ.

‘ಯಾವ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗಲ್ಲ’ : ಡಾ.ನಾಗಲಕ್ಷ್ಮೀ ಚೌಧರಿ

ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ನಿಂದಿಸಿದ್ದಾರೆ ಎಂಬ ಆರೋಪದ ಕುರಿತು ಮಂಗಳವಾರ ಬೀದರ್‌ನಲ್ಲಿ ಪ್ರತಿಕ್ರಿಯೆ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು “ಮಹಿಳಾ ಆಯೋಗದಿಂದ ಸಮನ್ಸ್ ನೋಟಿಸ್ ಕಳುಹಿಸಲಾಗಿದೆ. ಯಾವುದೇ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗಲ್ಲ. ಕೆಟ್ಟ ಪದಗಳಿಂದ ನಿಂದನೆಯಾಗಿರುವುದು ನಮಗೆ ಮುಖ್ಯವಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...