Homeಚಳವಳಿಭಗತ್‌ ಸಿಂಗ್ ಜನ್ಮದಿನ: ಭಾರತದ ಅದಮ್ಯ ಚೇತನದ ನೆನಪು

ಭಗತ್‌ ಸಿಂಗ್ ಜನ್ಮದಿನ: ಭಾರತದ ಅದಮ್ಯ ಚೇತನದ ನೆನಪು

ಭಗತ್ ಸಿಂಗ್ ಎಂಬ ಕ್ರಾಂತಿಕಾರಿಯ 'ನೂರ ಹದಿಮೂರನೇ ಜಯಂತಿ' ಆಚರಿಸುವ ಈ ಹೊತ್ತಿನಲ್ಲಿ ನಾವು ದೇಶಭಕ್ತ ಎಂದು ಪೂಜಿಸುವುದು, ಆತನನ್ನು ಒಂದು ಕೋಮು, ಪಕ್ಷ, ಜಾತಿಗೆ ಸೀಮಿತಗೊಳಿಸುವ ಸಾಹಸ ಅಪ್ಪಿತಪ್ಪಿಯೂ ಮಾಡಬಾರದು.

- Advertisement -
- Advertisement -

“ನಾವು ಪ್ರಭುತ್ವದ ವಿರುದ್ಧ ಸಮರ ಸಾರಿದ್ದೇವೆ. ಹಾಗಾಗಿ ಯುದ್ಧ ಖೈದಿಗಳಾಗಿದ್ದೇವೆ ಎಂದು ಹೇಳಲಿಚ್ಚಿಸುತ್ತೇನೆ. ನಮ್ಮನ್ನು ಯುದ್ಧ ಖೈದಿಗಳಂತೆಯೇ ಪರಿಗಣಿಸಲು ಆಗ್ರಹಿಸುತ್ತೇವೆ. ಅರ್ಥಾತ್ ನಮ್ಮನ್ನು ಗಲ್ಲಿಗೇರಿಸುವ ಬದಲು ನೇರವಾಗಿ ಗುಂಡಿಟ್ಟು ಕೊಲ್ಲುವಂತೆ ಕೋರುತ್ತೇವೆ.” ಇಂತಹ ಕೋರಿಕೆಯ ಮಾತುಗಳು ಬ್ರಿಟೀಷ್ ಸರ್ಕಾರಕ್ಕೆ ಮನವಿ ಪತ್ರದ ಮೂಲಕ ಹೇಳಿರುವ ಕ್ರಾಂತಿಕಾರಿ ವೀರ ಯಾರು ಗೊತ್ತಾ? ಅವರೇ ಭಗತ್ ಸಿಂಗ್!

ಭಾರತದ ಇತಿಹಾಸದಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿ ಉಳಿಯುವ ಅದಮ್ಯ ಚೇತನ ಶಾಹಿದ್ ಭಗತ್ ಸಿಂಗ್. ಬ್ರಿಟಿಷ್ ವಸಾಹತುಶಾಹಿಯ ನೇಣಿಗೆ ನಗು ನಗುತ್ತಲೇ ಕೊರಳೊಡ್ಡಿದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ವೀರ. ಆತ ಬದುಕ್ಕಿದ್ದು ಕೇವಲ ಇಪ್ಪತ್ಮೂರು ವರ್ಷ ಮಾತ್ರ, ಆದರೆ ಆತನ ಕ್ರಾಂತಿಯ ಕಿಚ್ಚು ಲಕ್ಷಾಂತರ  ಯುವ ಸಮುದಾಯದ ಎದೆಯೊಳಗೆ ಹೊತ್ತಿಸಿದ್ದು ಸುಳ್ಳಲ್ಲ.

‘ಭಗತ್ ಸಿಂಗ್’ ಎಂದರೆ ಸ್ಪೂರ್ತಿಯ ಸೆಲೆ, ದೇಶಪ್ರೇಮದ ಕಿಡಿ, ಯುವ ಮನಸ್ಸಿಗೆ ಮತ್ತಷ್ಟು ಹುಮ್ಮಸ್ಸು ತುಂಬುವ ಧೀರ ಶಕ್ತಿ. ಈ ಎಲ್ಲಾ ಸಾಮರ್ಥ್ಯವನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಭಗತ್ ಸಿಂಗ್ ಭಾರತೀಯರಿಗೆ ಸದಾ ಯುವ ಚೇತನ, ಕ್ರಾಂತಿಯ ಚಿಲುಮೆ. ಭಗತ್‌‌ಸಿಂಗ್ ನಿಗೆ ಕೇವಲ ‘ಹುತಾತ್ಮ’ರ ಪಟ್ಟಿಗೆ ಸೇರಿಸಿ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಎಂದಷ್ಟೇ ಕರೆದು ಸೀಮಿತಗೊಳಿಸುವ ಪ್ರಯತ್ನ ಮಾಡುವುದು ಅಷ್ಟು ಸಮಂಜಸವಲ್ಲ.

ತನ್ನ ವಯಸ್ಸಿಗೆ ಮೀರಿದ ಭಗತನ ಪ್ರಬುದ್ಧತೆ, ಬರಹಗಳು ಬ್ರಿಟಿಷ್ ವಸಾಹತುಶಾಹಿಗೆ ನಡುಕ ಹುಟ್ಟಿಸುತ್ತಿದ್ದವು. ಅಂದಿನ ಸಮಕಾಲೀನ ಸಮಾಜದ ಅಸಮಾನತೆ, ಶೋಷಣೆ, ಧರ್ಮಾಂಧತೆ, ಕೋಮುವಾದ ವಿರುದ್ಧ ಕಠೋರ ನಿಲುವು ತಾಳಿದ ಭಗತ್ ಸಿಂಗ್ ಚಿಂತನೆಗಳು ಮುನ್ನೆಲೆಗೆ ಬರಬೇಕಾಗಿದೆ. ಆತನ ವಿಚಾರಗಳು ಪ್ರಸ್ತುತ ಸಮಾಜದ ಸ್ಥಿತಿಗತಿಗೆ ಹಿಡಿದ ಕನ್ನಡಿಯಾಗಿವೆ.

“ವ್ಯಕ್ತಿಗಳನ್ನು ಕೊಲ್ಲಬಹುದು, ಆದರೆ ಅವರ ವಿಚಾರಗಳನ್ನಲ್ಲ” ಎಂದಿರುವ ಭಗತ್‍ ಸಿಂಗ್‍ ದೈಹಿಕವಾಗಿ ಇಂದು ನಮ್ಮೊಂದಿಗಿಲ್ಲ. ಆದರೆ ಆತನೇ ಹೇಳಿರುವಂತೆ ಆತನ ಪ್ರಬುದ್ಧತೆಯ ಲೇಖನಗಳು, ಆದರ್ಶ ಸಿದ್ಧಾಂತ, ಕ್ರಾಂತಿಕಾರಿ ಹೋರಾಟದ ಬದುಕು ಇಂದಿಗೂ ಭಾರತದಲ್ಲಿ ಉಸಿರಾಡುತ್ತಿದೆ.  ನಾವು ಭಗತ್ ಸಿಂಗ್ ನನ್ನು ಒಬ್ಬ ಅಪ್ಪಟ ‘ದೇಶಪ್ರೇಮಿ’ ಎಂದು ಆರಾಧನೆ ಮಾಡುವುದಲ್ಲ. ಭಗತ್ ನ ಉನ್ನತ ಧ್ಯೇಯ ಮತ್ತು ಆದರ್ಶ ಚಿಂತನೆಗಳು ಪ್ರಸ್ತುತ ಸಮಾಜದಲ್ಲಿ ಅನುಷ್ಠಾನಗೊಳಿಸುವ ಪ್ರಯತ್ನ ಮಾಡುವುದು ತೀರ ಅಗತ್ಯತೆ ಇದೆ. ಇದೇ ನಾವು ಆತನಿಗೆ ಸಲ್ಲಿಸುವ ಮಹೋನ್ನತ ಗೌರವವಾಗಿದೆ.

ಶಾಹಿದ್ ಭಗತ್ ಸಿಂಗ್ ಹುಟ್ಟಿದ್ದು ಇಪ್ಪತ್ತೆಂಟನೆ ಸೆಪ್ಟೆಂಬರ್ 1907 ರಂದು, ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಮೂರನೆಯ ಮಗನಾಗಿ ಭಗತನು ಜನಿಸಿದ. ಅಗಾಧ ದೇಶಭಕ್ತಿಗೆ ಹೆಸರುವಾಸಿ, ಹಾಗೂ ಕ್ರಾಂತಿಕಾರಿ ವಿಚಾರಧಾರೆಯ ಕುಟುಂಬದಲ್ಲಿ ಜನಿಸಿದ ಭಗತ ಎದೆಯಲ್ಲಿ ಹುಟ್ಟುತ್ತಲೇ ದೇಶಪ್ರೇಮದ ಕಿಚ್ಚು ಮೊಳಕೆಯೊಡೆದಿತ್ತು.

ಅದು 1919ರ ವೇಳೆ ಜಲಿಯಾನ್ ವಾಲ್ ಬಾಗದಲ್ಲಿ ಸಂಭವಿಸಿದ ರಕ್ತ ಕ್ರಾಂತಿಯ ಹತ್ಯಾಕಾಂಡ ಭಗತ್ ಸಿಂಗ್ ನಿಗೆ ಅತಿಯಾಗಿ ಕಾಡಿದ್ದು. ಅಂದಿನ ಆ ಘಟನೆ ಭಗತ್ ಸಿಂಗ್ ನನ್ನು ಒಬ್ಬ ಅಪ್ರತಿಮ ಹೋರಾಟಗಾರ, ಕೌರ್ಯ ಸಮಾಜದ ವಿರುದ್ಧ ಸಿಡಿದೇಳುವಂತೆ ಮಾಡಿತ್ತು. ಮುಂದೆ ಬ್ರಿಟೀಷ್ ರಿಗೆ ಸಿಂಹಸ್ವಪ್ನವಾಗಿ, ಭವಿಷ್ಯ ಭಾರತದ ದಾರ್ಶನಿಕತೆಗಾಗಿ, ಶೋಷಣೆ ರಹಿತ, ಜಾತಿ ರಹಿತವಾದ ಸಮ ಸಮಾಜಕ್ಕಾಗಿ ಹೋರಾಡಿದನು.

ಭಾರತದ ಸ್ವಾತಂತ್ರ್ಯ ಚಳುವಳಿಗೆ ಬ್ರಿಟಿಷರ ವಿರುದ್ಧ ಸಮರ ಸಾರಿದವರಲ್ಲಿ ಭಗತ್‍ಸಿಂಗ್ ಮತ್ತು ಆತನ ಸಂಗಾತಿಗಳಾದ ರಾಜಗುರು, ಸುಖದೇವ್ ಮೊದಲಿಗರು. ಭಗತ್ ಸಿಂಗ್ ಕೇವಲ ಬ್ರಿಟೀಷ್ ವಸಾಹತುಶಾಹಿಯ ಸಾಮ್ರಾಜ್ಯದ ವಿರುದ್ಧ ಅಷ್ಟೇ ಹೋರಾಟ ನಡೆಸಲಿಲ್ಲ. ದೇಶದ ಕೋಮುವಾದ, ಅಸಮಾನತೆ, ಶೋಷಣೆ, ಅಶಾಂತಿ ಮತ್ತು ಕೌರ್ಯದ ವಿರುದ್ಧ ಹೋರಾಟ ಆರಂಭಿಸಿದನು.

ಬಹುತ್ವ ಭಾರತದ ಅಸ್ಮಿತೆ ಉಳಿವಿಗಾಗಿ ಶ್ರಮಿಸಿದ ಭಗತ್ ಸಿಂಗ್  “ಭಾರತದ ನೆಲದಲ್ಲಿ ಪ್ರಸ್ತುತ ಸಾಮಾಜಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ಸಮಾಜವಾದಿ ಗಣತಂತ್ರವನ್ನು ಸ್ಥಾಪಿಸುವವರೆಗೂ ನಮ್ಮ ಅವಿರತ ಹೋರಾಟ ದಿಟ್ಟತನದಿಂದ, ದೃಢತೆಯಿಂದ ಮತ್ತು ಅಪರಿಮಿತ ವಿಶ್ವಾಸದಿಂದ ನಡೆಯುತ್ತದೆ” ಎನ್ನುವ ಕೆಚ್ಚೆದೆಯ ಚಿಂತನೆಗಳು ಪ್ರತಿಪಾದಿಸಿದನು.

ಕ್ರಾಂತಿಯ ಮೂಲಕವೇ ಸಾಮಾಜಿಕ ಬದಲಾವಣೆ ಬಯಸಿದ ಭಗತ್ ಸಿಂಗ್ ‘ಕ್ರಾಂತಿ’ ಎಂದರೆ ಕ್ರಿಯೆ ಹಾಗೂ ಪವಿತ್ರವಾದದ್ದು ಎಂದು ತಿಳಿದಿದನು. “ಸಂಘಟಿತರಾಗಿ, ವ್ಯವಸ್ಥಿತವಾದ ಕಾರ್ಯ ಯೋಜನೆಯ ಮೂಲಕ ಉದ್ದೇಶಪೂರ್ವಕವಾಗಿ ಬದಲಾವಣೆ ತರುವುದನ್ನು ಕ್ರಾಂತಿ ಎನ್ನಲಾಗುತ್ತದೆ” ಎಂದು ಹೇಳುತ್ತಾನೆ. ಮುಂದೆ ‘ಕ್ರಾಂತಿಕಾರಿಗಳು ಸಂಪೂರ್ಣ ಕ್ರಾಂತಿಗಾಗಿ ಹೋರಾಡುತ್ತೇವೆ ಆದರೆ ಸಂಪ್ರದಾಯವಾದಿಗಳು ಕ್ರಾಂತಿಕಾರಿ ಶಕ್ತಿಯನ್ನು ಭಂಗಗೊಳಿಸಿ ಹೋರಾಟವನ್ನು ವಿಫಲಗೊಳಿಸುತ್ತಾರೆ. ಹಾಗಾಗಿ ಇಂತಹ ಬಿಕ್ಕಟ್ಟಿನ ಸನ್ನಿವೇಶಗಳಲ್ಲಿ ನಾವು ಗೊಂದಲಕ್ಕೆ ಒಳಗಾಗದೇ ಧ್ಯೇಯವನ್ನು ಸಾಧಿಸಬೇಕು’ ಎನ್ನುವ ಸವಾಲು ಎದುರಿಸಲು ಧೈರ್ಯ ತುಂಬುತ್ತಾನೆ.

ಭಗತ್ ಸಿಂಗ್ ಎಂಬ ಕ್ರಾಂತಿಕಾರಿಯ ‘ನೂರ ಹದಿಮೂರನೇ ಜಯಂತಿ’ ಆಚರಿಸುವ ಈ ಹೊತ್ತಿನಲ್ಲಿ ನಾವು ದೇಶಭಕ್ತ ಎಂದು ಪೂಜಿಸುವುದು, ಆತನನ್ನು ಒಂದು ಕೋಮು, ಪಕ್ಷ, ಜಾತಿಗೆ ಸೀಮಿತಗೊಳಿಸುವ ಸಾಹಸ ಅಪ್ಪಿತಪ್ಪಿಯೂ ಮಾಡಬಾರದು.

“ಸಮಾಜವನ್ನು ನೂತನ ನೆಲೆಯಲ್ಲಿ, ಹೆಚ್ಚು ಸಮರ್ಥವಾದ ನೆಲೆಯಲ್ಲಿ, ಪ್ರಸಕ್ತ ಆಡಳಿತ ವ್ಯವಸ್ಥೆ ಮತ್ತು ಪ್ರಭುತ್ವವನ್ನು ಕೊನೆಗೊಳಿಸಿ ವ್ಯವಸ್ಥಿತವಾಗಿ ನವ ಸಮಾಜವನ್ನು ನಿರ್ಮಿಸುವುದು ಕ್ರಾಂತಿಯ ಸ್ವರೂಪ” ಎಂದಿರುವ ಭಗತ್ ಸಿಂಗ್ ಚಿಂತನೆ ಇಂದು ಇಲ್ಲವಾಗುತ್ತಿವೆ. ಆತನ ಮೂಲ ತತ್ವ ಸಿದ್ಧಾಂತ ಬದಿಗೊತ್ತಿ ಹುಸಿಚಿಂತನೆಯ ಸಿದ್ಧಾಂತದ ತೆಕ್ಕೆಗೆ ಸೆಳೆದುಕೊಳ್ಳುವ ಪ್ರತಿಗಾಮಿ ಶಕ್ತಿಗಳ ಪ್ರಯತ್ನ ಎಗ್ಗಿಲ್ಲದೆ ನಡೆಸುತ್ತಿದೆ.

ಸಾಮಾಜಿಕ ವಿಚಾರಗಳನ್ನು ಸೇರಿದಂತೆ ಇನ್ನಿತರ ಮಹನೀಯರು ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಅನುಭವಾತ್ಮಕವಾಗಿ ಅರ್ಥೈಸಿಕೊಳ್ಳಲು ಭಗತ್ ಸಿಂಗ್ ಹೆಚ್ಚು ಇಷ್ಟಪಡುತ್ತಿದ್ದನು. ಹೀಗಾಗಿಯೇ “ಎಲ್ಲ ವಿಚಾರಗಳ ಅಧ್ಯಯನ ನಡೆಸಲು ಸೆರೆಮನೆಯೇ ಸೂಕ್ತ ತಾಣ ಎಂದು ನನಗೆ ಭಾಸವಾಗುತ್ತದೆ. ಯಾವುದೇ ವ್ಯಕ್ತಿ ಸ್ವತಃ ನೋವು ಅನುಭವಿಸಿದಲ್ಲಿ ಮಾತ್ರ‌ ಸ್ವಯಂ ಅಧ್ಯಯನ ಅತ್ಯುನ್ನತ ಹಂತ ಕಾಣಲು ಸಾಧ್ಯ” ಎಂದು
ಓದು-ಬರಹದ ಬಗ್ಗೆ ತನಗಿರುವ ಹೆಮ್ಮೆಯ ಕುರಿತು ಹೇಳಿಕೊಂಡಿದ್ದಾನೆ.

ಸಮಕಾಲೀನ ಭಾರತದಲ್ಲಿ ಭಗತ್ ಸಿಂಗ್ ಕೇವಲ ಆರಾಧನೆಗಾಗಿ ಮಾತ್ರ ಉಳಿದಿದ್ದಾನೆ ಎಂದೆನಿಸುತ್ತಿದೆ. ಇಂದು ಭಾರತದಲ್ಲಿ ಭಗತನು ಪ್ರತಿಪಾದಿಸಿದ ಸಿದ್ಧಾಂತ ಉಸಿರಾಡಲು ನಲುಗುತ್ತಿದೆ. ಎಲ್ಲ ಮೌಲ್ಯಗಳೂ ಪ್ರಭುತ್ವದ ಶೋಷಣೆಗೆ ಸಿಲುಕಿ ಒದ್ದಾಡುತ್ತಿವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಕಳೆದುಕೊಳ್ಳುತ್ತಿರುವ ಪ್ರಸ್ತುತ ಸಮಾಜದಲ್ಲಿ ಮಾತು ಮೌನವಾಗಿ, ಕಣ್ಣಿದ್ದು ಕುರುಡರಾಗಿದ್ದೇವೆ. ನಾನು ಈ ನೆಲದ ಅಸ್ಮಿತೆಯ ಉಳಿವಿಗಾಗಿ ಹೋರಾಡಿದ್ದೇನೆ, ನನ್ನನ್ನು ಗುಂಡಿಕ್ಕಿ ಕೊಂದುಬಿಡಿ, ಎಂದು ಬ್ರಿಟಿಷ ಸರ್ಕಾರಕ್ಕೆ ವಿನಂತಿಸಿಕೊಂಡು ತನ್ನ ಕೆಚ್ಚೆದೆಯ ಅಪ್ರತಿಮ ಚೈತನ್ಯ ತೋರಿದ ಭಾರತದ ಏಕೈಕ ದೇಶಪ್ರೇಮಿ ಭಗತನಿಗೆ ಇನ್ನೂ ‘ಭಾರತ ರತ್ನ’ ಕೊಡಲು ಸಾಧ್ಯವಾಗಲಿಲ್ಲ.

ಭಗತ್ ‌ಸಿಂಗ್, ರಾಜಗುರು ಹಾಗೂ ಸುಖದೇವ್ ಸೇರಿದಂತೆ ಅಸಂಖ್ಯಾತ ಸಂಗಾತಿಗಳನ್ನು ನಾವು ಹುತಾತ್ಮರೆಂದು ನೆನೆಯುತ್ತಿದ್ದೇವೆ. ಆದರೆ ಇಂದಿನ ಯುವ ‌‌ಸಮುದಾಯವನ್ನು ಒಗ್ಗೂಡಿಸಿ ಕ್ರಾಂತಿಯ ಮಾರ್ಗದಲ್ಲಿ ಕೊಂಡೊಯ್ಯಬಲ್ಲ ಸಾಮರ್ಥ್ಯ ಕೇವಲ ಭಗತ್ ಸಿಂಗ್ ಚಿಂತನೆಗಳಲ್ಲಿದೆ. ಅಂದಿನ ಭಗತ್ ಸಿಂಗ್ ಎನ್ನುವ ‘ರಿಯಲ್ ಹೀರೋ’ ಇಂದಿನ ಯುವ ಪೀಳಿಗೆಗೆ ಆದರ್ಶ, ರೋಲ್ ಮಾಡೆಲ್.

ಭಗತ್ ಸಿಂಗ್ ನ ಆಳವಾದ ಚಿಂತನೆ, ಆತನ ಮಾನವೀಯ ಮೌಲ್ಯಗಳು ಈಗಾಗಲೇ ನಮ್ಮೆಲ್ಲರ ಮನಸ್ಸಿನ ಪ್ರಭಾವ ಬೀರಿವೆ. ನಾವು ಕಟ್ಟಲು ಬಯಸಿದ ಭವಿಷ್ಯ ಭಾರತ ದೇಶಕ್ಕೆ ಭಗತ್ ಸಿಂಗ್ ಎನ್ನುವ ತರುಣ ಸದಾ ಆದರ್ಶವಾಗಿರುತ್ತಾನೆ. ಆತನ ಚಿಂತನೆಗಳು ಮತ್ತೆ ಮುನ್ನೆಲೆಗೆ ತರುವ ಪ್ರಯತ್ನ ನಾವೆಲ್ಲರೂ ಮಾಡಬೇಕಾಗಿದೆ. ತ್ಯಾಗ ಬಲಿದಾನದ ಸಂಕೇತವಾಗಿ ಗಳಿಸಿದ ಈ ಸ್ವಾತಂತ್ರ್ಯವನ್ನು ನಾವು ಅಷ್ಟೇ ಹೆಮ್ಮೆ ಹಾಗೂ ಗೌರವದಿಂದ ಉಳಿಸಿಕೊಳ್ಳುವ ಮಹತ್ವದ ಜವಾಬ್ದಾರಿ ಕೂಡ ನಮ್ಮೆಲ್ಲರ ಮೇಲಿದೆ, ಅದಕ್ಕೆ ಭಗತ್ ಸಿಂಗ್ ಎನ್ನುವ ಕ್ರಾಂತಿಯ ಯುವ ಚೇತನ ಸ್ಪೂರ್ತಿವೆ.

ಬಾಲಾಜಿ ಕುಂಬಾರ, ಚಟ್ನಾಳ,

ಶಿಕ್ಷಕರು ಮತ್ತು ಯುವ ಬರಹಗಾರ. ತಾ.ಔರಾದ ಬಾ, ಜೀ. ಬೀದರ.


ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...