Homeಕರ್ನಾಟಕಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

ಈ ವಿಶಿಷ್ಟ ಕಾರ್ಯಕ್ರಮ ಸ್ವಾತಂತ್ರ್ಯ ದಿನಾಚರಣೆಯವರೆಗೆ ನಡೆಯಲಿದ್ದು, ಪೌರಕಾರ್ಮಿಕರ ಹಕ್ಕುಗಳ ಹೋರಾಟಗಾರರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ವಿವಿಧ ವಾರ್ಡ್‌ಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಹೋರಾಟಗಾರ್ತಿ ದು.ಸರಸ್ವತಿ, “ಆರ್ಥಿಕವಾಗಿ ಸಬಲರಾಗಬೇಕು, ಘನತೆಯಿಂದ ಬದುಕುವ ದಿನ ಬರಬೇಕೆಂದು ಇಂದಿಗೂ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟವು ಸ್ವಾತಂತ್ರ್ಯ ಚಳವಳಿಯ ಮುಂದುವರಿದ ಭಾಗವೇ ಆಗಿದೆ” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶ ಎಂದರೆ ದೇಶದ ಒಳಗೆ ಇರುವ ಜನರೆಂದು ಅರ್ಥ. ಈ ಜನರೆಲ್ಲರೂ ನೆಮ್ಮದಿಯಾಗಿ ಮನುಷ್ಯರ ರೀತಿ ಬದುಕಲು ಸಾಧ್ಯವಾದಾಗ ಮಾತ್ರ ಎಲ್ಲರಿಗೂ ಸ್ವಾತಂತ್ರ್ಯ ದೊರಕಿದೆ ಎಂದರ್ಥ. ನಾವು ರಾಜಕೀಯ ಸ್ವಾತಂತ್ರ್ಯವನ್ನು ಈಗ ಪಡೆದುಕೊಂಡಿದ್ದೇವೆ ಎಂದು ತಿಳಿಸಿದರು.

ದೇಶ ವಿಭಜನೆಯ ಸಂದರ್ಭವನ್ನು ನೆನೆದ ಅವರು, “ಪಾಕಿಸ್ತಾನದ ವ್ಯಾಪ್ತಿಗೆ ಸೇರಲ್ಪಟ್ಟ ಸ್ವಚ್ಛತಾ ಕರ್ಮಿಗಳನ್ನು ಇಲ್ಲಿಗೆ ಕರೆಸಿಕೊಳ್ಳಲು ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರಧಾನಿಗೆ ಪತ್ರವನ್ನು ಬರೆದಿದ್ದರು. ಆದರೆ ಪಾಕಿಸ್ತಾನದವರು ಸ್ವಚ್ಛತಾಕರ್ಮಿಗಳನ್ನು ಇಲ್ಲಿಗೆ ಕಳುಹಿಸಲು ಸಿದ್ಧವಿರಲಿಲ್ಲ. ಆ ಜನರ ಮೇಲಿನ ಪ್ರೀತಿಯ ಕಾರಣಕ್ಕಾಗಿ ಅಲ್ಲ. ಕಸ ಬಾಚುವ, ಕಕ್ಕಸ್ಸು ತೊಳೆಯುವ ಕೆಲಸವನ್ನು ಮಾಡಲು ಯಾರೂ ಸಿದ್ಧರಿರಲಿಲ್ಲ. ಹೀಗಾಗಿ ಕಳುಹಿಸಲು ಒಪ್ಪಲಿಲ್ಲ. ಆದರೆ ಸ್ವಚ್ಛತಾಕರ್ಮಿಗಳು ಭಾರತಕ್ಕೆ ವಾಪಸ್‌ ಹೋಗಲು ಬಯಸಿದ್ದರಿಂದ ಅವರನ್ನು ಕರೆಸಿಕೊಳ್ಳಲೇಬೇಕೆಂದು ಬಾಬಾ ಸಾಹೇಬರು ಪ್ರಧಾನಿಯವರ ಮೇಲೆ ಒತ್ತಡ ಹಾಕಿದರು” ಎಂದು ವಿವರಿಸಿದರು.

ಕ್ರಾಂತಿಕಾರಿ ಹೋರಾಟಗಾರ ಭಗತ್‌ಸಿಂಗ್‌ ಮತ್ತು ಮಹಾಭಾರತದ ಅಭಿಮನ್ಯುವಿನ ಸ್ಥಿತಿಯನ್ನು ಹೋಲಿಕೆ ಮಾಡಿದ ಅವರು, “ಮಹಾಭಾರತದಲ್ಲಿ ಚಕ್ರವ್ಯೂಹ ಭೇದಿಸಿ ಹೊರಬರಲಾಗದ ಸ್ಥಿತಿಯಲ್ಲಿ ಅಭಿಮನ್ಯು ಸಂಕಟಪಟ್ಟ. ಎಲ್ಲ ಹಿರಿಯರು ನೋಡುತ್ತಾ ಸುಮ್ಮನಿದ್ದರು. ಪ್ರಯತ್ನಪಟ್ಟಿದ್ದರೆ ಅಭಿಮನ್ಯುವನ್ನು ಕಾಪಾಡಬಹುದಿತ್ತು. ಭಗತ್‌ಸಿಂಗ್ ಕಥೆಯೂ ಹೀಗೆ ಆಯಿತು. ಭಗತ್‌ಸಿಂಗ್ ಜೀವನದ ಕುರಿತು ಪ್ರತಿಸಲ ಓದುವಾಗಲೂ ಹೊಟ್ಟೆಯಲ್ಲಿ ಕಲಸಿದಂತಾಗುತ್ತದೆ. ಚಿಕ್ಕ ವಯಸ್ಸಲ್ಲಿ ತೀವ್ರ ಹೋರಾಟ ನಡೆಸಿದ. ಶಿಕ್ಷೆಗೊಳಪಟ್ಟ. ದೊಡ್ಡ ದೊಡ್ಡ ನಾಯಕರಿದ್ದರು. ಆ ಮಗುವನ್ನು ಬಿಡಿಸಲು ಅವರೇಕೆ ಪ್ರಯತ್ನ ಮಾಡಲಿಲ್ಲ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ” ಎಂದು ವಿವಾದಿಸಿದರು.

ಬ್ರಿಟಿಷರ ವಿರುದ್ಧ ಮಹಿಳೆಯರು ಹೋರಾಡಿದ್ದನ್ನು ಮೆಲುಕು ಹಾಕಿದ ಅವರು, “ಒಮ್ಮೆ ಪೊಲೀಸರು ದಿಢೀರನೆ ದಾಳಿ ಮಾಡಿದ್ದರು. ತಕ್ಷಣ ಅಲ್ಲಿದ್ದ ಕರಪತ್ರಗಳನ್ನು ತಮ್ಮ ಕೆಳಗೆ ಹಾಕಿ ಮಹಿಳೆಯೊಬ್ಬರು ಕುಳಿತುಕೊಳ್ಳುತ್ತಾಳೆ. ಎದ್ದೇಳುವಂತೆ ಪೊಲೀಸರು ಸೂಚಿಸಿದಾಗ ಆ ಮಹಿಳೆ- ನಾನು ಮುಟ್ಟಾಗಿದ್ದೇನೆ. ನಾನು ಏಳಲ್ಲ- ಎಂದು ತಿರುಗೇಟು ನೀಡುತ್ತಾಳೆ. ಪೊಲೀಸರು ಮರುಮಾತನಾಡದೆ ವಾಪಸ್‌ ಹೋಗುತ್ತಾರೆ. ಹೀಗೆ ಸ್ವಾತಂತ್ರ್ಯ ಹೋರಾಟದಲ್ಲಿ ಅಜ್ಞಾತ ಮಹಿಳೆಯರು ಬಹುದೊಡ್ಡ ಪಾತ್ರವಹಿಸಿದ್ದಾರೆ” ಎಂದರು.

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸ್ವಾತಂತ್ರ್ಯ ಹೋರಾಟ ನಡೆಸಿದವರ ಸ್ಮರಣೆಗಾಗಿ ಹದಿನೈದು ದಿನಗಳ ಕಾಲ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮೊನ್ನೆ ನೀವು ಮಾಡಿದ ಹೋರಾಟ ಅವಿಸ್ಮರಣೀಯ. ಪಟ್ಟು ಬದಲಿಸಿದೆ ಕೂತಿದ್ದೀರಲ್ಲ, ಅದನ್ನು ಎಂದಿಗೂ ಮರೆಯಲಾಗದು ಎಂದು ಹೊಗಳಿದರು.

ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಕ್ಲಿಫ್ಟನ್‌ ರಸಾರಿಯೋ ಮಾತನಾಡಿ, “ಪೌರಕಾರ್ಮಿಕರೂ ಸ್ವಾತಂತ್ರಕ್ಕಾಗಿ ಹೋರಾಡಿದ್ದಾರೆ. ದುಡಿಯುವ ವರ್ಗದ ಹೋರಾಟದಿಂದ ಸ್ವಾತಂತ್ರ್ಯ ಬಂತು ಎಂಬುದನ್ನು ನಾವು ಮರೆಯಬಾರದು” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟ ಕೇವಲ ಬ್ರಿಟಿಷರನ್ನು ಓಡಿಸುವುದಕ್ಕಾಗಿ ಅಲ್ಲ. ಎರಡು ತೆರನಾದ ಶತ್ರುಗಳನ್ನು ಸೋಲಿಸಬೇಕು ಎಂದಿದ್ದರು ಅಂಬೇಡ್ಕರ್‌. ಆ ಎರಡು ಶತ್ರುಗಳೆಂದರೆ ಬಂಡವಾಳಶಾಹಿಗಳು ಮತ್ತು ಬ್ರಾಹ್ಮಣ್ಯ ಎಂದು ಎಚ್ಚರಿಸಿದ್ದರು. ಆ ಮಾತು ಇಂದಿಗೂ ನಿಜವಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಪೌರಕಾರ್ಮಿಕರ ಕಾಯಮಾತಿಗೆ ತೊಡಕಾಗಿರುವ ಬೆಂಗಳೂರಿನ ಕಸದ ಮಾಫಿಯಾ ಮತ್ತು ಕಾಂಟ್ರಾಕ್ಟರ್‌ಗಳು

ಸ್ವಾತಂತ್ರ್ಯವೆಂಬುದು ಕೂಲಿಕಾರ್ಮಿಕರ ಕೈಲಿ, ರೈತರ ಕೈಲಿ, ಆದಿವಾಸಿಗಳ ಕೈಲಿ ಇರಬೇಕು ಎಂದಿದ್ದರು ಭಗತ್‌ಸಿಂಗ್‌. ಬಾಬಾ ಸಾಹೇಬ್‌ ಮತ್ತು ಭಗತ್‌ಸಿಂಗ್ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ಬ್ರಿಟಿಷರು ಹೋದ ಮೇಲೆ ಈ ದೇಶ ಹೇಗಿರಬೇಕು ಎಂದು ಈ ಇರು ಕನಸು ಕಂಡಿದ್ದರು ಎಂದು ವಿವರಿಸಿದರು.

ರೈತ ಹೋರಾಟಗಾರ್ತಿ ಎನ್.ಗಾಯತ್ರಿ ಮಾತನಾಡಿ, “ಸ್ವಾತಂತ್ರ್ಯ ಹೋರಾಟ ಎಂದ ತಕ್ಷಣ ತ್ಯಾಗ ಬಲಿದಾನ ನೆನಪಾಗುತ್ತದೆ. ತ್ಯಾಗ, ಬಲಿದಾನ ಎಂದಾಗ ನೆನಪಿಗೆ ಬರುವುದೇ ಪೌರಕಾರ್ಮಿಕರು. ಕಸಕ್ಕೆ ಮೋಕ್ಷವನ್ನು ಕೊಡುತ್ತಿರುವ ನಿಮ್ಮ ತ್ಯಾಗ, ಬಲಿದಾನ ಸ್ವಾತಂತ್ರ್ಯ ಪ್ರತೀಕ” ಎಂದು ಬಣ್ಣಿಸಿದರು.

ಗರ್ಮೆಂಟ್ ನೌಕರರ ಸಂಘ ಮುಖಂಡರಾದ ಪ್ರತಿಭಾ, ಗಮನ ಮಹಿಳಾ ಸಂಘದ ಮಧು ಭೂಷಣ, ಚಿಂತಕ ಹುಲಿಕುಂಟೆ ಮೂರ್ತಿ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಅಶ್ವಿನಿ ಸೇರಿದಂತೆ ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...