Homeಕರ್ನಾಟಕಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

ಈ ವಿಶಿಷ್ಟ ಕಾರ್ಯಕ್ರಮ ಸ್ವಾತಂತ್ರ್ಯ ದಿನಾಚರಣೆಯವರೆಗೆ ನಡೆಯಲಿದ್ದು, ಪೌರಕಾರ್ಮಿಕರ ಹಕ್ಕುಗಳ ಹೋರಾಟಗಾರರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ವಿವಿಧ ವಾರ್ಡ್‌ಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಹೋರಾಟಗಾರ್ತಿ ದು.ಸರಸ್ವತಿ, “ಆರ್ಥಿಕವಾಗಿ ಸಬಲರಾಗಬೇಕು, ಘನತೆಯಿಂದ ಬದುಕುವ ದಿನ ಬರಬೇಕೆಂದು ಇಂದಿಗೂ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟವು ಸ್ವಾತಂತ್ರ್ಯ ಚಳವಳಿಯ ಮುಂದುವರಿದ ಭಾಗವೇ ಆಗಿದೆ” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶ ಎಂದರೆ ದೇಶದ ಒಳಗೆ ಇರುವ ಜನರೆಂದು ಅರ್ಥ. ಈ ಜನರೆಲ್ಲರೂ ನೆಮ್ಮದಿಯಾಗಿ ಮನುಷ್ಯರ ರೀತಿ ಬದುಕಲು ಸಾಧ್ಯವಾದಾಗ ಮಾತ್ರ ಎಲ್ಲರಿಗೂ ಸ್ವಾತಂತ್ರ್ಯ ದೊರಕಿದೆ ಎಂದರ್ಥ. ನಾವು ರಾಜಕೀಯ ಸ್ವಾತಂತ್ರ್ಯವನ್ನು ಈಗ ಪಡೆದುಕೊಂಡಿದ್ದೇವೆ ಎಂದು ತಿಳಿಸಿದರು.

ದೇಶ ವಿಭಜನೆಯ ಸಂದರ್ಭವನ್ನು ನೆನೆದ ಅವರು, “ಪಾಕಿಸ್ತಾನದ ವ್ಯಾಪ್ತಿಗೆ ಸೇರಲ್ಪಟ್ಟ ಸ್ವಚ್ಛತಾ ಕರ್ಮಿಗಳನ್ನು ಇಲ್ಲಿಗೆ ಕರೆಸಿಕೊಳ್ಳಲು ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರಧಾನಿಗೆ ಪತ್ರವನ್ನು ಬರೆದಿದ್ದರು. ಆದರೆ ಪಾಕಿಸ್ತಾನದವರು ಸ್ವಚ್ಛತಾಕರ್ಮಿಗಳನ್ನು ಇಲ್ಲಿಗೆ ಕಳುಹಿಸಲು ಸಿದ್ಧವಿರಲಿಲ್ಲ. ಆ ಜನರ ಮೇಲಿನ ಪ್ರೀತಿಯ ಕಾರಣಕ್ಕಾಗಿ ಅಲ್ಲ. ಕಸ ಬಾಚುವ, ಕಕ್ಕಸ್ಸು ತೊಳೆಯುವ ಕೆಲಸವನ್ನು ಮಾಡಲು ಯಾರೂ ಸಿದ್ಧರಿರಲಿಲ್ಲ. ಹೀಗಾಗಿ ಕಳುಹಿಸಲು ಒಪ್ಪಲಿಲ್ಲ. ಆದರೆ ಸ್ವಚ್ಛತಾಕರ್ಮಿಗಳು ಭಾರತಕ್ಕೆ ವಾಪಸ್‌ ಹೋಗಲು ಬಯಸಿದ್ದರಿಂದ ಅವರನ್ನು ಕರೆಸಿಕೊಳ್ಳಲೇಬೇಕೆಂದು ಬಾಬಾ ಸಾಹೇಬರು ಪ್ರಧಾನಿಯವರ ಮೇಲೆ ಒತ್ತಡ ಹಾಕಿದರು” ಎಂದು ವಿವರಿಸಿದರು.

ಕ್ರಾಂತಿಕಾರಿ ಹೋರಾಟಗಾರ ಭಗತ್‌ಸಿಂಗ್‌ ಮತ್ತು ಮಹಾಭಾರತದ ಅಭಿಮನ್ಯುವಿನ ಸ್ಥಿತಿಯನ್ನು ಹೋಲಿಕೆ ಮಾಡಿದ ಅವರು, “ಮಹಾಭಾರತದಲ್ಲಿ ಚಕ್ರವ್ಯೂಹ ಭೇದಿಸಿ ಹೊರಬರಲಾಗದ ಸ್ಥಿತಿಯಲ್ಲಿ ಅಭಿಮನ್ಯು ಸಂಕಟಪಟ್ಟ. ಎಲ್ಲ ಹಿರಿಯರು ನೋಡುತ್ತಾ ಸುಮ್ಮನಿದ್ದರು. ಪ್ರಯತ್ನಪಟ್ಟಿದ್ದರೆ ಅಭಿಮನ್ಯುವನ್ನು ಕಾಪಾಡಬಹುದಿತ್ತು. ಭಗತ್‌ಸಿಂಗ್ ಕಥೆಯೂ ಹೀಗೆ ಆಯಿತು. ಭಗತ್‌ಸಿಂಗ್ ಜೀವನದ ಕುರಿತು ಪ್ರತಿಸಲ ಓದುವಾಗಲೂ ಹೊಟ್ಟೆಯಲ್ಲಿ ಕಲಸಿದಂತಾಗುತ್ತದೆ. ಚಿಕ್ಕ ವಯಸ್ಸಲ್ಲಿ ತೀವ್ರ ಹೋರಾಟ ನಡೆಸಿದ. ಶಿಕ್ಷೆಗೊಳಪಟ್ಟ. ದೊಡ್ಡ ದೊಡ್ಡ ನಾಯಕರಿದ್ದರು. ಆ ಮಗುವನ್ನು ಬಿಡಿಸಲು ಅವರೇಕೆ ಪ್ರಯತ್ನ ಮಾಡಲಿಲ್ಲ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ” ಎಂದು ವಿವಾದಿಸಿದರು.

ಬ್ರಿಟಿಷರ ವಿರುದ್ಧ ಮಹಿಳೆಯರು ಹೋರಾಡಿದ್ದನ್ನು ಮೆಲುಕು ಹಾಕಿದ ಅವರು, “ಒಮ್ಮೆ ಪೊಲೀಸರು ದಿಢೀರನೆ ದಾಳಿ ಮಾಡಿದ್ದರು. ತಕ್ಷಣ ಅಲ್ಲಿದ್ದ ಕರಪತ್ರಗಳನ್ನು ತಮ್ಮ ಕೆಳಗೆ ಹಾಕಿ ಮಹಿಳೆಯೊಬ್ಬರು ಕುಳಿತುಕೊಳ್ಳುತ್ತಾಳೆ. ಎದ್ದೇಳುವಂತೆ ಪೊಲೀಸರು ಸೂಚಿಸಿದಾಗ ಆ ಮಹಿಳೆ- ನಾನು ಮುಟ್ಟಾಗಿದ್ದೇನೆ. ನಾನು ಏಳಲ್ಲ- ಎಂದು ತಿರುಗೇಟು ನೀಡುತ್ತಾಳೆ. ಪೊಲೀಸರು ಮರುಮಾತನಾಡದೆ ವಾಪಸ್‌ ಹೋಗುತ್ತಾರೆ. ಹೀಗೆ ಸ್ವಾತಂತ್ರ್ಯ ಹೋರಾಟದಲ್ಲಿ ಅಜ್ಞಾತ ಮಹಿಳೆಯರು ಬಹುದೊಡ್ಡ ಪಾತ್ರವಹಿಸಿದ್ದಾರೆ” ಎಂದರು.

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸ್ವಾತಂತ್ರ್ಯ ಹೋರಾಟ ನಡೆಸಿದವರ ಸ್ಮರಣೆಗಾಗಿ ಹದಿನೈದು ದಿನಗಳ ಕಾಲ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮೊನ್ನೆ ನೀವು ಮಾಡಿದ ಹೋರಾಟ ಅವಿಸ್ಮರಣೀಯ. ಪಟ್ಟು ಬದಲಿಸಿದೆ ಕೂತಿದ್ದೀರಲ್ಲ, ಅದನ್ನು ಎಂದಿಗೂ ಮರೆಯಲಾಗದು ಎಂದು ಹೊಗಳಿದರು.

ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಕ್ಲಿಫ್ಟನ್‌ ರಸಾರಿಯೋ ಮಾತನಾಡಿ, “ಪೌರಕಾರ್ಮಿಕರೂ ಸ್ವಾತಂತ್ರಕ್ಕಾಗಿ ಹೋರಾಡಿದ್ದಾರೆ. ದುಡಿಯುವ ವರ್ಗದ ಹೋರಾಟದಿಂದ ಸ್ವಾತಂತ್ರ್ಯ ಬಂತು ಎಂಬುದನ್ನು ನಾವು ಮರೆಯಬಾರದು” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟ ಕೇವಲ ಬ್ರಿಟಿಷರನ್ನು ಓಡಿಸುವುದಕ್ಕಾಗಿ ಅಲ್ಲ. ಎರಡು ತೆರನಾದ ಶತ್ರುಗಳನ್ನು ಸೋಲಿಸಬೇಕು ಎಂದಿದ್ದರು ಅಂಬೇಡ್ಕರ್‌. ಆ ಎರಡು ಶತ್ರುಗಳೆಂದರೆ ಬಂಡವಾಳಶಾಹಿಗಳು ಮತ್ತು ಬ್ರಾಹ್ಮಣ್ಯ ಎಂದು ಎಚ್ಚರಿಸಿದ್ದರು. ಆ ಮಾತು ಇಂದಿಗೂ ನಿಜವಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಪೌರಕಾರ್ಮಿಕರ ಕಾಯಮಾತಿಗೆ ತೊಡಕಾಗಿರುವ ಬೆಂಗಳೂರಿನ ಕಸದ ಮಾಫಿಯಾ ಮತ್ತು ಕಾಂಟ್ರಾಕ್ಟರ್‌ಗಳು

ಸ್ವಾತಂತ್ರ್ಯವೆಂಬುದು ಕೂಲಿಕಾರ್ಮಿಕರ ಕೈಲಿ, ರೈತರ ಕೈಲಿ, ಆದಿವಾಸಿಗಳ ಕೈಲಿ ಇರಬೇಕು ಎಂದಿದ್ದರು ಭಗತ್‌ಸಿಂಗ್‌. ಬಾಬಾ ಸಾಹೇಬ್‌ ಮತ್ತು ಭಗತ್‌ಸಿಂಗ್ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ಬ್ರಿಟಿಷರು ಹೋದ ಮೇಲೆ ಈ ದೇಶ ಹೇಗಿರಬೇಕು ಎಂದು ಈ ಇರು ಕನಸು ಕಂಡಿದ್ದರು ಎಂದು ವಿವರಿಸಿದರು.

ರೈತ ಹೋರಾಟಗಾರ್ತಿ ಎನ್.ಗಾಯತ್ರಿ ಮಾತನಾಡಿ, “ಸ್ವಾತಂತ್ರ್ಯ ಹೋರಾಟ ಎಂದ ತಕ್ಷಣ ತ್ಯಾಗ ಬಲಿದಾನ ನೆನಪಾಗುತ್ತದೆ. ತ್ಯಾಗ, ಬಲಿದಾನ ಎಂದಾಗ ನೆನಪಿಗೆ ಬರುವುದೇ ಪೌರಕಾರ್ಮಿಕರು. ಕಸಕ್ಕೆ ಮೋಕ್ಷವನ್ನು ಕೊಡುತ್ತಿರುವ ನಿಮ್ಮ ತ್ಯಾಗ, ಬಲಿದಾನ ಸ್ವಾತಂತ್ರ್ಯ ಪ್ರತೀಕ” ಎಂದು ಬಣ್ಣಿಸಿದರು.

ಗರ್ಮೆಂಟ್ ನೌಕರರ ಸಂಘ ಮುಖಂಡರಾದ ಪ್ರತಿಭಾ, ಗಮನ ಮಹಿಳಾ ಸಂಘದ ಮಧು ಭೂಷಣ, ಚಿಂತಕ ಹುಲಿಕುಂಟೆ ಮೂರ್ತಿ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಅಶ್ವಿನಿ ಸೇರಿದಂತೆ ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...