Homeಕರ್ನಾಟಕಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

ಈ ವಿಶಿಷ್ಟ ಕಾರ್ಯಕ್ರಮ ಸ್ವಾತಂತ್ರ್ಯ ದಿನಾಚರಣೆಯವರೆಗೆ ನಡೆಯಲಿದ್ದು, ಪೌರಕಾರ್ಮಿಕರ ಹಕ್ಕುಗಳ ಹೋರಾಟಗಾರರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ವಿವಿಧ ವಾರ್ಡ್‌ಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಹೋರಾಟಗಾರ್ತಿ ದು.ಸರಸ್ವತಿ, “ಆರ್ಥಿಕವಾಗಿ ಸಬಲರಾಗಬೇಕು, ಘನತೆಯಿಂದ ಬದುಕುವ ದಿನ ಬರಬೇಕೆಂದು ಇಂದಿಗೂ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟವು ಸ್ವಾತಂತ್ರ್ಯ ಚಳವಳಿಯ ಮುಂದುವರಿದ ಭಾಗವೇ ಆಗಿದೆ” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶ ಎಂದರೆ ದೇಶದ ಒಳಗೆ ಇರುವ ಜನರೆಂದು ಅರ್ಥ. ಈ ಜನರೆಲ್ಲರೂ ನೆಮ್ಮದಿಯಾಗಿ ಮನುಷ್ಯರ ರೀತಿ ಬದುಕಲು ಸಾಧ್ಯವಾದಾಗ ಮಾತ್ರ ಎಲ್ಲರಿಗೂ ಸ್ವಾತಂತ್ರ್ಯ ದೊರಕಿದೆ ಎಂದರ್ಥ. ನಾವು ರಾಜಕೀಯ ಸ್ವಾತಂತ್ರ್ಯವನ್ನು ಈಗ ಪಡೆದುಕೊಂಡಿದ್ದೇವೆ ಎಂದು ತಿಳಿಸಿದರು.

ದೇಶ ವಿಭಜನೆಯ ಸಂದರ್ಭವನ್ನು ನೆನೆದ ಅವರು, “ಪಾಕಿಸ್ತಾನದ ವ್ಯಾಪ್ತಿಗೆ ಸೇರಲ್ಪಟ್ಟ ಸ್ವಚ್ಛತಾ ಕರ್ಮಿಗಳನ್ನು ಇಲ್ಲಿಗೆ ಕರೆಸಿಕೊಳ್ಳಲು ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರಧಾನಿಗೆ ಪತ್ರವನ್ನು ಬರೆದಿದ್ದರು. ಆದರೆ ಪಾಕಿಸ್ತಾನದವರು ಸ್ವಚ್ಛತಾಕರ್ಮಿಗಳನ್ನು ಇಲ್ಲಿಗೆ ಕಳುಹಿಸಲು ಸಿದ್ಧವಿರಲಿಲ್ಲ. ಆ ಜನರ ಮೇಲಿನ ಪ್ರೀತಿಯ ಕಾರಣಕ್ಕಾಗಿ ಅಲ್ಲ. ಕಸ ಬಾಚುವ, ಕಕ್ಕಸ್ಸು ತೊಳೆಯುವ ಕೆಲಸವನ್ನು ಮಾಡಲು ಯಾರೂ ಸಿದ್ಧರಿರಲಿಲ್ಲ. ಹೀಗಾಗಿ ಕಳುಹಿಸಲು ಒಪ್ಪಲಿಲ್ಲ. ಆದರೆ ಸ್ವಚ್ಛತಾಕರ್ಮಿಗಳು ಭಾರತಕ್ಕೆ ವಾಪಸ್‌ ಹೋಗಲು ಬಯಸಿದ್ದರಿಂದ ಅವರನ್ನು ಕರೆಸಿಕೊಳ್ಳಲೇಬೇಕೆಂದು ಬಾಬಾ ಸಾಹೇಬರು ಪ್ರಧಾನಿಯವರ ಮೇಲೆ ಒತ್ತಡ ಹಾಕಿದರು” ಎಂದು ವಿವರಿಸಿದರು.

ಕ್ರಾಂತಿಕಾರಿ ಹೋರಾಟಗಾರ ಭಗತ್‌ಸಿಂಗ್‌ ಮತ್ತು ಮಹಾಭಾರತದ ಅಭಿಮನ್ಯುವಿನ ಸ್ಥಿತಿಯನ್ನು ಹೋಲಿಕೆ ಮಾಡಿದ ಅವರು, “ಮಹಾಭಾರತದಲ್ಲಿ ಚಕ್ರವ್ಯೂಹ ಭೇದಿಸಿ ಹೊರಬರಲಾಗದ ಸ್ಥಿತಿಯಲ್ಲಿ ಅಭಿಮನ್ಯು ಸಂಕಟಪಟ್ಟ. ಎಲ್ಲ ಹಿರಿಯರು ನೋಡುತ್ತಾ ಸುಮ್ಮನಿದ್ದರು. ಪ್ರಯತ್ನಪಟ್ಟಿದ್ದರೆ ಅಭಿಮನ್ಯುವನ್ನು ಕಾಪಾಡಬಹುದಿತ್ತು. ಭಗತ್‌ಸಿಂಗ್ ಕಥೆಯೂ ಹೀಗೆ ಆಯಿತು. ಭಗತ್‌ಸಿಂಗ್ ಜೀವನದ ಕುರಿತು ಪ್ರತಿಸಲ ಓದುವಾಗಲೂ ಹೊಟ್ಟೆಯಲ್ಲಿ ಕಲಸಿದಂತಾಗುತ್ತದೆ. ಚಿಕ್ಕ ವಯಸ್ಸಲ್ಲಿ ತೀವ್ರ ಹೋರಾಟ ನಡೆಸಿದ. ಶಿಕ್ಷೆಗೊಳಪಟ್ಟ. ದೊಡ್ಡ ದೊಡ್ಡ ನಾಯಕರಿದ್ದರು. ಆ ಮಗುವನ್ನು ಬಿಡಿಸಲು ಅವರೇಕೆ ಪ್ರಯತ್ನ ಮಾಡಲಿಲ್ಲ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ” ಎಂದು ವಿವಾದಿಸಿದರು.

ಬ್ರಿಟಿಷರ ವಿರುದ್ಧ ಮಹಿಳೆಯರು ಹೋರಾಡಿದ್ದನ್ನು ಮೆಲುಕು ಹಾಕಿದ ಅವರು, “ಒಮ್ಮೆ ಪೊಲೀಸರು ದಿಢೀರನೆ ದಾಳಿ ಮಾಡಿದ್ದರು. ತಕ್ಷಣ ಅಲ್ಲಿದ್ದ ಕರಪತ್ರಗಳನ್ನು ತಮ್ಮ ಕೆಳಗೆ ಹಾಕಿ ಮಹಿಳೆಯೊಬ್ಬರು ಕುಳಿತುಕೊಳ್ಳುತ್ತಾಳೆ. ಎದ್ದೇಳುವಂತೆ ಪೊಲೀಸರು ಸೂಚಿಸಿದಾಗ ಆ ಮಹಿಳೆ- ನಾನು ಮುಟ್ಟಾಗಿದ್ದೇನೆ. ನಾನು ಏಳಲ್ಲ- ಎಂದು ತಿರುಗೇಟು ನೀಡುತ್ತಾಳೆ. ಪೊಲೀಸರು ಮರುಮಾತನಾಡದೆ ವಾಪಸ್‌ ಹೋಗುತ್ತಾರೆ. ಹೀಗೆ ಸ್ವಾತಂತ್ರ್ಯ ಹೋರಾಟದಲ್ಲಿ ಅಜ್ಞಾತ ಮಹಿಳೆಯರು ಬಹುದೊಡ್ಡ ಪಾತ್ರವಹಿಸಿದ್ದಾರೆ” ಎಂದರು.

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸ್ವಾತಂತ್ರ್ಯ ಹೋರಾಟ ನಡೆಸಿದವರ ಸ್ಮರಣೆಗಾಗಿ ಹದಿನೈದು ದಿನಗಳ ಕಾಲ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮೊನ್ನೆ ನೀವು ಮಾಡಿದ ಹೋರಾಟ ಅವಿಸ್ಮರಣೀಯ. ಪಟ್ಟು ಬದಲಿಸಿದೆ ಕೂತಿದ್ದೀರಲ್ಲ, ಅದನ್ನು ಎಂದಿಗೂ ಮರೆಯಲಾಗದು ಎಂದು ಹೊಗಳಿದರು.

ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಕ್ಲಿಫ್ಟನ್‌ ರಸಾರಿಯೋ ಮಾತನಾಡಿ, “ಪೌರಕಾರ್ಮಿಕರೂ ಸ್ವಾತಂತ್ರಕ್ಕಾಗಿ ಹೋರಾಡಿದ್ದಾರೆ. ದುಡಿಯುವ ವರ್ಗದ ಹೋರಾಟದಿಂದ ಸ್ವಾತಂತ್ರ್ಯ ಬಂತು ಎಂಬುದನ್ನು ನಾವು ಮರೆಯಬಾರದು” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟ ಕೇವಲ ಬ್ರಿಟಿಷರನ್ನು ಓಡಿಸುವುದಕ್ಕಾಗಿ ಅಲ್ಲ. ಎರಡು ತೆರನಾದ ಶತ್ರುಗಳನ್ನು ಸೋಲಿಸಬೇಕು ಎಂದಿದ್ದರು ಅಂಬೇಡ್ಕರ್‌. ಆ ಎರಡು ಶತ್ರುಗಳೆಂದರೆ ಬಂಡವಾಳಶಾಹಿಗಳು ಮತ್ತು ಬ್ರಾಹ್ಮಣ್ಯ ಎಂದು ಎಚ್ಚರಿಸಿದ್ದರು. ಆ ಮಾತು ಇಂದಿಗೂ ನಿಜವಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಪೌರಕಾರ್ಮಿಕರ ಕಾಯಮಾತಿಗೆ ತೊಡಕಾಗಿರುವ ಬೆಂಗಳೂರಿನ ಕಸದ ಮಾಫಿಯಾ ಮತ್ತು ಕಾಂಟ್ರಾಕ್ಟರ್‌ಗಳು

ಸ್ವಾತಂತ್ರ್ಯವೆಂಬುದು ಕೂಲಿಕಾರ್ಮಿಕರ ಕೈಲಿ, ರೈತರ ಕೈಲಿ, ಆದಿವಾಸಿಗಳ ಕೈಲಿ ಇರಬೇಕು ಎಂದಿದ್ದರು ಭಗತ್‌ಸಿಂಗ್‌. ಬಾಬಾ ಸಾಹೇಬ್‌ ಮತ್ತು ಭಗತ್‌ಸಿಂಗ್ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ಬ್ರಿಟಿಷರು ಹೋದ ಮೇಲೆ ಈ ದೇಶ ಹೇಗಿರಬೇಕು ಎಂದು ಈ ಇರು ಕನಸು ಕಂಡಿದ್ದರು ಎಂದು ವಿವರಿಸಿದರು.

ರೈತ ಹೋರಾಟಗಾರ್ತಿ ಎನ್.ಗಾಯತ್ರಿ ಮಾತನಾಡಿ, “ಸ್ವಾತಂತ್ರ್ಯ ಹೋರಾಟ ಎಂದ ತಕ್ಷಣ ತ್ಯಾಗ ಬಲಿದಾನ ನೆನಪಾಗುತ್ತದೆ. ತ್ಯಾಗ, ಬಲಿದಾನ ಎಂದಾಗ ನೆನಪಿಗೆ ಬರುವುದೇ ಪೌರಕಾರ್ಮಿಕರು. ಕಸಕ್ಕೆ ಮೋಕ್ಷವನ್ನು ಕೊಡುತ್ತಿರುವ ನಿಮ್ಮ ತ್ಯಾಗ, ಬಲಿದಾನ ಸ್ವಾತಂತ್ರ್ಯ ಪ್ರತೀಕ” ಎಂದು ಬಣ್ಣಿಸಿದರು.

ಗರ್ಮೆಂಟ್ ನೌಕರರ ಸಂಘ ಮುಖಂಡರಾದ ಪ್ರತಿಭಾ, ಗಮನ ಮಹಿಳಾ ಸಂಘದ ಮಧು ಭೂಷಣ, ಚಿಂತಕ ಹುಲಿಕುಂಟೆ ಮೂರ್ತಿ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಅಶ್ವಿನಿ ಸೇರಿದಂತೆ ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...