Homeಕರ್ನಾಟಕಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಭಗತ್‌ಸಿಂಗ್ ಬದುಕು ಮಹಾಭಾರತದ ಅಭಿಮನ್ಯುವನ್ನು ನೆನಪಿಸುತ್ತದೆ: ದು.ಸರಸ್ವತಿ

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಪೌರಕಾರ್ಮಿಕರ ಸಂಘದ ವತಿಯಿಂದ ಚಾಲನೆ ನೀಡಲಾಗಿರುವ ಸ್ವಾತಂತ್ರ್ಯ- 75 ಕಾರ್ಯಕ್ರಮವನ್ನು ಇಂದು ರಾಮಮೂರ್ತಿನಗರದಲ್ಲಿ ಆಯೋಜಿಸಲಾಗಿತ್ತು.

ಈ ವಿಶಿಷ್ಟ ಕಾರ್ಯಕ್ರಮ ಸ್ವಾತಂತ್ರ್ಯ ದಿನಾಚರಣೆಯವರೆಗೆ ನಡೆಯಲಿದ್ದು, ಪೌರಕಾರ್ಮಿಕರ ಹಕ್ಕುಗಳ ಹೋರಾಟಗಾರರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ವಿವಿಧ ವಾರ್ಡ್‌ಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಹೋರಾಟಗಾರ್ತಿ ದು.ಸರಸ್ವತಿ, “ಆರ್ಥಿಕವಾಗಿ ಸಬಲರಾಗಬೇಕು, ಘನತೆಯಿಂದ ಬದುಕುವ ದಿನ ಬರಬೇಕೆಂದು ಇಂದಿಗೂ ಹೋರಾಟ ಮಾಡುತ್ತಿದ್ದೇವೆ. ಈ ಹೋರಾಟವು ಸ್ವಾತಂತ್ರ್ಯ ಚಳವಳಿಯ ಮುಂದುವರಿದ ಭಾಗವೇ ಆಗಿದೆ” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶ ಎಂದರೆ ದೇಶದ ಒಳಗೆ ಇರುವ ಜನರೆಂದು ಅರ್ಥ. ಈ ಜನರೆಲ್ಲರೂ ನೆಮ್ಮದಿಯಾಗಿ ಮನುಷ್ಯರ ರೀತಿ ಬದುಕಲು ಸಾಧ್ಯವಾದಾಗ ಮಾತ್ರ ಎಲ್ಲರಿಗೂ ಸ್ವಾತಂತ್ರ್ಯ ದೊರಕಿದೆ ಎಂದರ್ಥ. ನಾವು ರಾಜಕೀಯ ಸ್ವಾತಂತ್ರ್ಯವನ್ನು ಈಗ ಪಡೆದುಕೊಂಡಿದ್ದೇವೆ ಎಂದು ತಿಳಿಸಿದರು.

ದೇಶ ವಿಭಜನೆಯ ಸಂದರ್ಭವನ್ನು ನೆನೆದ ಅವರು, “ಪಾಕಿಸ್ತಾನದ ವ್ಯಾಪ್ತಿಗೆ ಸೇರಲ್ಪಟ್ಟ ಸ್ವಚ್ಛತಾ ಕರ್ಮಿಗಳನ್ನು ಇಲ್ಲಿಗೆ ಕರೆಸಿಕೊಳ್ಳಲು ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರಧಾನಿಗೆ ಪತ್ರವನ್ನು ಬರೆದಿದ್ದರು. ಆದರೆ ಪಾಕಿಸ್ತಾನದವರು ಸ್ವಚ್ಛತಾಕರ್ಮಿಗಳನ್ನು ಇಲ್ಲಿಗೆ ಕಳುಹಿಸಲು ಸಿದ್ಧವಿರಲಿಲ್ಲ. ಆ ಜನರ ಮೇಲಿನ ಪ್ರೀತಿಯ ಕಾರಣಕ್ಕಾಗಿ ಅಲ್ಲ. ಕಸ ಬಾಚುವ, ಕಕ್ಕಸ್ಸು ತೊಳೆಯುವ ಕೆಲಸವನ್ನು ಮಾಡಲು ಯಾರೂ ಸಿದ್ಧರಿರಲಿಲ್ಲ. ಹೀಗಾಗಿ ಕಳುಹಿಸಲು ಒಪ್ಪಲಿಲ್ಲ. ಆದರೆ ಸ್ವಚ್ಛತಾಕರ್ಮಿಗಳು ಭಾರತಕ್ಕೆ ವಾಪಸ್‌ ಹೋಗಲು ಬಯಸಿದ್ದರಿಂದ ಅವರನ್ನು ಕರೆಸಿಕೊಳ್ಳಲೇಬೇಕೆಂದು ಬಾಬಾ ಸಾಹೇಬರು ಪ್ರಧಾನಿಯವರ ಮೇಲೆ ಒತ್ತಡ ಹಾಕಿದರು” ಎಂದು ವಿವರಿಸಿದರು.

ಕ್ರಾಂತಿಕಾರಿ ಹೋರಾಟಗಾರ ಭಗತ್‌ಸಿಂಗ್‌ ಮತ್ತು ಮಹಾಭಾರತದ ಅಭಿಮನ್ಯುವಿನ ಸ್ಥಿತಿಯನ್ನು ಹೋಲಿಕೆ ಮಾಡಿದ ಅವರು, “ಮಹಾಭಾರತದಲ್ಲಿ ಚಕ್ರವ್ಯೂಹ ಭೇದಿಸಿ ಹೊರಬರಲಾಗದ ಸ್ಥಿತಿಯಲ್ಲಿ ಅಭಿಮನ್ಯು ಸಂಕಟಪಟ್ಟ. ಎಲ್ಲ ಹಿರಿಯರು ನೋಡುತ್ತಾ ಸುಮ್ಮನಿದ್ದರು. ಪ್ರಯತ್ನಪಟ್ಟಿದ್ದರೆ ಅಭಿಮನ್ಯುವನ್ನು ಕಾಪಾಡಬಹುದಿತ್ತು. ಭಗತ್‌ಸಿಂಗ್ ಕಥೆಯೂ ಹೀಗೆ ಆಯಿತು. ಭಗತ್‌ಸಿಂಗ್ ಜೀವನದ ಕುರಿತು ಪ್ರತಿಸಲ ಓದುವಾಗಲೂ ಹೊಟ್ಟೆಯಲ್ಲಿ ಕಲಸಿದಂತಾಗುತ್ತದೆ. ಚಿಕ್ಕ ವಯಸ್ಸಲ್ಲಿ ತೀವ್ರ ಹೋರಾಟ ನಡೆಸಿದ. ಶಿಕ್ಷೆಗೊಳಪಟ್ಟ. ದೊಡ್ಡ ದೊಡ್ಡ ನಾಯಕರಿದ್ದರು. ಆ ಮಗುವನ್ನು ಬಿಡಿಸಲು ಅವರೇಕೆ ಪ್ರಯತ್ನ ಮಾಡಲಿಲ್ಲ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ” ಎಂದು ವಿವಾದಿಸಿದರು.

ಬ್ರಿಟಿಷರ ವಿರುದ್ಧ ಮಹಿಳೆಯರು ಹೋರಾಡಿದ್ದನ್ನು ಮೆಲುಕು ಹಾಕಿದ ಅವರು, “ಒಮ್ಮೆ ಪೊಲೀಸರು ದಿಢೀರನೆ ದಾಳಿ ಮಾಡಿದ್ದರು. ತಕ್ಷಣ ಅಲ್ಲಿದ್ದ ಕರಪತ್ರಗಳನ್ನು ತಮ್ಮ ಕೆಳಗೆ ಹಾಕಿ ಮಹಿಳೆಯೊಬ್ಬರು ಕುಳಿತುಕೊಳ್ಳುತ್ತಾಳೆ. ಎದ್ದೇಳುವಂತೆ ಪೊಲೀಸರು ಸೂಚಿಸಿದಾಗ ಆ ಮಹಿಳೆ- ನಾನು ಮುಟ್ಟಾಗಿದ್ದೇನೆ. ನಾನು ಏಳಲ್ಲ- ಎಂದು ತಿರುಗೇಟು ನೀಡುತ್ತಾಳೆ. ಪೊಲೀಸರು ಮರುಮಾತನಾಡದೆ ವಾಪಸ್‌ ಹೋಗುತ್ತಾರೆ. ಹೀಗೆ ಸ್ವಾತಂತ್ರ್ಯ ಹೋರಾಟದಲ್ಲಿ ಅಜ್ಞಾತ ಮಹಿಳೆಯರು ಬಹುದೊಡ್ಡ ಪಾತ್ರವಹಿಸಿದ್ದಾರೆ” ಎಂದರು.

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸ್ವಾತಂತ್ರ್ಯ ಹೋರಾಟ ನಡೆಸಿದವರ ಸ್ಮರಣೆಗಾಗಿ ಹದಿನೈದು ದಿನಗಳ ಕಾಲ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮೊನ್ನೆ ನೀವು ಮಾಡಿದ ಹೋರಾಟ ಅವಿಸ್ಮರಣೀಯ. ಪಟ್ಟು ಬದಲಿಸಿದೆ ಕೂತಿದ್ದೀರಲ್ಲ, ಅದನ್ನು ಎಂದಿಗೂ ಮರೆಯಲಾಗದು ಎಂದು ಹೊಗಳಿದರು.

ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಕ್ಲಿಫ್ಟನ್‌ ರಸಾರಿಯೋ ಮಾತನಾಡಿ, “ಪೌರಕಾರ್ಮಿಕರೂ ಸ್ವಾತಂತ್ರಕ್ಕಾಗಿ ಹೋರಾಡಿದ್ದಾರೆ. ದುಡಿಯುವ ವರ್ಗದ ಹೋರಾಟದಿಂದ ಸ್ವಾತಂತ್ರ್ಯ ಬಂತು ಎಂಬುದನ್ನು ನಾವು ಮರೆಯಬಾರದು” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟ ಕೇವಲ ಬ್ರಿಟಿಷರನ್ನು ಓಡಿಸುವುದಕ್ಕಾಗಿ ಅಲ್ಲ. ಎರಡು ತೆರನಾದ ಶತ್ರುಗಳನ್ನು ಸೋಲಿಸಬೇಕು ಎಂದಿದ್ದರು ಅಂಬೇಡ್ಕರ್‌. ಆ ಎರಡು ಶತ್ರುಗಳೆಂದರೆ ಬಂಡವಾಳಶಾಹಿಗಳು ಮತ್ತು ಬ್ರಾಹ್ಮಣ್ಯ ಎಂದು ಎಚ್ಚರಿಸಿದ್ದರು. ಆ ಮಾತು ಇಂದಿಗೂ ನಿಜವಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಪೌರಕಾರ್ಮಿಕರ ಕಾಯಮಾತಿಗೆ ತೊಡಕಾಗಿರುವ ಬೆಂಗಳೂರಿನ ಕಸದ ಮಾಫಿಯಾ ಮತ್ತು ಕಾಂಟ್ರಾಕ್ಟರ್‌ಗಳು

ಸ್ವಾತಂತ್ರ್ಯವೆಂಬುದು ಕೂಲಿಕಾರ್ಮಿಕರ ಕೈಲಿ, ರೈತರ ಕೈಲಿ, ಆದಿವಾಸಿಗಳ ಕೈಲಿ ಇರಬೇಕು ಎಂದಿದ್ದರು ಭಗತ್‌ಸಿಂಗ್‌. ಬಾಬಾ ಸಾಹೇಬ್‌ ಮತ್ತು ಭಗತ್‌ಸಿಂಗ್ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ಬ್ರಿಟಿಷರು ಹೋದ ಮೇಲೆ ಈ ದೇಶ ಹೇಗಿರಬೇಕು ಎಂದು ಈ ಇರು ಕನಸು ಕಂಡಿದ್ದರು ಎಂದು ವಿವರಿಸಿದರು.

ರೈತ ಹೋರಾಟಗಾರ್ತಿ ಎನ್.ಗಾಯತ್ರಿ ಮಾತನಾಡಿ, “ಸ್ವಾತಂತ್ರ್ಯ ಹೋರಾಟ ಎಂದ ತಕ್ಷಣ ತ್ಯಾಗ ಬಲಿದಾನ ನೆನಪಾಗುತ್ತದೆ. ತ್ಯಾಗ, ಬಲಿದಾನ ಎಂದಾಗ ನೆನಪಿಗೆ ಬರುವುದೇ ಪೌರಕಾರ್ಮಿಕರು. ಕಸಕ್ಕೆ ಮೋಕ್ಷವನ್ನು ಕೊಡುತ್ತಿರುವ ನಿಮ್ಮ ತ್ಯಾಗ, ಬಲಿದಾನ ಸ್ವಾತಂತ್ರ್ಯ ಪ್ರತೀಕ” ಎಂದು ಬಣ್ಣಿಸಿದರು.

ಗರ್ಮೆಂಟ್ ನೌಕರರ ಸಂಘ ಮುಖಂಡರಾದ ಪ್ರತಿಭಾ, ಗಮನ ಮಹಿಳಾ ಸಂಘದ ಮಧು ಭೂಷಣ, ಚಿಂತಕ ಹುಲಿಕುಂಟೆ ಮೂರ್ತಿ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಅಶ್ವಿನಿ ಸೇರಿದಂತೆ ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...