Homeಮುಖಪುಟರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

ರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ, ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಈ ಯುವಜನರನ್ನು ಕಾಡುತ್ತಿವೆ.

- Advertisement -
- Advertisement -

‘ಯುದ್ಧಭೂಮಿಯಲ್ಲಿ ಗುಂಡು ಬೀಳುತ್ತದೆ ಎಂದು ತಿಳಿದಿದೆ. ಆದರೂ ನಾನು ಹಿಂದೆ ಸರಿಯುವುದಿಲ್ಲ….’ ಈ ಬರಹವಿದ್ದ ಪ್ಲಕಾರ್ಡ್ ಹಿಡಿದಿದ್ದ ಪಂಜಾಬಿ ಯುವಕನನ್ನು ನೀವು ಸೋಶಿಯಲ್ ಮೀಡಿಯಾಗಳಲ್ಲಿ ನೋಡಿರಬಹುದು. ಇದು ಕೇವಲ ಆ ಯುವಕನೊಬ್ಬನ ಮಾತಲ್ಲ. ಕೃಷಿ ಕಾಯ್ದೆಗಳ ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾವಿರಾರು ಯುವಜನರು ಸಹ ಇದೇ ಕಿಚ್ಚು, ಹೋರಾಟದ ಉತ್ಸಾಹವನ್ನು ಹೊಂದಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನೆರೆದಿದ್ದಾರೆ. ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರು, ವಯಸ್ಸಾದ ರೈತರು ಹಾಗೂ ಯುವಜನರೂ ಇದ್ದರೆ. ಆದರೆ ಪಂಜಾಬ್-ಹರಿಯಾಣ ಭಾಗದ ಸಿಂಘು ಗಡಿಯಲ್ಲಿ ಯುವಜನರ ಸಂಖ್ಯೆ ಅತಿ ಹೆಚ್ಚಿದೆ.

ಸಾವಿರಾರು ಯುವಜನರು I love Kisan, I love Kethi, No Farmer No Food…. (ರೈತರನ್ನು ಪ್ರೀತಿಸುತ್ತೇನೆ, ಕೃಷಿಯನ್ನು ಪ್ರೀತಿಸುತ್ತೇನೆ, ರೈತರಿಲ್ಲದೆ ಆಹಾರವಿಲ್ಲ) ಹೀಗೆ ವಿವಿಧ ಘೋಷಣೆಯುಳ್ಳ ಪ್ಲಕಾರ್ಡ್ ಹಿಡಿದುಕೊಂಡು ಸಿಂಘು ಗಡಿಯಲ್ಲಿ ಟ್ಯ್ರಾಕ್ಟರ್ ಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ತಿರುಗುತ್ತಲೆ ಇರುತ್ತಾರೆ. ರೈತರು ಮಲಗಿದ ಮೇಲೂ ಅಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುಲು ಈ ಯುವಕಲು ಸ್ವಯಂ ಸೇವಕರಾಗಿ ಅಲ್ಲಿ ಗಸ್ತು ತಿರುಗುತ್ತ ರಕ್ಷಣೆಯ ಜವಾಬ್ದಾರಿ ನೋಡಿಕೊಳ್ಳುತ್ತಾರೆ.

1984 ರ ಘಟನೆಯ ನಂತರ ಯಾವುದೇ ಹೋರಾಟದಲ್ಲಿ ಭಾಗವಹಿಸದೇ ಇದ್ದ ಪಂಜಾಬಿ ಯುವಜನರು ಇದೇ ಮೊದಲ ಬಾರಿಗೆ ಬೃಹತ್ ಸಂಖ್ಯೆಯಲ್ಲಿ ಈ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಮಾಧ್ಯಮಗಳು ಬಿತ್ತರಿಸಿದಂತೆ ಮಾದಕ ವ್ಯಸನಕ್ಕೆ ಯುವಜನರು ಒಳಗಾಗಿದ್ದಾರೆ ಎಂಬ ಮಾತನ್ನು ಸುಳ್ಳು ಮಾಡಿರುವ ಈ ಯುವಜನರು ಉಳಿದವರಿಗೆ ಸ್ಫೂರ್ತಿಯಾಗಿದ್ದಾರೆ‌ ಎಂದರೆ ತಪ್ಪಾಗಲಾರದು. ಉಡ್ತ ಪಂಜಾಬ್ ಬದಲಿಗೆ ಪಡ್ತ ಪಂಜಾಬ್ ಎಂದು ಬದಲಾಗಿದೆ ಎಂಬ ಪ್ಲಕಾರ್ಡ್‌ಗಳು ಎಲ್ಲೆಲ್ಲೂ ಕಾಣುತ್ತವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಪಂಜಾಬ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅರ್ಷ್‌ದೀಪ್‌‌ “ನನ್ನನ್ನು ಒಳಗೊಂಡಂತೆ ಪಂಜಾಬಿನ ಯುವ ಸಮೂಹ ಯಾವುದೇ ಹೋರಾಟದಲ್ಲಿ ಈ ಮಟ್ಟಕ್ಕೆ ತೊಡಗಿಸಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ಯುವ ಸಮೂಹ ಈ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಹೋರಾಟವಲ್ಲ ಕ್ರಾಂತಿಯೂ ಹೌದು” ಎನ್ನುತ್ತಾರೆ.

ನಾನು ಅನ್ನ ತಿನ್ನುತ್ತೇನೆ. ಹಾಗಾಗಿ ಅನ್ನ ಬೆಳೆದವರ ಪರ ಹೋರಾಟ ಮಾಡುತ್ತೇನೆ. ರೈತರಿಲ್ಲದೇ ದೇಶವಿಲ್ಲ ಹಾಗಾಗಿ ನಾನು ರೈತ ಹೋರಾಟದಲ್ಲಿ ವಾಲಂಟೀಯರ್ ಆಗಿ ಕೆಲಸ ಮಾಡಲು ಮುಂದೆ ಬಂದಿದ್ದೇನೆ ಎನ್ನುವ ಅರ್ಷ್‌ದೀಪ್, ನಾನು ಇಲ್ಲಿಗೆ ಹೋರಾಟಕ್ಕೆ ಬಂದಿರುವುದಕ್ಕೆ ನಮಗೆ ತಂದೆಗೆ ಸ್ವಲ್ಪ ಭಯವಿದೆ. ಆದರೆ ನನ್ನ ತಾಯಿ ಸಂಪೂರ್ಣ ಬೆಂಬಲ ನೀಡಿದ್ದಾರೆ ಅನ್ನುತ್ತಾರೆ.

ಶಾಂತಿಯುತವಾಗಿ ಹೋರಾಡುತ್ತಿರುವ ರೈತ ಹೋರಾಟಗಾರರನ್ನು ಖಾಲಿಸ್ತಾನಿಗಳು, ಭಯೋತ್ಪಾದಕರು ಎಂದು ಮಾಧ್ಯಮಗಳು ಮತ್ತು ಬಿಜೆಪಿಗರು ಕರೆದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಈ ಯುವಜನರನ್ನು ಕೆರಳಿಸಿದೆ. ರೈತ ಹೋರಾಟದ ವಿರುದ್ಧವಿರುವ ಮಾಧ್ಯಮಗಳನ್ನು ಗೋ ಮೀಡಿಯಾ ಎಂದು ಕರೆಯುವ ಈ ಯುವಜನರು ಯೂಟ್ಯೂಬ್, ಟ್ವಿಟ್ಟರ್, ಫೇಸ್‌ಬುಕ್‌ನಂತ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುವುದಲ್ಲದೇ ರೈತರ ಹೋರಾಟವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ.

1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ ಇಂದಿನ ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಬಹುಪಾಲು ಯುವಜನರನ್ನು ಕಾಡಿದ್ದು, ಈ ಹೋರಾಟದ ಬದ್ಧತೆಯ ಅರಿವು ಮೂಡಿಸಿದೆ ಎನ್ನಬಹುದು.‌


ಇದನ್ನೂ ಓದಿ: ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...