Homeಮುಖಪುಟರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

ರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ, ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಈ ಯುವಜನರನ್ನು ಕಾಡುತ್ತಿವೆ.

- Advertisement -
- Advertisement -

‘ಯುದ್ಧಭೂಮಿಯಲ್ಲಿ ಗುಂಡು ಬೀಳುತ್ತದೆ ಎಂದು ತಿಳಿದಿದೆ. ಆದರೂ ನಾನು ಹಿಂದೆ ಸರಿಯುವುದಿಲ್ಲ….’ ಈ ಬರಹವಿದ್ದ ಪ್ಲಕಾರ್ಡ್ ಹಿಡಿದಿದ್ದ ಪಂಜಾಬಿ ಯುವಕನನ್ನು ನೀವು ಸೋಶಿಯಲ್ ಮೀಡಿಯಾಗಳಲ್ಲಿ ನೋಡಿರಬಹುದು. ಇದು ಕೇವಲ ಆ ಯುವಕನೊಬ್ಬನ ಮಾತಲ್ಲ. ಕೃಷಿ ಕಾಯ್ದೆಗಳ ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾವಿರಾರು ಯುವಜನರು ಸಹ ಇದೇ ಕಿಚ್ಚು, ಹೋರಾಟದ ಉತ್ಸಾಹವನ್ನು ಹೊಂದಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನೆರೆದಿದ್ದಾರೆ. ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರು, ವಯಸ್ಸಾದ ರೈತರು ಹಾಗೂ ಯುವಜನರೂ ಇದ್ದರೆ. ಆದರೆ ಪಂಜಾಬ್-ಹರಿಯಾಣ ಭಾಗದ ಸಿಂಘು ಗಡಿಯಲ್ಲಿ ಯುವಜನರ ಸಂಖ್ಯೆ ಅತಿ ಹೆಚ್ಚಿದೆ.

ಸಾವಿರಾರು ಯುವಜನರು I love Kisan, I love Kethi, No Farmer No Food…. (ರೈತರನ್ನು ಪ್ರೀತಿಸುತ್ತೇನೆ, ಕೃಷಿಯನ್ನು ಪ್ರೀತಿಸುತ್ತೇನೆ, ರೈತರಿಲ್ಲದೆ ಆಹಾರವಿಲ್ಲ) ಹೀಗೆ ವಿವಿಧ ಘೋಷಣೆಯುಳ್ಳ ಪ್ಲಕಾರ್ಡ್ ಹಿಡಿದುಕೊಂಡು ಸಿಂಘು ಗಡಿಯಲ್ಲಿ ಟ್ಯ್ರಾಕ್ಟರ್ ಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ತಿರುಗುತ್ತಲೆ ಇರುತ್ತಾರೆ. ರೈತರು ಮಲಗಿದ ಮೇಲೂ ಅಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುಲು ಈ ಯುವಕಲು ಸ್ವಯಂ ಸೇವಕರಾಗಿ ಅಲ್ಲಿ ಗಸ್ತು ತಿರುಗುತ್ತ ರಕ್ಷಣೆಯ ಜವಾಬ್ದಾರಿ ನೋಡಿಕೊಳ್ಳುತ್ತಾರೆ.

1984 ರ ಘಟನೆಯ ನಂತರ ಯಾವುದೇ ಹೋರಾಟದಲ್ಲಿ ಭಾಗವಹಿಸದೇ ಇದ್ದ ಪಂಜಾಬಿ ಯುವಜನರು ಇದೇ ಮೊದಲ ಬಾರಿಗೆ ಬೃಹತ್ ಸಂಖ್ಯೆಯಲ್ಲಿ ಈ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಮಾಧ್ಯಮಗಳು ಬಿತ್ತರಿಸಿದಂತೆ ಮಾದಕ ವ್ಯಸನಕ್ಕೆ ಯುವಜನರು ಒಳಗಾಗಿದ್ದಾರೆ ಎಂಬ ಮಾತನ್ನು ಸುಳ್ಳು ಮಾಡಿರುವ ಈ ಯುವಜನರು ಉಳಿದವರಿಗೆ ಸ್ಫೂರ್ತಿಯಾಗಿದ್ದಾರೆ‌ ಎಂದರೆ ತಪ್ಪಾಗಲಾರದು. ಉಡ್ತ ಪಂಜಾಬ್ ಬದಲಿಗೆ ಪಡ್ತ ಪಂಜಾಬ್ ಎಂದು ಬದಲಾಗಿದೆ ಎಂಬ ಪ್ಲಕಾರ್ಡ್‌ಗಳು ಎಲ್ಲೆಲ್ಲೂ ಕಾಣುತ್ತವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಪಂಜಾಬ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅರ್ಷ್‌ದೀಪ್‌‌ “ನನ್ನನ್ನು ಒಳಗೊಂಡಂತೆ ಪಂಜಾಬಿನ ಯುವ ಸಮೂಹ ಯಾವುದೇ ಹೋರಾಟದಲ್ಲಿ ಈ ಮಟ್ಟಕ್ಕೆ ತೊಡಗಿಸಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ಯುವ ಸಮೂಹ ಈ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಹೋರಾಟವಲ್ಲ ಕ್ರಾಂತಿಯೂ ಹೌದು” ಎನ್ನುತ್ತಾರೆ.

ನಾನು ಅನ್ನ ತಿನ್ನುತ್ತೇನೆ. ಹಾಗಾಗಿ ಅನ್ನ ಬೆಳೆದವರ ಪರ ಹೋರಾಟ ಮಾಡುತ್ತೇನೆ. ರೈತರಿಲ್ಲದೇ ದೇಶವಿಲ್ಲ ಹಾಗಾಗಿ ನಾನು ರೈತ ಹೋರಾಟದಲ್ಲಿ ವಾಲಂಟೀಯರ್ ಆಗಿ ಕೆಲಸ ಮಾಡಲು ಮುಂದೆ ಬಂದಿದ್ದೇನೆ ಎನ್ನುವ ಅರ್ಷ್‌ದೀಪ್, ನಾನು ಇಲ್ಲಿಗೆ ಹೋರಾಟಕ್ಕೆ ಬಂದಿರುವುದಕ್ಕೆ ನಮಗೆ ತಂದೆಗೆ ಸ್ವಲ್ಪ ಭಯವಿದೆ. ಆದರೆ ನನ್ನ ತಾಯಿ ಸಂಪೂರ್ಣ ಬೆಂಬಲ ನೀಡಿದ್ದಾರೆ ಅನ್ನುತ್ತಾರೆ.

ಶಾಂತಿಯುತವಾಗಿ ಹೋರಾಡುತ್ತಿರುವ ರೈತ ಹೋರಾಟಗಾರರನ್ನು ಖಾಲಿಸ್ತಾನಿಗಳು, ಭಯೋತ್ಪಾದಕರು ಎಂದು ಮಾಧ್ಯಮಗಳು ಮತ್ತು ಬಿಜೆಪಿಗರು ಕರೆದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಈ ಯುವಜನರನ್ನು ಕೆರಳಿಸಿದೆ. ರೈತ ಹೋರಾಟದ ವಿರುದ್ಧವಿರುವ ಮಾಧ್ಯಮಗಳನ್ನು ಗೋ ಮೀಡಿಯಾ ಎಂದು ಕರೆಯುವ ಈ ಯುವಜನರು ಯೂಟ್ಯೂಬ್, ಟ್ವಿಟ್ಟರ್, ಫೇಸ್‌ಬುಕ್‌ನಂತ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುವುದಲ್ಲದೇ ರೈತರ ಹೋರಾಟವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ.

1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ ಇಂದಿನ ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಬಹುಪಾಲು ಯುವಜನರನ್ನು ಕಾಡಿದ್ದು, ಈ ಹೋರಾಟದ ಬದ್ಧತೆಯ ಅರಿವು ಮೂಡಿಸಿದೆ ಎನ್ನಬಹುದು.‌


ಇದನ್ನೂ ಓದಿ: ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...