Homeಮುಖಪುಟರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

ರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ, ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಈ ಯುವಜನರನ್ನು ಕಾಡುತ್ತಿವೆ.

- Advertisement -
- Advertisement -

‘ಯುದ್ಧಭೂಮಿಯಲ್ಲಿ ಗುಂಡು ಬೀಳುತ್ತದೆ ಎಂದು ತಿಳಿದಿದೆ. ಆದರೂ ನಾನು ಹಿಂದೆ ಸರಿಯುವುದಿಲ್ಲ….’ ಈ ಬರಹವಿದ್ದ ಪ್ಲಕಾರ್ಡ್ ಹಿಡಿದಿದ್ದ ಪಂಜಾಬಿ ಯುವಕನನ್ನು ನೀವು ಸೋಶಿಯಲ್ ಮೀಡಿಯಾಗಳಲ್ಲಿ ನೋಡಿರಬಹುದು. ಇದು ಕೇವಲ ಆ ಯುವಕನೊಬ್ಬನ ಮಾತಲ್ಲ. ಕೃಷಿ ಕಾಯ್ದೆಗಳ ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾವಿರಾರು ಯುವಜನರು ಸಹ ಇದೇ ಕಿಚ್ಚು, ಹೋರಾಟದ ಉತ್ಸಾಹವನ್ನು ಹೊಂದಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನೆರೆದಿದ್ದಾರೆ. ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರು, ವಯಸ್ಸಾದ ರೈತರು ಹಾಗೂ ಯುವಜನರೂ ಇದ್ದರೆ. ಆದರೆ ಪಂಜಾಬ್-ಹರಿಯಾಣ ಭಾಗದ ಸಿಂಘು ಗಡಿಯಲ್ಲಿ ಯುವಜನರ ಸಂಖ್ಯೆ ಅತಿ ಹೆಚ್ಚಿದೆ.

ಸಾವಿರಾರು ಯುವಜನರು I love Kisan, I love Kethi, No Farmer No Food…. (ರೈತರನ್ನು ಪ್ರೀತಿಸುತ್ತೇನೆ, ಕೃಷಿಯನ್ನು ಪ್ರೀತಿಸುತ್ತೇನೆ, ರೈತರಿಲ್ಲದೆ ಆಹಾರವಿಲ್ಲ) ಹೀಗೆ ವಿವಿಧ ಘೋಷಣೆಯುಳ್ಳ ಪ್ಲಕಾರ್ಡ್ ಹಿಡಿದುಕೊಂಡು ಸಿಂಘು ಗಡಿಯಲ್ಲಿ ಟ್ಯ್ರಾಕ್ಟರ್ ಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ತಿರುಗುತ್ತಲೆ ಇರುತ್ತಾರೆ. ರೈತರು ಮಲಗಿದ ಮೇಲೂ ಅಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುಲು ಈ ಯುವಕಲು ಸ್ವಯಂ ಸೇವಕರಾಗಿ ಅಲ್ಲಿ ಗಸ್ತು ತಿರುಗುತ್ತ ರಕ್ಷಣೆಯ ಜವಾಬ್ದಾರಿ ನೋಡಿಕೊಳ್ಳುತ್ತಾರೆ.

1984 ರ ಘಟನೆಯ ನಂತರ ಯಾವುದೇ ಹೋರಾಟದಲ್ಲಿ ಭಾಗವಹಿಸದೇ ಇದ್ದ ಪಂಜಾಬಿ ಯುವಜನರು ಇದೇ ಮೊದಲ ಬಾರಿಗೆ ಬೃಹತ್ ಸಂಖ್ಯೆಯಲ್ಲಿ ಈ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಮಾಧ್ಯಮಗಳು ಬಿತ್ತರಿಸಿದಂತೆ ಮಾದಕ ವ್ಯಸನಕ್ಕೆ ಯುವಜನರು ಒಳಗಾಗಿದ್ದಾರೆ ಎಂಬ ಮಾತನ್ನು ಸುಳ್ಳು ಮಾಡಿರುವ ಈ ಯುವಜನರು ಉಳಿದವರಿಗೆ ಸ್ಫೂರ್ತಿಯಾಗಿದ್ದಾರೆ‌ ಎಂದರೆ ತಪ್ಪಾಗಲಾರದು. ಉಡ್ತ ಪಂಜಾಬ್ ಬದಲಿಗೆ ಪಡ್ತ ಪಂಜಾಬ್ ಎಂದು ಬದಲಾಗಿದೆ ಎಂಬ ಪ್ಲಕಾರ್ಡ್‌ಗಳು ಎಲ್ಲೆಲ್ಲೂ ಕಾಣುತ್ತವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಪಂಜಾಬ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅರ್ಷ್‌ದೀಪ್‌‌ “ನನ್ನನ್ನು ಒಳಗೊಂಡಂತೆ ಪಂಜಾಬಿನ ಯುವ ಸಮೂಹ ಯಾವುದೇ ಹೋರಾಟದಲ್ಲಿ ಈ ಮಟ್ಟಕ್ಕೆ ತೊಡಗಿಸಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ಯುವ ಸಮೂಹ ಈ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಹೋರಾಟವಲ್ಲ ಕ್ರಾಂತಿಯೂ ಹೌದು” ಎನ್ನುತ್ತಾರೆ.

ನಾನು ಅನ್ನ ತಿನ್ನುತ್ತೇನೆ. ಹಾಗಾಗಿ ಅನ್ನ ಬೆಳೆದವರ ಪರ ಹೋರಾಟ ಮಾಡುತ್ತೇನೆ. ರೈತರಿಲ್ಲದೇ ದೇಶವಿಲ್ಲ ಹಾಗಾಗಿ ನಾನು ರೈತ ಹೋರಾಟದಲ್ಲಿ ವಾಲಂಟೀಯರ್ ಆಗಿ ಕೆಲಸ ಮಾಡಲು ಮುಂದೆ ಬಂದಿದ್ದೇನೆ ಎನ್ನುವ ಅರ್ಷ್‌ದೀಪ್, ನಾನು ಇಲ್ಲಿಗೆ ಹೋರಾಟಕ್ಕೆ ಬಂದಿರುವುದಕ್ಕೆ ನಮಗೆ ತಂದೆಗೆ ಸ್ವಲ್ಪ ಭಯವಿದೆ. ಆದರೆ ನನ್ನ ತಾಯಿ ಸಂಪೂರ್ಣ ಬೆಂಬಲ ನೀಡಿದ್ದಾರೆ ಅನ್ನುತ್ತಾರೆ.

ಶಾಂತಿಯುತವಾಗಿ ಹೋರಾಡುತ್ತಿರುವ ರೈತ ಹೋರಾಟಗಾರರನ್ನು ಖಾಲಿಸ್ತಾನಿಗಳು, ಭಯೋತ್ಪಾದಕರು ಎಂದು ಮಾಧ್ಯಮಗಳು ಮತ್ತು ಬಿಜೆಪಿಗರು ಕರೆದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಈ ಯುವಜನರನ್ನು ಕೆರಳಿಸಿದೆ. ರೈತ ಹೋರಾಟದ ವಿರುದ್ಧವಿರುವ ಮಾಧ್ಯಮಗಳನ್ನು ಗೋ ಮೀಡಿಯಾ ಎಂದು ಕರೆಯುವ ಈ ಯುವಜನರು ಯೂಟ್ಯೂಬ್, ಟ್ವಿಟ್ಟರ್, ಫೇಸ್‌ಬುಕ್‌ನಂತ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುವುದಲ್ಲದೇ ರೈತರ ಹೋರಾಟವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ.

1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ ಇಂದಿನ ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಬಹುಪಾಲು ಯುವಜನರನ್ನು ಕಾಡಿದ್ದು, ಈ ಹೋರಾಟದ ಬದ್ಧತೆಯ ಅರಿವು ಮೂಡಿಸಿದೆ ಎನ್ನಬಹುದು.‌


ಇದನ್ನೂ ಓದಿ: ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...