Homeಮುಖಪುಟರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

ರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ, ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಈ ಯುವಜನರನ್ನು ಕಾಡುತ್ತಿವೆ.

- Advertisement -
- Advertisement -

‘ಯುದ್ಧಭೂಮಿಯಲ್ಲಿ ಗುಂಡು ಬೀಳುತ್ತದೆ ಎಂದು ತಿಳಿದಿದೆ. ಆದರೂ ನಾನು ಹಿಂದೆ ಸರಿಯುವುದಿಲ್ಲ….’ ಈ ಬರಹವಿದ್ದ ಪ್ಲಕಾರ್ಡ್ ಹಿಡಿದಿದ್ದ ಪಂಜಾಬಿ ಯುವಕನನ್ನು ನೀವು ಸೋಶಿಯಲ್ ಮೀಡಿಯಾಗಳಲ್ಲಿ ನೋಡಿರಬಹುದು. ಇದು ಕೇವಲ ಆ ಯುವಕನೊಬ್ಬನ ಮಾತಲ್ಲ. ಕೃಷಿ ಕಾಯ್ದೆಗಳ ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾವಿರಾರು ಯುವಜನರು ಸಹ ಇದೇ ಕಿಚ್ಚು, ಹೋರಾಟದ ಉತ್ಸಾಹವನ್ನು ಹೊಂದಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನೆರೆದಿದ್ದಾರೆ. ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರು, ವಯಸ್ಸಾದ ರೈತರು ಹಾಗೂ ಯುವಜನರೂ ಇದ್ದರೆ. ಆದರೆ ಪಂಜಾಬ್-ಹರಿಯಾಣ ಭಾಗದ ಸಿಂಘು ಗಡಿಯಲ್ಲಿ ಯುವಜನರ ಸಂಖ್ಯೆ ಅತಿ ಹೆಚ್ಚಿದೆ.

ಸಾವಿರಾರು ಯುವಜನರು I love Kisan, I love Kethi, No Farmer No Food…. (ರೈತರನ್ನು ಪ್ರೀತಿಸುತ್ತೇನೆ, ಕೃಷಿಯನ್ನು ಪ್ರೀತಿಸುತ್ತೇನೆ, ರೈತರಿಲ್ಲದೆ ಆಹಾರವಿಲ್ಲ) ಹೀಗೆ ವಿವಿಧ ಘೋಷಣೆಯುಳ್ಳ ಪ್ಲಕಾರ್ಡ್ ಹಿಡಿದುಕೊಂಡು ಸಿಂಘು ಗಡಿಯಲ್ಲಿ ಟ್ಯ್ರಾಕ್ಟರ್ ಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ತಿರುಗುತ್ತಲೆ ಇರುತ್ತಾರೆ. ರೈತರು ಮಲಗಿದ ಮೇಲೂ ಅಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುಲು ಈ ಯುವಕಲು ಸ್ವಯಂ ಸೇವಕರಾಗಿ ಅಲ್ಲಿ ಗಸ್ತು ತಿರುಗುತ್ತ ರಕ್ಷಣೆಯ ಜವಾಬ್ದಾರಿ ನೋಡಿಕೊಳ್ಳುತ್ತಾರೆ.

1984 ರ ಘಟನೆಯ ನಂತರ ಯಾವುದೇ ಹೋರಾಟದಲ್ಲಿ ಭಾಗವಹಿಸದೇ ಇದ್ದ ಪಂಜಾಬಿ ಯುವಜನರು ಇದೇ ಮೊದಲ ಬಾರಿಗೆ ಬೃಹತ್ ಸಂಖ್ಯೆಯಲ್ಲಿ ಈ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಮಾಧ್ಯಮಗಳು ಬಿತ್ತರಿಸಿದಂತೆ ಮಾದಕ ವ್ಯಸನಕ್ಕೆ ಯುವಜನರು ಒಳಗಾಗಿದ್ದಾರೆ ಎಂಬ ಮಾತನ್ನು ಸುಳ್ಳು ಮಾಡಿರುವ ಈ ಯುವಜನರು ಉಳಿದವರಿಗೆ ಸ್ಫೂರ್ತಿಯಾಗಿದ್ದಾರೆ‌ ಎಂದರೆ ತಪ್ಪಾಗಲಾರದು. ಉಡ್ತ ಪಂಜಾಬ್ ಬದಲಿಗೆ ಪಡ್ತ ಪಂಜಾಬ್ ಎಂದು ಬದಲಾಗಿದೆ ಎಂಬ ಪ್ಲಕಾರ್ಡ್‌ಗಳು ಎಲ್ಲೆಲ್ಲೂ ಕಾಣುತ್ತವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಪಂಜಾಬ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅರ್ಷ್‌ದೀಪ್‌‌ “ನನ್ನನ್ನು ಒಳಗೊಂಡಂತೆ ಪಂಜಾಬಿನ ಯುವ ಸಮೂಹ ಯಾವುದೇ ಹೋರಾಟದಲ್ಲಿ ಈ ಮಟ್ಟಕ್ಕೆ ತೊಡಗಿಸಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ಯುವ ಸಮೂಹ ಈ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಹೋರಾಟವಲ್ಲ ಕ್ರಾಂತಿಯೂ ಹೌದು” ಎನ್ನುತ್ತಾರೆ.

ನಾನು ಅನ್ನ ತಿನ್ನುತ್ತೇನೆ. ಹಾಗಾಗಿ ಅನ್ನ ಬೆಳೆದವರ ಪರ ಹೋರಾಟ ಮಾಡುತ್ತೇನೆ. ರೈತರಿಲ್ಲದೇ ದೇಶವಿಲ್ಲ ಹಾಗಾಗಿ ನಾನು ರೈತ ಹೋರಾಟದಲ್ಲಿ ವಾಲಂಟೀಯರ್ ಆಗಿ ಕೆಲಸ ಮಾಡಲು ಮುಂದೆ ಬಂದಿದ್ದೇನೆ ಎನ್ನುವ ಅರ್ಷ್‌ದೀಪ್, ನಾನು ಇಲ್ಲಿಗೆ ಹೋರಾಟಕ್ಕೆ ಬಂದಿರುವುದಕ್ಕೆ ನಮಗೆ ತಂದೆಗೆ ಸ್ವಲ್ಪ ಭಯವಿದೆ. ಆದರೆ ನನ್ನ ತಾಯಿ ಸಂಪೂರ್ಣ ಬೆಂಬಲ ನೀಡಿದ್ದಾರೆ ಅನ್ನುತ್ತಾರೆ.

ಶಾಂತಿಯುತವಾಗಿ ಹೋರಾಡುತ್ತಿರುವ ರೈತ ಹೋರಾಟಗಾರರನ್ನು ಖಾಲಿಸ್ತಾನಿಗಳು, ಭಯೋತ್ಪಾದಕರು ಎಂದು ಮಾಧ್ಯಮಗಳು ಮತ್ತು ಬಿಜೆಪಿಗರು ಕರೆದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಈ ಯುವಜನರನ್ನು ಕೆರಳಿಸಿದೆ. ರೈತ ಹೋರಾಟದ ವಿರುದ್ಧವಿರುವ ಮಾಧ್ಯಮಗಳನ್ನು ಗೋ ಮೀಡಿಯಾ ಎಂದು ಕರೆಯುವ ಈ ಯುವಜನರು ಯೂಟ್ಯೂಬ್, ಟ್ವಿಟ್ಟರ್, ಫೇಸ್‌ಬುಕ್‌ನಂತ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುವುದಲ್ಲದೇ ರೈತರ ಹೋರಾಟವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ.

1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ ಇಂದಿನ ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಬಹುಪಾಲು ಯುವಜನರನ್ನು ಕಾಡಿದ್ದು, ಈ ಹೋರಾಟದ ಬದ್ಧತೆಯ ಅರಿವು ಮೂಡಿಸಿದೆ ಎನ್ನಬಹುದು.‌


ಇದನ್ನೂ ಓದಿ: ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...