Homeಮುಖಪುಟರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

ರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ, ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಈ ಯುವಜನರನ್ನು ಕಾಡುತ್ತಿವೆ.

- Advertisement -
- Advertisement -

‘ಯುದ್ಧಭೂಮಿಯಲ್ಲಿ ಗುಂಡು ಬೀಳುತ್ತದೆ ಎಂದು ತಿಳಿದಿದೆ. ಆದರೂ ನಾನು ಹಿಂದೆ ಸರಿಯುವುದಿಲ್ಲ….’ ಈ ಬರಹವಿದ್ದ ಪ್ಲಕಾರ್ಡ್ ಹಿಡಿದಿದ್ದ ಪಂಜಾಬಿ ಯುವಕನನ್ನು ನೀವು ಸೋಶಿಯಲ್ ಮೀಡಿಯಾಗಳಲ್ಲಿ ನೋಡಿರಬಹುದು. ಇದು ಕೇವಲ ಆ ಯುವಕನೊಬ್ಬನ ಮಾತಲ್ಲ. ಕೃಷಿ ಕಾಯ್ದೆಗಳ ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾವಿರಾರು ಯುವಜನರು ಸಹ ಇದೇ ಕಿಚ್ಚು, ಹೋರಾಟದ ಉತ್ಸಾಹವನ್ನು ಹೊಂದಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನೆರೆದಿದ್ದಾರೆ. ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರು, ವಯಸ್ಸಾದ ರೈತರು ಹಾಗೂ ಯುವಜನರೂ ಇದ್ದರೆ. ಆದರೆ ಪಂಜಾಬ್-ಹರಿಯಾಣ ಭಾಗದ ಸಿಂಘು ಗಡಿಯಲ್ಲಿ ಯುವಜನರ ಸಂಖ್ಯೆ ಅತಿ ಹೆಚ್ಚಿದೆ.

ಸಾವಿರಾರು ಯುವಜನರು I love Kisan, I love Kethi, No Farmer No Food…. (ರೈತರನ್ನು ಪ್ರೀತಿಸುತ್ತೇನೆ, ಕೃಷಿಯನ್ನು ಪ್ರೀತಿಸುತ್ತೇನೆ, ರೈತರಿಲ್ಲದೆ ಆಹಾರವಿಲ್ಲ) ಹೀಗೆ ವಿವಿಧ ಘೋಷಣೆಯುಳ್ಳ ಪ್ಲಕಾರ್ಡ್ ಹಿಡಿದುಕೊಂಡು ಸಿಂಘು ಗಡಿಯಲ್ಲಿ ಟ್ಯ್ರಾಕ್ಟರ್ ಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ತಿರುಗುತ್ತಲೆ ಇರುತ್ತಾರೆ. ರೈತರು ಮಲಗಿದ ಮೇಲೂ ಅಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುಲು ಈ ಯುವಕಲು ಸ್ವಯಂ ಸೇವಕರಾಗಿ ಅಲ್ಲಿ ಗಸ್ತು ತಿರುಗುತ್ತ ರಕ್ಷಣೆಯ ಜವಾಬ್ದಾರಿ ನೋಡಿಕೊಳ್ಳುತ್ತಾರೆ.

1984 ರ ಘಟನೆಯ ನಂತರ ಯಾವುದೇ ಹೋರಾಟದಲ್ಲಿ ಭಾಗವಹಿಸದೇ ಇದ್ದ ಪಂಜಾಬಿ ಯುವಜನರು ಇದೇ ಮೊದಲ ಬಾರಿಗೆ ಬೃಹತ್ ಸಂಖ್ಯೆಯಲ್ಲಿ ಈ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಮಾಧ್ಯಮಗಳು ಬಿತ್ತರಿಸಿದಂತೆ ಮಾದಕ ವ್ಯಸನಕ್ಕೆ ಯುವಜನರು ಒಳಗಾಗಿದ್ದಾರೆ ಎಂಬ ಮಾತನ್ನು ಸುಳ್ಳು ಮಾಡಿರುವ ಈ ಯುವಜನರು ಉಳಿದವರಿಗೆ ಸ್ಫೂರ್ತಿಯಾಗಿದ್ದಾರೆ‌ ಎಂದರೆ ತಪ್ಪಾಗಲಾರದು. ಉಡ್ತ ಪಂಜಾಬ್ ಬದಲಿಗೆ ಪಡ್ತ ಪಂಜಾಬ್ ಎಂದು ಬದಲಾಗಿದೆ ಎಂಬ ಪ್ಲಕಾರ್ಡ್‌ಗಳು ಎಲ್ಲೆಲ್ಲೂ ಕಾಣುತ್ತವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಪಂಜಾಬ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅರ್ಷ್‌ದೀಪ್‌‌ “ನನ್ನನ್ನು ಒಳಗೊಂಡಂತೆ ಪಂಜಾಬಿನ ಯುವ ಸಮೂಹ ಯಾವುದೇ ಹೋರಾಟದಲ್ಲಿ ಈ ಮಟ್ಟಕ್ಕೆ ತೊಡಗಿಸಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ಯುವ ಸಮೂಹ ಈ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಹೋರಾಟವಲ್ಲ ಕ್ರಾಂತಿಯೂ ಹೌದು” ಎನ್ನುತ್ತಾರೆ.

ನಾನು ಅನ್ನ ತಿನ್ನುತ್ತೇನೆ. ಹಾಗಾಗಿ ಅನ್ನ ಬೆಳೆದವರ ಪರ ಹೋರಾಟ ಮಾಡುತ್ತೇನೆ. ರೈತರಿಲ್ಲದೇ ದೇಶವಿಲ್ಲ ಹಾಗಾಗಿ ನಾನು ರೈತ ಹೋರಾಟದಲ್ಲಿ ವಾಲಂಟೀಯರ್ ಆಗಿ ಕೆಲಸ ಮಾಡಲು ಮುಂದೆ ಬಂದಿದ್ದೇನೆ ಎನ್ನುವ ಅರ್ಷ್‌ದೀಪ್, ನಾನು ಇಲ್ಲಿಗೆ ಹೋರಾಟಕ್ಕೆ ಬಂದಿರುವುದಕ್ಕೆ ನಮಗೆ ತಂದೆಗೆ ಸ್ವಲ್ಪ ಭಯವಿದೆ. ಆದರೆ ನನ್ನ ತಾಯಿ ಸಂಪೂರ್ಣ ಬೆಂಬಲ ನೀಡಿದ್ದಾರೆ ಅನ್ನುತ್ತಾರೆ.

ಶಾಂತಿಯುತವಾಗಿ ಹೋರಾಡುತ್ತಿರುವ ರೈತ ಹೋರಾಟಗಾರರನ್ನು ಖಾಲಿಸ್ತಾನಿಗಳು, ಭಯೋತ್ಪಾದಕರು ಎಂದು ಮಾಧ್ಯಮಗಳು ಮತ್ತು ಬಿಜೆಪಿಗರು ಕರೆದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಈ ಯುವಜನರನ್ನು ಕೆರಳಿಸಿದೆ. ರೈತ ಹೋರಾಟದ ವಿರುದ್ಧವಿರುವ ಮಾಧ್ಯಮಗಳನ್ನು ಗೋ ಮೀಡಿಯಾ ಎಂದು ಕರೆಯುವ ಈ ಯುವಜನರು ಯೂಟ್ಯೂಬ್, ಟ್ವಿಟ್ಟರ್, ಫೇಸ್‌ಬುಕ್‌ನಂತ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುವುದಲ್ಲದೇ ರೈತರ ಹೋರಾಟವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ.

1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ ಇಂದಿನ ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಬಹುಪಾಲು ಯುವಜನರನ್ನು ಕಾಡಿದ್ದು, ಈ ಹೋರಾಟದ ಬದ್ಧತೆಯ ಅರಿವು ಮೂಡಿಸಿದೆ ಎನ್ನಬಹುದು.‌


ಇದನ್ನೂ ಓದಿ: ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...