Homeಕರ್ನಾಟಕಡಿಸೆಂಬರ್‌ನಿಂದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ತರಗತಿ: ಶಿಕ್ಷಣ ಸಚಿವ ಬಿಸಿ ನಾಗೇಶ್‌

ಡಿಸೆಂಬರ್‌ನಿಂದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ತರಗತಿ: ಶಿಕ್ಷಣ ಸಚಿವ ಬಿಸಿ ನಾಗೇಶ್‌

- Advertisement -
- Advertisement -

ರಾಜ್ಯದಾದ್ಯಂತ ಶಾಲಾ-ಕಾಲೇಜುಗಳಲ್ಲಿ ನೈತಿಕ ಶಿಕ್ಷಣದ ಪಠ್ಯಕ್ರಮದ ಭಾಗವಾಗಿ ಭಗವದ್ಗೀತೆಯನ್ನು ಡಿಸೆಂಬರ್‌ನಿಂದ ಬೋಧಿಸಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸೋಮವಾರ ಘೋಷಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸೋಮವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿ.ಸಿ.ನಾಗೇಶ್, “ಈ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಭಗವದ್ಗೀತೆ ಅಳವಡಿಕೆಗೆ ಚಿಂತನೆ ನಡೆಸಿದ್ದೇವೆ. ನೈತಿಕ ಶಿಕ್ಷಣ ವಿಷಯದಡಿಯಲ್ಲಿ ಇದನ್ನು ಬೋಧಿಸಲಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಸಮಿತಿಯನ್ನು ರಚಿಸಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

‘‘ವಿರೋಧವಿಲ್ಲದಿರೂ ಶಾಲೆಗಳಲ್ಲಿ ಭಗವದ್ಗೀತೆಯನ್ನು ಪರಿಚಯಿಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆಯೇ” ಎಂದು ಬಿಜೆಪಿ ಎಂಎಲ್‌ಸಿ ಎಂಕೆ ಪ್ರಾಣೇಶ್ ಪ್ರಶ್ನಿಸಿದ್ದರು. ‘‘ಕರ್ನಾಟಕದ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆಯನ್ನು ಜಾರಿಗೆ ತರುವ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಭಗವದ್ಗೀತೆ ಕಲಿಸಲು ಸರ್ಕಾರ ಹಿಂದೇಟು ಹಾಕುತ್ತಿದೆಯೇ? ಸರ್ಕಾರ ಈ ಹಿಂದೆ ಹೇಳಿಕೆ ನೀಡುವಾಗ ತೋರಿದ ಆಸಕ್ತಿ ಈಗ ಯಾಕೆ ಇಲ್ಲ’’ ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವ ನಾಗೇಶ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಪ್ರಕಾರ ಗುಜರಾತ್ ರಾಜ್ಯದ ಮಾದರಿಯಲ್ಲಿ ಕರ್ನಾಟಕದಲ್ಲಿ ಕೂಡಾ ಭಗವದ್ಗೀತೆಯನ್ನು ಶಿಕ್ಷಣ ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಪರಿಚಯಿಸಲಾಗುವುದು ಎಂದು ಹೇಳಿದ್ದರು. ಭಗವದ್ಗೀತೆಯನ್ನು ನೈತಿಕ ಶಿಕ್ಷಣದ ಭಾಗವಾಗಿ ಪಠ್ಯಕ್ರಮದಲ್ಲಿ ಸೇರಿಸುವುದು ತಮ್ಮ ಸರ್ಕಾರದ ನಿಲುವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕಡ್ಡಾಯ ಎಂಬುದು ಸುಳ್ಳು ಸುದ್ದಿ

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಪರಿಷತ್ತಿನಲ್ಲಿ ಮಾತನಾಡಿ, “ಭಗವದ್ಗೀತೆಯು ಮಾನವೀಯ ಮೌಲ್ಯಗಳನ್ನು ಹೊಂದಿದ್ದು, ಮಕ್ಕಳು ಆ ಮೌಲ್ಯಗಳನ್ನು ಕಲಿಯಬೇಕು. ಗುಜರಾತ್ ಸರ್ಕಾರವು ಭಗವದ್ಗೀತೆಯನ್ನು ಪಠ್ಯಕ್ರಮಕ್ಕೆ ಸೇರಿಸಲು ನಿರ್ಧಾರ ತೆಗೆದುಕೊಂಡಿದೆ. ಮಕ್ಕಳಿಗೆ ಭಗವದ್ಗೀತೆಯನ್ನು ಪರಿಚಯಿಸಲು ಕರ್ನಾಟಕದಲ್ಲಿಯೂ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಆದರೆ, ಮೈಸೂರಿನ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ತನ್ವೀರ್ ಸೇಠ್, “ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಪರಿಚಯಿಸುವುದು ಕೊರೊನಾ ಸಾಂಕ್ರಾಮಿಕಕ್ಕಿಂತ ಹೆಚ್ಚು ಅಪಾಯಕಾರಿ” ಎಂದು ಹೇಳಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರಸ್ತಾವನೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದು, ಭಗವದ್ಗೀತೆಯನ್ನು ಕಲಿಸುವುದರಿಂದ ಖಾಲಿ ಹೊಟ್ಟೆ ತುಂಬುವುದಿಲ್ಲ ಎಂದು ಹೇಳಿದ್ದಾರೆ. “ರಾಜ್ಯವು ಸಾವಿರಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಭಗವದ್ಗೀತೆಯ ಬೋಧನೆಗಳು ಜನರಿಗೆ ಅನ್ನ ನೀಡುವುದಿಲ್ಲ, ದೇಶದಲ್ಲಿ ಭಾವನಾತ್ಮಕ ವಿಷಯಗಳು ಪ್ರಾಮುಖ್ಯತೆಯನ್ನು ಪಡೆಯುತ್ತಿದ್ದು, ಅಮಾಯಕರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಪ್ರವೃತ್ತಿಗೆ ಅಂತ್ಯವಿದ್ದು, ನಾವು ಅಲ್ಲಿಯವರೆಗೆ ಕಾಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೂಲ ಭಗವದ್ಗೀತೆ ಕುರಿತು ಮಾಹಿತಿಯಿಲ್ಲ ಎಂದ ಕೇಂದ್ರ ಸರ್ಕಾರ: RTI ಅರ್ಜಿಯಿಂದ ಬಹಿರಂಗ

“ನಾವು ಹಿಂದೂ ಧರ್ಮವನ್ನು ನಂಬುತ್ತೇವೆ ಮತ್ತು ಇತರ ಧರ್ಮಗಳಿಗೆ ಸಮಾನ ಗೌರವ ನೀಡುತ್ತೇವೆ. ಮಕ್ಕಳಿಗೆ ಭಗವದ್ಗೀತೆ, ಬೈಬಲ್, ಕುರಾನ್ ಕಲಿಸಲು ನಮ್ಮ ವಿರೋಧವಿಲ್ಲ. ಆದರೆ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು” ಎಂದು ಕಾಂಗ್ರೆಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಳ್ಳೆ ವೈಜ್ಞಾನಿಕ ಆಧುನಿಕ ಶಿಕ್ಷಣ ಕೊಡಿ ಸ್ವಾಮಿ ಭಗವದ್ಗೀತೆಯಿಂದ ಮಕ್ಕಳು ಏನು ಬರೇ ಚರಿತ್ರೆ ಕಲಿಬೇಕಾ…
    ಆಪ್ಷನ್ ಕೊಡಿ ಬೇಕಿದ್ರೆ ಭಗವದ್ಗೀತೆ ಬೇಕಾದವರು ಅದನ್ನೇ ಕಲಿಯಿರಿ ಇಷ್ಟ ಇಲ್ಲದವರಿಗೆ ಅದು ಯಾಕೆ ಬಲವಂತವಾಗಿ ಹೇರಿ ಬಿಡುವುದು ಸರಿಯಲ್ಲ

  2. ಅತ್ಯಂತ ತ್ವರಿತವಾಗಿ ನೈತಿಕ’ ಶಿಕ್ಷಣ ಬೇಕಾಗಿರುವುದು ಕೋಮುವಾದಿ ನೀಚ ಚಡ್ಡಿಗಳಿಗೆ,ಅಪರೇಶನ್ ಕಮಲ, 40% ಕೊಳ್ಳೆ, ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ಹಲ್ಲೆ, ಧಾರ್ಮಿಕ ಢಾಂಬಿಕತನದ ಹಿಂದುತ್ವ, ಸರಕಾರವನ್ನು ಪ್ರಶ್ನಿಸಿದವರಿಗೆ ಜೈಲು…ಇವರು ಮೈಗೂಡಿಸಿಕೊಂಡಿರುವ ಧಾರ್ಮಿಕ ಗುಣವಿಶೇಷಗಳು.

  3. Are u educated Mr educated minister why it is required bhagavat Gita , idiots wt ur going to doing india , try to create jobs and helps to public , bhagaita will never help to children, don’t bring rss agendas here , ur idiots making others also idiots

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...