Homeಕರ್ನಾಟಕದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

- Advertisement -
- Advertisement -

ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಹುದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಈಶ್ವರಪ್ಪ, “ಇವತ್ತು ಇಡೀ ದೇಶದಲ್ಲಿ ತ್ರಿವರ್ಣ ಧ್ವಜ ರಾಷ್ಟ್ರಧ್ವಜ ಆಗಿದೆ. ಇದರಲ್ಲಿ ಏನೂ ಅನುಮಾನ ಇಲ್ಲ. ಅದಕ್ಕೆ ನಾವೆಲ್ಲರೂ ಕೂಡಾ ಗೌರವ ಕೊಡುತ್ತೇವೆ. ಅಲ್ಲಿ ಭಗವಾಧ್ವಜ ಹಾರಿಸಿದ್ದು ಹೌದು. ಕೇಸರಿ ಧ್ವಜ ಹಾರಿಸಬಾರದೇನು?” ಎಂದು ಕೇಳಿದ್ದಾರೆ.

ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿಧ್ವಜ ಹಾರಿಸಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, “ಕೇಸರಿ ಯಾವ ಧ್ವಜ ಸ್ಥಂಭದಲ್ಲಿ ಬೇಕಾದರೂ ಹಾರಿಸಬಹುದು. ಯಾವುದೇ ಸ್ಥಳದಲ್ಲಿ ಬೇಕಾದರೂ ಕೇಸರಿ ಧ್ವಜ ಹಾರಿಸಬಹುದು. ಆದರೆ ರಾಷ್ಟ್ರಧ್ವಜವನ್ನು ತೆಗೆದು ಯಾವುದೇ ಕೇಸರಿ ಧ್ವಜ ಹಾಕಿಲ್ಲ, ಹಾಕುವುದು ಇಲ್ಲ. ಹಿಂದೂ ಮುಸಲ್ಮಾನರಲ್ಲಿ ಧ್ವೇಷ ಬೆಳೆಸುವುದಕ್ಕೋಸ್ಕರ ರಾಷ್ಟ್ರ ಧ್ವಜವನ್ನು ಬಳಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್‌ ಸುಳ್ಳು ಹೇಳಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಡಿಕೆ ಶಿವಕುಮಾರ್‌‌ಗಿಂತಲೂ ಹೆಚ್ಚು ಗೌರವ ನಮಗೆ ಇದೆ. ರಾಷ್ಟ್ರಧ್ವಜವನ್ನು ತೆಗೆದಿಲ್ಲ. ಧ್ವಜಸ್ಥಂಭಗಳಲ್ಲಿ ಕೇಸರಿ ಧ್ವಜವನ್ನು ಹಾಕಿಕೊಂಡು ಬಂದಿದ್ದಾರೆ. ಅದನ್ನು ತಿರುಗಿಸಿ ಹಿಂದೂ ಮುಸಲ್ಮಾನರ ಬಗ್ಗೆ ಗೊಂದಲ ಉಂಟು ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಕೇಸರಿ ಧ್ವಜ ಎಲ್ಲಿ ಬೇಕಾದರೂ ಹಾರಿಸಬಹುದು. ಮುಂದಿನ ದಿನದಲ್ಲಿ ಕೆಂಪುಕೋಟೆ ಮೇಲೆ ಹಾರಿಸುತ್ತೇವೆ. ನೂರಾರು ವರ್ಷಗಳ ಹಿಂದೆ ರಾಮ, ಮಾರುತಿಯ ರಥಗಳಲ್ಲಿ ಕೇಸರಿ ಧ್ವಜ ಇತ್ತು. ಆಗ ತ್ರಿವರ್ಣ ಧ್ವಜ ನಮ್ಮ ದೇಶದಲ್ಲಿ ಇತ್ತಾ? ಅದು ಈಗ ರಾಷ್ಟ್ರಧ್ವಜ ಆಗಿದೆ. ಆದರೆ ಈಗ ಈ ದೇಶದಲ್ಲಿ ಅನ್ನ ತಿಂದ ಪ್ರತಿಯೊಬ್ಬನೂ ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು, ಇದರ ಬಗ್ಗೆ ಪ್ರಶ್ನೆಯೆ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಇವತ್ತು ಹಿಂದೂ ವಿಚಾರದ ಬಗ್ಗೆ, ಹಿಂದುತ್ವದ ಬಗ್ಗೆ ದೇಶದಲ್ಲಿ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆ ರಾಮಮಂದಿರ ಕಟ್ಟುವ ಬಗ್ಗೆ ಕೇಳಿ ನಗುತ್ತಿದ್ದರು. ಈಗ ಕಟ್ಟಿದ್ದೇವೆ ಅಲ್ಲವೇ? ಹಾಗೆಯೆ ಯಾವುದೋ ಕಾದಲ್ಲಿ, ನೂರು, ಇನ್ನೂರು ಅಥವಾ ಐನೂರು ವರ್ಷಗಳಲ್ಲಿ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ಎಲ್ಲಿ ಬೇಕಾದರೂ ಹಾರಾಡಬಹುದು. ಆದರೆ ಈಗ ಸಂವಿಧಾನ ಬದ್ದವಾಗಿ ತ್ರಿವರ್ಣ ಧ್ವಜವೇ ನಮ್ಮ ರಾಷ್ಟ್ರಧ್ವಜ ಎಂದು ಒಪ್ಪಿಕೊಂಡಿದ್ದೇವೆ. ಅದಕ್ಕೆ ಯಾರೇ ತಪ್ಪಿದರೂ ಅವ ರಾಷ್ಟ್ರದ್ರೋಹಿಯಾಗುತ್ತಾನೆ” ಎಂದು ಈಶ್ವರಪ್ಪ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈಶ್ವರಪ್ಪನವರು ವರಿಷ್ಠರನ್ನು ತೃಷ್ಟಿಕರಿಸಿ ಮಂತ್ರಿಪದವಿ ಉಳಿಸಿಕೊಳ್ಳುವುದಕೋಸ್ಕರ ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ

  2. ಹುಚ್ಚು ಈಶ್ವರಪ್ಪ! ಹುಂಭುತನ ಏನೇನು ಮಾತಾನಾಡುತ್ತಾನೆ ಎಂಬುದು ಅವನಿಗೆ ಗೋತ್ತಿರುವದಿಲ್ಲವಂತೆ ಈಗಾಗೀ ಆತ ಬಿ.ಜೆ.ಪಿಯ ಹಳೆಯ ಕಾರ್ಯಕರ್ತರಾದರೂ ಆತನನ್ನು ಅವರು ಮುಖ್ಯಮಂತ್ರಿ ಮಾಡಲೇ ಇಲ್ಲ !

  3. ಅಭಿವೃದ್ಧಿ ಪರ ಕೆಲಸ ಮಾಡ್ರಿ ಜಾತಿ ಮತ ಧರ್ಮ ಕೇಸರಿ ಹಸಿರು ಕಪ್ಪು ನೀಲಿ ಅಂತಾ ರಾಜಕೀಯ ಮಾಡಿ ದೇಶದ ಸ್ವಾಸ್ತ್ಯ ಹಾಳು ಮಾಡಬೇಡಿ
    ಇದು ನಿಮ್ಮ ತಪ್ಪಲ್ಲಜಾತಿ ಧರ್ಮದ ಅಮಲಿನಲ್ಲಿ ನಿಮ್ಮಂತ ವರಿಗೆ vote ಹಾಕ್ತಾರಲ್ಲ ಅವ್ರೆಲ್ಲಾ ಬದಲಾಗಬೇಕು

  4. ಈಶ್ವರಪ್ಪ ಅಂತಹ ಅವಿವೇಕಿ ಮತ್ತು ವಿಕೃತ ಮನಸ್ಸಿನ ರಾಜಕಾರಣಿಗೆ ನಮ್ಮ ಜನ ವೋಟು ಹಾಕಿ ಗೆಲ್ಲಿಸಿರುವುದೇ ದೊಡ್ಡ ದುರಂತ!

    ಈಶ್ವರಪ್ಪ ಅವರ ಹೇಳಿಕೆ ದೇಶ ದ್ರೋಹಿ ಹೇಳಿಕೆಯಾಗಿದ್ದು, ರಾಷ್ಟ್ರ ಭಕ್ತರು ಎಂದು ಹೇಳಿಕೊಳ್ಳುವ ಕೇಸರಿಯಾ ರಾಷ್ಟ್ರೀಯ ಸುಲಭ್ ಸೌಚಾಲಯದ ಸ್ವಯಂ ಘೋಷಿತ ಮುಠ್ಠಾಳರು ಮೌನವಾಗಿರುವುದು ಏಕೆ?

    ಹಣ ಮತ್ತು ಅಧಿಕಾರದ ಅಹಂ ಹೊದ್ದುಕೊಂಡಿರುವ ಈಶ್ವರಪ್ಪ ಅವರೇ ಕಾಲಯ ತಸ್ಮೈಯೇ ನಮಃ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....