Homeಕರ್ನಾಟಕದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

- Advertisement -
- Advertisement -

ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಹುದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಈಶ್ವರಪ್ಪ, “ಇವತ್ತು ಇಡೀ ದೇಶದಲ್ಲಿ ತ್ರಿವರ್ಣ ಧ್ವಜ ರಾಷ್ಟ್ರಧ್ವಜ ಆಗಿದೆ. ಇದರಲ್ಲಿ ಏನೂ ಅನುಮಾನ ಇಲ್ಲ. ಅದಕ್ಕೆ ನಾವೆಲ್ಲರೂ ಕೂಡಾ ಗೌರವ ಕೊಡುತ್ತೇವೆ. ಅಲ್ಲಿ ಭಗವಾಧ್ವಜ ಹಾರಿಸಿದ್ದು ಹೌದು. ಕೇಸರಿ ಧ್ವಜ ಹಾರಿಸಬಾರದೇನು?” ಎಂದು ಕೇಳಿದ್ದಾರೆ.

ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿಧ್ವಜ ಹಾರಿಸಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, “ಕೇಸರಿ ಯಾವ ಧ್ವಜ ಸ್ಥಂಭದಲ್ಲಿ ಬೇಕಾದರೂ ಹಾರಿಸಬಹುದು. ಯಾವುದೇ ಸ್ಥಳದಲ್ಲಿ ಬೇಕಾದರೂ ಕೇಸರಿ ಧ್ವಜ ಹಾರಿಸಬಹುದು. ಆದರೆ ರಾಷ್ಟ್ರಧ್ವಜವನ್ನು ತೆಗೆದು ಯಾವುದೇ ಕೇಸರಿ ಧ್ವಜ ಹಾಕಿಲ್ಲ, ಹಾಕುವುದು ಇಲ್ಲ. ಹಿಂದೂ ಮುಸಲ್ಮಾನರಲ್ಲಿ ಧ್ವೇಷ ಬೆಳೆಸುವುದಕ್ಕೋಸ್ಕರ ರಾಷ್ಟ್ರ ಧ್ವಜವನ್ನು ಬಳಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್‌ ಸುಳ್ಳು ಹೇಳಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಡಿಕೆ ಶಿವಕುಮಾರ್‌‌ಗಿಂತಲೂ ಹೆಚ್ಚು ಗೌರವ ನಮಗೆ ಇದೆ. ರಾಷ್ಟ್ರಧ್ವಜವನ್ನು ತೆಗೆದಿಲ್ಲ. ಧ್ವಜಸ್ಥಂಭಗಳಲ್ಲಿ ಕೇಸರಿ ಧ್ವಜವನ್ನು ಹಾಕಿಕೊಂಡು ಬಂದಿದ್ದಾರೆ. ಅದನ್ನು ತಿರುಗಿಸಿ ಹಿಂದೂ ಮುಸಲ್ಮಾನರ ಬಗ್ಗೆ ಗೊಂದಲ ಉಂಟು ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಕೇಸರಿ ಧ್ವಜ ಎಲ್ಲಿ ಬೇಕಾದರೂ ಹಾರಿಸಬಹುದು. ಮುಂದಿನ ದಿನದಲ್ಲಿ ಕೆಂಪುಕೋಟೆ ಮೇಲೆ ಹಾರಿಸುತ್ತೇವೆ. ನೂರಾರು ವರ್ಷಗಳ ಹಿಂದೆ ರಾಮ, ಮಾರುತಿಯ ರಥಗಳಲ್ಲಿ ಕೇಸರಿ ಧ್ವಜ ಇತ್ತು. ಆಗ ತ್ರಿವರ್ಣ ಧ್ವಜ ನಮ್ಮ ದೇಶದಲ್ಲಿ ಇತ್ತಾ? ಅದು ಈಗ ರಾಷ್ಟ್ರಧ್ವಜ ಆಗಿದೆ. ಆದರೆ ಈಗ ಈ ದೇಶದಲ್ಲಿ ಅನ್ನ ತಿಂದ ಪ್ರತಿಯೊಬ್ಬನೂ ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು, ಇದರ ಬಗ್ಗೆ ಪ್ರಶ್ನೆಯೆ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಇವತ್ತು ಹಿಂದೂ ವಿಚಾರದ ಬಗ್ಗೆ, ಹಿಂದುತ್ವದ ಬಗ್ಗೆ ದೇಶದಲ್ಲಿ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆ ರಾಮಮಂದಿರ ಕಟ್ಟುವ ಬಗ್ಗೆ ಕೇಳಿ ನಗುತ್ತಿದ್ದರು. ಈಗ ಕಟ್ಟಿದ್ದೇವೆ ಅಲ್ಲವೇ? ಹಾಗೆಯೆ ಯಾವುದೋ ಕಾದಲ್ಲಿ, ನೂರು, ಇನ್ನೂರು ಅಥವಾ ಐನೂರು ವರ್ಷಗಳಲ್ಲಿ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ಎಲ್ಲಿ ಬೇಕಾದರೂ ಹಾರಾಡಬಹುದು. ಆದರೆ ಈಗ ಸಂವಿಧಾನ ಬದ್ದವಾಗಿ ತ್ರಿವರ್ಣ ಧ್ವಜವೇ ನಮ್ಮ ರಾಷ್ಟ್ರಧ್ವಜ ಎಂದು ಒಪ್ಪಿಕೊಂಡಿದ್ದೇವೆ. ಅದಕ್ಕೆ ಯಾರೇ ತಪ್ಪಿದರೂ ಅವ ರಾಷ್ಟ್ರದ್ರೋಹಿಯಾಗುತ್ತಾನೆ” ಎಂದು ಈಶ್ವರಪ್ಪ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈಶ್ವರಪ್ಪನವರು ವರಿಷ್ಠರನ್ನು ತೃಷ್ಟಿಕರಿಸಿ ಮಂತ್ರಿಪದವಿ ಉಳಿಸಿಕೊಳ್ಳುವುದಕೋಸ್ಕರ ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ

  2. ಹುಚ್ಚು ಈಶ್ವರಪ್ಪ! ಹುಂಭುತನ ಏನೇನು ಮಾತಾನಾಡುತ್ತಾನೆ ಎಂಬುದು ಅವನಿಗೆ ಗೋತ್ತಿರುವದಿಲ್ಲವಂತೆ ಈಗಾಗೀ ಆತ ಬಿ.ಜೆ.ಪಿಯ ಹಳೆಯ ಕಾರ್ಯಕರ್ತರಾದರೂ ಆತನನ್ನು ಅವರು ಮುಖ್ಯಮಂತ್ರಿ ಮಾಡಲೇ ಇಲ್ಲ !

  3. ಅಭಿವೃದ್ಧಿ ಪರ ಕೆಲಸ ಮಾಡ್ರಿ ಜಾತಿ ಮತ ಧರ್ಮ ಕೇಸರಿ ಹಸಿರು ಕಪ್ಪು ನೀಲಿ ಅಂತಾ ರಾಜಕೀಯ ಮಾಡಿ ದೇಶದ ಸ್ವಾಸ್ತ್ಯ ಹಾಳು ಮಾಡಬೇಡಿ
    ಇದು ನಿಮ್ಮ ತಪ್ಪಲ್ಲಜಾತಿ ಧರ್ಮದ ಅಮಲಿನಲ್ಲಿ ನಿಮ್ಮಂತ ವರಿಗೆ vote ಹಾಕ್ತಾರಲ್ಲ ಅವ್ರೆಲ್ಲಾ ಬದಲಾಗಬೇಕು

  4. ಈಶ್ವರಪ್ಪ ಅಂತಹ ಅವಿವೇಕಿ ಮತ್ತು ವಿಕೃತ ಮನಸ್ಸಿನ ರಾಜಕಾರಣಿಗೆ ನಮ್ಮ ಜನ ವೋಟು ಹಾಕಿ ಗೆಲ್ಲಿಸಿರುವುದೇ ದೊಡ್ಡ ದುರಂತ!

    ಈಶ್ವರಪ್ಪ ಅವರ ಹೇಳಿಕೆ ದೇಶ ದ್ರೋಹಿ ಹೇಳಿಕೆಯಾಗಿದ್ದು, ರಾಷ್ಟ್ರ ಭಕ್ತರು ಎಂದು ಹೇಳಿಕೊಳ್ಳುವ ಕೇಸರಿಯಾ ರಾಷ್ಟ್ರೀಯ ಸುಲಭ್ ಸೌಚಾಲಯದ ಸ್ವಯಂ ಘೋಷಿತ ಮುಠ್ಠಾಳರು ಮೌನವಾಗಿರುವುದು ಏಕೆ?

    ಹಣ ಮತ್ತು ಅಧಿಕಾರದ ಅಹಂ ಹೊದ್ದುಕೊಂಡಿರುವ ಈಶ್ವರಪ್ಪ ಅವರೇ ಕಾಲಯ ತಸ್ಮೈಯೇ ನಮಃ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...