Homeಕರ್ನಾಟಕದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

- Advertisement -
- Advertisement -

ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಹುದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಈಶ್ವರಪ್ಪ, “ಇವತ್ತು ಇಡೀ ದೇಶದಲ್ಲಿ ತ್ರಿವರ್ಣ ಧ್ವಜ ರಾಷ್ಟ್ರಧ್ವಜ ಆಗಿದೆ. ಇದರಲ್ಲಿ ಏನೂ ಅನುಮಾನ ಇಲ್ಲ. ಅದಕ್ಕೆ ನಾವೆಲ್ಲರೂ ಕೂಡಾ ಗೌರವ ಕೊಡುತ್ತೇವೆ. ಅಲ್ಲಿ ಭಗವಾಧ್ವಜ ಹಾರಿಸಿದ್ದು ಹೌದು. ಕೇಸರಿ ಧ್ವಜ ಹಾರಿಸಬಾರದೇನು?” ಎಂದು ಕೇಳಿದ್ದಾರೆ.

ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿಧ್ವಜ ಹಾರಿಸಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, “ಕೇಸರಿ ಯಾವ ಧ್ವಜ ಸ್ಥಂಭದಲ್ಲಿ ಬೇಕಾದರೂ ಹಾರಿಸಬಹುದು. ಯಾವುದೇ ಸ್ಥಳದಲ್ಲಿ ಬೇಕಾದರೂ ಕೇಸರಿ ಧ್ವಜ ಹಾರಿಸಬಹುದು. ಆದರೆ ರಾಷ್ಟ್ರಧ್ವಜವನ್ನು ತೆಗೆದು ಯಾವುದೇ ಕೇಸರಿ ಧ್ವಜ ಹಾಕಿಲ್ಲ, ಹಾಕುವುದು ಇಲ್ಲ. ಹಿಂದೂ ಮುಸಲ್ಮಾನರಲ್ಲಿ ಧ್ವೇಷ ಬೆಳೆಸುವುದಕ್ಕೋಸ್ಕರ ರಾಷ್ಟ್ರ ಧ್ವಜವನ್ನು ಬಳಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್‌ ಸುಳ್ಳು ಹೇಳಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಡಿಕೆ ಶಿವಕುಮಾರ್‌‌ಗಿಂತಲೂ ಹೆಚ್ಚು ಗೌರವ ನಮಗೆ ಇದೆ. ರಾಷ್ಟ್ರಧ್ವಜವನ್ನು ತೆಗೆದಿಲ್ಲ. ಧ್ವಜಸ್ಥಂಭಗಳಲ್ಲಿ ಕೇಸರಿ ಧ್ವಜವನ್ನು ಹಾಕಿಕೊಂಡು ಬಂದಿದ್ದಾರೆ. ಅದನ್ನು ತಿರುಗಿಸಿ ಹಿಂದೂ ಮುಸಲ್ಮಾನರ ಬಗ್ಗೆ ಗೊಂದಲ ಉಂಟು ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಕೇಸರಿ ಧ್ವಜ ಎಲ್ಲಿ ಬೇಕಾದರೂ ಹಾರಿಸಬಹುದು. ಮುಂದಿನ ದಿನದಲ್ಲಿ ಕೆಂಪುಕೋಟೆ ಮೇಲೆ ಹಾರಿಸುತ್ತೇವೆ. ನೂರಾರು ವರ್ಷಗಳ ಹಿಂದೆ ರಾಮ, ಮಾರುತಿಯ ರಥಗಳಲ್ಲಿ ಕೇಸರಿ ಧ್ವಜ ಇತ್ತು. ಆಗ ತ್ರಿವರ್ಣ ಧ್ವಜ ನಮ್ಮ ದೇಶದಲ್ಲಿ ಇತ್ತಾ? ಅದು ಈಗ ರಾಷ್ಟ್ರಧ್ವಜ ಆಗಿದೆ. ಆದರೆ ಈಗ ಈ ದೇಶದಲ್ಲಿ ಅನ್ನ ತಿಂದ ಪ್ರತಿಯೊಬ್ಬನೂ ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು, ಇದರ ಬಗ್ಗೆ ಪ್ರಶ್ನೆಯೆ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಇವತ್ತು ಹಿಂದೂ ವಿಚಾರದ ಬಗ್ಗೆ, ಹಿಂದುತ್ವದ ಬಗ್ಗೆ ದೇಶದಲ್ಲಿ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆ ರಾಮಮಂದಿರ ಕಟ್ಟುವ ಬಗ್ಗೆ ಕೇಳಿ ನಗುತ್ತಿದ್ದರು. ಈಗ ಕಟ್ಟಿದ್ದೇವೆ ಅಲ್ಲವೇ? ಹಾಗೆಯೆ ಯಾವುದೋ ಕಾದಲ್ಲಿ, ನೂರು, ಇನ್ನೂರು ಅಥವಾ ಐನೂರು ವರ್ಷಗಳಲ್ಲಿ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ಎಲ್ಲಿ ಬೇಕಾದರೂ ಹಾರಾಡಬಹುದು. ಆದರೆ ಈಗ ಸಂವಿಧಾನ ಬದ್ದವಾಗಿ ತ್ರಿವರ್ಣ ಧ್ವಜವೇ ನಮ್ಮ ರಾಷ್ಟ್ರಧ್ವಜ ಎಂದು ಒಪ್ಪಿಕೊಂಡಿದ್ದೇವೆ. ಅದಕ್ಕೆ ಯಾರೇ ತಪ್ಪಿದರೂ ಅವ ರಾಷ್ಟ್ರದ್ರೋಹಿಯಾಗುತ್ತಾನೆ” ಎಂದು ಈಶ್ವರಪ್ಪ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈಶ್ವರಪ್ಪನವರು ವರಿಷ್ಠರನ್ನು ತೃಷ್ಟಿಕರಿಸಿ ಮಂತ್ರಿಪದವಿ ಉಳಿಸಿಕೊಳ್ಳುವುದಕೋಸ್ಕರ ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ

  2. ಹುಚ್ಚು ಈಶ್ವರಪ್ಪ! ಹುಂಭುತನ ಏನೇನು ಮಾತಾನಾಡುತ್ತಾನೆ ಎಂಬುದು ಅವನಿಗೆ ಗೋತ್ತಿರುವದಿಲ್ಲವಂತೆ ಈಗಾಗೀ ಆತ ಬಿ.ಜೆ.ಪಿಯ ಹಳೆಯ ಕಾರ್ಯಕರ್ತರಾದರೂ ಆತನನ್ನು ಅವರು ಮುಖ್ಯಮಂತ್ರಿ ಮಾಡಲೇ ಇಲ್ಲ !

  3. ಅಭಿವೃದ್ಧಿ ಪರ ಕೆಲಸ ಮಾಡ್ರಿ ಜಾತಿ ಮತ ಧರ್ಮ ಕೇಸರಿ ಹಸಿರು ಕಪ್ಪು ನೀಲಿ ಅಂತಾ ರಾಜಕೀಯ ಮಾಡಿ ದೇಶದ ಸ್ವಾಸ್ತ್ಯ ಹಾಳು ಮಾಡಬೇಡಿ
    ಇದು ನಿಮ್ಮ ತಪ್ಪಲ್ಲಜಾತಿ ಧರ್ಮದ ಅಮಲಿನಲ್ಲಿ ನಿಮ್ಮಂತ ವರಿಗೆ vote ಹಾಕ್ತಾರಲ್ಲ ಅವ್ರೆಲ್ಲಾ ಬದಲಾಗಬೇಕು

  4. ಈಶ್ವರಪ್ಪ ಅಂತಹ ಅವಿವೇಕಿ ಮತ್ತು ವಿಕೃತ ಮನಸ್ಸಿನ ರಾಜಕಾರಣಿಗೆ ನಮ್ಮ ಜನ ವೋಟು ಹಾಕಿ ಗೆಲ್ಲಿಸಿರುವುದೇ ದೊಡ್ಡ ದುರಂತ!

    ಈಶ್ವರಪ್ಪ ಅವರ ಹೇಳಿಕೆ ದೇಶ ದ್ರೋಹಿ ಹೇಳಿಕೆಯಾಗಿದ್ದು, ರಾಷ್ಟ್ರ ಭಕ್ತರು ಎಂದು ಹೇಳಿಕೊಳ್ಳುವ ಕೇಸರಿಯಾ ರಾಷ್ಟ್ರೀಯ ಸುಲಭ್ ಸೌಚಾಲಯದ ಸ್ವಯಂ ಘೋಷಿತ ಮುಠ್ಠಾಳರು ಮೌನವಾಗಿರುವುದು ಏಕೆ?

    ಹಣ ಮತ್ತು ಅಧಿಕಾರದ ಅಹಂ ಹೊದ್ದುಕೊಂಡಿರುವ ಈಶ್ವರಪ್ಪ ಅವರೇ ಕಾಲಯ ತಸ್ಮೈಯೇ ನಮಃ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...