Homeಕರ್ನಾಟಕದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

- Advertisement -
- Advertisement -

ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಹುದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಈಶ್ವರಪ್ಪ, “ಇವತ್ತು ಇಡೀ ದೇಶದಲ್ಲಿ ತ್ರಿವರ್ಣ ಧ್ವಜ ರಾಷ್ಟ್ರಧ್ವಜ ಆಗಿದೆ. ಇದರಲ್ಲಿ ಏನೂ ಅನುಮಾನ ಇಲ್ಲ. ಅದಕ್ಕೆ ನಾವೆಲ್ಲರೂ ಕೂಡಾ ಗೌರವ ಕೊಡುತ್ತೇವೆ. ಅಲ್ಲಿ ಭಗವಾಧ್ವಜ ಹಾರಿಸಿದ್ದು ಹೌದು. ಕೇಸರಿ ಧ್ವಜ ಹಾರಿಸಬಾರದೇನು?” ಎಂದು ಕೇಳಿದ್ದಾರೆ.

ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿಧ್ವಜ ಹಾರಿಸಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, “ಕೇಸರಿ ಯಾವ ಧ್ವಜ ಸ್ಥಂಭದಲ್ಲಿ ಬೇಕಾದರೂ ಹಾರಿಸಬಹುದು. ಯಾವುದೇ ಸ್ಥಳದಲ್ಲಿ ಬೇಕಾದರೂ ಕೇಸರಿ ಧ್ವಜ ಹಾರಿಸಬಹುದು. ಆದರೆ ರಾಷ್ಟ್ರಧ್ವಜವನ್ನು ತೆಗೆದು ಯಾವುದೇ ಕೇಸರಿ ಧ್ವಜ ಹಾಕಿಲ್ಲ, ಹಾಕುವುದು ಇಲ್ಲ. ಹಿಂದೂ ಮುಸಲ್ಮಾನರಲ್ಲಿ ಧ್ವೇಷ ಬೆಳೆಸುವುದಕ್ಕೋಸ್ಕರ ರಾಷ್ಟ್ರ ಧ್ವಜವನ್ನು ಬಳಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್‌ ಸುಳ್ಳು ಹೇಳಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಡಿಕೆ ಶಿವಕುಮಾರ್‌‌ಗಿಂತಲೂ ಹೆಚ್ಚು ಗೌರವ ನಮಗೆ ಇದೆ. ರಾಷ್ಟ್ರಧ್ವಜವನ್ನು ತೆಗೆದಿಲ್ಲ. ಧ್ವಜಸ್ಥಂಭಗಳಲ್ಲಿ ಕೇಸರಿ ಧ್ವಜವನ್ನು ಹಾಕಿಕೊಂಡು ಬಂದಿದ್ದಾರೆ. ಅದನ್ನು ತಿರುಗಿಸಿ ಹಿಂದೂ ಮುಸಲ್ಮಾನರ ಬಗ್ಗೆ ಗೊಂದಲ ಉಂಟು ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಕೇಸರಿ ಧ್ವಜ ಎಲ್ಲಿ ಬೇಕಾದರೂ ಹಾರಿಸಬಹುದು. ಮುಂದಿನ ದಿನದಲ್ಲಿ ಕೆಂಪುಕೋಟೆ ಮೇಲೆ ಹಾರಿಸುತ್ತೇವೆ. ನೂರಾರು ವರ್ಷಗಳ ಹಿಂದೆ ರಾಮ, ಮಾರುತಿಯ ರಥಗಳಲ್ಲಿ ಕೇಸರಿ ಧ್ವಜ ಇತ್ತು. ಆಗ ತ್ರಿವರ್ಣ ಧ್ವಜ ನಮ್ಮ ದೇಶದಲ್ಲಿ ಇತ್ತಾ? ಅದು ಈಗ ರಾಷ್ಟ್ರಧ್ವಜ ಆಗಿದೆ. ಆದರೆ ಈಗ ಈ ದೇಶದಲ್ಲಿ ಅನ್ನ ತಿಂದ ಪ್ರತಿಯೊಬ್ಬನೂ ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು, ಇದರ ಬಗ್ಗೆ ಪ್ರಶ್ನೆಯೆ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಇವತ್ತು ಹಿಂದೂ ವಿಚಾರದ ಬಗ್ಗೆ, ಹಿಂದುತ್ವದ ಬಗ್ಗೆ ದೇಶದಲ್ಲಿ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆ ರಾಮಮಂದಿರ ಕಟ್ಟುವ ಬಗ್ಗೆ ಕೇಳಿ ನಗುತ್ತಿದ್ದರು. ಈಗ ಕಟ್ಟಿದ್ದೇವೆ ಅಲ್ಲವೇ? ಹಾಗೆಯೆ ಯಾವುದೋ ಕಾದಲ್ಲಿ, ನೂರು, ಇನ್ನೂರು ಅಥವಾ ಐನೂರು ವರ್ಷಗಳಲ್ಲಿ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ಎಲ್ಲಿ ಬೇಕಾದರೂ ಹಾರಾಡಬಹುದು. ಆದರೆ ಈಗ ಸಂವಿಧಾನ ಬದ್ದವಾಗಿ ತ್ರಿವರ್ಣ ಧ್ವಜವೇ ನಮ್ಮ ರಾಷ್ಟ್ರಧ್ವಜ ಎಂದು ಒಪ್ಪಿಕೊಂಡಿದ್ದೇವೆ. ಅದಕ್ಕೆ ಯಾರೇ ತಪ್ಪಿದರೂ ಅವ ರಾಷ್ಟ್ರದ್ರೋಹಿಯಾಗುತ್ತಾನೆ” ಎಂದು ಈಶ್ವರಪ್ಪ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈಶ್ವರಪ್ಪನವರು ವರಿಷ್ಠರನ್ನು ತೃಷ್ಟಿಕರಿಸಿ ಮಂತ್ರಿಪದವಿ ಉಳಿಸಿಕೊಳ್ಳುವುದಕೋಸ್ಕರ ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ

  2. ಹುಚ್ಚು ಈಶ್ವರಪ್ಪ! ಹುಂಭುತನ ಏನೇನು ಮಾತಾನಾಡುತ್ತಾನೆ ಎಂಬುದು ಅವನಿಗೆ ಗೋತ್ತಿರುವದಿಲ್ಲವಂತೆ ಈಗಾಗೀ ಆತ ಬಿ.ಜೆ.ಪಿಯ ಹಳೆಯ ಕಾರ್ಯಕರ್ತರಾದರೂ ಆತನನ್ನು ಅವರು ಮುಖ್ಯಮಂತ್ರಿ ಮಾಡಲೇ ಇಲ್ಲ !

  3. ಅಭಿವೃದ್ಧಿ ಪರ ಕೆಲಸ ಮಾಡ್ರಿ ಜಾತಿ ಮತ ಧರ್ಮ ಕೇಸರಿ ಹಸಿರು ಕಪ್ಪು ನೀಲಿ ಅಂತಾ ರಾಜಕೀಯ ಮಾಡಿ ದೇಶದ ಸ್ವಾಸ್ತ್ಯ ಹಾಳು ಮಾಡಬೇಡಿ
    ಇದು ನಿಮ್ಮ ತಪ್ಪಲ್ಲಜಾತಿ ಧರ್ಮದ ಅಮಲಿನಲ್ಲಿ ನಿಮ್ಮಂತ ವರಿಗೆ vote ಹಾಕ್ತಾರಲ್ಲ ಅವ್ರೆಲ್ಲಾ ಬದಲಾಗಬೇಕು

  4. ಈಶ್ವರಪ್ಪ ಅಂತಹ ಅವಿವೇಕಿ ಮತ್ತು ವಿಕೃತ ಮನಸ್ಸಿನ ರಾಜಕಾರಣಿಗೆ ನಮ್ಮ ಜನ ವೋಟು ಹಾಕಿ ಗೆಲ್ಲಿಸಿರುವುದೇ ದೊಡ್ಡ ದುರಂತ!

    ಈಶ್ವರಪ್ಪ ಅವರ ಹೇಳಿಕೆ ದೇಶ ದ್ರೋಹಿ ಹೇಳಿಕೆಯಾಗಿದ್ದು, ರಾಷ್ಟ್ರ ಭಕ್ತರು ಎಂದು ಹೇಳಿಕೊಳ್ಳುವ ಕೇಸರಿಯಾ ರಾಷ್ಟ್ರೀಯ ಸುಲಭ್ ಸೌಚಾಲಯದ ಸ್ವಯಂ ಘೋಷಿತ ಮುಠ್ಠಾಳರು ಮೌನವಾಗಿರುವುದು ಏಕೆ?

    ಹಣ ಮತ್ತು ಅಧಿಕಾರದ ಅಹಂ ಹೊದ್ದುಕೊಂಡಿರುವ ಈಶ್ವರಪ್ಪ ಅವರೇ ಕಾಲಯ ತಸ್ಮೈಯೇ ನಮಃ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...