Homeಕರ್ನಾಟಕದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

- Advertisement -
- Advertisement -

ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಹುದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಈಶ್ವರಪ್ಪ, “ಇವತ್ತು ಇಡೀ ದೇಶದಲ್ಲಿ ತ್ರಿವರ್ಣ ಧ್ವಜ ರಾಷ್ಟ್ರಧ್ವಜ ಆಗಿದೆ. ಇದರಲ್ಲಿ ಏನೂ ಅನುಮಾನ ಇಲ್ಲ. ಅದಕ್ಕೆ ನಾವೆಲ್ಲರೂ ಕೂಡಾ ಗೌರವ ಕೊಡುತ್ತೇವೆ. ಅಲ್ಲಿ ಭಗವಾಧ್ವಜ ಹಾರಿಸಿದ್ದು ಹೌದು. ಕೇಸರಿ ಧ್ವಜ ಹಾರಿಸಬಾರದೇನು?” ಎಂದು ಕೇಳಿದ್ದಾರೆ.

ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿಧ್ವಜ ಹಾರಿಸಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, “ಕೇಸರಿ ಯಾವ ಧ್ವಜ ಸ್ಥಂಭದಲ್ಲಿ ಬೇಕಾದರೂ ಹಾರಿಸಬಹುದು. ಯಾವುದೇ ಸ್ಥಳದಲ್ಲಿ ಬೇಕಾದರೂ ಕೇಸರಿ ಧ್ವಜ ಹಾರಿಸಬಹುದು. ಆದರೆ ರಾಷ್ಟ್ರಧ್ವಜವನ್ನು ತೆಗೆದು ಯಾವುದೇ ಕೇಸರಿ ಧ್ವಜ ಹಾಕಿಲ್ಲ, ಹಾಕುವುದು ಇಲ್ಲ. ಹಿಂದೂ ಮುಸಲ್ಮಾನರಲ್ಲಿ ಧ್ವೇಷ ಬೆಳೆಸುವುದಕ್ಕೋಸ್ಕರ ರಾಷ್ಟ್ರ ಧ್ವಜವನ್ನು ಬಳಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್‌ ಸುಳ್ಳು ಹೇಳಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಡಿಕೆ ಶಿವಕುಮಾರ್‌‌ಗಿಂತಲೂ ಹೆಚ್ಚು ಗೌರವ ನಮಗೆ ಇದೆ. ರಾಷ್ಟ್ರಧ್ವಜವನ್ನು ತೆಗೆದಿಲ್ಲ. ಧ್ವಜಸ್ಥಂಭಗಳಲ್ಲಿ ಕೇಸರಿ ಧ್ವಜವನ್ನು ಹಾಕಿಕೊಂಡು ಬಂದಿದ್ದಾರೆ. ಅದನ್ನು ತಿರುಗಿಸಿ ಹಿಂದೂ ಮುಸಲ್ಮಾನರ ಬಗ್ಗೆ ಗೊಂದಲ ಉಂಟು ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಕೇಸರಿ ಧ್ವಜ ಎಲ್ಲಿ ಬೇಕಾದರೂ ಹಾರಿಸಬಹುದು. ಮುಂದಿನ ದಿನದಲ್ಲಿ ಕೆಂಪುಕೋಟೆ ಮೇಲೆ ಹಾರಿಸುತ್ತೇವೆ. ನೂರಾರು ವರ್ಷಗಳ ಹಿಂದೆ ರಾಮ, ಮಾರುತಿಯ ರಥಗಳಲ್ಲಿ ಕೇಸರಿ ಧ್ವಜ ಇತ್ತು. ಆಗ ತ್ರಿವರ್ಣ ಧ್ವಜ ನಮ್ಮ ದೇಶದಲ್ಲಿ ಇತ್ತಾ? ಅದು ಈಗ ರಾಷ್ಟ್ರಧ್ವಜ ಆಗಿದೆ. ಆದರೆ ಈಗ ಈ ದೇಶದಲ್ಲಿ ಅನ್ನ ತಿಂದ ಪ್ರತಿಯೊಬ್ಬನೂ ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು, ಇದರ ಬಗ್ಗೆ ಪ್ರಶ್ನೆಯೆ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಇವತ್ತು ಹಿಂದೂ ವಿಚಾರದ ಬಗ್ಗೆ, ಹಿಂದುತ್ವದ ಬಗ್ಗೆ ದೇಶದಲ್ಲಿ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆ ರಾಮಮಂದಿರ ಕಟ್ಟುವ ಬಗ್ಗೆ ಕೇಳಿ ನಗುತ್ತಿದ್ದರು. ಈಗ ಕಟ್ಟಿದ್ದೇವೆ ಅಲ್ಲವೇ? ಹಾಗೆಯೆ ಯಾವುದೋ ಕಾದಲ್ಲಿ, ನೂರು, ಇನ್ನೂರು ಅಥವಾ ಐನೂರು ವರ್ಷಗಳಲ್ಲಿ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ಎಲ್ಲಿ ಬೇಕಾದರೂ ಹಾರಾಡಬಹುದು. ಆದರೆ ಈಗ ಸಂವಿಧಾನ ಬದ್ದವಾಗಿ ತ್ರಿವರ್ಣ ಧ್ವಜವೇ ನಮ್ಮ ರಾಷ್ಟ್ರಧ್ವಜ ಎಂದು ಒಪ್ಪಿಕೊಂಡಿದ್ದೇವೆ. ಅದಕ್ಕೆ ಯಾರೇ ತಪ್ಪಿದರೂ ಅವ ರಾಷ್ಟ್ರದ್ರೋಹಿಯಾಗುತ್ತಾನೆ” ಎಂದು ಈಶ್ವರಪ್ಪ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈಶ್ವರಪ್ಪನವರು ವರಿಷ್ಠರನ್ನು ತೃಷ್ಟಿಕರಿಸಿ ಮಂತ್ರಿಪದವಿ ಉಳಿಸಿಕೊಳ್ಳುವುದಕೋಸ್ಕರ ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ

  2. ಹುಚ್ಚು ಈಶ್ವರಪ್ಪ! ಹುಂಭುತನ ಏನೇನು ಮಾತಾನಾಡುತ್ತಾನೆ ಎಂಬುದು ಅವನಿಗೆ ಗೋತ್ತಿರುವದಿಲ್ಲವಂತೆ ಈಗಾಗೀ ಆತ ಬಿ.ಜೆ.ಪಿಯ ಹಳೆಯ ಕಾರ್ಯಕರ್ತರಾದರೂ ಆತನನ್ನು ಅವರು ಮುಖ್ಯಮಂತ್ರಿ ಮಾಡಲೇ ಇಲ್ಲ !

  3. ಅಭಿವೃದ್ಧಿ ಪರ ಕೆಲಸ ಮಾಡ್ರಿ ಜಾತಿ ಮತ ಧರ್ಮ ಕೇಸರಿ ಹಸಿರು ಕಪ್ಪು ನೀಲಿ ಅಂತಾ ರಾಜಕೀಯ ಮಾಡಿ ದೇಶದ ಸ್ವಾಸ್ತ್ಯ ಹಾಳು ಮಾಡಬೇಡಿ
    ಇದು ನಿಮ್ಮ ತಪ್ಪಲ್ಲಜಾತಿ ಧರ್ಮದ ಅಮಲಿನಲ್ಲಿ ನಿಮ್ಮಂತ ವರಿಗೆ vote ಹಾಕ್ತಾರಲ್ಲ ಅವ್ರೆಲ್ಲಾ ಬದಲಾಗಬೇಕು

  4. ಈಶ್ವರಪ್ಪ ಅಂತಹ ಅವಿವೇಕಿ ಮತ್ತು ವಿಕೃತ ಮನಸ್ಸಿನ ರಾಜಕಾರಣಿಗೆ ನಮ್ಮ ಜನ ವೋಟು ಹಾಕಿ ಗೆಲ್ಲಿಸಿರುವುದೇ ದೊಡ್ಡ ದುರಂತ!

    ಈಶ್ವರಪ್ಪ ಅವರ ಹೇಳಿಕೆ ದೇಶ ದ್ರೋಹಿ ಹೇಳಿಕೆಯಾಗಿದ್ದು, ರಾಷ್ಟ್ರ ಭಕ್ತರು ಎಂದು ಹೇಳಿಕೊಳ್ಳುವ ಕೇಸರಿಯಾ ರಾಷ್ಟ್ರೀಯ ಸುಲಭ್ ಸೌಚಾಲಯದ ಸ್ವಯಂ ಘೋಷಿತ ಮುಠ್ಠಾಳರು ಮೌನವಾಗಿರುವುದು ಏಕೆ?

    ಹಣ ಮತ್ತು ಅಧಿಕಾರದ ಅಹಂ ಹೊದ್ದುಕೊಂಡಿರುವ ಈಶ್ವರಪ್ಪ ಅವರೇ ಕಾಲಯ ತಸ್ಮೈಯೇ ನಮಃ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...