Homeಕರ್ನಾಟಕದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

- Advertisement -
- Advertisement -

ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಹುದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಈಶ್ವರಪ್ಪ, “ಇವತ್ತು ಇಡೀ ದೇಶದಲ್ಲಿ ತ್ರಿವರ್ಣ ಧ್ವಜ ರಾಷ್ಟ್ರಧ್ವಜ ಆಗಿದೆ. ಇದರಲ್ಲಿ ಏನೂ ಅನುಮಾನ ಇಲ್ಲ. ಅದಕ್ಕೆ ನಾವೆಲ್ಲರೂ ಕೂಡಾ ಗೌರವ ಕೊಡುತ್ತೇವೆ. ಅಲ್ಲಿ ಭಗವಾಧ್ವಜ ಹಾರಿಸಿದ್ದು ಹೌದು. ಕೇಸರಿ ಧ್ವಜ ಹಾರಿಸಬಾರದೇನು?” ಎಂದು ಕೇಳಿದ್ದಾರೆ.

ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿಧ್ವಜ ಹಾರಿಸಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, “ಕೇಸರಿ ಯಾವ ಧ್ವಜ ಸ್ಥಂಭದಲ್ಲಿ ಬೇಕಾದರೂ ಹಾರಿಸಬಹುದು. ಯಾವುದೇ ಸ್ಥಳದಲ್ಲಿ ಬೇಕಾದರೂ ಕೇಸರಿ ಧ್ವಜ ಹಾರಿಸಬಹುದು. ಆದರೆ ರಾಷ್ಟ್ರಧ್ವಜವನ್ನು ತೆಗೆದು ಯಾವುದೇ ಕೇಸರಿ ಧ್ವಜ ಹಾಕಿಲ್ಲ, ಹಾಕುವುದು ಇಲ್ಲ. ಹಿಂದೂ ಮುಸಲ್ಮಾನರಲ್ಲಿ ಧ್ವೇಷ ಬೆಳೆಸುವುದಕ್ಕೋಸ್ಕರ ರಾಷ್ಟ್ರ ಧ್ವಜವನ್ನು ಬಳಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್‌ ಸುಳ್ಳು ಹೇಳಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಡಿಕೆ ಶಿವಕುಮಾರ್‌‌ಗಿಂತಲೂ ಹೆಚ್ಚು ಗೌರವ ನಮಗೆ ಇದೆ. ರಾಷ್ಟ್ರಧ್ವಜವನ್ನು ತೆಗೆದಿಲ್ಲ. ಧ್ವಜಸ್ಥಂಭಗಳಲ್ಲಿ ಕೇಸರಿ ಧ್ವಜವನ್ನು ಹಾಕಿಕೊಂಡು ಬಂದಿದ್ದಾರೆ. ಅದನ್ನು ತಿರುಗಿಸಿ ಹಿಂದೂ ಮುಸಲ್ಮಾನರ ಬಗ್ಗೆ ಗೊಂದಲ ಉಂಟು ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಕೇಸರಿ ಧ್ವಜ ಎಲ್ಲಿ ಬೇಕಾದರೂ ಹಾರಿಸಬಹುದು. ಮುಂದಿನ ದಿನದಲ್ಲಿ ಕೆಂಪುಕೋಟೆ ಮೇಲೆ ಹಾರಿಸುತ್ತೇವೆ. ನೂರಾರು ವರ್ಷಗಳ ಹಿಂದೆ ರಾಮ, ಮಾರುತಿಯ ರಥಗಳಲ್ಲಿ ಕೇಸರಿ ಧ್ವಜ ಇತ್ತು. ಆಗ ತ್ರಿವರ್ಣ ಧ್ವಜ ನಮ್ಮ ದೇಶದಲ್ಲಿ ಇತ್ತಾ? ಅದು ಈಗ ರಾಷ್ಟ್ರಧ್ವಜ ಆಗಿದೆ. ಆದರೆ ಈಗ ಈ ದೇಶದಲ್ಲಿ ಅನ್ನ ತಿಂದ ಪ್ರತಿಯೊಬ್ಬನೂ ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು, ಇದರ ಬಗ್ಗೆ ಪ್ರಶ್ನೆಯೆ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಇವತ್ತು ಹಿಂದೂ ವಿಚಾರದ ಬಗ್ಗೆ, ಹಿಂದುತ್ವದ ಬಗ್ಗೆ ದೇಶದಲ್ಲಿ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆ ರಾಮಮಂದಿರ ಕಟ್ಟುವ ಬಗ್ಗೆ ಕೇಳಿ ನಗುತ್ತಿದ್ದರು. ಈಗ ಕಟ್ಟಿದ್ದೇವೆ ಅಲ್ಲವೇ? ಹಾಗೆಯೆ ಯಾವುದೋ ಕಾದಲ್ಲಿ, ನೂರು, ಇನ್ನೂರು ಅಥವಾ ಐನೂರು ವರ್ಷಗಳಲ್ಲಿ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ಎಲ್ಲಿ ಬೇಕಾದರೂ ಹಾರಾಡಬಹುದು. ಆದರೆ ಈಗ ಸಂವಿಧಾನ ಬದ್ದವಾಗಿ ತ್ರಿವರ್ಣ ಧ್ವಜವೇ ನಮ್ಮ ರಾಷ್ಟ್ರಧ್ವಜ ಎಂದು ಒಪ್ಪಿಕೊಂಡಿದ್ದೇವೆ. ಅದಕ್ಕೆ ಯಾರೇ ತಪ್ಪಿದರೂ ಅವ ರಾಷ್ಟ್ರದ್ರೋಹಿಯಾಗುತ್ತಾನೆ” ಎಂದು ಈಶ್ವರಪ್ಪ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈಶ್ವರಪ್ಪನವರು ವರಿಷ್ಠರನ್ನು ತೃಷ್ಟಿಕರಿಸಿ ಮಂತ್ರಿಪದವಿ ಉಳಿಸಿಕೊಳ್ಳುವುದಕೋಸ್ಕರ ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ

  2. ಹುಚ್ಚು ಈಶ್ವರಪ್ಪ! ಹುಂಭುತನ ಏನೇನು ಮಾತಾನಾಡುತ್ತಾನೆ ಎಂಬುದು ಅವನಿಗೆ ಗೋತ್ತಿರುವದಿಲ್ಲವಂತೆ ಈಗಾಗೀ ಆತ ಬಿ.ಜೆ.ಪಿಯ ಹಳೆಯ ಕಾರ್ಯಕರ್ತರಾದರೂ ಆತನನ್ನು ಅವರು ಮುಖ್ಯಮಂತ್ರಿ ಮಾಡಲೇ ಇಲ್ಲ !

  3. ಅಭಿವೃದ್ಧಿ ಪರ ಕೆಲಸ ಮಾಡ್ರಿ ಜಾತಿ ಮತ ಧರ್ಮ ಕೇಸರಿ ಹಸಿರು ಕಪ್ಪು ನೀಲಿ ಅಂತಾ ರಾಜಕೀಯ ಮಾಡಿ ದೇಶದ ಸ್ವಾಸ್ತ್ಯ ಹಾಳು ಮಾಡಬೇಡಿ
    ಇದು ನಿಮ್ಮ ತಪ್ಪಲ್ಲಜಾತಿ ಧರ್ಮದ ಅಮಲಿನಲ್ಲಿ ನಿಮ್ಮಂತ ವರಿಗೆ vote ಹಾಕ್ತಾರಲ್ಲ ಅವ್ರೆಲ್ಲಾ ಬದಲಾಗಬೇಕು

  4. ಈಶ್ವರಪ್ಪ ಅಂತಹ ಅವಿವೇಕಿ ಮತ್ತು ವಿಕೃತ ಮನಸ್ಸಿನ ರಾಜಕಾರಣಿಗೆ ನಮ್ಮ ಜನ ವೋಟು ಹಾಕಿ ಗೆಲ್ಲಿಸಿರುವುದೇ ದೊಡ್ಡ ದುರಂತ!

    ಈಶ್ವರಪ್ಪ ಅವರ ಹೇಳಿಕೆ ದೇಶ ದ್ರೋಹಿ ಹೇಳಿಕೆಯಾಗಿದ್ದು, ರಾಷ್ಟ್ರ ಭಕ್ತರು ಎಂದು ಹೇಳಿಕೊಳ್ಳುವ ಕೇಸರಿಯಾ ರಾಷ್ಟ್ರೀಯ ಸುಲಭ್ ಸೌಚಾಲಯದ ಸ್ವಯಂ ಘೋಷಿತ ಮುಠ್ಠಾಳರು ಮೌನವಾಗಿರುವುದು ಏಕೆ?

    ಹಣ ಮತ್ತು ಅಧಿಕಾರದ ಅಹಂ ಹೊದ್ದುಕೊಂಡಿರುವ ಈಶ್ವರಪ್ಪ ಅವರೇ ಕಾಲಯ ತಸ್ಮೈಯೇ ನಮಃ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...