Homeಮುಖಪುಟಕನ್ನಡ ಏಕೀಕರಣದಿಂದಲೂ ಕನ್ನಡ ಭಾಷೆಯ ಏಳ್ಗೆಗಾಗಿ, ಬಸವ ತತ್ವಕ್ಕಾಗಿ ಶ್ರಮಿಸುತ್ತಿರುವ ಭಾಲ್ಕಿ ಮಠ

ಕನ್ನಡ ಏಕೀಕರಣದಿಂದಲೂ ಕನ್ನಡ ಭಾಷೆಯ ಏಳ್ಗೆಗಾಗಿ, ಬಸವ ತತ್ವಕ್ಕಾಗಿ ಶ್ರಮಿಸುತ್ತಿರುವ ಭಾಲ್ಕಿ ಮಠ

ಕನ್ನಡ ಶಾಲೆ ಮುಚ್ಚಿ, ಇಲ್ಲದಿದ್ದರೇ ಶಿಕ್ಷೆ ಅನುಭವಿಸಿ ಎಂಬ ನಿಜಾಮರ ಆದೇಶಕ್ಕೆ ಜಗ್ಗದ ಶ್ರೀಗಳು ಶಾಲೆಯ ಮುಂದೆ ಉರ್ದು ಶಾಲೆ ಎಂಬ ನಾಮಫಲಕ ಹಾಕಿ, ಒಳಗಡೆ ಕನ್ನಡ ಪಾಠ ನಡೆಸುತ್ತಿದ್ದರು!

- Advertisement -
- Advertisement -

ಹೈದರಾಬಾದ್ ಕರ್ನಾಟಕ ಎಂದೇ ಹೆಚ್ಚು ಜನಪ್ರಿಯಾವಾಗಿರುವ ಪ್ರದೇಶದ ಜಿಲ್ಲೆಯಾದ ಬೀದರ್‌ನ ಭಾಲ್ಕಿಯ ಹಿರೇಮಠ ಸಂಸ್ಥಾನ ಹಲವು ವಿಶೇಷಗಳನ್ನೊಳಗೊಂಡ ಶರಣ ಮಠ. ನಿಜಾಮರ ಆಳ್ವಿಕೆಯಲ್ಲಿ ಉರ್ದು ಪ್ರಭಾವ ಹೆಚ್ಚಿದ್ದ ಹಾಗೂ ಕನ್ನಡಕ್ಕಿಂತಲೂ ಮರಾಠಿ ಪ್ರಭಾವ ಹೆಚ್ಚಿದ್ದ ಸಮಯದಲ್ಲಿ, ಅಲ್ಲಿ ಕನ್ನಡ ಮಾತೃಭಾಷೆಯಾಗಿದ್ದ ಜನರ ನುಡಿಯಲ್ಲೇ ಮಕ್ಕಳ ಶಿಕ್ಷಣಕ್ಕಾಗಿ ಕಂಕಣತೊಟ್ಟು, ಹಲವು ಸಮಸ್ಯೆಗಳ ನಡುವೆಯೇ ಹೋರಾಟಗಳನ್ನು ಮಾಡಿ, ಕನ್ನಡ ಶಾಲೆಗಳನ್ನು ಸ್ಥಾಪಿಸಿ ಯಶಸ್ವಿಗೊಳಿಸಿದ ಈ ಮಠದ ಮತ್ತು ಮಠದ ಸಂಸ್ಥಾಪಕರಾದ ಚನ್ನಬಸವ ಪಟ್ಟದೇವರು ಶ್ರೀಗಳ ಕೆಲಸ ಸ್ಮರಣೀಯವಾದದ್ದು.


ಅಷ್ಟೇ ಅಲ್ಲದೆ ಬಸವ ಮತ್ತು ಶರಣ ಚಳವಳಿಯ ಪ್ರಸಾರಕ್ಕೆ ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿಯೂ ಅವಿರತವಾಗಿ ದುಡಿಯುತ್ತಿರುವ ಮಠ ಇದು.

2020ನೇ ಸಾಲಿನ ಕನ್ನಡ ರಾಜ್ಯೋತ್ಸದ ಸಂದರ್ಭದಲ್ಲಿ ಭಾಲ್ಕಿ ಮಠದ ವಿಶೇಷತೆಗಳನ್ನು ನೆನೆಯಲು ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ, ಬಸವಕಲ್ಯಾಣದ ಅನುಭವಮಂಟಪದ ಹಾಲಿ ಅಧ್ಯಕ್ಷರಾಗಿರುವ ಶ್ರೀ ಡಾ. ಬಸವಲಿಂಗ ಪಟ್ಟದೇವರು ಅವರನ್ನು ರಾಜೇಶ್ವರ ಜುಬರೆ (ಸಾಹಿತಿಗಳು, ಹಿರೇಮಠ ಸಂಸ್ಥಾನ ಭಾಲ್ಕಿ) ಸಂದರ್ಶನ ಮಾಡಿದ್ದಾರೆ.

1. ಕನ್ನಡ ಭಾಷೆಯ ಉಳಿವು ಎಂದರೆ ಅದೊಂದು ಸಾಂಸ್ಕೃತಿಕ, ರಾಜಕೀಯ ಹೋರಾಟವೆಂದೇ ಪರಿಗಣಿಸಲಾಗುತ್ತದೆ. ಭಾಲ್ಕಿಯ ಹಿರೇಮಠ ಸಂಸ್ಥಾನ ಕನ್ನಡದ ಉಳಿವಿಗೆ ಪಣ ತೊಟ್ಟಿದ್ದು ವಿಶೇಷ. ಇದಕ್ಕೆ ಪ್ರೇರಣೆ ಏನಿರಬಹುದೆಂದು ನಿಮಗೆ ಅನ್ನಿಸುತ್ತದೆ..?

ಭಾಲ್ಕಿಯ ಹಿರೇಮಠ ಸಂಸ್ಥಾನ ಕನ್ನಡ ಉಳಿವಿಗಾಗಿ ಸತತ ಪರಿಶ್ರಮ ನಡೆಸುತ್ತಿದೆ. ಬೀದರ್ ಜಿಲ್ಲೆಯಲ್ಲಿ ನಿಜಾಮರ ಆಳ್ವಿಕೆ ಸಮಯದಲ್ಲಿ ಶುರುವಾದ ಈ ಕಾರ್ಯ ಇಂದಿಗೂ ನಡೆಯತ್ತಲೇ ಇದೆ. ಈ ಭಾಗದಲ್ಲಿ ರಾಜ್ಯ ಭಾಷೆಯಾಗಿ ಇದ್ದಿದ್ದು ಕೂಡ ಉರ್ದು.

ಇದರ ಜೊತೆ ಜೊತೆಗೆ ಮರಾಠಿ ಭಾಷೆಯ ಪ್ರಭಾವ ಬೇರೆ. ಈ ಭಾಗದಲ್ಲಿ ಕನ್ನಡಕ್ಕೆ ಯಾವುದೇ ನೆಲೆ ಇಲ್ಲದಂತೆ ಆಗಿತ್ತು. ಅಂಗಡಿಗಳಲ್ಲಿ, ಲೆಕ್ಕಪತ್ರ ವ್ಯವಹಾರಗಳಲ್ಲಿ ಕೇವಲ ಮರಾಠಿ ಬಳಸಲಾಗುತ್ತಿತ್ತು.
ಇಂತಹ ಸಂದರ್ಭದಲ್ಲಿ 1924ರಲ್ಲಿ ಭಾಲ್ಕಿ ಮಠದಲ್ಲಿ ಚನ್ನಬಸವ ಪಟ್ಟದೇವರು ಪಟ್ಟಾಧೀಶರಾದರು. ಜಿಲ್ಲೆಯ ಸ್ಥಿತಿಯನ್ನು ಗಮನಿಸಿ, ಅಧ್ಯಯನ ಮಾಡಿದ ಸ್ವಾಮಿಗಳು ಕನ್ನಡ ಶಾಲೆಯನ್ನು ತೆರೆಯುವ ಸಾಹಸಕ್ಕೆ ಕೈಹಾಕಿದರು. ಆದರೆ ಅದು ಸುಲಭದ ಮಾತಾಗಿರಲಿಲ್ಲ.

ಸ್ವಾಮಿಗಳ ಮೂಲ ಆಶಯ ವಚನ ಚಳವಳಿ. ಬಸವ ತತ್ವವನ್ನು ಉಳಿಸುವುದು, ಬೆಳೆಸುವುದು ಆಗಿತ್ತು. ಆದರೆ ವಚನ ಸಾಹಿತ್ಯವಿರುವುದು ಕನ್ನಡದಲ್ಲಿ ಹಾಗಾಗಿ ಕನ್ನಡದ ಉಳಿವಿಗೆ ಪಣ ತೊಟ್ಟರು. ವಚನ ಸಂಸ್ಕೃತಿ ಉಳಿದರೆ ನಮ್ಮ ಸಂಸ್ಕೃತಿ ಉಳಿಯುತ್ತದೆ. ವಚನ ಸಂಸ್ಕೃತಿ ಬೆಳೆದರೆ ಮಾನವೀಯ ಮೌಲ್ಯಗಳು ಬೆಳೆಯುತ್ತವೆ. ಈ ಹಿನ್ನಲೆಯಲ್ಲಿ ಕನ್ನಡವನ್ನು ಬೆಳೆಸುವ ಗುರಿ ಹೊಂದಿದ್ದರು.

2. ವಚನ ಪರಂಪರೆಯು ಸಂಸ್ಕೃತ ಮತ್ತು ಶಿಷ್ಟ ಭಾಷೆಯ ಯಾಜಮಾನ್ಯ ತಿರಸ್ಕರಿಸಿ, ಆಡು ಮಾತಿನಲ್ಲೇ ಜೀವನ ತತ್ವಗಳನ್ನು ಹಂಚಿಕೊಂಡಿದ್ದು ನಮ್ಮ ಮುಂದಿದೆ. ಅದನ್ನೂ ಕನ್ನಡದ ಚಳವಳಿ ಎನ್ನಬಹುದೇನೊ. ಈ ಹಿನ್ನೆಲೆಯಲ್ಲಿ ಹಿರೇಮಠದ ಪೀಠಾಧಿಪತಿಗಳಾಗಿದ್ದ ಚನ್ನಬಸವ ಪಟ್ಟದೇವರು ಅವರನ್ನು ನೆನಪಿಸಿಕೊಳ್ಳಲೇಬೇಕು. ಉತ್ತರ ಕರ್ನಾಟಕ ಭಾಗದಲ್ಲಿ ಅವರ ಕನ್ನಡ ಹೋರಾಟ ಒಂದು ವಿಶೇಷ ಅಧ್ಯಾಯ. ಅವರ ಕನ್ನಡ ಹೋರಾಟದ ಬಗ್ಗೆ ಹೇಳಿ.

ಹೌದು, ಉತ್ತರ ಕರ್ನಾಟಕ ಭಾಗದಲ್ಲಿ ಚನ್ನಬಸವ ಪಟ್ಟದೇವರ ಹೋರಾಟ ಒಂದು ವಿಶೇಷ ಅಧ್ಯಾಯ. ಕನ್ನಡ ಶಾಲೆಗಳನ್ನು ತೆರೆಯವ ನಿರ್ಧಾರ ಮಾಡಿದ ಶ್ರೀಗಳ ಕೆಲಸ ಸುಲಭದ್ದಾಗಿರಲಿಲ್ಲ. ನಿಜಾಮರ ಆಳ್ವಿಕೆಯಲ್ಲಿದ್ದ ಭಾಗದಲ್ಲಿ ಎಲ್ಲರ ಕಣ್ಣು ತಪ್ಪಿಸಿ ಕೆಲಸ ಮಾಡಬೇಕಿತ್ತು. ಹಾಗಾಗಿ 1936ರಲ್ಲಿ ಮೋರ್ಗಿ ಎಂಬ ಗ್ರಾಮದಲ್ಲಿ (ಇಂದು ತೆಲಂಗಾಣದಲ್ಲಿದೆ) ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಎಂಬ ಕನ್ನಡ ಶಿಕ್ಷಣ ಶಾಲೆಯನ್ನು ಸ್ಥಾಪಿಸಿದರು.
ಶಾಲೆ ಪ್ರಾರಂಭಿಸಿದರು ನಿಜ. ಆದರೆ ಶಾಲೆಗಳಿಗೆ ಮಕ್ಕಳು ಬರುತ್ತಿರಲಿಲ್ಲ. ಊಟ-ವಸತಿ ನೀಡುತ್ತೇವೆ ಎಂದರೂ, ಕನ್ನಡ ಕಲಿತು ಏನ್ನು ಲಾಭ ಎಂದು ಪೋಷಕರು ಕೇಳುತ್ತಿದ್ದರು. ಕನ್ನಡ ಕಲಿತರೆ ಕೆಲಸ ಸಿಗುವುದೇ? ಉರ್ದು, ಮರಾಠಿ ಕಲಿತವರಿಗೆ ಮಾತ್ರ ಕೆಲಸ ಸಿಗುತ್ತದೆ ಎನ್ನುತ್ತಿದ್ದರು. ಆದರೆ ಛಲ ಬಿಡದ ಅವರು ಜಿಲ್ಲೆಯಾದ್ಯಂತ ತಿರುಗಿ 50 ಮಕ್ಕಳನ್ನು ಶಾಲೆಗೆ ಕರೆತಂದರು.

ಕನ್ನಡ ಕಲಿಯುವವರು ಪಂಚಾಂಗ ಹೇಳುವವರು ಎಂಬ ನಂಬಿಕೆ ಮಠದ ಭಕ್ತಾದಿಗಳಲ್ಲಿ ಇತ್ತು. ಆದರೆ ಇವರದು ಅಚಲ ವಿಶ್ವಾಸ. ಕನ್ನಡಕ್ಕೆ ಮುಂದೊಂದು ದಿನ ಬೆಲೆ ಬರುತ್ತದೆ, ನಿಮ್ಮ ಮಕ್ಕಳಿಗೆ ಕನ್ನಡ ಕಲಿಸಿ ಎಂದು ಹೇಳುತ್ತಿದ್ದರು. ಆದರೆ 100 ಮಕ್ಕಳಲ್ಲಿ ಐದಾರು ಮಕ್ಕಳನ್ನು ಮಾತ್ರ ಪೋಷಕರು ಶಾಲೆಗೆ ಕಳುಹಿಸುತ್ತಿದ್ದರು.

ಶಾಲೆಯಲ್ಲಿ ಕಲಿಯಲು ಬಂದವರಿಗೆ ಊಟದ ವ್ಯವಸ್ಥೆ ಕೂಡ ಕಷ್ಟದ ಕೆಲಸವಾಗಿತ್ತು. ಬೀದರ್ ಜಿಲ್ಲೆ ಅಂದು ಕಡುಬಡತನದ ಜಿಲ್ಲೆ ಆಗಿತ್ತು. ಅಂತಹ ಕಾಲದಲ್ಲಿ ಕನ್ನಡ ಉಳಿಸಿ ಬೆಳೆಸಲು, ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಮುಷ್ಠಿ ಫಂಡ್ ಎಂಬ ಅಭಿಯಾನ ಆರಂಭಿಸಿದರು.

ಅಂದಿನ ಕಾಲದಲ್ಲಿ ಜೋಳ ಬೀಸಲು ಯಂತ್ರಗಳಿರಲಿಲ್ಲ. ಹಳ್ಳಿಗಳಲ್ಲಿ ಅಲ್ಲಲ್ಲಿ ಬೀಸುವ ಕಲ್ಲುಗಳು ಇರುತ್ತಿದ್ದವು. ಸ್ವಾಮಿಗಳು ಬೀಸುವಕಲ್ಲು ಇರುವ ಜಾಗಗಳಲ್ಲಿ ಕಲ್ಲಿನ ಮೇಲೆ ಜೋಳಿಗೆ ನೇತುಹಾಕುತ್ತಿದ್ದರು. ಜೋಳ ಬೀಸಲು ಬರುತ್ತಿದ್ದ ಹೆಣ್ಣುಮಕ್ಕಳು ತಾವು ಜೋಳ ಬೀಸುವ ಮುನ್ನ ಒಂದು ಹಿಡಿ ಜೋಳವನ್ನು ಜೋಳಿಗೆಗೆ ಹಾಕುತ್ತಿದ್ದರು. ಅದನ್ನು ವಾರದ ಬಳಿಕ ಸಂಗ್ರಹಿಸಿ ಮಕ್ಕಳ ಆಹಾರಕ್ಕಾಗಿ ಬಳಸುತ್ತಿದ್ದರು. ಇದೇ ಮುಷ್ಠಿ ಫಂಡ್.
ಶಾಲೆ ಇದ್ದ ಸ್ಥಳದಲ್ಲಿ ನೀರಿನ ಸಮಸ್ಯೆ ಹೆಚ್ಚಾದ ಕಾರಣ ಶಾಲೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಿದರು.

ಮುಷ್ಠಿ ಫಂಡ್ ಜೊತೆಗೆ ಪ್ರತಿ ಮನೆಯೂ ವರ್ಷಕ್ಕೆ 2 ರೂ ನೀಡುವಂತೆ ಮಾಡಿದ್ದರು. ಇದರಿಂದ ಶಿಕ್ಷಕರಿಗೆ ಸಂಬಳ, ಮಕ್ಕಳ ವಿದ್ಯಾಭ್ಯಾಸದ ಖರ್ಚು ನೋಡಿಕೊಳ್ಳಲಾಗುತ್ತಿತ್ತು. ಜೊತೆಗೆ ಪ್ರತಿ ಹಬ್ಬದಲ್ಲೂ ಅಂಗಡಿಗಳಲ್ಲಿ ವಂತಿಕೆ ಪಡೆದು ಶಿಕ್ಷಣ ಸಂಸ್ಥೆ ನಡೆಸುತ್ತಿದ್ದರು. ಕನ್ನಡ ಶಾಲೆ ಉಳಿವಿಗೆ ದೇಣಿಗೆ ಸಂಗ್ರಹಿಸಲು, ಹಳ್ಳಿಗಳು, ಪಟ್ಟಣಗಳು ಎಂಬುದನ್ನು ನೋಡದೇ, ಹಗಲು-ರಾತ್ರಿ ಸಂಚರಿಸಿ ಕೆಲಸ ಮಾಡುತ್ತಿದ್ದರು.

ಕನ್ನಡ ಶಾಲೆಯ ಬಗ್ಗೆ ತಿಳಿದ ನಿಜಾಮರ ಸರ್ಕಾರ ಶಾಲೆ ಮುಚ್ಚಿಸಲು ಬೆದರಿಕೆ ಹಾಕಿತು. ಕನ್ನಡ ಶಾಲೆ ಮುಚ್ಚಿ ಇಲ್ಲದಿದ್ದರೇ ಕಾನೂನು ಪ್ರಕಾರ ಶಿಕ್ಷೆ ನೀಡಲಾಗುತ್ತದೆ ಎಂಬ ಆದೇಶ ಬಂತು. ಇದಕ್ಕೂ ಜಗ್ಗದ ಶ್ರೀಗಳು ಶಾಲೆಯ ಮುಂದೆ ಉರ್ದು ಶಾಲೆ ಎಂಬ ನಾಮಫಲಕ ಹಾಕಿ, ಒಳಗಡೆ ಕನ್ನಡ ಪಾಠ ನಡೆಸುತ್ತಿದ್ದರು.

ಕನ್ನಡ ಶಾಲೆ ಕಟ್ಟಲು ಆಗ ಸರ್ಕಾರದಿಂದ ಯಾವ ಸೌಲಭ್ಯಗಳೂ ಇರಲಿಲ್ಲ. ಕಾಯಕ ಜೀವಿ ಆಗಿದ್ದ ಶ್ರೀಗಳೇ ಮುಂದೆ ನಿಂತು ಶಾಲೆಯ ಕೆಲಸಗಳನ್ನು ಮಾಡುತ್ತಿದ್ದರು. ಮರಳು ಸೋಸುವುದು, ಗೋಡೆಗಳಿಗೆ ನೀರು ಹಾಕುವುದು ಹೀಗೆ ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದರು. ಇದನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡ ಗಮನಿಸಿದ್ದರು.

3. ಕನ್ನಡ ಭಾಷಿಕರನ್ನು ಒಂದೆಡೆಗೆ ತಂದಿದ್ದು ಏಕೀಕರಣ. ಈ ಹೋರಾಟದಲ್ಲಿ ಚನ್ನಬಸವ ಪಟ್ಟದೇವರು ಶ್ರೀಗಳ ಹೋರಾಟ ಬಹಳ ದೊಡ್ಡ ಪಾತ್ರ ನಿರ್ವಹಿಸಿದೆ. ಈ ಬಗ್ಗೆ ನೀವು ಗಮನಿಸಿದ ಸಂಗತಿಗಳನ್ನು ಮೆಲುಕು ಹಾಕಬಹುದೆ?

ಇಂದಿನ ನಮ್ಮ ಬೀದರ್ ಜಿಲ್ಲೆ ಕರ್ನಾಟಕದಲ್ಲಿ ಉಳಿಯಲು ಕಾರಣ ಶ್ರೀಗಳು. ಕನ್ನಡ ಏಕೀಕರಣ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ.

ಒಮ್ಮೆ ಬೀದರ್ ಜಿಲ್ಲೆಯ ಕಮಲನಗರದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅಂದೇ ಕೆಲವು ಮರಾಠಿಗರ ಮುಖಂಡರು ಕೂಡ ಗುಪ್ತವಾಗಿ ಬೃಹತ್ ಮರಾಠ ರ‍್ಯಾಲಿ ಆಯೋಜಿಸಿದ್ದರು. ಕನ್ನಡ ಏಕೀಕರಣ ಸಭೆಯಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದ ಕನ್ನಡಿಗರ ಮೇಲೆ 500-600 ಸಂಖ್ಯೆಯಲ್ಲಿ ಬಂದ ಮರಾಠಿಗರು ಹಲ್ಲೆ ಮಾಡಿದರು. ಕನ್ನಡಪರ ಹೋರಾಟಗಾರರು ಓಡಿದರೂ ಬಿಡದೇ, ಹೊಲಗಳಲ್ಲಿ ಓಡಾಡಿಸಿ ಹಲ್ಲೆ ಮಾಡಿದ್ದರು. ಅಂಥ ಸಂದರ್ಭದಲ್ಲಿ ಗುರುಗಳು ತಕ್ಷಣ ಕನ್ನಡಿಗರ ನೆರವಿಗಾಗಿ ಕಮಲನಗರಕ್ಕೆ ಹೋದರು. ಅವರುಗಳ ಜೊತೆಯೇ ಇದ್ದು ಆರೈಕೆ ಮಾಡಿದರು.

ಒಮ್ಮೆ ಬೀದರ್‌ನ ಪ್ರಮುಖರಾದ ಪ್ರಭುರಾವ್ ಕಂಬ್ಳಿವಾಲೆ ಕನ್ನಡ ಏಕೀಕರಣದ ಬಗ್ಗೆ ನೂರಾರು ಮಂದಿಯನ್ನು ಕರೆದಿದ್ದ ಸಭೆಗೆ ಶ್ರೀಗಳು ಒಬ್ಬರೇ ಹೋಗಿದ್ದರಂತೆ. ಜಯದೇವಿ ತಾಯಿ ಲಿಗಾಡೆ ಅವರ ಎಲ್ಲಾ ಸಭೆಗಳಲ್ಲೂ ಇವರು ಮುಂಚೂಣಿಯಲ್ಲಿದ್ದರು.

4. ಇದೀಗ ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲೂ ಬಸವ ತತ್ವಗಳನ್ನು ಪ್ರಸಾರ ಮಾಡುತ್ತಾ ತಾತ್ವಿಕ ವಿಸ್ತರಣೆ ನಡೆಸುತ್ತಿದ್ದೀರಿ. ಅದಕ್ಕೆ ಪ್ರತಿಕ್ರಿಯೆ ಹೇಗಿದೆ?

ಮಹಾರಾಷ್ಟ್ರದಲ್ಲಿ ಬಸವ ತತ್ವದ, ವಚನ ಸಾಹಿತ್ಯದ ಹಂಬಲವಿದೆ. ಹೀಗಾಗಿ ನಾವು ಅವರ ಭಾಷೆಗಳಲ್ಲೇ ವಚನಗಳನ್ನು, ಬಸವ ತತ್ವಗಳ ಕನ್ನಡ ಪುಸ್ತಕಗಳನ್ನು ಭಾಷಾಂತರ ಮಾಡಿದ್ದೇವೆ. ಅದು ಯಶಸ್ವಿಯಾಗಿದೆ. ಮಹಾರಾಷ್ಟ್ರದಲ್ಲಿ ಲಿಂಗಾಯತ ಚಳುವಳಿ ನಡೆಯುತ್ತಿದೆ. ಲಿಂಗಾಯತ ಸ್ವತಂತ್ರಧರ್ಮ ಎಂಬ ಚಳುವಳಿ ಇದಾಗಿದೆ. ಇದೆಲ್ಲಾ ಸಾಧ್ಯವಾಗಿದ್ದು ನಮ್ಮ ಬಸವ ತತ್ವದಿಂದ.

ತೆಲಂಗಾಣ ಜಿಲ್ಲೆಯಲ್ಲಿ ಬಸವ ತತ್ವವನ್ನು, ವಚನ ಸಾಹಿತ್ಯವನ್ನು ಪಸರಿಸುವ ಕೆಲಸವಾಗಬೇಕಿದೆ. ಅಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿದ್ದೇವೆ. ಕೆಲಸ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ವಚನ ಸಾಹಿತ್ಯದ ಬಗ್ಗೆ ತಿಳುವಳಿಕೆ ಇರುವ ಕಾರಣ, ಜೊತೆಗೆ ಮರಾಠಿ ಭಾಷೆ ಕೂಡ ಇಲ್ಲಿಗೆ ಹತ್ತಿರವಾದ ಕಾರಣ ಅಲ್ಲಿ ಬಸವ ತತ್ವ ಪಸರಿಸಲು ಸಾಧ್ಯವಾಗಿದೆ.

ಅಕ್ಷರ ರೂಪ: ಮಮತ.ಎಂ


ಇದನ್ನೂ ಓದಿ: ಲಿಂಗಾಯತ ಚಳವಳಿ : ಕೇವಲ ರಾಜಕಾರಣವಾಗಿತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...