Homeಮುಖಪುಟಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್‌ಗೆ ಸ್ಪಂದಿಸಬೇಕು.

- Advertisement -
- Advertisement -

ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹಿಸಿ ತುಮಕೂರಿನಲ್ಲಿಯೂ ಡಿಸೆಂಬರ್ 8ರಂದು ಬಂದ್ ನಡೆಸುತ್ತಿದ್ದು ರೈತ, ದಲಿತ, ಪ್ರಗತಿಪರ, ಕನ್ನಡಪರ, ಕಾರ್ಮಿಕ ಸಂಘಟನೆಗಳು, ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಾಹಿತಿ-ಕಲಾವಿದರಿಂದ ಬೆಂಬಲದ ಮಹಾಪೂರ ಹರಿದುಬಂದಿದೆ. ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್ ಗೆ ಸ್ಪಂದಿಸಬೇಕು ಎಂದು ಮುಖಂಡರು ಮನವಿ ಮಾಡಿದ್ದಾರೆ.

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಬಂದ್ ಗೆ ಜನರಿಂದಲೂ ಬೆಂಬಲ ದೊರೆಯುತ್ತಿದೆ. ದೇಶದ ಬೆನ್ನೆಲುಬು, ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದು ಹನ್ನೆರಡು ದಿನಗಳಿಂದಲೂ ಚಳಿ ಮಳೆ ಲೆಕ್ಕಿಸದೆ ದೆಹಲಿಯಲ್ಲಿ ನೂರಾರು ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ. ದೇಶದ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಸಂಗೀತ ಕೇಳುವುದರಲ್ಲಿ ಮತ್ತು ಇತರೆ ಕಾರ್ಯಕ್ರಮಗಳಲ್ಲಿ ಮಗ್ನರಾಗಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಯಾವೊಬ್ಬ ಪ್ರಧಾನಿಯೂ ಹೀಗೆ ರೈತರನ್ನು ಕಡೆಗಣಿಸಿರಲಿಲ್ಲ. ರೈತರನ್ನು ಇಷ್ಟೊಂದು ಕ್ರೂರವಾಗಿ ನಡೆಸಿಕೊಂಡಿರಲಿಲ್ಲ ಎಂದು ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೂರ ಕಾನೂನುಗಳನ್ನು ಜಾರಿಗೊಳಿಸುತ್ತಿವೆ. ಇವುಗಳು ರೈತರನ್ನು ಸಂಕಷ್ಟಕ್ಕೆ ಗುರಿ ಮಾಡುತ್ತವೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಂಥ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಈ ಬೇಡಿಕೆಗಳ ಆಧಾರದ ಮೇಲೆ ದೆಹಲಿಯಲ್ಲಿ ನಡೆಸುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ತುಮಕೂರು ಬಂದ್ ಗೆ ಆಚರಿಸುತ್ತೇವೆ. ಎಲ್ಲಾ 10 ತಾಲೂಕುಗಳಲ್ಲೂ ಪ್ರತಿಭಟನೆ ನಡೆಸುತ್ತೇವೆ. ದೆಹಲಿಯಲ್ಲಿ ರೈತರ ಮೇಲೆ ಜಲಫಿರಂಗಿ ಮೂಲಕ ಹೋರಾಟ ಹತ್ತಿಕ್ಕುವುದನ್ನು ಖಂಡಿಸುತ್ತೇವೆ. ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂದಕ್ಕೆ ಪಡೆಯಬೇಕು. ಸ್ವಾಮಿನಾಥನ್ ವರದಿಯನ್ನು ಯಥಾವತ್ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಮತ್ತು ಎಐಕೆಎಸ್ ಮುಖಂಡ ಕಂಬೇಗೌಡ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಸರಿಯಲ್ಲ. ರೈತರ ಪ್ರತಿಭಟನೆಗಳನ್ನು ಪ್ರಧಾನಿ ಗಮನಿಸಬೇಕಿತ್ತು. ಅವರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಮೊಂಡುತನ ಪ್ರದರ್ಶಿಸುತ್ತಿರುವುದು ಖಂಡನೀಯ. ಪ್ರಧಾನಿಯ ಧೋರಣೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ಎತ್ತಿತೋರಿಸುತ್ತದೆ” ಎಂದು ಟೀಕಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ಮಾತನಾಡಿ, ಪ್ರಧಾನಿಯದು ಹಿಟ್ಲರ್ ಧೋರಣೆ. ಸರ್ವಾಧಿಕಾರಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ನಿಯಮಗಳಂತೆ ನಡೆಯಬೇಕು. ಅದು ಬಿಟ್ಟು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಖಂಡನೀಯ. ಬಂದ್ ಗೆ ನಮ್ಮ ಬೆಂಬಲವೂ ಇದೆ. ಜನರಿಗೆ ಅನ್ನ ನೀಡುವ ರೈತರು ಬೀದಿಗೆ ಬಿದ್ದಿದ್ದಾರೆ. ಹಾಗಾಗಿ ಆಟೋಚಾಲಕರು, ಬಸ್ ಮಾಲಿಕರು, ಬೀದಿ ಬದಿ ವ್ಯಾಪಾರಿಗಳು ಬಂದ್ ಗೆ ಸಹಕಾರ ನೀಡಬೇಕು. ಸರ್ಕಾರ ರೈತರ ಮೇಲಿನ ದಬ್ಬಾಳಿಕೆಯನ್ನು ನಿಲ್ಲಿಸಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಮಾಡಬೇಕು ಎಂದು ಒತ್ತಾಯಿಸಿದರು.

ಬಂದ್ ಗೆ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ತುಮಕೂರು ಜಿಲ್ಲಾ ಸಮಿತಿ ಕೂಡ ಬೆಂಬಲ ಸೂಚಿಸಿದೆ.  ರೈತರ ಹೋರಾಟ ಗ್ರಾಮೀಣ ಭಾರತದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹೊಸ ಕೃಷಿ ಕಾಯ್ದೆಗಳಿಂದ ಒಕ್ಕಲುತನಕ್ಕೆ ಧಕ್ಕೆ ಆಗಲಿದೆ.  ಕಂಪನಿಗಳು ಕೃಷಿ ಮಾಡಲಿವೆ. ಇದರಿಂದ ಜನರೂ ಕೂಡ ತೀವ್ರ ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ. ಹಾಗಾಗಿ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು. ಈ ಕಾಯ್ದೆಗಳು ಅನುಷ್ಠಾನಕ್ಕೆ ಬಂದರೆ ಸಂ ರೈತರು ಕಾರ್ಪೊರೇಟ್ ಕಂಪೆನಿಗಳ ಗುಲಾಮರಾಗಿ ಕೆಲಸ ಮಾಡಬೇಕಾದ ಅನಿವಾರ್ಯತೆ ಬರುತ್ತದೆ. ಅದಾನಿ, ಅಂಬಾನಿಗಳ ಸೂಪರ್ ಲಾಭ ಗಳಿಕೆಗೆ ದಾರಿ ಮಾಡಿಕೊಡುತ್ತದೆ.  ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ. ಹಾಗಾಗಿ ಸರ್ಕಾರ ತನ್ನ ಬಿಗಿ ನಿಲುವಿನಿಂದ ಹಿಂದೆ ಸರಿಯಬೇಕು ಎಂದು ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ಹೇಳಿಕೆ ನೀಡಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...