Homeಮುಖಪುಟಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್‌ಗೆ ಸ್ಪಂದಿಸಬೇಕು.

- Advertisement -
- Advertisement -

ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹಿಸಿ ತುಮಕೂರಿನಲ್ಲಿಯೂ ಡಿಸೆಂಬರ್ 8ರಂದು ಬಂದ್ ನಡೆಸುತ್ತಿದ್ದು ರೈತ, ದಲಿತ, ಪ್ರಗತಿಪರ, ಕನ್ನಡಪರ, ಕಾರ್ಮಿಕ ಸಂಘಟನೆಗಳು, ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಾಹಿತಿ-ಕಲಾವಿದರಿಂದ ಬೆಂಬಲದ ಮಹಾಪೂರ ಹರಿದುಬಂದಿದೆ. ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್ ಗೆ ಸ್ಪಂದಿಸಬೇಕು ಎಂದು ಮುಖಂಡರು ಮನವಿ ಮಾಡಿದ್ದಾರೆ.

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಬಂದ್ ಗೆ ಜನರಿಂದಲೂ ಬೆಂಬಲ ದೊರೆಯುತ್ತಿದೆ. ದೇಶದ ಬೆನ್ನೆಲುಬು, ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದು ಹನ್ನೆರಡು ದಿನಗಳಿಂದಲೂ ಚಳಿ ಮಳೆ ಲೆಕ್ಕಿಸದೆ ದೆಹಲಿಯಲ್ಲಿ ನೂರಾರು ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ. ದೇಶದ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಸಂಗೀತ ಕೇಳುವುದರಲ್ಲಿ ಮತ್ತು ಇತರೆ ಕಾರ್ಯಕ್ರಮಗಳಲ್ಲಿ ಮಗ್ನರಾಗಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಯಾವೊಬ್ಬ ಪ್ರಧಾನಿಯೂ ಹೀಗೆ ರೈತರನ್ನು ಕಡೆಗಣಿಸಿರಲಿಲ್ಲ. ರೈತರನ್ನು ಇಷ್ಟೊಂದು ಕ್ರೂರವಾಗಿ ನಡೆಸಿಕೊಂಡಿರಲಿಲ್ಲ ಎಂದು ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೂರ ಕಾನೂನುಗಳನ್ನು ಜಾರಿಗೊಳಿಸುತ್ತಿವೆ. ಇವುಗಳು ರೈತರನ್ನು ಸಂಕಷ್ಟಕ್ಕೆ ಗುರಿ ಮಾಡುತ್ತವೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಂಥ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಈ ಬೇಡಿಕೆಗಳ ಆಧಾರದ ಮೇಲೆ ದೆಹಲಿಯಲ್ಲಿ ನಡೆಸುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ತುಮಕೂರು ಬಂದ್ ಗೆ ಆಚರಿಸುತ್ತೇವೆ. ಎಲ್ಲಾ 10 ತಾಲೂಕುಗಳಲ್ಲೂ ಪ್ರತಿಭಟನೆ ನಡೆಸುತ್ತೇವೆ. ದೆಹಲಿಯಲ್ಲಿ ರೈತರ ಮೇಲೆ ಜಲಫಿರಂಗಿ ಮೂಲಕ ಹೋರಾಟ ಹತ್ತಿಕ್ಕುವುದನ್ನು ಖಂಡಿಸುತ್ತೇವೆ. ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂದಕ್ಕೆ ಪಡೆಯಬೇಕು. ಸ್ವಾಮಿನಾಥನ್ ವರದಿಯನ್ನು ಯಥಾವತ್ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಮತ್ತು ಎಐಕೆಎಸ್ ಮುಖಂಡ ಕಂಬೇಗೌಡ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಸರಿಯಲ್ಲ. ರೈತರ ಪ್ರತಿಭಟನೆಗಳನ್ನು ಪ್ರಧಾನಿ ಗಮನಿಸಬೇಕಿತ್ತು. ಅವರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಮೊಂಡುತನ ಪ್ರದರ್ಶಿಸುತ್ತಿರುವುದು ಖಂಡನೀಯ. ಪ್ರಧಾನಿಯ ಧೋರಣೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ಎತ್ತಿತೋರಿಸುತ್ತದೆ” ಎಂದು ಟೀಕಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ಮಾತನಾಡಿ, ಪ್ರಧಾನಿಯದು ಹಿಟ್ಲರ್ ಧೋರಣೆ. ಸರ್ವಾಧಿಕಾರಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ನಿಯಮಗಳಂತೆ ನಡೆಯಬೇಕು. ಅದು ಬಿಟ್ಟು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಖಂಡನೀಯ. ಬಂದ್ ಗೆ ನಮ್ಮ ಬೆಂಬಲವೂ ಇದೆ. ಜನರಿಗೆ ಅನ್ನ ನೀಡುವ ರೈತರು ಬೀದಿಗೆ ಬಿದ್ದಿದ್ದಾರೆ. ಹಾಗಾಗಿ ಆಟೋಚಾಲಕರು, ಬಸ್ ಮಾಲಿಕರು, ಬೀದಿ ಬದಿ ವ್ಯಾಪಾರಿಗಳು ಬಂದ್ ಗೆ ಸಹಕಾರ ನೀಡಬೇಕು. ಸರ್ಕಾರ ರೈತರ ಮೇಲಿನ ದಬ್ಬಾಳಿಕೆಯನ್ನು ನಿಲ್ಲಿಸಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಮಾಡಬೇಕು ಎಂದು ಒತ್ತಾಯಿಸಿದರು.

ಬಂದ್ ಗೆ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ತುಮಕೂರು ಜಿಲ್ಲಾ ಸಮಿತಿ ಕೂಡ ಬೆಂಬಲ ಸೂಚಿಸಿದೆ.  ರೈತರ ಹೋರಾಟ ಗ್ರಾಮೀಣ ಭಾರತದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹೊಸ ಕೃಷಿ ಕಾಯ್ದೆಗಳಿಂದ ಒಕ್ಕಲುತನಕ್ಕೆ ಧಕ್ಕೆ ಆಗಲಿದೆ.  ಕಂಪನಿಗಳು ಕೃಷಿ ಮಾಡಲಿವೆ. ಇದರಿಂದ ಜನರೂ ಕೂಡ ತೀವ್ರ ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ. ಹಾಗಾಗಿ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು. ಈ ಕಾಯ್ದೆಗಳು ಅನುಷ್ಠಾನಕ್ಕೆ ಬಂದರೆ ಸಂ ರೈತರು ಕಾರ್ಪೊರೇಟ್ ಕಂಪೆನಿಗಳ ಗುಲಾಮರಾಗಿ ಕೆಲಸ ಮಾಡಬೇಕಾದ ಅನಿವಾರ್ಯತೆ ಬರುತ್ತದೆ. ಅದಾನಿ, ಅಂಬಾನಿಗಳ ಸೂಪರ್ ಲಾಭ ಗಳಿಕೆಗೆ ದಾರಿ ಮಾಡಿಕೊಡುತ್ತದೆ.  ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ. ಹಾಗಾಗಿ ಸರ್ಕಾರ ತನ್ನ ಬಿಗಿ ನಿಲುವಿನಿಂದ ಹಿಂದೆ ಸರಿಯಬೇಕು ಎಂದು ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ಹೇಳಿಕೆ ನೀಡಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...