Homeಮುಖಪುಟಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್‌ಗೆ ಸ್ಪಂದಿಸಬೇಕು.

- Advertisement -
- Advertisement -

ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹಿಸಿ ತುಮಕೂರಿನಲ್ಲಿಯೂ ಡಿಸೆಂಬರ್ 8ರಂದು ಬಂದ್ ನಡೆಸುತ್ತಿದ್ದು ರೈತ, ದಲಿತ, ಪ್ರಗತಿಪರ, ಕನ್ನಡಪರ, ಕಾರ್ಮಿಕ ಸಂಘಟನೆಗಳು, ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಾಹಿತಿ-ಕಲಾವಿದರಿಂದ ಬೆಂಬಲದ ಮಹಾಪೂರ ಹರಿದುಬಂದಿದೆ. ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್ ಗೆ ಸ್ಪಂದಿಸಬೇಕು ಎಂದು ಮುಖಂಡರು ಮನವಿ ಮಾಡಿದ್ದಾರೆ.

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಬಂದ್ ಗೆ ಜನರಿಂದಲೂ ಬೆಂಬಲ ದೊರೆಯುತ್ತಿದೆ. ದೇಶದ ಬೆನ್ನೆಲುಬು, ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದು ಹನ್ನೆರಡು ದಿನಗಳಿಂದಲೂ ಚಳಿ ಮಳೆ ಲೆಕ್ಕಿಸದೆ ದೆಹಲಿಯಲ್ಲಿ ನೂರಾರು ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ. ದೇಶದ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಸಂಗೀತ ಕೇಳುವುದರಲ್ಲಿ ಮತ್ತು ಇತರೆ ಕಾರ್ಯಕ್ರಮಗಳಲ್ಲಿ ಮಗ್ನರಾಗಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಯಾವೊಬ್ಬ ಪ್ರಧಾನಿಯೂ ಹೀಗೆ ರೈತರನ್ನು ಕಡೆಗಣಿಸಿರಲಿಲ್ಲ. ರೈತರನ್ನು ಇಷ್ಟೊಂದು ಕ್ರೂರವಾಗಿ ನಡೆಸಿಕೊಂಡಿರಲಿಲ್ಲ ಎಂದು ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೂರ ಕಾನೂನುಗಳನ್ನು ಜಾರಿಗೊಳಿಸುತ್ತಿವೆ. ಇವುಗಳು ರೈತರನ್ನು ಸಂಕಷ್ಟಕ್ಕೆ ಗುರಿ ಮಾಡುತ್ತವೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಂಥ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಈ ಬೇಡಿಕೆಗಳ ಆಧಾರದ ಮೇಲೆ ದೆಹಲಿಯಲ್ಲಿ ನಡೆಸುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ತುಮಕೂರು ಬಂದ್ ಗೆ ಆಚರಿಸುತ್ತೇವೆ. ಎಲ್ಲಾ 10 ತಾಲೂಕುಗಳಲ್ಲೂ ಪ್ರತಿಭಟನೆ ನಡೆಸುತ್ತೇವೆ. ದೆಹಲಿಯಲ್ಲಿ ರೈತರ ಮೇಲೆ ಜಲಫಿರಂಗಿ ಮೂಲಕ ಹೋರಾಟ ಹತ್ತಿಕ್ಕುವುದನ್ನು ಖಂಡಿಸುತ್ತೇವೆ. ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂದಕ್ಕೆ ಪಡೆಯಬೇಕು. ಸ್ವಾಮಿನಾಥನ್ ವರದಿಯನ್ನು ಯಥಾವತ್ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಮತ್ತು ಎಐಕೆಎಸ್ ಮುಖಂಡ ಕಂಬೇಗೌಡ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಸರಿಯಲ್ಲ. ರೈತರ ಪ್ರತಿಭಟನೆಗಳನ್ನು ಪ್ರಧಾನಿ ಗಮನಿಸಬೇಕಿತ್ತು. ಅವರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಮೊಂಡುತನ ಪ್ರದರ್ಶಿಸುತ್ತಿರುವುದು ಖಂಡನೀಯ. ಪ್ರಧಾನಿಯ ಧೋರಣೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ಎತ್ತಿತೋರಿಸುತ್ತದೆ” ಎಂದು ಟೀಕಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ಮಾತನಾಡಿ, ಪ್ರಧಾನಿಯದು ಹಿಟ್ಲರ್ ಧೋರಣೆ. ಸರ್ವಾಧಿಕಾರಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ನಿಯಮಗಳಂತೆ ನಡೆಯಬೇಕು. ಅದು ಬಿಟ್ಟು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಖಂಡನೀಯ. ಬಂದ್ ಗೆ ನಮ್ಮ ಬೆಂಬಲವೂ ಇದೆ. ಜನರಿಗೆ ಅನ್ನ ನೀಡುವ ರೈತರು ಬೀದಿಗೆ ಬಿದ್ದಿದ್ದಾರೆ. ಹಾಗಾಗಿ ಆಟೋಚಾಲಕರು, ಬಸ್ ಮಾಲಿಕರು, ಬೀದಿ ಬದಿ ವ್ಯಾಪಾರಿಗಳು ಬಂದ್ ಗೆ ಸಹಕಾರ ನೀಡಬೇಕು. ಸರ್ಕಾರ ರೈತರ ಮೇಲಿನ ದಬ್ಬಾಳಿಕೆಯನ್ನು ನಿಲ್ಲಿಸಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಮಾಡಬೇಕು ಎಂದು ಒತ್ತಾಯಿಸಿದರು.

ಬಂದ್ ಗೆ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ತುಮಕೂರು ಜಿಲ್ಲಾ ಸಮಿತಿ ಕೂಡ ಬೆಂಬಲ ಸೂಚಿಸಿದೆ.  ರೈತರ ಹೋರಾಟ ಗ್ರಾಮೀಣ ಭಾರತದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹೊಸ ಕೃಷಿ ಕಾಯ್ದೆಗಳಿಂದ ಒಕ್ಕಲುತನಕ್ಕೆ ಧಕ್ಕೆ ಆಗಲಿದೆ.  ಕಂಪನಿಗಳು ಕೃಷಿ ಮಾಡಲಿವೆ. ಇದರಿಂದ ಜನರೂ ಕೂಡ ತೀವ್ರ ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ. ಹಾಗಾಗಿ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು. ಈ ಕಾಯ್ದೆಗಳು ಅನುಷ್ಠಾನಕ್ಕೆ ಬಂದರೆ ಸಂ ರೈತರು ಕಾರ್ಪೊರೇಟ್ ಕಂಪೆನಿಗಳ ಗುಲಾಮರಾಗಿ ಕೆಲಸ ಮಾಡಬೇಕಾದ ಅನಿವಾರ್ಯತೆ ಬರುತ್ತದೆ. ಅದಾನಿ, ಅಂಬಾನಿಗಳ ಸೂಪರ್ ಲಾಭ ಗಳಿಕೆಗೆ ದಾರಿ ಮಾಡಿಕೊಡುತ್ತದೆ.  ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ. ಹಾಗಾಗಿ ಸರ್ಕಾರ ತನ್ನ ಬಿಗಿ ನಿಲುವಿನಿಂದ ಹಿಂದೆ ಸರಿಯಬೇಕು ಎಂದು ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ಹೇಳಿಕೆ ನೀಡಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...