Homeಮುಖಪುಟಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್‌ಗೆ ಸ್ಪಂದಿಸಬೇಕು.

- Advertisement -
- Advertisement -

ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹಿಸಿ ತುಮಕೂರಿನಲ್ಲಿಯೂ ಡಿಸೆಂಬರ್ 8ರಂದು ಬಂದ್ ನಡೆಸುತ್ತಿದ್ದು ರೈತ, ದಲಿತ, ಪ್ರಗತಿಪರ, ಕನ್ನಡಪರ, ಕಾರ್ಮಿಕ ಸಂಘಟನೆಗಳು, ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಾಹಿತಿ-ಕಲಾವಿದರಿಂದ ಬೆಂಬಲದ ಮಹಾಪೂರ ಹರಿದುಬಂದಿದೆ. ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್ ಗೆ ಸ್ಪಂದಿಸಬೇಕು ಎಂದು ಮುಖಂಡರು ಮನವಿ ಮಾಡಿದ್ದಾರೆ.

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಬಂದ್ ಗೆ ಜನರಿಂದಲೂ ಬೆಂಬಲ ದೊರೆಯುತ್ತಿದೆ. ದೇಶದ ಬೆನ್ನೆಲುಬು, ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದು ಹನ್ನೆರಡು ದಿನಗಳಿಂದಲೂ ಚಳಿ ಮಳೆ ಲೆಕ್ಕಿಸದೆ ದೆಹಲಿಯಲ್ಲಿ ನೂರಾರು ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ. ದೇಶದ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಸಂಗೀತ ಕೇಳುವುದರಲ್ಲಿ ಮತ್ತು ಇತರೆ ಕಾರ್ಯಕ್ರಮಗಳಲ್ಲಿ ಮಗ್ನರಾಗಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಯಾವೊಬ್ಬ ಪ್ರಧಾನಿಯೂ ಹೀಗೆ ರೈತರನ್ನು ಕಡೆಗಣಿಸಿರಲಿಲ್ಲ. ರೈತರನ್ನು ಇಷ್ಟೊಂದು ಕ್ರೂರವಾಗಿ ನಡೆಸಿಕೊಂಡಿರಲಿಲ್ಲ ಎಂದು ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೂರ ಕಾನೂನುಗಳನ್ನು ಜಾರಿಗೊಳಿಸುತ್ತಿವೆ. ಇವುಗಳು ರೈತರನ್ನು ಸಂಕಷ್ಟಕ್ಕೆ ಗುರಿ ಮಾಡುತ್ತವೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಂಥ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಈ ಬೇಡಿಕೆಗಳ ಆಧಾರದ ಮೇಲೆ ದೆಹಲಿಯಲ್ಲಿ ನಡೆಸುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ತುಮಕೂರು ಬಂದ್ ಗೆ ಆಚರಿಸುತ್ತೇವೆ. ಎಲ್ಲಾ 10 ತಾಲೂಕುಗಳಲ್ಲೂ ಪ್ರತಿಭಟನೆ ನಡೆಸುತ್ತೇವೆ. ದೆಹಲಿಯಲ್ಲಿ ರೈತರ ಮೇಲೆ ಜಲಫಿರಂಗಿ ಮೂಲಕ ಹೋರಾಟ ಹತ್ತಿಕ್ಕುವುದನ್ನು ಖಂಡಿಸುತ್ತೇವೆ. ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂದಕ್ಕೆ ಪಡೆಯಬೇಕು. ಸ್ವಾಮಿನಾಥನ್ ವರದಿಯನ್ನು ಯಥಾವತ್ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಮತ್ತು ಎಐಕೆಎಸ್ ಮುಖಂಡ ಕಂಬೇಗೌಡ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಸರಿಯಲ್ಲ. ರೈತರ ಪ್ರತಿಭಟನೆಗಳನ್ನು ಪ್ರಧಾನಿ ಗಮನಿಸಬೇಕಿತ್ತು. ಅವರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಮೊಂಡುತನ ಪ್ರದರ್ಶಿಸುತ್ತಿರುವುದು ಖಂಡನೀಯ. ಪ್ರಧಾನಿಯ ಧೋರಣೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ಎತ್ತಿತೋರಿಸುತ್ತದೆ” ಎಂದು ಟೀಕಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ಮಾತನಾಡಿ, ಪ್ರಧಾನಿಯದು ಹಿಟ್ಲರ್ ಧೋರಣೆ. ಸರ್ವಾಧಿಕಾರಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ನಿಯಮಗಳಂತೆ ನಡೆಯಬೇಕು. ಅದು ಬಿಟ್ಟು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಖಂಡನೀಯ. ಬಂದ್ ಗೆ ನಮ್ಮ ಬೆಂಬಲವೂ ಇದೆ. ಜನರಿಗೆ ಅನ್ನ ನೀಡುವ ರೈತರು ಬೀದಿಗೆ ಬಿದ್ದಿದ್ದಾರೆ. ಹಾಗಾಗಿ ಆಟೋಚಾಲಕರು, ಬಸ್ ಮಾಲಿಕರು, ಬೀದಿ ಬದಿ ವ್ಯಾಪಾರಿಗಳು ಬಂದ್ ಗೆ ಸಹಕಾರ ನೀಡಬೇಕು. ಸರ್ಕಾರ ರೈತರ ಮೇಲಿನ ದಬ್ಬಾಳಿಕೆಯನ್ನು ನಿಲ್ಲಿಸಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಮಾಡಬೇಕು ಎಂದು ಒತ್ತಾಯಿಸಿದರು.

ಬಂದ್ ಗೆ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ತುಮಕೂರು ಜಿಲ್ಲಾ ಸಮಿತಿ ಕೂಡ ಬೆಂಬಲ ಸೂಚಿಸಿದೆ.  ರೈತರ ಹೋರಾಟ ಗ್ರಾಮೀಣ ಭಾರತದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹೊಸ ಕೃಷಿ ಕಾಯ್ದೆಗಳಿಂದ ಒಕ್ಕಲುತನಕ್ಕೆ ಧಕ್ಕೆ ಆಗಲಿದೆ.  ಕಂಪನಿಗಳು ಕೃಷಿ ಮಾಡಲಿವೆ. ಇದರಿಂದ ಜನರೂ ಕೂಡ ತೀವ್ರ ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ. ಹಾಗಾಗಿ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು. ಈ ಕಾಯ್ದೆಗಳು ಅನುಷ್ಠಾನಕ್ಕೆ ಬಂದರೆ ಸಂ ರೈತರು ಕಾರ್ಪೊರೇಟ್ ಕಂಪೆನಿಗಳ ಗುಲಾಮರಾಗಿ ಕೆಲಸ ಮಾಡಬೇಕಾದ ಅನಿವಾರ್ಯತೆ ಬರುತ್ತದೆ. ಅದಾನಿ, ಅಂಬಾನಿಗಳ ಸೂಪರ್ ಲಾಭ ಗಳಿಕೆಗೆ ದಾರಿ ಮಾಡಿಕೊಡುತ್ತದೆ.  ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ. ಹಾಗಾಗಿ ಸರ್ಕಾರ ತನ್ನ ಬಿಗಿ ನಿಲುವಿನಿಂದ ಹಿಂದೆ ಸರಿಯಬೇಕು ಎಂದು ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ಹೇಳಿಕೆ ನೀಡಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...