Homeಮುಖಪುಟಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್‌ಗೆ ಸ್ಪಂದಿಸಬೇಕು.

- Advertisement -
- Advertisement -

ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹಿಸಿ ತುಮಕೂರಿನಲ್ಲಿಯೂ ಡಿಸೆಂಬರ್ 8ರಂದು ಬಂದ್ ನಡೆಸುತ್ತಿದ್ದು ರೈತ, ದಲಿತ, ಪ್ರಗತಿಪರ, ಕನ್ನಡಪರ, ಕಾರ್ಮಿಕ ಸಂಘಟನೆಗಳು, ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಾಹಿತಿ-ಕಲಾವಿದರಿಂದ ಬೆಂಬಲದ ಮಹಾಪೂರ ಹರಿದುಬಂದಿದೆ. ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್ ಗೆ ಸ್ಪಂದಿಸಬೇಕು ಎಂದು ಮುಖಂಡರು ಮನವಿ ಮಾಡಿದ್ದಾರೆ.

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಬಂದ್ ಗೆ ಜನರಿಂದಲೂ ಬೆಂಬಲ ದೊರೆಯುತ್ತಿದೆ. ದೇಶದ ಬೆನ್ನೆಲುಬು, ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದು ಹನ್ನೆರಡು ದಿನಗಳಿಂದಲೂ ಚಳಿ ಮಳೆ ಲೆಕ್ಕಿಸದೆ ದೆಹಲಿಯಲ್ಲಿ ನೂರಾರು ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ. ದೇಶದ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಸಂಗೀತ ಕೇಳುವುದರಲ್ಲಿ ಮತ್ತು ಇತರೆ ಕಾರ್ಯಕ್ರಮಗಳಲ್ಲಿ ಮಗ್ನರಾಗಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಯಾವೊಬ್ಬ ಪ್ರಧಾನಿಯೂ ಹೀಗೆ ರೈತರನ್ನು ಕಡೆಗಣಿಸಿರಲಿಲ್ಲ. ರೈತರನ್ನು ಇಷ್ಟೊಂದು ಕ್ರೂರವಾಗಿ ನಡೆಸಿಕೊಂಡಿರಲಿಲ್ಲ ಎಂದು ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೂರ ಕಾನೂನುಗಳನ್ನು ಜಾರಿಗೊಳಿಸುತ್ತಿವೆ. ಇವುಗಳು ರೈತರನ್ನು ಸಂಕಷ್ಟಕ್ಕೆ ಗುರಿ ಮಾಡುತ್ತವೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಂಥ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಈ ಬೇಡಿಕೆಗಳ ಆಧಾರದ ಮೇಲೆ ದೆಹಲಿಯಲ್ಲಿ ನಡೆಸುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ತುಮಕೂರು ಬಂದ್ ಗೆ ಆಚರಿಸುತ್ತೇವೆ. ಎಲ್ಲಾ 10 ತಾಲೂಕುಗಳಲ್ಲೂ ಪ್ರತಿಭಟನೆ ನಡೆಸುತ್ತೇವೆ. ದೆಹಲಿಯಲ್ಲಿ ರೈತರ ಮೇಲೆ ಜಲಫಿರಂಗಿ ಮೂಲಕ ಹೋರಾಟ ಹತ್ತಿಕ್ಕುವುದನ್ನು ಖಂಡಿಸುತ್ತೇವೆ. ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂದಕ್ಕೆ ಪಡೆಯಬೇಕು. ಸ್ವಾಮಿನಾಥನ್ ವರದಿಯನ್ನು ಯಥಾವತ್ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಮತ್ತು ಎಐಕೆಎಸ್ ಮುಖಂಡ ಕಂಬೇಗೌಡ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಸರಿಯಲ್ಲ. ರೈತರ ಪ್ರತಿಭಟನೆಗಳನ್ನು ಪ್ರಧಾನಿ ಗಮನಿಸಬೇಕಿತ್ತು. ಅವರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಮೊಂಡುತನ ಪ್ರದರ್ಶಿಸುತ್ತಿರುವುದು ಖಂಡನೀಯ. ಪ್ರಧಾನಿಯ ಧೋರಣೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ಎತ್ತಿತೋರಿಸುತ್ತದೆ” ಎಂದು ಟೀಕಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ಮಾತನಾಡಿ, ಪ್ರಧಾನಿಯದು ಹಿಟ್ಲರ್ ಧೋರಣೆ. ಸರ್ವಾಧಿಕಾರಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ನಿಯಮಗಳಂತೆ ನಡೆಯಬೇಕು. ಅದು ಬಿಟ್ಟು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಖಂಡನೀಯ. ಬಂದ್ ಗೆ ನಮ್ಮ ಬೆಂಬಲವೂ ಇದೆ. ಜನರಿಗೆ ಅನ್ನ ನೀಡುವ ರೈತರು ಬೀದಿಗೆ ಬಿದ್ದಿದ್ದಾರೆ. ಹಾಗಾಗಿ ಆಟೋಚಾಲಕರು, ಬಸ್ ಮಾಲಿಕರು, ಬೀದಿ ಬದಿ ವ್ಯಾಪಾರಿಗಳು ಬಂದ್ ಗೆ ಸಹಕಾರ ನೀಡಬೇಕು. ಸರ್ಕಾರ ರೈತರ ಮೇಲಿನ ದಬ್ಬಾಳಿಕೆಯನ್ನು ನಿಲ್ಲಿಸಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಮಾಡಬೇಕು ಎಂದು ಒತ್ತಾಯಿಸಿದರು.

ಬಂದ್ ಗೆ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ತುಮಕೂರು ಜಿಲ್ಲಾ ಸಮಿತಿ ಕೂಡ ಬೆಂಬಲ ಸೂಚಿಸಿದೆ.  ರೈತರ ಹೋರಾಟ ಗ್ರಾಮೀಣ ಭಾರತದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹೊಸ ಕೃಷಿ ಕಾಯ್ದೆಗಳಿಂದ ಒಕ್ಕಲುತನಕ್ಕೆ ಧಕ್ಕೆ ಆಗಲಿದೆ.  ಕಂಪನಿಗಳು ಕೃಷಿ ಮಾಡಲಿವೆ. ಇದರಿಂದ ಜನರೂ ಕೂಡ ತೀವ್ರ ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ. ಹಾಗಾಗಿ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು. ಈ ಕಾಯ್ದೆಗಳು ಅನುಷ್ಠಾನಕ್ಕೆ ಬಂದರೆ ಸಂ ರೈತರು ಕಾರ್ಪೊರೇಟ್ ಕಂಪೆನಿಗಳ ಗುಲಾಮರಾಗಿ ಕೆಲಸ ಮಾಡಬೇಕಾದ ಅನಿವಾರ್ಯತೆ ಬರುತ್ತದೆ. ಅದಾನಿ, ಅಂಬಾನಿಗಳ ಸೂಪರ್ ಲಾಭ ಗಳಿಕೆಗೆ ದಾರಿ ಮಾಡಿಕೊಡುತ್ತದೆ.  ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ. ಹಾಗಾಗಿ ಸರ್ಕಾರ ತನ್ನ ಬಿಗಿ ನಿಲುವಿನಿಂದ ಹಿಂದೆ ಸರಿಯಬೇಕು ಎಂದು ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ಹೇಳಿಕೆ ನೀಡಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...