Homeಚಳವಳಿ‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

- Advertisement -
- Advertisement -

‘ಅಗ್ನಿಪಥ’ ಸೇನಾ ನೇಮಕಾತಿ ಯೋಜನೆಯ ವಿಚಾರದಲ್ಲಿ ಒಕ್ಕೂಟ ಸರ್ಕಾರ ತನ್ನ ಪಟ್ಟು ಬಿಗಿ ಹಿಡಿದು ನಿಂತಿದೆ. ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರಗೊಂಡಿದ್ದು, ಕೆಲವು ಸಂಘಟನೆಗಳು ಸೋಮವಾರದಂದು ‘ಭಾರತ ಬಂದ್’‌ಗೆ ಕರೆ ನೀಡಿವೆ. ಈ ಹಿನ್ನಲೆಯಲ್ಲಿ ದೇಶದಾದ್ಯಂತ 500 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

  1. ಸಶಸ್ತ್ರ ಪಡೆಗಳಿಗೆ ‘ಅಗ್ನಿಪಥ್’ ಅಲ್ಪಾವಧಿಯ ನೇಮಕಾತಿ ಯೋಜನೆ ವಿರೋಧಿಸಿ, ಕಳೆದ ಐದು ದಿನಗಳಿಂದ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಗಲಭೆ ನಡೆಸಿದ್ದರಿಂದ ರೈಲ್ವೆ ಇಲಾಖೆಗೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಹೀಗಾಗಿ ದೇಶದ ಕೆಲವು ಭಾಗಗಳಲ್ಲಿ ಭಾರತ್ ಬಂದ್ ಕರೆಯನ್ನು ಗಮನದಲ್ಲಿಟ್ಟುಕೊಂಡು ಇಂದು 500 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    ₹100 ₹200 ₹500 ₹1000 Others
  2. ಬಂದ್ ಪರಿಣಾಮವಾಗಿ ದೆಹಲಿಯ ಕೆಲವು ಭಾಗಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ದೆಹಲಿ ಮತ್ತು ಅದರ ಗಡಿ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ದೆಹಲಿ-ನೋಯ್ಡಾ ಡೈರೆಕ್ಟ್ ಫ್ಲೈವೇ ಮತ್ತು ದೆಹಲಿ-ಗುರ್ಗಾಂವ್ ಎಕ್ಸ್‌ಪ್ರೆಸ್‌ವೇನಲ್ಲಿ ಭಾರಿ ಟ್ರಾಫಿಕ್ ಜಾಮ್ ಕಂಡುಬಂದಿದೆ. ಕಾನೂನು ಸುವ್ಯವಸ್ಥೆ ಹದಗೆಡಿಸುವ ಯಾವುದೇ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ‘ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ
  3. ‘ಅಗ್ನಿಪಥ’ ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸೇನಾ ಉದ್ಯೋಗಾಕಾಂಕ್ಷಿಗಳನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ‘ಸತ್ಯಾಗ್ರಹ’ ನಡೆಸಿದ್ದಾರೆ. ಕನ್ನಾಟ್ ಪ್ಲೇಸ್ ಬಳಿಯ ಶಿವಾಜಿ ಸೇತುವೆ ರೈಲು ನಿಲ್ದಾಣದಲ್ಲಿ ರೈಲನ್ನು ತಡೆದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.
  4. ಹರಿಯಾಣದಲ್ಲಿ, ಸೇನಾ ಉದ್ಯೋಗಾಕಾಂಕ್ಷಿಗಳ ಗುಂಪೊಂದು ಫತೇಹಾಬಾದ್‌ನ ಲಾಲ್ ಬಟ್ಟಿ ಚೌಕ್ ಬಳಿ ರಸ್ತೆ ತಡೆ ನಡೆಸಿದ್ದಾರೆ. ರೋಹ್ಟಕ್ ಜಿಲ್ಲೆಯ ರಸ್ತೆಗಳಲ್ಲಿ ಕೂಡಾ ಪ್ರತಿಭಟನೆ ನಡೆಸಲಾಗಿದೆ. ಕೇರಳ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನದ ಹಲವು ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಫರಿದಾಬಾದ್ ಮತ್ತು ನೋಯ್ಡಾದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಸಭೆಯನ್ನು ನಿಷೇಧಿಸುವ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.
  5. ಶಾಂತಿಗೆ ಧಕ್ಕೆ ತರುವಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
  6. ಪಂಜಾಬ್‌ನಲ್ಲಿ, ಯೋಜನೆಯ ಬಗ್ಗೆ ಪ್ರಚೋದನೆ ನೀಡುವ ಮಾಹಿತಿಯನ್ನು ಬರೆಯುವ ಅಥವಾ ಹರಡುವ ಸಾಮಾಜಿಕ ಮಾಧ್ಯಮ ಗುಂಪುಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಪೊಲೀಸರನ್ನು ಕೇಳಲಾಗಿದೆ.ಇದನ್ನೂ ಓದಿ: ಅಗ್ನಿವೀರರಿಗೆ ‘ಬಟ್ಟೆ ಒಗೆಯುವ & ಕ್ಷೌರ ತರಬೇತಿ’ ನೀಡುತ್ತೇವೆ: ಒಕ್ಕೂಟ ಸರ್ಕಾರದ ಸಚಿವ
  7. ಬಿಹಾರ ಸರ್ಕಾರವು ದಾಳಿಗೊಳಗಾಗಬಹುದು ಎಂದು ಪರಿಗಣಿಸಲಾದ ಪಕ್ಷದ ಕಚೇರಿಗಳಿಗೆ ಭದ್ರತೆಯನ್ನು ಹೆಚ್ಚಿಸಿದೆ. ಸದ್ಯಕ್ಕೆ 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ.
  8. ಜಾರ್ಖಂಡ್‌ನಲ್ಲಿ, ‘ಅಗ್ನಿಪಥ್’ ಯೋಜನೆ ವಿರುದ್ಧ ಪ್ರತಿಭಟನೆಯ ನಡುವೆ ಇಂದು ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ.
  9. ಭಾನುವಾರದಂದು ಸೇನೆಯ ಮೂರು ಸೇವೆಗಳು ‘ಅಗ್ನಿಪಥ್’ ಯೋಜನೆಯಡಿ ದಾಖಲಾತಿಗಳ ವಿಶಾಲ ವೇಳಾಪಟ್ಟಿಯನ್ನು ಹೊರತಂದಿವೆ. ಜೊತೆಗೆ ಹಿಂಸಾಚಾರ ಮತ್ತು ಬೆಂಕಿ ಹಚ್ಚುವುದರಲ್ಲಿ ತೊಡಗಿರುವವರನ್ನು ಸೇರ್ಪಡೆಗೊಳಿಸಲಾಗುವುದಿಲ್ಲ ಎಂದು ಎಚ್ಚರಿಸಿದೆ.
  10. ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಅಧಿಕಾರಾವಧಿಯ ನಂತರ ‘ಅಗ್ನಿಪಥ್’ ನೇಮಕಾತಿಗಳಿಗೆ ಉದ್ಯೋಗಗಳಲ್ಲಿ ಹೊಸ 10% ಕೋಟಾಗಳನ್ನು ನೀಡುವ ಬಗ್ಗೆ ಶನಿವಾರ ಗೃಹ ಮತ್ತು ರಕ್ಷಣಾ ಸಚಿವಾಲಯಗಳು ಭರವಸೆ ನೀಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.ಇದನ್ನೂ ಓದಿ: Explainer: ಏನಿದು ಅಗ್ನಿಪಥ್ ಯೋಜನೆ? ಯಾಕಿಷ್ಟು ವಿರೋಧ?
  11. ಒಕ್ಕೂಟ ಸರ್ಕಾರ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲು ಗೃಹ ಸಚಿವಾಲಯ ನಿರ್ಧರಿಸಿದೆ.
  12. ಇದಕ್ಕೂ ಮೊದಲು, ಪ್ರತಿಭಟನಾಕಾರರನ್ನು ಸಮಾಧಾನಪಡಿಸುವ ಉದ್ದೇಶದಿಂದ ಒಕ್ಕೂಟ ಸರ್ಕಾರವು 2022 ಕ್ಕೆ ಒಂದು ಬಾರಿಯ ಕ್ರಮವಾಗಿ ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ಹೆಚ್ಚಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...