Homeಚಳವಳಿಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ - ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಕಳೆದ ನಾಲ್ಕು ತಿಂಗಳುಗಳಿಂದ ಪ್ರತಿಭಟಿಸುತ್ತಿರುವ ರೈತರು ದೆಹಲಿಯ ಗಡಿಯಲ್ಲಿ ಹೋರಾಟವನ್ನು ತೀವ್ರಗೊಳಿಸಲು ಶುಕ್ರವಾರ (ಮಾರ್ಚ್ 26) ಸಂಪೂರ್ಣ ಭಾರತ್ ಬಂದ್ ನಡೆಸುತ್ತಿದ್ದಾರೆ.

ಬೆಳಗ್ಗೆ 6 ಗಂಟೆಗೆ ಆರಂಭವಾದ ಸಂಪೂರ್ಣ ಭಾರತ್ ಬಂದ್ ಕರೆಗೆ ದೇಶದ ಹಲವು ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶಾದ್ಯಂತ ರೈತರು ಬಂದ್ ಭಾಗವಾಗಿ ಪ್ರತಿಭಟನೆಗೆ ಕರೆ ನೀಡಿದ್ದು, 12 ಗಂಟೆಗಳ ಕಾಲ ನಡೆಯಲಿರುವ ಬಂದ್ ಪರಿಣಾಮ ರೈಲು ಸಂಚಾರ ಅಸ್ತವ್ಯಸ್ಥವಾಗಿದೆ. ರಸ್ತೆ ಸಂಚಾರವನ್ನು ತಡೆ ಹಿಡಿಯಲಾಗಿದೆ.

ದೆಹಲಿಯಿಂದ ಚಂಡೀಗಢ, ಅಮೃತಸರ, ಕಲ್ಕಾಗೆ ಹೋಗುವ ಕೆಲವು ರೈಲುಗಳನ್ನು ಇಂದು ಬೆಳಿಗ್ಗೆಯೇ ರದ್ದುಪಡಿಸಲಾಗಿದೆ. ಹರಿಯಾಣ ರಾಜ್ಯದ ಅಂಬಾಲದ ಜಿಟಿ ರೋಡ್ ಮತ್ತು ಶಹಪುರ ರೈಲು ನಿಲ್ದಾಣದ ಹಳಿಗಳ ಮೇಲೆ ಕುಳಿತ ಪ್ರತಿಭಟನಾಕಾರರು ರೈಲುಗಳನ್ನು ತಡೆದಿದ್ದಾರೆ. ಅಮೃತಸರ ಸೇರಿದಂತೆ ಪಂಜಾಬ್‌ನ ಹಲವು ನಗರಗಳಲ್ಲಿ ರೈಲುಗಳ ಸಂಚಾರಕ್ಕೆ ತಡೆಯೊಡ್ಡಲಾಗಿದೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ

ದೆಹಲಿಯ ಗಾಜಿಪುರ ಮತ್ತು ಸಿಂಘು ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ನೃತ್ಯ ಮಾಡುವ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡಿದ್ದಾರೆ.

ಕೆಲವು ಭಾಗಗಳಲ್ಲಿ ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ. ರಾಷ್ಟ್ರ ರಾಜಧಾನಿ ಗಾಜಿಪುರ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ -9 ರಲ್ಲಿ ರಸ್ತೆ ತಡೆ ನಡೆದಿದೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

ಗುರುವಾರ ವಿಡಿಯೋ ಸಂದೇಶದಲ್ಲಿ ಮಾತನಾಡಿದ್ದ ರೈತ ಮುಖಂಡ ದರ್ಶನ್ ಪಾಲ್ “ಪ್ರತಿಭಟನಾ ನಿರತ ರೈತರು ತರಕಾರಿಗಳು ಮತ್ತು ಹಾಲಿನ ಸರಬರಾಜನ್ನು ನಿಲ್ಲಿಸುತ್ತಾರೆ. ಪ್ರತಿಭಟನಾ ನಿರತ ರೈತರು ಶಾಂತಿಯುತವಾಗಿರಬೇಕು ಮತ್ತು ಭಾರತ್ ಬಂದ್  ಸಮಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯ ಮತ್ತು ಸಂಘರ್ಷಗಳಲ್ಲಿ ಭಾಗಿಯಾಗದಂತೆ” ಮನವಿ ಮಾಡಿದರು.

“ರೈತರು ವಿವಿಧ ಸ್ಥಳಗಳಲ್ಲಿ ರೈಲು ಸಂಚಾರ ನಿರ್ಬಂಧಿಸುತ್ತಾರೆ. ಭಾರತ್ ಬಂದ್ ಸಮಯದಲ್ಲಿ ಮಾರುಕಟ್ಟೆಗಳು ಮತ್ತು ಸಾರಿಗೆ ಸೇವೆಗಳನ್ನು ನಿಲ್ಲಿಸಲಾಗುವುದು ಎಂದು ಹಿರಿಯ ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ತಿಳಿಸಿದ್ದರು.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾರತ್ ಬಂದ್ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. “ರೈತರ ಆಂದೋಲನ ದೇಶಹಿತವಾಗಿದ್ದು ಶಾಂತಿಪೂರ್ಣವಾಗಿರಲಿದೆ” ಎಂದಿದ್ದಾರೆ.

ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

Bharat Bandh: All the services come to standstill across Andhra Pradesh
PC:The Hans India

ರೈತರ ಕರೆಗೆ ಒಗ್ಗಟ್ಟು ಸೂಚಿಸಿರುವ ಆಂಧ್ರಪ್ರದೇಶದಲ್ಲಿ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಆಂಧ್ರಪ್ರದೇಶ ಸರ್ಕಾರ, ವೈಎಸ್‌ಆರ್‌ಸಿಪಿ, ಟಿಡಿಪಿ ಮತ್ತು ಎಡಪಕ್ಷಗಳು ಬಂದ್‌ಗೆ ಬೆಂಬಲ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿನ ಆರ್‌ಟಿಸಿ ಬಸ್‌ಗಳು ಡಿಪೋಗಳಿಗೆ ಸೀಮಿತವಾಗಿವೆ ನಿಂತಿವೆ. ಕಾಯ್ದೆಗಳ ವಿರುದ್ಧ ಮತ್ತು ವೈಜಾಗ್ ಸ್ಟೀಲ್ ಪ್ಲಾಂಟ್ ಖಾಸಗೀಕರಣ ವಿರೋಧಿಸಿ ಕೇಂದ್ರದ ವಿರುದ್ಧ ಎಡ ಪಕ್ಷಗಳ ಸದಸ್ಯರು ಇಂದು ಮಡಿಲಪಲಂ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತ ಬಂದ್ ಬೆಂಬಲಿಸಿ ರಾಜ್ಯದಲ್ಲಿಯೂ ಮೂರು ಕಾಯ್ದೆಗಳ ಶವಯಾತ್ರೆಗೆ ಕರೆ ನೀಡಲಾಗಿತ್ತು. ಭಾರತ್ ಬಂದ್ ಬೆಂಬಲಿಸಿ ಬೆಂಗಳೂರಿನಲ್ಲಿ ಮೂರು ಕೃಷಿ ಕಾಯ್ದೆಗಳ ಶವಯಾತ್ರೆ ಮಾಡಲು ಟೌನ್ ಹಾಲ್ ಮುಂದೆ ಸಜ್ಜಾಗಿದ್ದ ಜನಶಕ್ತಿ ಯುವ ಹೋರಾಟಗಾರರಾದ ರವಿ ಮೋಹನ್, ಗಜೇಂದ್ರ, ರಾಜಶೇಖರ ಅಂಗಡಿ ಇವರನ್ನು ಪೊಲೀಸರು ಬಂಧಿಸಿದ್ದಾರೆ.

ನಂತರ ರೈತ ನಾಯಕಿ ಕವಿತ ಕುರುಗಂಟಿ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ, ಸ್ವರಾಜ್ ಇಂಡಿಯಾ ಮತ್ತು  ಕನ್ನಡಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೆಕು, ಎಂಎಸ್‌ಪಿ ಮತ್ತು ಬೆಳೆ ಸಂಗ್ರಹಣೆ ಕುರಿತು ಕಾನೂನು ಮಾಡಬೇಕು, ರೈತರ ವಿರುದ್ಧದ ಎಲ್ಲಾ ಪೊಲೀಸ್ ಪ್ರಕರಣಗಳನ್ನು ರದ್ದುಗೊಳಿಸಬೇಕು, ವಿದ್ಯುತ್ ಬಿಲ್ ಮತ್ತು ಮಾಲಿನ್ಯ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಡೀಸೆಲ್, ಪೆಟ್ರೋಲ್ ಮತ್ತು ಅನಿಲದ ಬೆಲೆಯನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಒಕ್ಕೂಟ ಹೇಳಿದೆ.


ಇದನ್ನೂ ಓದಿ: ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...