Homeಚಳವಳಿಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ - ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಕಳೆದ ನಾಲ್ಕು ತಿಂಗಳುಗಳಿಂದ ಪ್ರತಿಭಟಿಸುತ್ತಿರುವ ರೈತರು ದೆಹಲಿಯ ಗಡಿಯಲ್ಲಿ ಹೋರಾಟವನ್ನು ತೀವ್ರಗೊಳಿಸಲು ಶುಕ್ರವಾರ (ಮಾರ್ಚ್ 26) ಸಂಪೂರ್ಣ ಭಾರತ್ ಬಂದ್ ನಡೆಸುತ್ತಿದ್ದಾರೆ.

ಬೆಳಗ್ಗೆ 6 ಗಂಟೆಗೆ ಆರಂಭವಾದ ಸಂಪೂರ್ಣ ಭಾರತ್ ಬಂದ್ ಕರೆಗೆ ದೇಶದ ಹಲವು ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶಾದ್ಯಂತ ರೈತರು ಬಂದ್ ಭಾಗವಾಗಿ ಪ್ರತಿಭಟನೆಗೆ ಕರೆ ನೀಡಿದ್ದು, 12 ಗಂಟೆಗಳ ಕಾಲ ನಡೆಯಲಿರುವ ಬಂದ್ ಪರಿಣಾಮ ರೈಲು ಸಂಚಾರ ಅಸ್ತವ್ಯಸ್ಥವಾಗಿದೆ. ರಸ್ತೆ ಸಂಚಾರವನ್ನು ತಡೆ ಹಿಡಿಯಲಾಗಿದೆ.

ದೆಹಲಿಯಿಂದ ಚಂಡೀಗಢ, ಅಮೃತಸರ, ಕಲ್ಕಾಗೆ ಹೋಗುವ ಕೆಲವು ರೈಲುಗಳನ್ನು ಇಂದು ಬೆಳಿಗ್ಗೆಯೇ ರದ್ದುಪಡಿಸಲಾಗಿದೆ. ಹರಿಯಾಣ ರಾಜ್ಯದ ಅಂಬಾಲದ ಜಿಟಿ ರೋಡ್ ಮತ್ತು ಶಹಪುರ ರೈಲು ನಿಲ್ದಾಣದ ಹಳಿಗಳ ಮೇಲೆ ಕುಳಿತ ಪ್ರತಿಭಟನಾಕಾರರು ರೈಲುಗಳನ್ನು ತಡೆದಿದ್ದಾರೆ. ಅಮೃತಸರ ಸೇರಿದಂತೆ ಪಂಜಾಬ್‌ನ ಹಲವು ನಗರಗಳಲ್ಲಿ ರೈಲುಗಳ ಸಂಚಾರಕ್ಕೆ ತಡೆಯೊಡ್ಡಲಾಗಿದೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ

ದೆಹಲಿಯ ಗಾಜಿಪುರ ಮತ್ತು ಸಿಂಘು ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ನೃತ್ಯ ಮಾಡುವ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡಿದ್ದಾರೆ.

ಕೆಲವು ಭಾಗಗಳಲ್ಲಿ ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ. ರಾಷ್ಟ್ರ ರಾಜಧಾನಿ ಗಾಜಿಪುರ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ -9 ರಲ್ಲಿ ರಸ್ತೆ ತಡೆ ನಡೆದಿದೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

ಗುರುವಾರ ವಿಡಿಯೋ ಸಂದೇಶದಲ್ಲಿ ಮಾತನಾಡಿದ್ದ ರೈತ ಮುಖಂಡ ದರ್ಶನ್ ಪಾಲ್ “ಪ್ರತಿಭಟನಾ ನಿರತ ರೈತರು ತರಕಾರಿಗಳು ಮತ್ತು ಹಾಲಿನ ಸರಬರಾಜನ್ನು ನಿಲ್ಲಿಸುತ್ತಾರೆ. ಪ್ರತಿಭಟನಾ ನಿರತ ರೈತರು ಶಾಂತಿಯುತವಾಗಿರಬೇಕು ಮತ್ತು ಭಾರತ್ ಬಂದ್  ಸಮಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯ ಮತ್ತು ಸಂಘರ್ಷಗಳಲ್ಲಿ ಭಾಗಿಯಾಗದಂತೆ” ಮನವಿ ಮಾಡಿದರು.

“ರೈತರು ವಿವಿಧ ಸ್ಥಳಗಳಲ್ಲಿ ರೈಲು ಸಂಚಾರ ನಿರ್ಬಂಧಿಸುತ್ತಾರೆ. ಭಾರತ್ ಬಂದ್ ಸಮಯದಲ್ಲಿ ಮಾರುಕಟ್ಟೆಗಳು ಮತ್ತು ಸಾರಿಗೆ ಸೇವೆಗಳನ್ನು ನಿಲ್ಲಿಸಲಾಗುವುದು ಎಂದು ಹಿರಿಯ ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ತಿಳಿಸಿದ್ದರು.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾರತ್ ಬಂದ್ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. “ರೈತರ ಆಂದೋಲನ ದೇಶಹಿತವಾಗಿದ್ದು ಶಾಂತಿಪೂರ್ಣವಾಗಿರಲಿದೆ” ಎಂದಿದ್ದಾರೆ.

ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

Bharat Bandh: All the services come to standstill across Andhra Pradesh
PC:The Hans India

ರೈತರ ಕರೆಗೆ ಒಗ್ಗಟ್ಟು ಸೂಚಿಸಿರುವ ಆಂಧ್ರಪ್ರದೇಶದಲ್ಲಿ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಆಂಧ್ರಪ್ರದೇಶ ಸರ್ಕಾರ, ವೈಎಸ್‌ಆರ್‌ಸಿಪಿ, ಟಿಡಿಪಿ ಮತ್ತು ಎಡಪಕ್ಷಗಳು ಬಂದ್‌ಗೆ ಬೆಂಬಲ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿನ ಆರ್‌ಟಿಸಿ ಬಸ್‌ಗಳು ಡಿಪೋಗಳಿಗೆ ಸೀಮಿತವಾಗಿವೆ ನಿಂತಿವೆ. ಕಾಯ್ದೆಗಳ ವಿರುದ್ಧ ಮತ್ತು ವೈಜಾಗ್ ಸ್ಟೀಲ್ ಪ್ಲಾಂಟ್ ಖಾಸಗೀಕರಣ ವಿರೋಧಿಸಿ ಕೇಂದ್ರದ ವಿರುದ್ಧ ಎಡ ಪಕ್ಷಗಳ ಸದಸ್ಯರು ಇಂದು ಮಡಿಲಪಲಂ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತ ಬಂದ್ ಬೆಂಬಲಿಸಿ ರಾಜ್ಯದಲ್ಲಿಯೂ ಮೂರು ಕಾಯ್ದೆಗಳ ಶವಯಾತ್ರೆಗೆ ಕರೆ ನೀಡಲಾಗಿತ್ತು. ಭಾರತ್ ಬಂದ್ ಬೆಂಬಲಿಸಿ ಬೆಂಗಳೂರಿನಲ್ಲಿ ಮೂರು ಕೃಷಿ ಕಾಯ್ದೆಗಳ ಶವಯಾತ್ರೆ ಮಾಡಲು ಟೌನ್ ಹಾಲ್ ಮುಂದೆ ಸಜ್ಜಾಗಿದ್ದ ಜನಶಕ್ತಿ ಯುವ ಹೋರಾಟಗಾರರಾದ ರವಿ ಮೋಹನ್, ಗಜೇಂದ್ರ, ರಾಜಶೇಖರ ಅಂಗಡಿ ಇವರನ್ನು ಪೊಲೀಸರು ಬಂಧಿಸಿದ್ದಾರೆ.

ನಂತರ ರೈತ ನಾಯಕಿ ಕವಿತ ಕುರುಗಂಟಿ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ, ಸ್ವರಾಜ್ ಇಂಡಿಯಾ ಮತ್ತು  ಕನ್ನಡಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೆಕು, ಎಂಎಸ್‌ಪಿ ಮತ್ತು ಬೆಳೆ ಸಂಗ್ರಹಣೆ ಕುರಿತು ಕಾನೂನು ಮಾಡಬೇಕು, ರೈತರ ವಿರುದ್ಧದ ಎಲ್ಲಾ ಪೊಲೀಸ್ ಪ್ರಕರಣಗಳನ್ನು ರದ್ದುಗೊಳಿಸಬೇಕು, ವಿದ್ಯುತ್ ಬಿಲ್ ಮತ್ತು ಮಾಲಿನ್ಯ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಡೀಸೆಲ್, ಪೆಟ್ರೋಲ್ ಮತ್ತು ಅನಿಲದ ಬೆಲೆಯನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಒಕ್ಕೂಟ ಹೇಳಿದೆ.


ಇದನ್ನೂ ಓದಿ: ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...