Homeಚಳವಳಿಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ - ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಕಳೆದ ನಾಲ್ಕು ತಿಂಗಳುಗಳಿಂದ ಪ್ರತಿಭಟಿಸುತ್ತಿರುವ ರೈತರು ದೆಹಲಿಯ ಗಡಿಯಲ್ಲಿ ಹೋರಾಟವನ್ನು ತೀವ್ರಗೊಳಿಸಲು ಶುಕ್ರವಾರ (ಮಾರ್ಚ್ 26) ಸಂಪೂರ್ಣ ಭಾರತ್ ಬಂದ್ ನಡೆಸುತ್ತಿದ್ದಾರೆ.

ಬೆಳಗ್ಗೆ 6 ಗಂಟೆಗೆ ಆರಂಭವಾದ ಸಂಪೂರ್ಣ ಭಾರತ್ ಬಂದ್ ಕರೆಗೆ ದೇಶದ ಹಲವು ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶಾದ್ಯಂತ ರೈತರು ಬಂದ್ ಭಾಗವಾಗಿ ಪ್ರತಿಭಟನೆಗೆ ಕರೆ ನೀಡಿದ್ದು, 12 ಗಂಟೆಗಳ ಕಾಲ ನಡೆಯಲಿರುವ ಬಂದ್ ಪರಿಣಾಮ ರೈಲು ಸಂಚಾರ ಅಸ್ತವ್ಯಸ್ಥವಾಗಿದೆ. ರಸ್ತೆ ಸಂಚಾರವನ್ನು ತಡೆ ಹಿಡಿಯಲಾಗಿದೆ.

ದೆಹಲಿಯಿಂದ ಚಂಡೀಗಢ, ಅಮೃತಸರ, ಕಲ್ಕಾಗೆ ಹೋಗುವ ಕೆಲವು ರೈಲುಗಳನ್ನು ಇಂದು ಬೆಳಿಗ್ಗೆಯೇ ರದ್ದುಪಡಿಸಲಾಗಿದೆ. ಹರಿಯಾಣ ರಾಜ್ಯದ ಅಂಬಾಲದ ಜಿಟಿ ರೋಡ್ ಮತ್ತು ಶಹಪುರ ರೈಲು ನಿಲ್ದಾಣದ ಹಳಿಗಳ ಮೇಲೆ ಕುಳಿತ ಪ್ರತಿಭಟನಾಕಾರರು ರೈಲುಗಳನ್ನು ತಡೆದಿದ್ದಾರೆ. ಅಮೃತಸರ ಸೇರಿದಂತೆ ಪಂಜಾಬ್‌ನ ಹಲವು ನಗರಗಳಲ್ಲಿ ರೈಲುಗಳ ಸಂಚಾರಕ್ಕೆ ತಡೆಯೊಡ್ಡಲಾಗಿದೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ

ದೆಹಲಿಯ ಗಾಜಿಪುರ ಮತ್ತು ಸಿಂಘು ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ನೃತ್ಯ ಮಾಡುವ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡಿದ್ದಾರೆ.

ಕೆಲವು ಭಾಗಗಳಲ್ಲಿ ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ. ರಾಷ್ಟ್ರ ರಾಜಧಾನಿ ಗಾಜಿಪುರ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ -9 ರಲ್ಲಿ ರಸ್ತೆ ತಡೆ ನಡೆದಿದೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

ಗುರುವಾರ ವಿಡಿಯೋ ಸಂದೇಶದಲ್ಲಿ ಮಾತನಾಡಿದ್ದ ರೈತ ಮುಖಂಡ ದರ್ಶನ್ ಪಾಲ್ “ಪ್ರತಿಭಟನಾ ನಿರತ ರೈತರು ತರಕಾರಿಗಳು ಮತ್ತು ಹಾಲಿನ ಸರಬರಾಜನ್ನು ನಿಲ್ಲಿಸುತ್ತಾರೆ. ಪ್ರತಿಭಟನಾ ನಿರತ ರೈತರು ಶಾಂತಿಯುತವಾಗಿರಬೇಕು ಮತ್ತು ಭಾರತ್ ಬಂದ್  ಸಮಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯ ಮತ್ತು ಸಂಘರ್ಷಗಳಲ್ಲಿ ಭಾಗಿಯಾಗದಂತೆ” ಮನವಿ ಮಾಡಿದರು.

“ರೈತರು ವಿವಿಧ ಸ್ಥಳಗಳಲ್ಲಿ ರೈಲು ಸಂಚಾರ ನಿರ್ಬಂಧಿಸುತ್ತಾರೆ. ಭಾರತ್ ಬಂದ್ ಸಮಯದಲ್ಲಿ ಮಾರುಕಟ್ಟೆಗಳು ಮತ್ತು ಸಾರಿಗೆ ಸೇವೆಗಳನ್ನು ನಿಲ್ಲಿಸಲಾಗುವುದು ಎಂದು ಹಿರಿಯ ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ತಿಳಿಸಿದ್ದರು.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾರತ್ ಬಂದ್ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. “ರೈತರ ಆಂದೋಲನ ದೇಶಹಿತವಾಗಿದ್ದು ಶಾಂತಿಪೂರ್ಣವಾಗಿರಲಿದೆ” ಎಂದಿದ್ದಾರೆ.

ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

Bharat Bandh: All the services come to standstill across Andhra Pradesh
PC:The Hans India

ರೈತರ ಕರೆಗೆ ಒಗ್ಗಟ್ಟು ಸೂಚಿಸಿರುವ ಆಂಧ್ರಪ್ರದೇಶದಲ್ಲಿ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಆಂಧ್ರಪ್ರದೇಶ ಸರ್ಕಾರ, ವೈಎಸ್‌ಆರ್‌ಸಿಪಿ, ಟಿಡಿಪಿ ಮತ್ತು ಎಡಪಕ್ಷಗಳು ಬಂದ್‌ಗೆ ಬೆಂಬಲ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿನ ಆರ್‌ಟಿಸಿ ಬಸ್‌ಗಳು ಡಿಪೋಗಳಿಗೆ ಸೀಮಿತವಾಗಿವೆ ನಿಂತಿವೆ. ಕಾಯ್ದೆಗಳ ವಿರುದ್ಧ ಮತ್ತು ವೈಜಾಗ್ ಸ್ಟೀಲ್ ಪ್ಲಾಂಟ್ ಖಾಸಗೀಕರಣ ವಿರೋಧಿಸಿ ಕೇಂದ್ರದ ವಿರುದ್ಧ ಎಡ ಪಕ್ಷಗಳ ಸದಸ್ಯರು ಇಂದು ಮಡಿಲಪಲಂ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತ ಬಂದ್ ಬೆಂಬಲಿಸಿ ರಾಜ್ಯದಲ್ಲಿಯೂ ಮೂರು ಕಾಯ್ದೆಗಳ ಶವಯಾತ್ರೆಗೆ ಕರೆ ನೀಡಲಾಗಿತ್ತು. ಭಾರತ್ ಬಂದ್ ಬೆಂಬಲಿಸಿ ಬೆಂಗಳೂರಿನಲ್ಲಿ ಮೂರು ಕೃಷಿ ಕಾಯ್ದೆಗಳ ಶವಯಾತ್ರೆ ಮಾಡಲು ಟೌನ್ ಹಾಲ್ ಮುಂದೆ ಸಜ್ಜಾಗಿದ್ದ ಜನಶಕ್ತಿ ಯುವ ಹೋರಾಟಗಾರರಾದ ರವಿ ಮೋಹನ್, ಗಜೇಂದ್ರ, ರಾಜಶೇಖರ ಅಂಗಡಿ ಇವರನ್ನು ಪೊಲೀಸರು ಬಂಧಿಸಿದ್ದಾರೆ.

ನಂತರ ರೈತ ನಾಯಕಿ ಕವಿತ ಕುರುಗಂಟಿ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ, ಸ್ವರಾಜ್ ಇಂಡಿಯಾ ಮತ್ತು  ಕನ್ನಡಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೆಕು, ಎಂಎಸ್‌ಪಿ ಮತ್ತು ಬೆಳೆ ಸಂಗ್ರಹಣೆ ಕುರಿತು ಕಾನೂನು ಮಾಡಬೇಕು, ರೈತರ ವಿರುದ್ಧದ ಎಲ್ಲಾ ಪೊಲೀಸ್ ಪ್ರಕರಣಗಳನ್ನು ರದ್ದುಗೊಳಿಸಬೇಕು, ವಿದ್ಯುತ್ ಬಿಲ್ ಮತ್ತು ಮಾಲಿನ್ಯ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಡೀಸೆಲ್, ಪೆಟ್ರೋಲ್ ಮತ್ತು ಅನಿಲದ ಬೆಲೆಯನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಒಕ್ಕೂಟ ಹೇಳಿದೆ.


ಇದನ್ನೂ ಓದಿ: ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...