Homeಚಳವಳಿಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ - ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಕಳೆದ ನಾಲ್ಕು ತಿಂಗಳುಗಳಿಂದ ಪ್ರತಿಭಟಿಸುತ್ತಿರುವ ರೈತರು ದೆಹಲಿಯ ಗಡಿಯಲ್ಲಿ ಹೋರಾಟವನ್ನು ತೀವ್ರಗೊಳಿಸಲು ಶುಕ್ರವಾರ (ಮಾರ್ಚ್ 26) ಸಂಪೂರ್ಣ ಭಾರತ್ ಬಂದ್ ನಡೆಸುತ್ತಿದ್ದಾರೆ.

ಬೆಳಗ್ಗೆ 6 ಗಂಟೆಗೆ ಆರಂಭವಾದ ಸಂಪೂರ್ಣ ಭಾರತ್ ಬಂದ್ ಕರೆಗೆ ದೇಶದ ಹಲವು ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶಾದ್ಯಂತ ರೈತರು ಬಂದ್ ಭಾಗವಾಗಿ ಪ್ರತಿಭಟನೆಗೆ ಕರೆ ನೀಡಿದ್ದು, 12 ಗಂಟೆಗಳ ಕಾಲ ನಡೆಯಲಿರುವ ಬಂದ್ ಪರಿಣಾಮ ರೈಲು ಸಂಚಾರ ಅಸ್ತವ್ಯಸ್ಥವಾಗಿದೆ. ರಸ್ತೆ ಸಂಚಾರವನ್ನು ತಡೆ ಹಿಡಿಯಲಾಗಿದೆ.

ದೆಹಲಿಯಿಂದ ಚಂಡೀಗಢ, ಅಮೃತಸರ, ಕಲ್ಕಾಗೆ ಹೋಗುವ ಕೆಲವು ರೈಲುಗಳನ್ನು ಇಂದು ಬೆಳಿಗ್ಗೆಯೇ ರದ್ದುಪಡಿಸಲಾಗಿದೆ. ಹರಿಯಾಣ ರಾಜ್ಯದ ಅಂಬಾಲದ ಜಿಟಿ ರೋಡ್ ಮತ್ತು ಶಹಪುರ ರೈಲು ನಿಲ್ದಾಣದ ಹಳಿಗಳ ಮೇಲೆ ಕುಳಿತ ಪ್ರತಿಭಟನಾಕಾರರು ರೈಲುಗಳನ್ನು ತಡೆದಿದ್ದಾರೆ. ಅಮೃತಸರ ಸೇರಿದಂತೆ ಪಂಜಾಬ್‌ನ ಹಲವು ನಗರಗಳಲ್ಲಿ ರೈಲುಗಳ ಸಂಚಾರಕ್ಕೆ ತಡೆಯೊಡ್ಡಲಾಗಿದೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ

ದೆಹಲಿಯ ಗಾಜಿಪುರ ಮತ್ತು ಸಿಂಘು ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ನೃತ್ಯ ಮಾಡುವ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡಿದ್ದಾರೆ.

ಕೆಲವು ಭಾಗಗಳಲ್ಲಿ ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ. ರಾಷ್ಟ್ರ ರಾಜಧಾನಿ ಗಾಜಿಪುರ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ -9 ರಲ್ಲಿ ರಸ್ತೆ ತಡೆ ನಡೆದಿದೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

ಗುರುವಾರ ವಿಡಿಯೋ ಸಂದೇಶದಲ್ಲಿ ಮಾತನಾಡಿದ್ದ ರೈತ ಮುಖಂಡ ದರ್ಶನ್ ಪಾಲ್ “ಪ್ರತಿಭಟನಾ ನಿರತ ರೈತರು ತರಕಾರಿಗಳು ಮತ್ತು ಹಾಲಿನ ಸರಬರಾಜನ್ನು ನಿಲ್ಲಿಸುತ್ತಾರೆ. ಪ್ರತಿಭಟನಾ ನಿರತ ರೈತರು ಶಾಂತಿಯುತವಾಗಿರಬೇಕು ಮತ್ತು ಭಾರತ್ ಬಂದ್  ಸಮಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯ ಮತ್ತು ಸಂಘರ್ಷಗಳಲ್ಲಿ ಭಾಗಿಯಾಗದಂತೆ” ಮನವಿ ಮಾಡಿದರು.

“ರೈತರು ವಿವಿಧ ಸ್ಥಳಗಳಲ್ಲಿ ರೈಲು ಸಂಚಾರ ನಿರ್ಬಂಧಿಸುತ್ತಾರೆ. ಭಾರತ್ ಬಂದ್ ಸಮಯದಲ್ಲಿ ಮಾರುಕಟ್ಟೆಗಳು ಮತ್ತು ಸಾರಿಗೆ ಸೇವೆಗಳನ್ನು ನಿಲ್ಲಿಸಲಾಗುವುದು ಎಂದು ಹಿರಿಯ ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ತಿಳಿಸಿದ್ದರು.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾರತ್ ಬಂದ್ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. “ರೈತರ ಆಂದೋಲನ ದೇಶಹಿತವಾಗಿದ್ದು ಶಾಂತಿಪೂರ್ಣವಾಗಿರಲಿದೆ” ಎಂದಿದ್ದಾರೆ.

ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

Bharat Bandh: All the services come to standstill across Andhra Pradesh
PC:The Hans India

ರೈತರ ಕರೆಗೆ ಒಗ್ಗಟ್ಟು ಸೂಚಿಸಿರುವ ಆಂಧ್ರಪ್ರದೇಶದಲ್ಲಿ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಆಂಧ್ರಪ್ರದೇಶ ಸರ್ಕಾರ, ವೈಎಸ್‌ಆರ್‌ಸಿಪಿ, ಟಿಡಿಪಿ ಮತ್ತು ಎಡಪಕ್ಷಗಳು ಬಂದ್‌ಗೆ ಬೆಂಬಲ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿನ ಆರ್‌ಟಿಸಿ ಬಸ್‌ಗಳು ಡಿಪೋಗಳಿಗೆ ಸೀಮಿತವಾಗಿವೆ ನಿಂತಿವೆ. ಕಾಯ್ದೆಗಳ ವಿರುದ್ಧ ಮತ್ತು ವೈಜಾಗ್ ಸ್ಟೀಲ್ ಪ್ಲಾಂಟ್ ಖಾಸಗೀಕರಣ ವಿರೋಧಿಸಿ ಕೇಂದ್ರದ ವಿರುದ್ಧ ಎಡ ಪಕ್ಷಗಳ ಸದಸ್ಯರು ಇಂದು ಮಡಿಲಪಲಂ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತ ಬಂದ್ ಬೆಂಬಲಿಸಿ ರಾಜ್ಯದಲ್ಲಿಯೂ ಮೂರು ಕಾಯ್ದೆಗಳ ಶವಯಾತ್ರೆಗೆ ಕರೆ ನೀಡಲಾಗಿತ್ತು. ಭಾರತ್ ಬಂದ್ ಬೆಂಬಲಿಸಿ ಬೆಂಗಳೂರಿನಲ್ಲಿ ಮೂರು ಕೃಷಿ ಕಾಯ್ದೆಗಳ ಶವಯಾತ್ರೆ ಮಾಡಲು ಟೌನ್ ಹಾಲ್ ಮುಂದೆ ಸಜ್ಜಾಗಿದ್ದ ಜನಶಕ್ತಿ ಯುವ ಹೋರಾಟಗಾರರಾದ ರವಿ ಮೋಹನ್, ಗಜೇಂದ್ರ, ರಾಜಶೇಖರ ಅಂಗಡಿ ಇವರನ್ನು ಪೊಲೀಸರು ಬಂಧಿಸಿದ್ದಾರೆ.

ನಂತರ ರೈತ ನಾಯಕಿ ಕವಿತ ಕುರುಗಂಟಿ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ, ಸ್ವರಾಜ್ ಇಂಡಿಯಾ ಮತ್ತು  ಕನ್ನಡಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೆಕು, ಎಂಎಸ್‌ಪಿ ಮತ್ತು ಬೆಳೆ ಸಂಗ್ರಹಣೆ ಕುರಿತು ಕಾನೂನು ಮಾಡಬೇಕು, ರೈತರ ವಿರುದ್ಧದ ಎಲ್ಲಾ ಪೊಲೀಸ್ ಪ್ರಕರಣಗಳನ್ನು ರದ್ದುಗೊಳಿಸಬೇಕು, ವಿದ್ಯುತ್ ಬಿಲ್ ಮತ್ತು ಮಾಲಿನ್ಯ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಡೀಸೆಲ್, ಪೆಟ್ರೋಲ್ ಮತ್ತು ಅನಿಲದ ಬೆಲೆಯನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಒಕ್ಕೂಟ ಹೇಳಿದೆ.


ಇದನ್ನೂ ಓದಿ: ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...