Homeಮುಖಪುಟ'ಸರ್ನಾ ಪ್ರತ್ಯೇಕ ಧರ್ಮ' ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

- Advertisement -
- Advertisement -

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ತಮ್ಮ ದೀರ್ಘ ಕಾಲದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೆಂಬರ್ 30ರಂದು ಸಾಂಕೇತಿಕ ‘ಭಾರತ್ ಬಂದ್‌’ಗೆ ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗಲ್ ಅಭಿಯಾನ್ (ಎಎಸ್‌ಎ) ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ. ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು ‘ಸಾಂವಿಧಾನಿಕ ಅಪರಾಧಕ್ಕೆ ಸಮಾನ’ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯವನ್ನು ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ‘ಧರ್ಮದ ಗುಲಾಮಗಿರಿಯನ್ನು ಸ್ವೀಕರಿಸಲು ಒತ್ತಾಯಿಸಿದಂತೆ’. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಕೊಟ್ಟಿತ್ತು. ನಂತರ ಕಾಂಗ್ರೆಸ್ ಅದನ್ನು ತೆಗೆದು ಹಾಕಿದೆ. ಬಿಜೆಪಿ ಈಗ ಆದಿವಾಸಿಗಳನ್ನು ವನವಾಸಿಗಳು ಮತ್ತು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಮುರ್ಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವವರ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮವನ್ನು ಗುರುತಿಸುತ್ತದೆಯೋ, ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

ಏನಿದು ಸರ್ನಾ ಧರ್ಮ?

ಸರ್ನಾ ಎಂಬುವುದು ಬುಡಕಟ್ಟು ಸಮುದಾಯಗಳ ಸ್ಥಳೀಯ ಧಾರ್ಮಿಕ ನಂಬಿಕೆಯಾಗಿದ್ದು, ಅವರು ಪ್ರಧಾನವಾಗಿ ಪರ್ವತ, ಕಾಡು ಮತ್ತು ವನ್ಯಜೀವಿಗಳಂತಹ ನೈಸರ್ಗಿಕ ಅಂಶಗಳನ್ನು ಪೂಜಿಸುತ್ತಾರೆ. ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಟಿ)ದ ಜನಗಣತಿಯು, ಧರ್ಮ ಸಂಹಿತೆಯಲ್ಲಿ ಸರ್ನಾ ಧರ್ಮಕ್ಕೆ ಸ್ವತಂತ್ರ ವರ್ಗವನ್ನು ನೀಡಬೇಕೆಂದು ಸೂಚಿಸಿದೆ.

ಹಲವಾರು ಬುಡಕಟ್ಟು ಸಂಘಟನೆಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳು ‘ಸರ್ನೈಂ’ಗೆ ವಿಶಿಷ್ಟವಾದ ಜನಗಣತಿ ಕೋಡ್ ನೀಡುವಂತೆ ಒತ್ತಾಯಿಸುತ್ತಿವೆ.

2011ರ ಜನಗಣತಿಯ ಪ್ರಕಾರ, ಸುಮಾರು 50 ಲಕ್ಷ ಆದಿವಾಸಿಗಳು ತಮ್ಮ ನಂಬಿಕೆಯನ್ನು ‘ಸರ್ನಾ’ ಎಂದು ಹೇಳಿಕೊಂಡಿದ್ದಾರೆ. ಜೈನ ಧರ್ಮಕ್ಕೆ ಹೋಲಿಸಿದರೆ ನಮ್ಮ ಸಂಖ್ಯೆ ದೊಡ್ಡದಿದೆ. ಕೇವಲ 44 ಜನ ಸಂಖ್ಯೆ ಇರುವ ಜೈನರಿಗೆ ಪ್ರತ್ಯೇಖ ಧರ್ಮದ ಮಾನ್ಯತೆ ಕೊಟ್ಟಿರುವಾಗ ನಮಗೂ ಕೊಡಿ ಎಂದು ಮುರ್ಮು ಆಗ್ರಹಿಸಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ಸ್ಥಳವಾದ ಜಾರ್ಖಂಡ್‌ನ ಉಲಿಹಾತುಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಥವಾ ನವೆಂಬರ್‌ನಲ್ಲಿ ಒಡಿಶಾದ ಬರಿಪಾದಕ್ಕೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ನಾ ಧರ್ಮದ ಮಾನ್ಯತೆಯ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಎಎಸ್‌ಎಗೆ ಬೇರೆ ಆಯ್ಕೆಗಳಿಲ್ಲದ ಕಾರಣ, ಡಿಸೆಂಬರ್ 30 ರಂದು ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಒಂದು ದಿನದ ಸಾಂಕೇತಿಕ ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಮುರ್ಮು ಹೇಳಿದ್ದಾರೆ.

ಭಾರತ್ ಬಂದ್ ಭಾಗವಾಗಿ ಡಿ.30ರಂದು ಆದಿವಾಸಿಗಳು ರಸ್ತೆ, ರೈಲು ತಡೆ ಚಳವಳಿ ನಡೆಸಲಿದ್ದಾರೆ ಎಂದು ಮುರ್ಮು ತಿಳಿಸಿದ್ದಾರೆ.

ನವೆಂಬರ್ 11 ರಂದು ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ನಾ ಪ್ರತ್ಯೇಖ ಧರ್ಮ ಸಂಹಿತೆ ಮಸೂದೆಯನ್ನು ಬೆಂಬಲಿಸಿದ ರಾಜಕೀಯ ಪಕ್ಷಗಳ ಬೆಂಬಲವನ್ನು ಭಾರತ್ ಬಂದ್‌ಗೆ ನಾವು ಕೋರಿದ್ದೇವೆ. ಜಾರ್ಖಂಡ್ ವಿಧಾನಸಭೆಯು 2020 ರ ನವೆಂಬರ್‌ನಲ್ಲಿ ಸರ್ವಾನುಮತದಿಂದ ಜನಗಣತಿಯ ವೇಳೆ ಸರ್ನಾವನ್ನು ಒಂದು ವಿಶಿಷ್ಟ ಧರ್ಮವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಮುರ್ಮು ಮಾಹಿತಿ ನೀಡಿದ್ದಾರೆ.

ಚಿತ್ರ ಕೃಪೆ: ದಿ ಹಿಂದೂ

ಇದನ್ನೂ ಓದಿ : 8 ಮಂದಿ ಭಾರತೀಯರಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದುಪಡಿಸಿದ ಕತಾರ್‌ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...